<p><strong>ಚಿಕ್ಕಬಳ್ಳಾಪುರ: </strong>ಅಂಗನವಾಡಿ ನೌಕರರ ಜಿಲ್ಲಾಮಟ್ಟದ ಸಮ್ಮೇಳನ ಈ ಬಾರಿ ಗುಡಿಬಂಡೆಯಲ್ಲಿ ನಡೆಯುವುದು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ತಿಳಿಸಿದರು.<br /> <br /> ಆಗಸ್ಟ್ 12, 13ರಂದು ಗುಡಿಬಂಡೆಯಲ್ಲಿ ಸಮ್ಮೇಳನ ನಡೆಯುವುದು. ಈ ಸಂದರ್ಭದಲ್ಲಿ ಜನಾಂದೋಲನಾ ರ್ಯಾಲಿ ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಅಂಗನವಾಡಿ ನೌಕರರ ಪರವಾಗಿ ಸಿಐಟಿಯು ಸಂಘಟನೆಯು ಮೂರು ವರ್ಷಕ್ಕೊಮ್ಮೆ ತಾಲ್ಲೂಕು ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಸಮ್ಮೇಳನ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತದೆ. 13ರಂದು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ವಿವರಿಸಿದರು.<br /> <br /> ಅಂಗನವಾಡಿ ನೌಕರರ ಪ್ರಥಮ ತಾಲ್ಲೂಕು ಸಮ್ಮೇಳನದ ನೂತನ ಸಮಿತಿ ಅಧ್ಯಕ್ಷೆಯಾಗಿ ಟಿ.ಕೆ.ಗಾಯತ್ರಿ, ಉಪಾಧ್ಯಕ್ಷೆಯಾಗಿ ಮಂಜುಳಾ, ಪ್ರಧಾನ ಕಾರ್ಯದರ್ಶಿಯಾಗಿ ಐಶಾಬಿ, ಸಹ ಕಾರ್ಯದರ್ಶಿಯಾಗಿ ಗಾಯತ್ರಿ, ಖಜಾಂಚಿಯಾಗಿ ಜಿ.ಎಸ್.ಪದ್ಮಾ, ಗೌರವಾಧ್ಯಕ್ಷರಾಗಿ ಬಿ.ಎನ್.ಮುನಿಕೃಷ್ಣಪ್ಪ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಬಿ.ಎನ್.ಮುನಿಕೃಷ್ಣಪ್ಪ, ಟಿ.ಕೆ.ಗಾಯಿತ್ರಿ, ಮಂಜುಳಾ, ಐಶಾಬಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಅಂಗನವಾಡಿ ನೌಕರರ ಜಿಲ್ಲಾಮಟ್ಟದ ಸಮ್ಮೇಳನ ಈ ಬಾರಿ ಗುಡಿಬಂಡೆಯಲ್ಲಿ ನಡೆಯುವುದು ಎಂದು ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಲಕ್ಷ್ಮೀದೇವಮ್ಮ ತಿಳಿಸಿದರು.<br /> <br /> ಆಗಸ್ಟ್ 12, 13ರಂದು ಗುಡಿಬಂಡೆಯಲ್ಲಿ ಸಮ್ಮೇಳನ ನಡೆಯುವುದು. ಈ ಸಂದರ್ಭದಲ್ಲಿ ಜನಾಂದೋಲನಾ ರ್ಯಾಲಿ ನಡೆಸಲಾಗುವುದು ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.<br /> <br /> ಅಂಗನವಾಡಿ ನೌಕರರ ಪರವಾಗಿ ಸಿಐಟಿಯು ಸಂಘಟನೆಯು ಮೂರು ವರ್ಷಕ್ಕೊಮ್ಮೆ ತಾಲ್ಲೂಕು ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ಸಮ್ಮೇಳನ ನಡೆಸಿ ಪದಾಧಿಕಾರಿಗಳನ್ನು ಆಯ್ಕೆ ಮಾಡುತ್ತದೆ. 13ರಂದು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮತ್ತು ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಸಲಾಗುತ್ತದೆ ಎಂದು ವಿವರಿಸಿದರು.<br /> <br /> ಅಂಗನವಾಡಿ ನೌಕರರ ಪ್ರಥಮ ತಾಲ್ಲೂಕು ಸಮ್ಮೇಳನದ ನೂತನ ಸಮಿತಿ ಅಧ್ಯಕ್ಷೆಯಾಗಿ ಟಿ.ಕೆ.ಗಾಯತ್ರಿ, ಉಪಾಧ್ಯಕ್ಷೆಯಾಗಿ ಮಂಜುಳಾ, ಪ್ರಧಾನ ಕಾರ್ಯದರ್ಶಿಯಾಗಿ ಐಶಾಬಿ, ಸಹ ಕಾರ್ಯದರ್ಶಿಯಾಗಿ ಗಾಯತ್ರಿ, ಖಜಾಂಚಿಯಾಗಿ ಜಿ.ಎಸ್.ಪದ್ಮಾ, ಗೌರವಾಧ್ಯಕ್ಷರಾಗಿ ಬಿ.ಎನ್.ಮುನಿಕೃಷ್ಣಪ್ಪ ಆಯ್ಕೆಯಾಗಿದ್ದಾರೆ ಎಂದು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಬಿ.ಎನ್.ಮುನಿಕೃಷ್ಣಪ್ಪ, ಟಿ.ಕೆ.ಗಾಯಿತ್ರಿ, ಮಂಜುಳಾ, ಐಶಾಬಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>