<p><strong>ಗುಲ್ಬರ್ಗ:</strong> ಗುಲ್ಬರ್ಗದ ಬಸವೇಶ್ವರ ಆಸ್ಪತ್ರೆಯು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ-2007ರ ಅನ್ವಯ ನಾಗರಿಕ ಸನ್ನದು ಅನುಸರಿಸಲಿರುವ ರಾಜ್ಯದ ಪ್ರಥಮ ಆಸ್ಪತ್ರೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಭಾನುವಾರ ಹೇಳಿದರು.ಆಸ್ಪತ್ರೆಯಲ್ಲಿ ಬಸವೇಶ್ವರ ಬೋಧನಾ ಮತ್ತು ಸಾರ್ವಜನಿಕ ಆಸ್ಪತ್ರೆ ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ನಾಗರಿಕ ಸನ್ನದು ಅನ್ವಯ ಆಸ್ಪತ್ರೆಯಲ್ಲಿ ಮಾರ್ಚ್1ರಿಂದ ಚಿಕಿತ್ಸೆ, ವೈದ್ಯರು, ವೆಚ್ಚಗಳ ಮಾಹಿತಿಯನ್ನು ಪ್ರದರ್ಶಿಸಬೇಕು. ರೋಗಿಗಳು ಇಚ್ಛಿಸಿದಲ್ಲಿ ದೈನಂದಿನ ಪರೀಕ್ಷಾ ವರದಿ, ಸೇವೆಗಳ ವಿವರ, ಮಾಹಿತಿಗಳ ಕೈಪಿಡಿಯನ್ನು ನೀಡಬೇಕು ಎಂದರು.ಬಸವೇಶ್ವರ ಆಸ್ಪತ್ರೆಗೆ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. <br /> <br /> ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಭ್ರಷ್ಟಾಚಾರ ಮುಕ್ತ ಆಸ್ಪತ್ರೆ ಎಂದು ಶೀಘ್ರದಲ್ಲೇ ಘೋಷಿಸಲಾಗುವುದು.ರಾಜ್ಯದಲ್ಲೇ ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದ್ದು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಇದಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. <br /> <br /> ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಗ್ರಂಥಾಲಯ ಸಚಿವ ರೇವೂನಾಯಕ ಬೆಳಮಗಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಡಾ.ಸೂರ್ಯಕಾಂತ ಜಿ. ಪಾಟೀಲ, ಡಾ.ಎ.ವಿ. ದೇಶಮುಖ, ಡಾ.ಬಿ.ಮಲ್ಲಿಕಾರ್ಜುನ, ಡಾ.ಬಸವರಾಜ ಜಿ. ಪಾಟೀಲ, ಡಾ.ವೀಣಾ ಎ.ಪಾಟೀಲ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುಲ್ಬರ್ಗ:</strong> ಗುಲ್ಬರ್ಗದ ಬಸವೇಶ್ವರ ಆಸ್ಪತ್ರೆಯು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ-2007ರ ಅನ್ವಯ ನಾಗರಿಕ ಸನ್ನದು ಅನುಸರಿಸಲಿರುವ ರಾಜ್ಯದ ಪ್ರಥಮ ಆಸ್ಪತ್ರೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಭಾನುವಾರ ಹೇಳಿದರು.ಆಸ್ಪತ್ರೆಯಲ್ಲಿ ಬಸವೇಶ್ವರ ಬೋಧನಾ ಮತ್ತು ಸಾರ್ವಜನಿಕ ಆಸ್ಪತ್ರೆ ಸಭಾಂಗಣ ಉದ್ಘಾಟಿಸಿ ಅವರು ಮಾತನಾಡಿದರು. <br /> <br /> ನಾಗರಿಕ ಸನ್ನದು ಅನ್ವಯ ಆಸ್ಪತ್ರೆಯಲ್ಲಿ ಮಾರ್ಚ್1ರಿಂದ ಚಿಕಿತ್ಸೆ, ವೈದ್ಯರು, ವೆಚ್ಚಗಳ ಮಾಹಿತಿಯನ್ನು ಪ್ರದರ್ಶಿಸಬೇಕು. ರೋಗಿಗಳು ಇಚ್ಛಿಸಿದಲ್ಲಿ ದೈನಂದಿನ ಪರೀಕ್ಷಾ ವರದಿ, ಸೇವೆಗಳ ವಿವರ, ಮಾಹಿತಿಗಳ ಕೈಪಿಡಿಯನ್ನು ನೀಡಬೇಕು ಎಂದರು.ಬಸವೇಶ್ವರ ಆಸ್ಪತ್ರೆಗೆ ಪ್ರಾದೇಶಿಕ ಕ್ಯಾನ್ಸರ್ ಆಸ್ಪತ್ರೆ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದರು. <br /> <br /> ಮೈಸೂರಿನ ಕೆ.ಆರ್.ಆಸ್ಪತ್ರೆಯನ್ನು ಭ್ರಷ್ಟಾಚಾರ ಮುಕ್ತ ಆಸ್ಪತ್ರೆ ಎಂದು ಶೀಘ್ರದಲ್ಲೇ ಘೋಷಿಸಲಾಗುವುದು.ರಾಜ್ಯದಲ್ಲೇ ಭ್ರಷ್ಟಾಚಾರ ನಿರ್ಮೂಲನೆಗೆ ಆದ್ಯತೆ ನೀಡಿದ್ದು, ವೈದ್ಯರು ಮತ್ತು ವೈದ್ಯಕೀಯ ಸಿಬ್ಬಂದಿ ಇದಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು. <br /> <br /> ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ. ನಮೋಶಿ, ಗ್ರಂಥಾಲಯ ಸಚಿವ ರೇವೂನಾಯಕ ಬೆಳಮಗಿ, ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಡಾ.ಸೂರ್ಯಕಾಂತ ಜಿ. ಪಾಟೀಲ, ಡಾ.ಎ.ವಿ. ದೇಶಮುಖ, ಡಾ.ಬಿ.ಮಲ್ಲಿಕಾರ್ಜುನ, ಡಾ.ಬಸವರಾಜ ಜಿ. ಪಾಟೀಲ, ಡಾ.ವೀಣಾ ಎ.ಪಾಟೀಲ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>