<p>ಸ್ಫೂರ್ತಿ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ `ಅಟಲ್ ಬಿಹಾರಿ ವಾಜಪೇಯಿ ಕಪ್-2012~ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜಯಾ ಬ್ಯಾಂಕ್ ಮತ್ತು ಆಳ್ವಾಸ್ ತಂಡಗಳು ಪ್ರಥಮ ಸ್ಥಾನ ಪಡೆದುಕೊಡಿವೆ.<br /> <br /> ರಾಜ್ಯದ ಪ್ರಮುಖ ತಂಡಗಳಾದ ಎಚ್ಎಎಲ್, ಬಿಎಸ್ಎನ್ಎಲ್, ಎಂಇಜಿ, ಎಎಸ್ಡಿ, ಸಿಎಎಲ್, ವಿಜಯಾ ಬ್ಯಾಂಕ್ ತಂಡಗಳಲ್ಲದೆ, ವಿವಿಧ ಜಿಲ್ಲೆಗಳಿಂದ 36 ಪುರುಷರ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಜೊತೆಗೆ ನಗರದ ಮಾತಾ ತಂಡ, ಮೂಡಬಿದರೆ ಅಳ್ವಾಸ್, ಪುತ್ತೂರಿನ ಸೇಂಟ್ ಫಿಲೋಮಿನಾ ತಂಡಗಳೂ ಸೇರಿದಂತೆ 4 ಮಹಿಳಾ ತಂಡಗಳು ಸ್ಪರ್ಧೆಯಲ್ಲಿ ಸೆಣೆಸಿದ್ದವು.<br /> <br /> ಸ್ಪರ್ಧೆಯ ವಿಜೇತರಿಗೆ ಸಾರಿಗೆ ಸಚಿವ ಆರ್. ಅಶೋಕ, ಮತ್ತು ಸತೀಶ್ ರೆಡ್ಡಿ ಬಹುಮಾನ ವಿತರಿಸಿದರು. ಪ್ರಥಮ ಸ್ಥಾನ ಪಡೆದುಕೊಂಡ ತಂಡಗಳಿಗೆ 50 ಸಾವಿರ ಬಹುಮಾನ ಹಾಗೂ ಅಟಲ್ ಬಿಹಾರಿ ವಾಜಪೇಯಿ ಕಪ್ ನೀಡಲಾಯಿತು.<br /> <br /> ದ್ವಿತೀಯ ಸ್ಥಾನ ಪಡೆದ ಎಚ್ಎಎಲ್ ತಂಡಕ್ಕೆ 30 ಸಾವಿರ ರೂಪಾಯಿ ಹಾಗೂ ತೃತೀಯ ಸ್ಥಾನದವರಿಗೆ 15 ಸಾವಿರ ನಗದು ನೀಡಲಾಯಿತು.<br /> <br /> ಬಿ.ಜೆ.ಪಿ ಮುಖಂಡ ಬಿ. ವೈ. ರಮೇಶ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾರುಕಟ್ಟೆ ಸ್ಥಾಯಿ ಸಮಿತಿ ಅಧ್ಯಕ್ಷೆ ರೂಪಾ ರಮೇಶ ಅತಿಥಿಯಾಗಿ ಭಾಗವಹಿಸಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸ್ಫೂರ್ತಿ ಸ್ಪೋರ್ಟ್ಸ್ ಕ್ಲಬ್ ಆಯೋಜಿಸಿದ್ದ `ಅಟಲ್ ಬಿಹಾರಿ ವಾಜಪೇಯಿ ಕಪ್-2012~ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯಲ್ಲಿ ವಿಜಯಾ ಬ್ಯಾಂಕ್ ಮತ್ತು ಆಳ್ವಾಸ್ ತಂಡಗಳು ಪ್ರಥಮ ಸ್ಥಾನ ಪಡೆದುಕೊಡಿವೆ.<br /> <br /> ರಾಜ್ಯದ ಪ್ರಮುಖ ತಂಡಗಳಾದ ಎಚ್ಎಎಲ್, ಬಿಎಸ್ಎನ್ಎಲ್, ಎಂಇಜಿ, ಎಎಸ್ಡಿ, ಸಿಎಎಲ್, ವಿಜಯಾ ಬ್ಯಾಂಕ್ ತಂಡಗಳಲ್ಲದೆ, ವಿವಿಧ ಜಿಲ್ಲೆಗಳಿಂದ 36 ಪುರುಷರ ತಂಡಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಜೊತೆಗೆ ನಗರದ ಮಾತಾ ತಂಡ, ಮೂಡಬಿದರೆ ಅಳ್ವಾಸ್, ಪುತ್ತೂರಿನ ಸೇಂಟ್ ಫಿಲೋಮಿನಾ ತಂಡಗಳೂ ಸೇರಿದಂತೆ 4 ಮಹಿಳಾ ತಂಡಗಳು ಸ್ಪರ್ಧೆಯಲ್ಲಿ ಸೆಣೆಸಿದ್ದವು.<br /> <br /> ಸ್ಪರ್ಧೆಯ ವಿಜೇತರಿಗೆ ಸಾರಿಗೆ ಸಚಿವ ಆರ್. ಅಶೋಕ, ಮತ್ತು ಸತೀಶ್ ರೆಡ್ಡಿ ಬಹುಮಾನ ವಿತರಿಸಿದರು. ಪ್ರಥಮ ಸ್ಥಾನ ಪಡೆದುಕೊಂಡ ತಂಡಗಳಿಗೆ 50 ಸಾವಿರ ಬಹುಮಾನ ಹಾಗೂ ಅಟಲ್ ಬಿಹಾರಿ ವಾಜಪೇಯಿ ಕಪ್ ನೀಡಲಾಯಿತು.<br /> <br /> ದ್ವಿತೀಯ ಸ್ಥಾನ ಪಡೆದ ಎಚ್ಎಎಲ್ ತಂಡಕ್ಕೆ 30 ಸಾವಿರ ರೂಪಾಯಿ ಹಾಗೂ ತೃತೀಯ ಸ್ಥಾನದವರಿಗೆ 15 ಸಾವಿರ ನಗದು ನೀಡಲಾಯಿತು.<br /> <br /> ಬಿ.ಜೆ.ಪಿ ಮುಖಂಡ ಬಿ. ವೈ. ರಮೇಶ ಈ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮಾರುಕಟ್ಟೆ ಸ್ಥಾಯಿ ಸಮಿತಿ ಅಧ್ಯಕ್ಷೆ ರೂಪಾ ರಮೇಶ ಅತಿಥಿಯಾಗಿ ಭಾಗವಹಿಸಿದ್ದರು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>