<p>‘ಆಶಾ’ ಸೇವೆಗೆ ತಕ್ಕ ಪ್ರತಿಫಲ ಸಿಗಲಿ (ಸಂಗತ ಫೆ.21) ರೂಪ ಹಾಸನ ಇವರ ಲೇಖನ ಆಶಾ ಮತ್ತು ಸಮುದಾಯದ ಆರೋಗ್ಯ ದೃಷ್ಟಿಯಿಂದ ಕಾಳಜಿಯಿಂದ ಕೂಡಿದ್ದು, ಸರ್ಕಾರಗಳ ದೃಷ್ಟಿಯಲ್ಲಿ ಜವಾಬ್ದಾರಿಯನ್ನು ಎಚ್ಚರಿಸುವಲ್ಲಿ ಸಹಕಾರಿಯಾಗಿದೆ.<br /> <br /> ಗ್ರಾಮೀಣ ಜನತೆಯ ಆರೋಗ್ಯ, ಗ್ರಾಮ ನೈರ್ಮಲ್ಯಕ್ಕೆ ಆಶಾಕಿರಣರಾಗಿರುವ ಆಶಾ ಕಾರ್ಯಕರ್ತೆಯರು ಅತ್ಯಂತ ಕಾಳಜಿಯಿಂದ, ಅಂತಃಕರಣದಿಂದ ದುಡಿಯುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ಗಾಢ ಶ್ರದ್ಧೆ ಹಾಗೂ ಸಮರ್ಪಣಾ ಭಾವದಿಂದ, ಪ್ರೀತಿಯಿಂದ ರೋಗಿಗಳ ಅಗತ್ಯಗಳಿಗೆ ಸ್ಪಂದಿಸುವ ಈ ಹೆಣ್ಣು ಮಕ್ಕಳು ಹಲವಾರು ರೀತಿಯಲ್ಲಿ ಸಮಾಜಕ್ಕೆ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಅತ್ಯಂತ ಕಷ್ಟಕರ ಜವಾಬ್ದಾರಿಯನ್ನು ಆಶಾ ಕಾರ್ಯಕರ್ತೆಯರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. <br /> <br /> ಸರ್ಕಾರ ಇವರ ಸೇವೆಯನ್ನು ಪಡೆಯುತ್ತಾ ಪ್ರೋತ್ಸಾಹಧನದ ಹೆಸರಿನಲ್ಲಿ ಪುಡಿಗಾಸನ್ನು ನೀಡಿ ಇವರನ್ನು ಅತ್ಯಂತ ಕಠೋರವಾಗಿ ದುಡಿಸಿಕೊಳ್ಳುತ್ತಿವೆ. ಹಲವೆಡೆ ಪ್ರೋತ್ಸಾಹಧನ ಪಡೆಯಲು ಇವರಿಗೆ ಹಲವಾರು ತಿಂಗಳುಗಳೇ ಬೇಕಾಗಿವೆ. ಇಂದಿನ ದುಬಾರಿ ದಿನಗಳಲ್ಲಿ ಈ ಅತ್ಯಲ್ಪ ವೇತನದಿಂದ ಜೀವನ ನಿರ್ವಹಣೆ ಅತ್ಯಂತ ದುಸ್ತರವಾಗಿದೆ.<br /> ಆದ್ದರಿಂದ ಆಶಾ ಕಾರ್ಯಕರ್ತೆಯರು ತಮ್ಮ ಒಗ್ಗಟ್ಟನ್ನು ಕಾಪಾಡಿಕೊಳ್ಳುತ್ತಾ ಸುದೀರ್ಘ ಹೋರಾಟಕ್ಕೆ ಸಜ್ಜಾಗಬೇಕಾಗಿರುವುದು ಈ ಗಳಿಗೆಯ ಅವಶ್ಯಕತೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಆಶಾ’ ಸೇವೆಗೆ ತಕ್ಕ ಪ್ರತಿಫಲ ಸಿಗಲಿ (ಸಂಗತ ಫೆ.21) ರೂಪ ಹಾಸನ ಇವರ ಲೇಖನ ಆಶಾ ಮತ್ತು ಸಮುದಾಯದ ಆರೋಗ್ಯ ದೃಷ್ಟಿಯಿಂದ ಕಾಳಜಿಯಿಂದ ಕೂಡಿದ್ದು, ಸರ್ಕಾರಗಳ ದೃಷ್ಟಿಯಲ್ಲಿ ಜವಾಬ್ದಾರಿಯನ್ನು ಎಚ್ಚರಿಸುವಲ್ಲಿ ಸಹಕಾರಿಯಾಗಿದೆ.<br /> <br /> ಗ್ರಾಮೀಣ ಜನತೆಯ ಆರೋಗ್ಯ, ಗ್ರಾಮ ನೈರ್ಮಲ್ಯಕ್ಕೆ ಆಶಾಕಿರಣರಾಗಿರುವ ಆಶಾ ಕಾರ್ಯಕರ್ತೆಯರು ಅತ್ಯಂತ ಕಾಳಜಿಯಿಂದ, ಅಂತಃಕರಣದಿಂದ ದುಡಿಯುತ್ತಿದ್ದಾರೆ. ಹಗಲು ರಾತ್ರಿ ಎನ್ನದೆ ಗಾಢ ಶ್ರದ್ಧೆ ಹಾಗೂ ಸಮರ್ಪಣಾ ಭಾವದಿಂದ, ಪ್ರೀತಿಯಿಂದ ರೋಗಿಗಳ ಅಗತ್ಯಗಳಿಗೆ ಸ್ಪಂದಿಸುವ ಈ ಹೆಣ್ಣು ಮಕ್ಕಳು ಹಲವಾರು ರೀತಿಯಲ್ಲಿ ಸಮಾಜಕ್ಕೆ ಅಮೂಲ್ಯ ಸೇವೆ ಸಲ್ಲಿಸುತ್ತಿದ್ದಾರೆ. ಅತ್ಯಂತ ಕಷ್ಟಕರ ಜವಾಬ್ದಾರಿಯನ್ನು ಆಶಾ ಕಾರ್ಯಕರ್ತೆಯರು ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. <br /> <br /> ಸರ್ಕಾರ ಇವರ ಸೇವೆಯನ್ನು ಪಡೆಯುತ್ತಾ ಪ್ರೋತ್ಸಾಹಧನದ ಹೆಸರಿನಲ್ಲಿ ಪುಡಿಗಾಸನ್ನು ನೀಡಿ ಇವರನ್ನು ಅತ್ಯಂತ ಕಠೋರವಾಗಿ ದುಡಿಸಿಕೊಳ್ಳುತ್ತಿವೆ. ಹಲವೆಡೆ ಪ್ರೋತ್ಸಾಹಧನ ಪಡೆಯಲು ಇವರಿಗೆ ಹಲವಾರು ತಿಂಗಳುಗಳೇ ಬೇಕಾಗಿವೆ. ಇಂದಿನ ದುಬಾರಿ ದಿನಗಳಲ್ಲಿ ಈ ಅತ್ಯಲ್ಪ ವೇತನದಿಂದ ಜೀವನ ನಿರ್ವಹಣೆ ಅತ್ಯಂತ ದುಸ್ತರವಾಗಿದೆ.<br /> ಆದ್ದರಿಂದ ಆಶಾ ಕಾರ್ಯಕರ್ತೆಯರು ತಮ್ಮ ಒಗ್ಗಟ್ಟನ್ನು ಕಾಪಾಡಿಕೊಳ್ಳುತ್ತಾ ಸುದೀರ್ಘ ಹೋರಾಟಕ್ಕೆ ಸಜ್ಜಾಗಬೇಕಾಗಿರುವುದು ಈ ಗಳಿಗೆಯ ಅವಶ್ಯಕತೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>