<p><strong>ನವದೆಹಲಿ (ಪಿಟಿಐ):</strong> ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹು ಮಹತ್ವಾಕಾಂಕ್ಷೆಯ ಆಹಾರ ಭದ್ರತಾ ಮಸೂದೆಗೆ ಅಂಗೀಕಾರ ಪಡೆದುಕೊಳ್ಳಲು ಶತ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್, ಈ ಬಗ್ಗೆ ಒಮ್ಮತ ಮೂಡಿಸಲು ಯುಪಿಎ ಅಂಗಪಕ್ಷಗಳ ಮತ್ತು ಪ್ರತಿಪಕ್ಷಗಳ ಮನವೊಲಿಸುವ ಯತ್ನಕ್ಕೆ ಕೈಹಾಕಿದೆ.<br /> <br /> ಈ ಸಂಬಂಧ ಸಂಸತ್ ವಿಶೇಷ ಅಧಿವೇಶನ ಕರೆಯಲು ಚಿಂತಿಸಿರುವ ಕಾಂಗ್ರೆಸ್, ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಸೋಮವಾರ ಯುಪಿಎ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆ ಕರೆದಿದೆ. ಜೊತೆಗೆ ಇದೇ 7ರಂದು ಸರ್ವಪಕ್ಷಗಳ ಸಭೆ ಕರೆಯುವ ಕುರಿತೂ ಆಲೋಚಿಸಿದೆ.<br /> <br /> ಆಹಾರ ಭದ್ರತಾ ಮಸೂದೆ ಸಂಬಂಧ ಒಮ್ಮತ ಮೂಡಿಸುವ ಸಲುವಾಗಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್ನಾಥ್ ಅವರಿಗೆ ರಾಜಕೀಯ ಪಕ್ಷಗಳ ಜೊತೆ ಮಾತುಕತೆ ನಡೆಸುವ ಜವಾಬ್ದಾರಿ ವಹಿಸಲಾಗಿದೆ. ಈ ಮಾತುಕತೆ ಫಲಪ್ರದವಾದರೆ ವಿಶೇಷ ಅಧಿವೇಶನ ಕರೆಯಲು ಚಿಂತಿಸಲಾಗಿದೆ. ವಿಫಲವಾದರೆ ಸುಗ್ರೀವಾಜ್ಞೆ ತರುವ ಮೂಲಕ ಆಹಾರ ಭದ್ರತಾ ಯೋಜನೆಯನ್ನು ಅನುಷ್ಠಾನ ಮಾಡಲು ಆಲೋಚಿಸಲಾಗಿದೆ. <br /> <br /> ಪಕ್ಷದ ಮೂಲಗಳ ಪ್ರಕಾರ ಜುಲೈ 1ರಿಂದ 5ರವರೆಗೆ ವಿಶೇಷ ಅಧಿವೇಶನಕ್ಕೆ ದಿನಾಂಕ ಗೊತ್ತು ಮಾಡಲಾಗಿದೆ. ಆದರೆ, ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಸರ್ಕಾರಿ ಮೂಲಗಳು ಹೇಳಿವೆ.<br /> <br /> ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪಕ್ಷದ ವರಿಷ್ಠರ ಸಭೆಯಲ್ಲಿ ಆಹಾರ ಭದ್ರತಾ ಮಸೂದೆ, ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ, ಮಾವೊವಾದಿಗಳ ದಾಳಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮೂರು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹು ಮಹತ್ವಾಕಾಂಕ್ಷೆಯ ಆಹಾರ ಭದ್ರತಾ ಮಸೂದೆಗೆ ಅಂಗೀಕಾರ ಪಡೆದುಕೊಳ್ಳಲು ಶತ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್, ಈ ಬಗ್ಗೆ ಒಮ್ಮತ ಮೂಡಿಸಲು ಯುಪಿಎ ಅಂಗಪಕ್ಷಗಳ ಮತ್ತು ಪ್ರತಿಪಕ್ಷಗಳ ಮನವೊಲಿಸುವ ಯತ್ನಕ್ಕೆ ಕೈಹಾಕಿದೆ.<br /> <br /> ಈ ಸಂಬಂಧ ಸಂಸತ್ ವಿಶೇಷ ಅಧಿವೇಶನ ಕರೆಯಲು ಚಿಂತಿಸಿರುವ ಕಾಂಗ್ರೆಸ್, ಇದರ ಸಾಧಕ-ಬಾಧಕಗಳ ಬಗ್ಗೆ ಚರ್ಚಿಸಲು ಸೋಮವಾರ ಯುಪಿಎ ಮೈತ್ರಿಕೂಟದ ಸಮನ್ವಯ ಸಮಿತಿ ಸಭೆ ಕರೆದಿದೆ. ಜೊತೆಗೆ ಇದೇ 7ರಂದು ಸರ್ವಪಕ್ಷಗಳ ಸಭೆ ಕರೆಯುವ ಕುರಿತೂ ಆಲೋಚಿಸಿದೆ.<br /> <br /> ಆಹಾರ ಭದ್ರತಾ ಮಸೂದೆ ಸಂಬಂಧ ಒಮ್ಮತ ಮೂಡಿಸುವ ಸಲುವಾಗಿ ಸಂಸದೀಯ ವ್ಯವಹಾರಗಳ ಸಚಿವ ಕಮಲ್ನಾಥ್ ಅವರಿಗೆ ರಾಜಕೀಯ ಪಕ್ಷಗಳ ಜೊತೆ ಮಾತುಕತೆ ನಡೆಸುವ ಜವಾಬ್ದಾರಿ ವಹಿಸಲಾಗಿದೆ. ಈ ಮಾತುಕತೆ ಫಲಪ್ರದವಾದರೆ ವಿಶೇಷ ಅಧಿವೇಶನ ಕರೆಯಲು ಚಿಂತಿಸಲಾಗಿದೆ. ವಿಫಲವಾದರೆ ಸುಗ್ರೀವಾಜ್ಞೆ ತರುವ ಮೂಲಕ ಆಹಾರ ಭದ್ರತಾ ಯೋಜನೆಯನ್ನು ಅನುಷ್ಠಾನ ಮಾಡಲು ಆಲೋಚಿಸಲಾಗಿದೆ. <br /> <br /> ಪಕ್ಷದ ಮೂಲಗಳ ಪ್ರಕಾರ ಜುಲೈ 1ರಿಂದ 5ರವರೆಗೆ ವಿಶೇಷ ಅಧಿವೇಶನಕ್ಕೆ ದಿನಾಂಕ ಗೊತ್ತು ಮಾಡಲಾಗಿದೆ. ಆದರೆ, ದಿನಾಂಕ ಇನ್ನೂ ನಿಗದಿಯಾಗಿಲ್ಲ ಎಂದು ಸರ್ಕಾರಿ ಮೂಲಗಳು ಹೇಳಿವೆ.<br /> <br /> ಸೋನಿಯಾ ಗಾಂಧಿ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಪಕ್ಷದ ವರಿಷ್ಠರ ಸಭೆಯಲ್ಲಿ ಆಹಾರ ಭದ್ರತಾ ಮಸೂದೆ, ತೆಲಂಗಾಣ ಪ್ರತ್ಯೇಕ ರಾಜ್ಯ ರಚನೆ, ಮಾವೊವಾದಿಗಳ ದಾಳಿ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಮೂರು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>