<p><strong>ಹುಬ್ಬಳ್ಳಿ: </strong>ಆಸರೆ ಯೋಜನೆಗಳಲ್ಲಿ ನೀಡಲಾಗಿರುವ ಮನೆಗಳಲ್ಲಿ ನೆರೆ ಸಂತ್ರಸ್ತರು ವಾಸ ಮಾಡತೊಡಗಿದರೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಶೀಘ್ರವೇ ಕಲ್ಪಿಸಿಕೊಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.<br /> <br /> ಆಸರೆ ಯೋಜನೆಯಡಿ ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದಲ್ಲಿ ನಿರ್ಮಿಸಲಾದ ಮನೆಗಳನ್ನು ಭಾನುವಾರ ನೆರೆ ಸಂತ್ರಸ್ತರಿಗೆ ವಿತರಿಸಿ ಅವರು ಮಾತನಾಡಿದರು.ಆಸರೆ ಮನೆಗಳಲ್ಲಿ ಫಲಾನುಭವಿಗಳು ವಾಸ ಮಾಡಲಾರಂಭಿಸಿದರೆ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಳಂಬ ಮಾಡುವುದಿಲ್ಲ ಎಂದರು.<br /> <br /> ಅಮರಗೋಳ ಗ್ರಾಮದಲ್ಲಿ ಪ್ರತಿ ಆಸರೆ ಮನೆಗೆ 1.30 ಲಕ್ಷ ರೂಪಾಯಿ ವ್ಯಯಿಸಲಾಗಿದೆ. ಶೌಚಾಲಯ, ಸ್ನಾನದ ಕೋಣೆ, ಪ್ಲಾಸ್ಟರಿಂಗ್ ಕೆಲಸಗಳಿಗಾಗಿ ಪ್ರತಿ ಮನೆಗೆ ಇನ್ನೂ 10 ಸಾವಿರ ರೂಪಾಯಿ ಹಣ ನೀಡಬೇಕೆಂಬ ಕೋರಿಕೆ ಇದೆ. ಈ ಹೆಚ್ಚುವರಿ 15 ಲಕ್ಷ ರೂಪಾಯಿಯನ್ನು ಮೂರ್ನಾಲ್ಕು ದಿನಗಳಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದೂ ಅವರು ಹೇಳಿದರು.<br /> <br /> ಆಸರೆ ಯೋಜನೆ ಒಂದು ಮೈಲಿಗಲ್ಲು. ಪ್ರವಾಹಕ್ಕೆ ತುತ್ತಾದವರಿಗೆ ಈ ಹಿಂದಿನ ಸರ್ಕಾರಗಳು ಪರಿಹಾರವನ್ನು ಮಾತ್ರ ನೀಡಿದರೆ, ಬಿಜೆಪಿ ಸರ್ಕಾರ ಮನೆ ಕಟ್ಟಿಕೊಡುತ್ತಿದೆ. ಈ ಕಾರ್ಯದಲ್ಲಿ ದಾನಿಗಳೂ ಕೈಜೋಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಜಗದೀಶ ಶೆಟ್ಟರ ಹೇಳಿದರು.<br /> <br /> ಜಿಲ್ಲೆಯ ಆಸರೆ ಬಡಾವಣೆಗಳಲ್ಲಿ ಕುಡಿಯುವ ನೀರು ಸೌಕರ್ಯ ಕಲ್ಪಿಸಲು ಇಲಾಖೆ 40 ಲಕ್ಷ ರೂಪಾಯಿ ಒದಗಿಸಿದೆ. ರಸ್ತೆ, ಚರಂಡಿ ಮುಂತಾದ ಮೂಲಸೌಕರ್ಯ ಕಲ್ಪಿಸಲು ಹಣ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.<br /> <br /> ‘ಬೆಣ್ಣೆ, ತುಪರಿ ಮೊದಲಾದ ಹಳ್ಳಗಳಿಗೆ ಪ್ರವಾಹ ಬಂದು ಈ ಹಿಂದಿನಿಂದಲೂ ಜನರು ಸಾಕಷ್ಟು ಸಂಕಷ್ಟ ಅನುಭವಿಸಿಕೊಂಡು ಬಂದಿದ್ದಾರೆ. ಸ್ವಾತಂತ್ರ್ಯ ಬಂದು 63 ವರ್ಷಗಳಲ್ಲಿ ಆಗದ ಈ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರವನ್ನು ನಾವು ಒಂದೇ ವರ್ಷದಲ್ಲಿ ಮಾಡಿದ್ದೇವೆ’ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.<br /> <br /> ಮಲಪ್ರಭಾ ನದಿ ಕೊನೆಭಾಗದ 10 ಸಾವಿರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲು 40 ಕೋಟಿ ರೂಪಾಯಿಯ ಯೋಜನೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳುವುದಾಗಿ ಅವರು ತಿಳಿಸಿದರು.<br /> <br /> ಎನ್ಜಿಇಎಫ್ ಅಧ್ಯಕ್ಷ ಷಣ್ಮುಖ ಗುರಿಕಾರ, ಜಿ.ಪಂ. ಅಧ್ಯಕ್ಷ ಅಡಿವೆಪ್ಪ ಮನಮಿ, ಬೆಳವಟಗಿ ಗ್ರಾ.ಪಂ. ಅಧ್ಯಕ್ಷ ನಿಂಗಪ್ಪ ಜಗಾಪುರ, ಜಿಲ್ಲಾಧಿಕಾರಿ ದರ್ಪಣ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ: </strong>ಆಸರೆ ಯೋಜನೆಗಳಲ್ಲಿ ನೀಡಲಾಗಿರುವ ಮನೆಗಳಲ್ಲಿ ನೆರೆ ಸಂತ್ರಸ್ತರು ವಾಸ ಮಾಡತೊಡಗಿದರೆ ಅಗತ್ಯವಿರುವ ಮೂಲಸೌಕರ್ಯಗಳನ್ನು ಶೀಘ್ರವೇ ಕಲ್ಪಿಸಿಕೊಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.<br /> <br /> ಆಸರೆ ಯೋಜನೆಯಡಿ ನವಲಗುಂದ ತಾಲ್ಲೂಕಿನ ಅಮರಗೋಳ ಗ್ರಾಮದಲ್ಲಿ ನಿರ್ಮಿಸಲಾದ ಮನೆಗಳನ್ನು ಭಾನುವಾರ ನೆರೆ ಸಂತ್ರಸ್ತರಿಗೆ ವಿತರಿಸಿ ಅವರು ಮಾತನಾಡಿದರು.ಆಸರೆ ಮನೆಗಳಲ್ಲಿ ಫಲಾನುಭವಿಗಳು ವಾಸ ಮಾಡಲಾರಂಭಿಸಿದರೆ, ಮೂಲಸೌಕರ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಳಂಬ ಮಾಡುವುದಿಲ್ಲ ಎಂದರು.<br /> <br /> ಅಮರಗೋಳ ಗ್ರಾಮದಲ್ಲಿ ಪ್ರತಿ ಆಸರೆ ಮನೆಗೆ 1.30 ಲಕ್ಷ ರೂಪಾಯಿ ವ್ಯಯಿಸಲಾಗಿದೆ. ಶೌಚಾಲಯ, ಸ್ನಾನದ ಕೋಣೆ, ಪ್ಲಾಸ್ಟರಿಂಗ್ ಕೆಲಸಗಳಿಗಾಗಿ ಪ್ರತಿ ಮನೆಗೆ ಇನ್ನೂ 10 ಸಾವಿರ ರೂಪಾಯಿ ಹಣ ನೀಡಬೇಕೆಂಬ ಕೋರಿಕೆ ಇದೆ. ಈ ಹೆಚ್ಚುವರಿ 15 ಲಕ್ಷ ರೂಪಾಯಿಯನ್ನು ಮೂರ್ನಾಲ್ಕು ದಿನಗಳಲ್ಲಿಯೇ ಬಿಡುಗಡೆ ಮಾಡುತ್ತೇನೆ ಎಂದೂ ಅವರು ಹೇಳಿದರು.<br /> <br /> ಆಸರೆ ಯೋಜನೆ ಒಂದು ಮೈಲಿಗಲ್ಲು. ಪ್ರವಾಹಕ್ಕೆ ತುತ್ತಾದವರಿಗೆ ಈ ಹಿಂದಿನ ಸರ್ಕಾರಗಳು ಪರಿಹಾರವನ್ನು ಮಾತ್ರ ನೀಡಿದರೆ, ಬಿಜೆಪಿ ಸರ್ಕಾರ ಮನೆ ಕಟ್ಟಿಕೊಡುತ್ತಿದೆ. ಈ ಕಾರ್ಯದಲ್ಲಿ ದಾನಿಗಳೂ ಕೈಜೋಡಿಸಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಜಗದೀಶ ಶೆಟ್ಟರ ಹೇಳಿದರು.<br /> <br /> ಜಿಲ್ಲೆಯ ಆಸರೆ ಬಡಾವಣೆಗಳಲ್ಲಿ ಕುಡಿಯುವ ನೀರು ಸೌಕರ್ಯ ಕಲ್ಪಿಸಲು ಇಲಾಖೆ 40 ಲಕ್ಷ ರೂಪಾಯಿ ಒದಗಿಸಿದೆ. ರಸ್ತೆ, ಚರಂಡಿ ಮುಂತಾದ ಮೂಲಸೌಕರ್ಯ ಕಲ್ಪಿಸಲು ಹಣ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದರು.<br /> <br /> ‘ಬೆಣ್ಣೆ, ತುಪರಿ ಮೊದಲಾದ ಹಳ್ಳಗಳಿಗೆ ಪ್ರವಾಹ ಬಂದು ಈ ಹಿಂದಿನಿಂದಲೂ ಜನರು ಸಾಕಷ್ಟು ಸಂಕಷ್ಟ ಅನುಭವಿಸಿಕೊಂಡು ಬಂದಿದ್ದಾರೆ. ಸ್ವಾತಂತ್ರ್ಯ ಬಂದು 63 ವರ್ಷಗಳಲ್ಲಿ ಆಗದ ಈ ಪ್ರವಾಹ ಪೀಡಿತ ಗ್ರಾಮಗಳ ಸ್ಥಳಾಂತರವನ್ನು ನಾವು ಒಂದೇ ವರ್ಷದಲ್ಲಿ ಮಾಡಿದ್ದೇವೆ’ ಎಂದು ಶಾಸಕ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.<br /> <br /> ಮಲಪ್ರಭಾ ನದಿ ಕೊನೆಭಾಗದ 10 ಸಾವಿರ ಎಕರೆ ಜಮೀನಿಗೆ ನೀರಾವರಿ ಸೌಲಭ್ಯ ಕಲ್ಪಿಸಲು 40 ಕೋಟಿ ರೂಪಾಯಿಯ ಯೋಜನೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳುವುದಾಗಿ ಅವರು ತಿಳಿಸಿದರು.<br /> <br /> ಎನ್ಜಿಇಎಫ್ ಅಧ್ಯಕ್ಷ ಷಣ್ಮುಖ ಗುರಿಕಾರ, ಜಿ.ಪಂ. ಅಧ್ಯಕ್ಷ ಅಡಿವೆಪ್ಪ ಮನಮಿ, ಬೆಳವಟಗಿ ಗ್ರಾ.ಪಂ. ಅಧ್ಯಕ್ಷ ನಿಂಗಪ್ಪ ಜಗಾಪುರ, ಜಿಲ್ಲಾಧಿಕಾರಿ ದರ್ಪಣ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>