<p><strong>ಬೆಂಗಳೂರು:</strong> ಸರ್ಕಾರದ ವಶಕ್ಕೆ ಪಡೆದಿರುವ ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತೆ ಖಾಸಗಿಯವರ ವಶಕ್ಕೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಬುಧವಾರ ಇಲ್ಲಿ ತಿಳಿಸಿದರು.</p>.<p>ಹೈದರಾಬಾದ್ನ ಅಪೋಲೊ ಆಸ್ಪತ್ರೆಯ ಸಮೂಹಕ್ಕೆ ನೀಡಿದ್ದ ಗುತ್ತಿಗೆ ಅವಧಿ ಮೇ 31ಕ್ಕೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ವೈದ್ಯಕೀಯ ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಒತ್ತಡಕ್ಕೆ ಮಣಿದು ಮತ್ತೆ ಗುತ್ತಿಗೆಗೆ ನೀಡುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಅಪೋಲೊಗೆ ಹಸ್ತಾಂತರಿಸುವ ವೇಳೆ ಇದ್ದ ಆಸ್ಪತ್ರೆಯ ಉಪಕರಣಗಳ ಪೈಕಿ ಕೆಲವೊಂದನ್ನು ಸಾಗಿಸಿದ್ದಾರೆ. ಹೀಗಾಗಿ ಅಪೋಲೊಗೆ ನೀಡಬೇಕಾಗಿದ್ದ ಎರಡು ಕೋಟಿ ರೂಪಾಯಿ ಡೆ ಹಿಡಿಯಲಾಗಿದೆ. ಉಪಕರಣಗಳನ್ನು ನೀಡಿದರೆ ಅಥವಾ ನಷ್ಟ ತುಂಬಿಕೊಟ್ಟರೆ ಮಾತ್ರ ಬಾಕಿ ಹಣ ನೀಡಲಾಗುವುದು ಎಂದರು.</p>.<p>ಗುತ್ತಿಗೆ ಮುಂದುವರಿಸುವಂತೆ ಅಲ್ಲಿನ 256 ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ಅಲ್ಲದೆ ಈ ಸಂಬಂಧ ಗುಲ್ಬರ್ಗದ ಸಂಚಾರಿ ಪೀಠದಲ್ಲಿ ಮೊಕದ್ದಮೆ ಹೂಡಲಾಗಿದೆ. ಸರ್ಕಾರ ನ್ಯಾಯಾಲಯಕ್ಕೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಸರ್ಕಾರದ ವಶಕ್ಕೆ ಪಡೆದಿರುವ ರಾಯಚೂರಿನ ರಾಜೀವ್ ಗಾಂಧಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಮತ್ತೆ ಖಾಸಗಿಯವರ ವಶಕ್ಕೆ ನೀಡುವ ಪ್ರಶ್ನೆಯೇ ಇಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಎಸ್.ಎ.ರಾಮದಾಸ್ ಬುಧವಾರ ಇಲ್ಲಿ ತಿಳಿಸಿದರು.</p>.<p>ಹೈದರಾಬಾದ್ನ ಅಪೋಲೊ ಆಸ್ಪತ್ರೆಯ ಸಮೂಹಕ್ಕೆ ನೀಡಿದ್ದ ಗುತ್ತಿಗೆ ಅವಧಿ ಮೇ 31ಕ್ಕೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ವೈದ್ಯಕೀಯ ಇಲಾಖೆಯ ವಶಕ್ಕೆ ಪಡೆಯಲಾಗಿದೆ. ಒತ್ತಡಕ್ಕೆ ಮಣಿದು ಮತ್ತೆ ಗುತ್ತಿಗೆಗೆ ನೀಡುವುದಿಲ್ಲ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>ಅಪೋಲೊಗೆ ಹಸ್ತಾಂತರಿಸುವ ವೇಳೆ ಇದ್ದ ಆಸ್ಪತ್ರೆಯ ಉಪಕರಣಗಳ ಪೈಕಿ ಕೆಲವೊಂದನ್ನು ಸಾಗಿಸಿದ್ದಾರೆ. ಹೀಗಾಗಿ ಅಪೋಲೊಗೆ ನೀಡಬೇಕಾಗಿದ್ದ ಎರಡು ಕೋಟಿ ರೂಪಾಯಿ ಡೆ ಹಿಡಿಯಲಾಗಿದೆ. ಉಪಕರಣಗಳನ್ನು ನೀಡಿದರೆ ಅಥವಾ ನಷ್ಟ ತುಂಬಿಕೊಟ್ಟರೆ ಮಾತ್ರ ಬಾಕಿ ಹಣ ನೀಡಲಾಗುವುದು ಎಂದರು.</p>.<p>ಗುತ್ತಿಗೆ ಮುಂದುವರಿಸುವಂತೆ ಅಲ್ಲಿನ 256 ಸಿಬ್ಬಂದಿ ಮುಷ್ಕರ ನಡೆಸುತ್ತಿದ್ದಾರೆ. ಅಲ್ಲದೆ ಈ ಸಂಬಂಧ ಗುಲ್ಬರ್ಗದ ಸಂಚಾರಿ ಪೀಠದಲ್ಲಿ ಮೊಕದ್ದಮೆ ಹೂಡಲಾಗಿದೆ. ಸರ್ಕಾರ ನ್ಯಾಯಾಲಯಕ್ಕೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಿದೆ ಎಂದು ವಿವರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>