<p><strong>ವಿಜಾಪುರ:</strong> ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಘಟಕ ಸ್ಥಾಪಿಸಲು ಮುಂದೆ ಬರುವವರಿಗೆ 10 ಕೋಟಿ ರೂಪಾಯಿ ಸಹಾಯಧನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.<br /> <br /> ತಾಲ್ಲೂಕಿನ ಜಾಲಗೇರಿಯಲ್ಲಿ ಭಾನುವಾರ ನಡೆದ ಕಿತ್ತೂರು ರಾಣಿ ಚನ್ನಮ್ಮ ಹಣ್ಣು ಮತ್ತು ತರಕಾರಿ ಸಂಸ್ಕರಣ, ಮಾರಾಟ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.<br /> <br /> ಸುಧಾ ಮೂರ್ತಿ, ವಿದ್ಯಾ ಮರಕುಂಬಿ, ಕಿರಣ್ ಮುಂಜುಮದಾರ ಅವರನ್ನು ಆದರ್ಶ ವಾಗಿಟ್ಟುಕೊಂಡು ಮಹಿಳಾ ಉದ್ಯಮಿಗಳು ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು.<br /> <br /> `ಅವಳಿ ಜಿಲ್ಲೆಗಳ ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕೆರೆಗೆ ನೀರು ತುಂಬಿಸುವ ಯೋಜನೆ ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಈ ಹಂತದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಈ ಯೋಜನೆಯನ್ನು ತಾವೇ ಮಾಡಿದ್ದಾಗಿ ಹೇಳಿಕೊಳ್ಳುತ್ತಿದ್ದಾರೆ. ಹಿಂದೆ ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಅವರಿಗೆ ನೀರಾವರಿ ನೆನಪಾಗಲಿಲ್ಲ. ಈಗ ಪ್ರಚಾರಕ್ಕಾಗಿ ಹೋರಾಟದ ಬಗ್ಗೆ ಮಾತನಾಡುತ್ತಿದ್ದಾರೆ~ ಎಂದು ಟೀಕಿಸಿದರು.<br /> <br /> ಸಂಘ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಸಿ.ಸಿ. ಪಾಟೀಲ, ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು. ಕಿತ್ತೂರು ರಾಣಿ ಚನ್ನಮ್ಮಳ ಹಾಗೆ ದೃಢ ಸಂಕಲ್ಪ ಹಾಗೂ ಸ್ವಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.<br /> <br /> ಆರ್ಥಿಕ ಸದೃಢತೆಯಿಂದ ಮಾತ್ರ ಸ್ವಾವಲಂಬಿ ಮತ್ತು ನೆಮ್ಮದಿಯ ಬದುಕು ಸಾಧ್ಯ. ಕಚ್ಚಾ ವಸ್ತು ಆಧರಿತ ಉದ್ಯಮ ಸ್ಥಾಪನೆಗೆ ಮಹಿಳೆಯರು ಮುಂದೆ ಬರಬೇಕು ಎಂದು ಸಲಹೆ ನೀಡಿದರು.<br /> <br /> ಸಚಿವ ಮುರುಗೇಶ ನಿರಾಣಿ ವಿರುದ್ಧ ಆಲಂ ಪಾಷಾ ಮಾಡುತ್ತಿರುವ ಆರೋಪ ನಿರಾಧಾರ. ಮಾಧ್ಯಮಗಳ ವರದಿಯಲ್ಲಿಯೂ ಸತ್ಯಾಂಶ ಇಲ್ಲ. ಇದನ್ನು ಸಾರ್ವಜನಿಕರು ನಂಬಬಾರದು. ಪಂಚಮಸಾಲಿ ಸಮಾಜ ನಿರಾಣಿ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದರು.<br /> <br /> ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಧೋಂಡ, ಸಂಗಮೇಶ ಬಬಲೇಶ್ವರ ಮಾತನಾಡಿದರು. ಗೀತಾಂಜಲಿ, ಶಿವಾನಂದ ಕಲ್ಲೂರ, ಎ.ಎನ್. ಪಾಟೀಲ, ವಸಂತ ಪ್ರೇಮ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ:</strong> ಜಿಲ್ಲೆಯಲ್ಲಿ ಆಹಾರ ಸಂಸ್ಕರಣ ಘಟಕ ಸ್ಥಾಪಿಸಲು ಮುಂದೆ ಬರುವವರಿಗೆ 10 ಕೋಟಿ ರೂಪಾಯಿ ಸಹಾಯಧನ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಹೇಳಿದರು.<br /> <br /> ತಾಲ್ಲೂಕಿನ ಜಾಲಗೇರಿಯಲ್ಲಿ ಭಾನುವಾರ ನಡೆದ ಕಿತ್ತೂರು ರಾಣಿ ಚನ್ನಮ್ಮ ಹಣ್ಣು ಮತ್ತು ತರಕಾರಿ ಸಂಸ್ಕರಣ, ಮಾರಾಟ ಸಹಕಾರ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.<br /> <br /> ಸುಧಾ ಮೂರ್ತಿ, ವಿದ್ಯಾ ಮರಕುಂಬಿ, ಕಿರಣ್ ಮುಂಜುಮದಾರ ಅವರನ್ನು ಆದರ್ಶ ವಾಗಿಟ್ಟುಕೊಂಡು ಮಹಿಳಾ ಉದ್ಯಮಿಗಳು ಪ್ರಗತಿ ಹೊಂದಬೇಕು ಎಂದು ಸಲಹೆ ನೀಡಿದರು.<br /> <br /> `ಅವಳಿ ಜಿಲ್ಲೆಗಳ ನೀರಾವರಿ ಯೋಜನೆಗಳ ಅನುಷ್ಠಾನ ಹಾಗೂ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಕೆರೆಗೆ ನೀರು ತುಂಬಿಸುವ ಯೋಜನೆ ಶೀಘ್ರವೇ ಅನುಷ್ಠಾನಗೊಳ್ಳಲಿದೆ. ಈ ಹಂತದಲ್ಲಿ ಕಾಂಗ್ರೆಸ್ ಶಾಸಕರೊಬ್ಬರು ಈ ಯೋಜನೆಯನ್ನು ತಾವೇ ಮಾಡಿದ್ದಾಗಿ ಹೇಳಿಕೊಳ್ಳುತ್ತಿದ್ದಾರೆ. ಹಿಂದೆ ತಮ್ಮ ಪಕ್ಷ ಅಧಿಕಾರದಲ್ಲಿದ್ದಾಗ ಅವರಿಗೆ ನೀರಾವರಿ ನೆನಪಾಗಲಿಲ್ಲ. ಈಗ ಪ್ರಚಾರಕ್ಕಾಗಿ ಹೋರಾಟದ ಬಗ್ಗೆ ಮಾತನಾಡುತ್ತಿದ್ದಾರೆ~ ಎಂದು ಟೀಕಿಸಿದರು.<br /> <br /> ಸಂಘ ಉದ್ಘಾಟಿಸಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವ ಸಿ.ಸಿ. ಪಾಟೀಲ, ಮಹಿಳೆಯರು ಸ್ವಾವಲಂಬಿ ಬದುಕು ರೂಪಿಸಿಕೊಳ್ಳಬೇಕು. ಕಿತ್ತೂರು ರಾಣಿ ಚನ್ನಮ್ಮಳ ಹಾಗೆ ದೃಢ ಸಂಕಲ್ಪ ಹಾಗೂ ಸ್ವಾಭಿಮಾನ ಬೆಳೆಸಿಕೊಳ್ಳಬೇಕು ಎಂದರು.<br /> <br /> ಆರ್ಥಿಕ ಸದೃಢತೆಯಿಂದ ಮಾತ್ರ ಸ್ವಾವಲಂಬಿ ಮತ್ತು ನೆಮ್ಮದಿಯ ಬದುಕು ಸಾಧ್ಯ. ಕಚ್ಚಾ ವಸ್ತು ಆಧರಿತ ಉದ್ಯಮ ಸ್ಥಾಪನೆಗೆ ಮಹಿಳೆಯರು ಮುಂದೆ ಬರಬೇಕು ಎಂದು ಸಲಹೆ ನೀಡಿದರು.<br /> <br /> ಸಚಿವ ಮುರುಗೇಶ ನಿರಾಣಿ ವಿರುದ್ಧ ಆಲಂ ಪಾಷಾ ಮಾಡುತ್ತಿರುವ ಆರೋಪ ನಿರಾಧಾರ. ಮಾಧ್ಯಮಗಳ ವರದಿಯಲ್ಲಿಯೂ ಸತ್ಯಾಂಶ ಇಲ್ಲ. ಇದನ್ನು ಸಾರ್ವಜನಿಕರು ನಂಬಬಾರದು. ಪಂಚಮಸಾಲಿ ಸಮಾಜ ನಿರಾಣಿ ಅವರ ಬೆಂಬಲಕ್ಕೆ ನಿಲ್ಲಬೇಕು ಎಂದು ಮನವಿ ಮಾಡಿದರು.<br /> <br /> ಕೂಡಲಸಂಗಮದ ಜಯಮೃತ್ಯುಂಜಯ ಸ್ವಾಮೀಜಿ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಶಿವಾನಂದ ಪಾಟೀಲ, ಶಾಸಕ ವಿಠ್ಠಲ ಕಟಧೋಂಡ, ಸಂಗಮೇಶ ಬಬಲೇಶ್ವರ ಮಾತನಾಡಿದರು. ಗೀತಾಂಜಲಿ, ಶಿವಾನಂದ ಕಲ್ಲೂರ, ಎ.ಎನ್. ಪಾಟೀಲ, ವಸಂತ ಪ್ರೇಮ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>