<p>ಬಾಗಲಕೋಟೆ: ಆಶ್ರಯ ಮನೆ ಹಂಚಿಕೆಯಲ್ಲಿ ಆಗಿರುವ ತೊಡಕುಗಳ ನಿವಾರಣೆ ಸಂಬಂಧ ಆಶ್ರಯ ಸಮಿತಿಯ ವಿಶೇಷ ಸಭೆ ಕರೆಯುವಂತೆ ನಗರಸಭೆ ಪೌರಾಯುಕ್ತರಿಗೆ ಶಾಸಕ ವೀರಣ್ಣ ಚರಂತಿಮಠ ಸೂಚಿಸಿದರು.<br /> <br /> ನಗರಸಭೆ ಆವರಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಆಶ್ರಯ ಮನೆಗಳನ್ನು ಶ್ರೀಮಂತರು ಪಡೆದುಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ. ಈಗಾಗಲೇ ಗುರುತಿಸಿ ಮನೆಗಳನ್ನು ಹಿಂಪಡೆದು, ಶೆಡ್ಗಳಲ್ಲಿ, ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.<br /> <br /> ಅನರ್ಹರಿಂದ ಆಶ್ರಯ ಮನೆಗಳನ್ನು ಹಿಂಪಡೆಯುವಲ್ಲಿ ಒಂದು ವೇಳೆ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗಿದ್ದರೆ ಸರಿಪಡಿಸುವಂತೆ ಸಲಹೆ ನೀಡಿದರು.<br /> <br /> ಪ್ರತಿಕ್ರಿಯಿಸುವುದಿಲ್ಲ: `ಜೆಡಿಯು ರಾಜ್ಯ ಘಟಕದ ಅಧ್ಯಕ್ಷರು, ಜೆಡಿಯು ರಾಷ್ಟ್ರ ಘಟಕದ ಉಪಾಧ್ಯಕ್ಷರೂ ಆದ ಎಂ.ಪಿ.ನಾಡಗೌಡ ಅವರು ಇತ್ತೀಚೆಗೆ ಆಶ್ರಯ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ಆಗಿದೆ ಎಂದು ನಾಲ್ಕು ಮಂದಿ ಕೂಡಿಸಿಕೊಂಡು ಮಾಡಿರುವ ಪ್ರತಿಭಟನೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಲ್ಲ~ ಎಂದರು.<br /> <br /> `ಅಂತಹ ದೊಡ್ಡ ನಾಯಕರ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ, ನಾನು ಬಹಳ ಚಿಕ್ಕವನು~ ಎಂದು ವ್ಯಂಗ್ಯವಾಡಿದರು.<br /> <br /> ಸ್ಥಾಯಿ ಸಮಿತಿಗೆ ಆಯ್ಕೆ: ನಗರಸಭೆ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಮುತ್ತಪ್ಪ ಪೂಜಾರಿ ಅವರನ್ನು ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. <br /> <br /> ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಶಾಸಕ ವೀರಣ್ಣ ಚರಂತಿಮಠ, ಎಂಎಲ್ಸಿ ನಾರಾಯಣಸಾ ಭಾಂಡಗೆ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಶರಣಪ್ಪ ಗುಳೇದ ಮತ್ತು ಸದಸ್ಯರು ಅಭಿನಂದಿಸಿದರು.<br /> <br /> ವೃತ್ತ ನಾಮಕರಣ: ನಗರದ ಪ್ರಮುಖ ವೃತ್ತಗಳಿಗೆ ಇನ್ನು ಮುಂದೆ ನಾಮಕರಣ ಮಾಡುವಂತೆ ಬರುವ ಅರ್ಜಿಗಳನ್ನು ಇಟ್ಟುಕೊಂಡು, ಒಮ್ಮೆಗೆ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸುವಂತೆ ಶಾಸಕ ವೀರಣ್ಣ ಚರಂತಿಮಠ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಒಳಚರಂಡಿ ಮಂಡಳಿ ವಿರುದ್ಧ ಗರಂ: ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದ ಕರ್ನಾಟಕ ಒಳಚರಂಡಿ ಮಂಡಳಿ ಅಧಿಕಾರಿ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಶಾಸಕರು, ಮಂಡಳಿಯನ್ನೇ ರದ್ದುಗೊಳಿಸಲು ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡಿದ್ದೇನೆ ಎಂದು ತಿಳಿಸಿದರು.<br /> <br /> ಸ್ವಚ್ಛತೆ ಕಾಪಾಡಿ: ನಗರದ ಚರಂಡಿಗಳು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕು. ಎಲ್ಲೂ ಕೊಳಚೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗಲಕೋಟೆ: ಆಶ್ರಯ ಮನೆ ಹಂಚಿಕೆಯಲ್ಲಿ ಆಗಿರುವ ತೊಡಕುಗಳ ನಿವಾರಣೆ ಸಂಬಂಧ ಆಶ್ರಯ ಸಮಿತಿಯ ವಿಶೇಷ ಸಭೆ ಕರೆಯುವಂತೆ ನಗರಸಭೆ ಪೌರಾಯುಕ್ತರಿಗೆ ಶಾಸಕ ವೀರಣ್ಣ ಚರಂತಿಮಠ ಸೂಚಿಸಿದರು.<br /> <br /> ನಗರಸಭೆ ಆವರಣದಲ್ಲಿ ಸೋಮವಾರ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಆಶ್ರಯ ಮನೆಗಳನ್ನು ಶ್ರೀಮಂತರು ಪಡೆದುಕೊಂಡು ದುರುಪಯೋಗ ಪಡಿಸಿಕೊಂಡಿದ್ದಾರೆ. ಈಗಾಗಲೇ ಗುರುತಿಸಿ ಮನೆಗಳನ್ನು ಹಿಂಪಡೆದು, ಶೆಡ್ಗಳಲ್ಲಿ, ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿದ್ದ ಅರ್ಹ ಫಲಾನುಭವಿಗಳಿಗೆ ಹಂಚಿಕೆ ಮಾಡಲಾಗಿದೆ ಎಂದು ಹೇಳಿದರು.<br /> <br /> ಅನರ್ಹರಿಂದ ಆಶ್ರಯ ಮನೆಗಳನ್ನು ಹಿಂಪಡೆಯುವಲ್ಲಿ ಒಂದು ವೇಳೆ ಅರ್ಹ ಫಲಾನುಭವಿಗಳಿಗೆ ತೊಂದರೆಯಾಗಿದ್ದರೆ ಸರಿಪಡಿಸುವಂತೆ ಸಲಹೆ ನೀಡಿದರು.<br /> <br /> ಪ್ರತಿಕ್ರಿಯಿಸುವುದಿಲ್ಲ: `ಜೆಡಿಯು ರಾಜ್ಯ ಘಟಕದ ಅಧ್ಯಕ್ಷರು, ಜೆಡಿಯು ರಾಷ್ಟ್ರ ಘಟಕದ ಉಪಾಧ್ಯಕ್ಷರೂ ಆದ ಎಂ.ಪಿ.ನಾಡಗೌಡ ಅವರು ಇತ್ತೀಚೆಗೆ ಆಶ್ರಯ ಮನೆಗಳ ಹಂಚಿಕೆಯಲ್ಲಿ ಅವ್ಯವಹಾರ ಆಗಿದೆ ಎಂದು ನಾಲ್ಕು ಮಂದಿ ಕೂಡಿಸಿಕೊಂಡು ಮಾಡಿರುವ ಪ್ರತಿಭಟನೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಲ್ಲ~ ಎಂದರು.<br /> <br /> `ಅಂತಹ ದೊಡ್ಡ ನಾಯಕರ ಬಗ್ಗೆ ಮಾತನಾಡುವಷ್ಟು ದೊಡ್ಡವ ನಾನಲ್ಲ, ನಾನು ಬಹಳ ಚಿಕ್ಕವನು~ ಎಂದು ವ್ಯಂಗ್ಯವಾಡಿದರು.<br /> <br /> ಸ್ಥಾಯಿ ಸಮಿತಿಗೆ ಆಯ್ಕೆ: ನಗರಸಭೆ ಸ್ಥಾಯಿ ಸಮಿತಿಗೆ ನೂತನ ಅಧ್ಯಕ್ಷರನ್ನಾಗಿ ಮುತ್ತಪ್ಪ ಪೂಜಾರಿ ಅವರನ್ನು ಸದಸ್ಯರು ಅವಿರೋಧವಾಗಿ ಆಯ್ಕೆ ಮಾಡಿದರು. <br /> <br /> ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರನ್ನು ಶಾಸಕ ವೀರಣ್ಣ ಚರಂತಿಮಠ, ಎಂಎಲ್ಸಿ ನಾರಾಯಣಸಾ ಭಾಂಡಗೆ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಶರಣಪ್ಪ ಗುಳೇದ ಮತ್ತು ಸದಸ್ಯರು ಅಭಿನಂದಿಸಿದರು.<br /> <br /> ವೃತ್ತ ನಾಮಕರಣ: ನಗರದ ಪ್ರಮುಖ ವೃತ್ತಗಳಿಗೆ ಇನ್ನು ಮುಂದೆ ನಾಮಕರಣ ಮಾಡುವಂತೆ ಬರುವ ಅರ್ಜಿಗಳನ್ನು ಇಟ್ಟುಕೊಂಡು, ಒಮ್ಮೆಗೆ ಎಲ್ಲ ಅರ್ಜಿಗಳನ್ನು ಪರಿಶೀಲಿಸಿ ಅನುಮೋದಿಸುವಂತೆ ಶಾಸಕ ವೀರಣ್ಣ ಚರಂತಿಮಠ ನಗರಸಭೆ ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಒಳಚರಂಡಿ ಮಂಡಳಿ ವಿರುದ್ಧ ಗರಂ: ನಿಗದಿತ ಕಾಲಾವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸದ ಕರ್ನಾಟಕ ಒಳಚರಂಡಿ ಮಂಡಳಿ ಅಧಿಕಾರಿ ವಿರುದ್ಧ ಅಸಮಾದಾನ ವ್ಯಕ್ತಪಡಿಸಿದ ಶಾಸಕರು, ಮಂಡಳಿಯನ್ನೇ ರದ್ದುಗೊಳಿಸಲು ಮುಖ್ಯಮಂತ್ರಿ ಅವರಿಗೆ ಒತ್ತಾಯ ಮಾಡಿದ್ದೇನೆ ಎಂದು ತಿಳಿಸಿದರು.<br /> <br /> ಸ್ವಚ್ಛತೆ ಕಾಪಾಡಿ: ನಗರದ ಚರಂಡಿಗಳು ಬ್ಲಾಕ್ ಆಗದಂತೆ ನೋಡಿಕೊಳ್ಳಬೇಕು. ಎಲ್ಲೂ ಕೊಳಚೆ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ನಗರದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ನಗರಸಭೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>