<p><strong>ಹಾಸನ:`</strong>ಹಕ್ಕಿಪಿಕ್ಕಿ ಜನಾಂಗದ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಮೀಪದ ಅಂಗಡಿಹಳ್ಳಿಯಲ್ಲಿ ನಿರ್ಮಿಸಿರುವ ಆಶ್ರಮ ಶಾಲೆಯನ್ನು ಮುಚ್ಚಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದ್ದು, ಇದರಿಂದ ಸಮಾಜದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. <br /> <br /> ಈ ಶಾಲೆಯನ್ನು ಉಳಿಸಿಕೊಡಬೇಕು~ ಎಂದು ಆಗ್ರಹಿಸಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಹಕ್ಕಿಪಿಕ್ಕಿ ಜನಾಂಗದ ಪ್ರತಿನಿಧಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.<br /> <br /> ಹದಿನಾರು ವರ್ಷಗಳಿಂದ ಇಲ್ಲಿ ಶಾಲೆ ನಡೆಯುತ್ತಿದೆ. ಸುಮಾರು 70 ವಿದ್ಯಾರ್ಥಿಗಳಿದ್ದಾರೆ. ಹಕ್ಕಿಪಿಕ್ಕಿಗಳು ಅಲೆಮಾರಿಗಳಾಗಿದ್ದು, ಪಾಲಕರು ಮಕ್ಕಳನ್ನು ಈ ಆಶ್ರಮ ಶಾಲೆಯಲ್ಲಿ ಬಿಟ್ಟು ಬೇರೆ ಜಿಲ್ಲೆ, ರಾಜ್ಯಗಳಿಗೆ ಉದ್ಯೋಗ ಅರಸಿಕೊಂಡು ಹೋಗಿರುತ್ತಾರೆ. <br /> <br /> ಒಮ್ಮೆಲೇ ಈ ಶಾಲೆಯನ್ನು ಮುಚ್ಚಿದರೆ ಈ ಮಕ್ಕಳಿಗೆ ಗತಿಯಾರು? ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರೂ ಆಗಿದ್ದ ಹೂರಾಜ ನುಡಿದರು.ಮಕ್ಕಳು ಹಾಗೂ ಸಮುದಾಯದ ಹಿರಿಯರು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುವ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:`</strong>ಹಕ್ಕಿಪಿಕ್ಕಿ ಜನಾಂಗದ ಮಕ್ಕಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸಮೀಪದ ಅಂಗಡಿಹಳ್ಳಿಯಲ್ಲಿ ನಿರ್ಮಿಸಿರುವ ಆಶ್ರಮ ಶಾಲೆಯನ್ನು ಮುಚ್ಚಲು ಸಮಾಜ ಕಲ್ಯಾಣ ಇಲಾಖೆ ಮುಂದಾಗಿದ್ದು, ಇದರಿಂದ ಸಮಾಜದ ಅಭಿವೃದ್ಧಿಗೆ ಹಿನ್ನಡೆಯಾಗುತ್ತದೆ. <br /> <br /> ಈ ಶಾಲೆಯನ್ನು ಉಳಿಸಿಕೊಡಬೇಕು~ ಎಂದು ಆಗ್ರಹಿಸಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಹಕ್ಕಿಪಿಕ್ಕಿ ಜನಾಂಗದ ಪ್ರತಿನಿಧಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.<br /> <br /> ಹದಿನಾರು ವರ್ಷಗಳಿಂದ ಇಲ್ಲಿ ಶಾಲೆ ನಡೆಯುತ್ತಿದೆ. ಸುಮಾರು 70 ವಿದ್ಯಾರ್ಥಿಗಳಿದ್ದಾರೆ. ಹಕ್ಕಿಪಿಕ್ಕಿಗಳು ಅಲೆಮಾರಿಗಳಾಗಿದ್ದು, ಪಾಲಕರು ಮಕ್ಕಳನ್ನು ಈ ಆಶ್ರಮ ಶಾಲೆಯಲ್ಲಿ ಬಿಟ್ಟು ಬೇರೆ ಜಿಲ್ಲೆ, ರಾಜ್ಯಗಳಿಗೆ ಉದ್ಯೋಗ ಅರಸಿಕೊಂಡು ಹೋಗಿರುತ್ತಾರೆ. <br /> <br /> ಒಮ್ಮೆಲೇ ಈ ಶಾಲೆಯನ್ನು ಮುಚ್ಚಿದರೆ ಈ ಮಕ್ಕಳಿಗೆ ಗತಿಯಾರು? ಎಂದು ಶಾಲೆಯ ಎಸ್ಡಿಎಂಸಿ ಅಧ್ಯಕ್ಷರೂ ಆಗಿದ್ದ ಹೂರಾಜ ನುಡಿದರು.ಮಕ್ಕಳು ಹಾಗೂ ಸಮುದಾಯದ ಹಿರಿಯರು ಸಮಾಜ ಕಲ್ಯಾಣ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಬಳಿಕ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸುವ ಮನವಿಯನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>