<p><strong>ಕೋಲ್ಕತ್ತ (ಪಿಟಿಐ):</strong> ರಾಜ್ಯ ಸರ್ಕಾರದ ಮೇಲ್ವಿಚಾರಣೆಯ ಬಿ.ಸಿ. ರಾಯ್ ಮಕ್ಕಳ ಆಸ್ಪತ್ರೆಯಲ್ಲಿ ಗುರುವಾರ ಮತ್ತೆರಡು ಶಿಶುಗಳು ಅಸುನೀಗಿದ್ದು ಕಳೆದ ಮೂರು ದಿನಗಳಿಂದ ಇಲ್ಲಿ ಸಾವಿಗೀಡಾದ ಮಕ್ಕಳ ಸಂಖ್ಯೆ 13ಕ್ಕೆ ಏರಿದೆ. ಇದೇ ಆಸ್ಪತ್ರೆಯಲ್ಲಿ ಜೂನ್ ತಿಂಗಳಲ್ಲಿ ಎರಡು ದಿನಗಳಲ್ಲಿ 18 ಶಿಶುಗಳು ಕೊನೆಯುಸಿರೆಳೆದಿದ್ದರು.<br /> <br /> ಈ ಶಿಶುಗಳ ಸಾವು ಆಸ್ಪತ್ರೆಯ ವೈದ್ಯರ ಕಾಳಜಿ ಬಗ್ಗೆ ಪ್ರಶ್ನೆಗಳನ್ನು ಮೂಡಿಸಿದೆ. ಮಕ್ಕಳ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಎಂದು ದೂರಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯಾಧಿಕಾರಿಗಳು `ಇದರಲ್ಲಿ ಅಸಾಮಾನ್ಯ ಎನಿಸುವಂಥದ್ದು ಏನಿಲ್ಲ~. ಏಕೆಂದರೆ ಮಕ್ಕಳನ್ನು `ಅತಿ ಗಂಭೀರ~ ಸ್ಥಿತಿಯಲ್ಲಿ ಇಲ್ಲಿಗೆ ಕರೆತರಲಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.<br /> <br /> ಈ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲ ಅಥವಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಯಾವುದೇ ಲೋಪ ಆಗಿಲ್ಲ ಎಂದು ರಾಜ್ಯ ಸರ್ಕಾರ ಸಮರ್ಥನೆ ನೀಡಿದೆ.<br /> <br /> ಶಿಶುಗಳ ಸಾವಿನ ಬಗ್ಗೆ ತನಿಖೆ ನಡೆಸಿ ಆಸ್ಪತ್ರೆಯವರೇ ಸರ್ಕಾರಕ್ಕೆ ಈಚೆಗೆ ವರದಿ ಸಲ್ಲಿಸಿದ್ದರು. ಇದನ್ನು ಆಧರಿಸಿ ಸರ್ಕಾರ ಈ ಪ್ರಕರಣಗಳಲ್ಲಿ ಆಸ್ಪತ್ರೆಯ ದೋಷ ಇಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.<br /> <br /> `ನಮಗೆ ಸಲ್ಲಿಸಿದ ವರದಿ ಪರಿಶೀಲಿಸಿದ ಬಳಿಕವೂ ಯಾವುದೇ ಲೋಪ ಅಥವಾ ವೈದ್ಯಕೀಯ ನಿರ್ಲಕ್ಷ ಕಂಡು ಬಂದಿಲ್ಲ~ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ಸುಶಾಂತ ಬ್ಯಾನರ್ಜಿ ಹೇಳಿದ್ದಾರೆ.<br /> <br /> `ಪ್ರತಿ ದಿನ ಆಸ್ಪತ್ರೆಗೆ 300 ಮಕ್ಕಳು ದಾಖಲಾಗುತ್ತಾರೆ. ಈ ಪೈಕಿ ಸರಾಸರಿ ಐದು ಮಕ್ಕಳು ಸಾವಿಗೀಡಾಗುತ್ತವೆ. ಇದು ಅಸಹಜವೇನಲ್ಲ. ಬಹುತೇಕ ಪ್ರಕರಣಗಳಲ್ಲಿ ಮಕ್ಕಳ ಸ್ಥಿತಿ ಚಿಂತಾಜನಕವಾಗಿರುತ್ತದೆ~ ಎಂದು ಆಸ್ಪತ್ರೆಯ ಅಧೀಕ್ಷಕ ದಿಲೀಪ್ ಪಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲ್ಕತ್ತ (ಪಿಟಿಐ):</strong> ರಾಜ್ಯ ಸರ್ಕಾರದ ಮೇಲ್ವಿಚಾರಣೆಯ ಬಿ.ಸಿ. ರಾಯ್ ಮಕ್ಕಳ ಆಸ್ಪತ್ರೆಯಲ್ಲಿ ಗುರುವಾರ ಮತ್ತೆರಡು ಶಿಶುಗಳು ಅಸುನೀಗಿದ್ದು ಕಳೆದ ಮೂರು ದಿನಗಳಿಂದ ಇಲ್ಲಿ ಸಾವಿಗೀಡಾದ ಮಕ್ಕಳ ಸಂಖ್ಯೆ 13ಕ್ಕೆ ಏರಿದೆ. ಇದೇ ಆಸ್ಪತ್ರೆಯಲ್ಲಿ ಜೂನ್ ತಿಂಗಳಲ್ಲಿ ಎರಡು ದಿನಗಳಲ್ಲಿ 18 ಶಿಶುಗಳು ಕೊನೆಯುಸಿರೆಳೆದಿದ್ದರು.<br /> <br /> ಈ ಶಿಶುಗಳ ಸಾವು ಆಸ್ಪತ್ರೆಯ ವೈದ್ಯರ ಕಾಳಜಿ ಬಗ್ಗೆ ಪ್ರಶ್ನೆಗಳನ್ನು ಮೂಡಿಸಿದೆ. ಮಕ್ಕಳ ಸಾವಿಗೆ ವೈದ್ಯರ ನಿರ್ಲಕ್ಷ್ಯ ಕಾರಣ ಎಂದು ಪೋಷಕರು ಎಂದು ದೂರಿದ್ದಾರೆ. ಆದರೆ ಆಸ್ಪತ್ರೆಯ ವೈದ್ಯಾಧಿಕಾರಿಗಳು `ಇದರಲ್ಲಿ ಅಸಾಮಾನ್ಯ ಎನಿಸುವಂಥದ್ದು ಏನಿಲ್ಲ~. ಏಕೆಂದರೆ ಮಕ್ಕಳನ್ನು `ಅತಿ ಗಂಭೀರ~ ಸ್ಥಿತಿಯಲ್ಲಿ ಇಲ್ಲಿಗೆ ಕರೆತರಲಾಗಿತ್ತು ಎಂದು ಸಮರ್ಥಿಸಿಕೊಂಡಿದ್ದಾರೆ.<br /> <br /> ಈ ಪ್ರಕರಣಗಳಲ್ಲಿ ವೈದ್ಯರ ನಿರ್ಲಕ್ಷ್ಯ ಇಲ್ಲ ಅಥವಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಂದ ಯಾವುದೇ ಲೋಪ ಆಗಿಲ್ಲ ಎಂದು ರಾಜ್ಯ ಸರ್ಕಾರ ಸಮರ್ಥನೆ ನೀಡಿದೆ.<br /> <br /> ಶಿಶುಗಳ ಸಾವಿನ ಬಗ್ಗೆ ತನಿಖೆ ನಡೆಸಿ ಆಸ್ಪತ್ರೆಯವರೇ ಸರ್ಕಾರಕ್ಕೆ ಈಚೆಗೆ ವರದಿ ಸಲ್ಲಿಸಿದ್ದರು. ಇದನ್ನು ಆಧರಿಸಿ ಸರ್ಕಾರ ಈ ಪ್ರಕರಣಗಳಲ್ಲಿ ಆಸ್ಪತ್ರೆಯ ದೋಷ ಇಲ್ಲ ಎಂಬ ನಿರ್ಧಾರಕ್ಕೆ ಬಂದಿದೆ.<br /> <br /> `ನಮಗೆ ಸಲ್ಲಿಸಿದ ವರದಿ ಪರಿಶೀಲಿಸಿದ ಬಳಿಕವೂ ಯಾವುದೇ ಲೋಪ ಅಥವಾ ವೈದ್ಯಕೀಯ ನಿರ್ಲಕ್ಷ ಕಂಡು ಬಂದಿಲ್ಲ~ ಎಂದು ವೈದ್ಯಕೀಯ ಶಿಕ್ಷಣ ನಿರ್ದೇಶಕ ಸುಶಾಂತ ಬ್ಯಾನರ್ಜಿ ಹೇಳಿದ್ದಾರೆ.<br /> <br /> `ಪ್ರತಿ ದಿನ ಆಸ್ಪತ್ರೆಗೆ 300 ಮಕ್ಕಳು ದಾಖಲಾಗುತ್ತಾರೆ. ಈ ಪೈಕಿ ಸರಾಸರಿ ಐದು ಮಕ್ಕಳು ಸಾವಿಗೀಡಾಗುತ್ತವೆ. ಇದು ಅಸಹಜವೇನಲ್ಲ. ಬಹುತೇಕ ಪ್ರಕರಣಗಳಲ್ಲಿ ಮಕ್ಕಳ ಸ್ಥಿತಿ ಚಿಂತಾಜನಕವಾಗಿರುತ್ತದೆ~ ಎಂದು ಆಸ್ಪತ್ರೆಯ ಅಧೀಕ್ಷಕ ದಿಲೀಪ್ ಪಾಲ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>