<p><strong>ಇಂಡಿ: </strong>ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಮಂಗಳವಾರ ರೈತ ಮಲ್ಲೇಶಪ್ಪ ಚಂದ್ರಾಮ ಬಳಬಟ್ಟಿ ಅವರ ತೋಟದಲ್ಲಿ ಬೆಳೆದು ನಿಂತಿರುವ ಸುಮಾರು 5 ಎಕರೆ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ತಗುಲಿ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ಇಂಡಿ ಪಟ್ಟಣದ ಅಗ್ನಿ ಶಾಮಕ ಪಡೆ ಸ್ಥಳಕ್ಕೆ ಬರುವಷ್ಟರಲ್ಲಿ ಕಬ್ಬು ಸಂಪೂರ್ಣ ಸುಟ್ಟು ಹೋಗಿತ್ತು.<br /> <br /> ಸುಮಾರು ರೂ 2 ಲಕ್ಷದಷ್ಟು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಪ್ರಕರಣ ಇಂಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.<br /> ಪ್ರಾಧ್ಯಾಪಕ ಅಮಾನತು<br /> <br /> <strong>ವಿಜಯಪುರ:</strong> ಅಲ್- ಅಮೀನ್ ವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಧ್ಯಾಪಕ ಡಾ.ಗೋಲೆವಾಲೆ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ. ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಸೋಮವಾರ ಆರಂಭಿಸಿದ್ದ ಪ್ರತಿಭಟನೆ ತೀವ್ರಗೊಂಡಿದ್ದರಿಂದ, ಕಾಲೇಜಿನ ಆಡಳಿತ ಮಂಡಳಿ ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದೆ.<br /> <br /> ಇದೇ 21ರಂದು ಅಸ್ವಸ್ಥೆಯಿಂದ ಬಳಲುತ್ತಿದ್ದಳು ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಡಾ.ಗೋಲೆವಾಲೆ ಕಾಲೇಜು ಆವರಣದಲ್ಲಿರುವ ತಮ್ಮ ವಸತಿ ಗೃಹದಲ್ಲಿರಿಸಿಕೊಂಡಿದ್ದರು. ಇದನ್ನು ಕಂಡ ಇತರ ವಿದ್ಯಾರ್ಥಿಗಳು ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿನಿ ನಡುವೆ ಏನೋ ಸಂಬಂಧವಿದೆ ಎಂದು ಆರೋಪಿಸಿ ಪ್ರತಿಭಟನೆಗಿಳಿದಿದ್ದರು.<br /> <br /> ಪ್ರತಿಭಟನೆ ಮಂಗಳವಾರವೂ ಮುಂದುವರಿಯುವ ಲಕ್ಷಣ ಗೋಚರಿಸಿದ್ದರಿಂದ ಹಾಗೂ ಕಾಲೇಜಿನ ಆಡಳಿತ ಸುವ್ಯವಸ್ಥೆ ದೃಷ್ಟಿಯಿಂದ ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಕಾಲೇಜಿನ ಡೀನ್ ಡಾ.ಬಿ.ಎಸ್.ಪಾಟೀಲ ಕುದರಿಸಾಲೋಡಗಿ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಇದೇ 26ರಂದು ಅಲ್-ಅಮೀನ್ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿಗಳು ಡಾ.ಗೋಲೆವಾಲೆ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಒಂದು ವೇಳೆ ವಿದ್ಯಾರ್ಥಿಗಳ ಆರೋಪ ನಿಜವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡೀನ್ ಹೇಳಿದರು.<br /> ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ಡಾ.ಗೋಲೆವಾಲೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ.<br /> <br /> <strong>ವೃದ್ಧೆ ಕೊಲೆ</strong><br /> ವಿಜಯಪುರ ನಗರದ ಪಟೇಲಗಲ್ಲಿಯಲ್ಲಿ ವೃದ್ಧೆ ಕೊಲೆಗೀಡಾದ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ.<br /> ಸ್ಥಳೀಯ ನಿವಾಸಿ ರಜಾಕ್ಬಿ ಪಟೇಲ (90) ಕೊಲೆಗೀಡಾದವರು.<br /> <br /> ಹಲ ವರ್ಷಗಳಿಂದ ಗಂಡನ ಕಳೆದುಕೊಂಡು ಏಕಾಂಗಿ ಜೀವನ ಸಾಗಿಸುತ್ತಿದ್ದ ರಜಾಕ್ಬಿ ಏಕಾಏಕಿ ಕೊಲೆಗೀಡಾಗಿದ್ದಾರೆ.<br /> ವೃದ್ಧೆ ತಲೆಗೆ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾರೆ. ತಲೆಯಲ್ಲಿ ಗಾಯದ ಗುರುತುಗಳು ಕಂಡು ಬಂದಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.<br /> <br /> <strong>ನಿಲ್ಲದ ಕಳ್ಳತನ: ಹೆಚ್ಚಿದ ಆತಂಕ</strong><br /> ವಿಜಯಪುರ ನಗರದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.<br /> ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮಿರ್ದೆ ಗಲ್ಲಿಯ ಪ್ರಹ್ಲಾದ ಗೋವಿಂದ ದಶವಂತ ಎಂಬುವರ ಮನೆ ಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಮನೆಬಳಕೆ ವಸ್ತುಗಳನ್ನು ಕಳವು ಮಾಡಿದ್ದಾರೆ.<br /> <br /> ನಗರದ ಹೊರವಲಯದ ಬೂತನಾಳ ತಾಂಡಾದಲ್ಲಿ ಸರಣಿಗಳ್ಳತನವಾಗಿದ್ದು, ಪ್ರಕಾಶ ಸೀತಾರಾಮ ರಾಠೋಡ, ಡಾಕು ಅಣದು ಚವ್ಹಾಣ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಎರಡೂ ಮನೆ ಸೇರಿ ರೂ 1.49 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಬೆಲೆಬಾಳುವ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ.<br /> <br /> ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲ ಬೀಗ ಮುರಿದ ಕಳ್ಳರು, ಪ್ಯಾಂಟ್ ಜೇಬಿನಲ್ಲಿಟ್ಟ ರೂ 50 ಸಾವಿರ ನಗದು, ಟ್ರೆಜರಿಯಲ್ಲಿದ್ದ ರೂ 37 ಸಾವಿರ, 15 ಗ್ರಾಂ ತೂಕದ ನೆಕ್ಲೆಸ್ ಸೇರಿದಂತೆ ಇನ್ನಿತರ ಸಾಮಗ್ರಿ ಕಳವು ಮಾಡಲಾಗಿದೆ.<br /> ಇದೇ ಗ್ರಾಮದ ಅಶೋಕ ಸೇವು ರಾಠೋಡ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಒಟ್ಟು ರೂ 34 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ.<br /> <br /> ಬೇಸಿಗೆ ಸಮಯವಾದ್ದರಿಂದ ಮನೆ ಸದಸ್ಯರು ಮಾಳಿಗೆ ಮೇಲೆ ಮಲಗಿದ್ದ ಸಂದರ್ಭ ಕಳ್ಳರು ಬಾಗಿಲು ಮುರಿದು ಕಳ್ಳತನ ನಡೆಸಿದ್ದಾರೆ. ಈ ಬಗ್ಗೆ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.<br /> <br /> <strong>ಬೈಕ್ ಕಳ್ಳತನ:</strong> ನಗರದ ನಾಡಗೌಡ ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ ಬೈಕ್ ಕಳವಾಗಿದೆ. ಶಂಕರಗೌಡ ನಿಂಗನಗೌಡ ಪಾಟೀಲ ಎಂಬುವರ ಬೈಕ್ ಕಳವಾಗಿದೆ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> ಗೋಳಗುಮ್ಮಟ ಎದುರಿನ ದುರ್ಗಾ ಹೋಟೆಲ್ ಮುಂದೆ ಹ್ಯಾಂಡ್ಲಾಕ್ ಮಾಡಿ ನಿಲ್ಲಿಸಿದ ಬೈಕ್ ಕಳವಾಗಿದೆ. ಉಮೇಶ ದುಂಡಪ್ಪ ಕುಂಬಾರ ಎಂಬವರ ಬೈಕ್ ಕಳವಾಗಿದೆ. ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಡಿ: </strong>ತಾಲ್ಲೂಕಿನ ಇಂಗಳಗಿ ಗ್ರಾಮದಲ್ಲಿ ಮಂಗಳವಾರ ರೈತ ಮಲ್ಲೇಶಪ್ಪ ಚಂದ್ರಾಮ ಬಳಬಟ್ಟಿ ಅವರ ತೋಟದಲ್ಲಿ ಬೆಳೆದು ನಿಂತಿರುವ ಸುಮಾರು 5 ಎಕರೆ ಕಬ್ಬಿನ ಗದ್ದೆಗೆ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ತಗುಲಿ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಸುದ್ದಿ ತಿಳಿದ ಇಂಡಿ ಪಟ್ಟಣದ ಅಗ್ನಿ ಶಾಮಕ ಪಡೆ ಸ್ಥಳಕ್ಕೆ ಬರುವಷ್ಟರಲ್ಲಿ ಕಬ್ಬು ಸಂಪೂರ್ಣ ಸುಟ್ಟು ಹೋಗಿತ್ತು.<br /> <br /> ಸುಮಾರು ರೂ 2 ಲಕ್ಷದಷ್ಟು ಹಾನಿಯಾಗಿದೆ ಎಂದು ಅಂದಾಜಿಸಲಾಗಿದೆ. ಪ್ರಕರಣ ಇಂಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.<br /> ಪ್ರಾಧ್ಯಾಪಕ ಅಮಾನತು<br /> <br /> <strong>ವಿಜಯಪುರ:</strong> ಅಲ್- ಅಮೀನ್ ವೈದ್ಯಕೀಯ ಮಹಾ ವಿದ್ಯಾಲಯದ ಪ್ರಾಧ್ಯಾಪಕ ಡಾ.ಗೋಲೆವಾಲೆ ವಿದ್ಯಾರ್ಥಿನಿ ಜತೆ ಅನುಚಿತವಾಗಿ ವರ್ತಿಸಿದ್ದಾರೆ. ಅವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ವಿದ್ಯಾರ್ಥಿಗಳು ಸೋಮವಾರ ಆರಂಭಿಸಿದ್ದ ಪ್ರತಿಭಟನೆ ತೀವ್ರಗೊಂಡಿದ್ದರಿಂದ, ಕಾಲೇಜಿನ ಆಡಳಿತ ಮಂಡಳಿ ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ ಅಮಾನತು ಮಾಡಿದೆ.<br /> <br /> ಇದೇ 21ರಂದು ಅಸ್ವಸ್ಥೆಯಿಂದ ಬಳಲುತ್ತಿದ್ದಳು ಎಂಬ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳನ್ನು ಡಾ.ಗೋಲೆವಾಲೆ ಕಾಲೇಜು ಆವರಣದಲ್ಲಿರುವ ತಮ್ಮ ವಸತಿ ಗೃಹದಲ್ಲಿರಿಸಿಕೊಂಡಿದ್ದರು. ಇದನ್ನು ಕಂಡ ಇತರ ವಿದ್ಯಾರ್ಥಿಗಳು ಪ್ರಾಧ್ಯಾಪಕ ಹಾಗೂ ವಿದ್ಯಾರ್ಥಿನಿ ನಡುವೆ ಏನೋ ಸಂಬಂಧವಿದೆ ಎಂದು ಆರೋಪಿಸಿ ಪ್ರತಿಭಟನೆಗಿಳಿದಿದ್ದರು.<br /> <br /> ಪ್ರತಿಭಟನೆ ಮಂಗಳವಾರವೂ ಮುಂದುವರಿಯುವ ಲಕ್ಷಣ ಗೋಚರಿಸಿದ್ದರಿಂದ ಹಾಗೂ ಕಾಲೇಜಿನ ಆಡಳಿತ ಸುವ್ಯವಸ್ಥೆ ದೃಷ್ಟಿಯಿಂದ ಪ್ರಾಧ್ಯಾಪಕರನ್ನು ತಾತ್ಕಾಲಿಕವಾಗಿ ಅಮಾನತು ಮಾಡಲಾಗಿದೆ ಎಂದು ಕಾಲೇಜಿನ ಡೀನ್ ಡಾ.ಬಿ.ಎಸ್.ಪಾಟೀಲ ಕುದರಿಸಾಲೋಡಗಿ ‘ಪ್ರಜಾವಾಣಿ’ಗೆ ತಿಳಿಸಿದರು.<br /> <br /> ಇದೇ 26ರಂದು ಅಲ್-ಅಮೀನ್ ಟ್ರಸ್ಟ್ ಅಧ್ಯಕ್ಷರು, ಕಾರ್ಯದರ್ಶಿಗಳು ಡಾ.ಗೋಲೆವಾಲೆ ಅವರನ್ನು ವಿಚಾರಣೆ ನಡೆಸಲಿದ್ದಾರೆ. ಒಂದು ವೇಳೆ ವಿದ್ಯಾರ್ಥಿಗಳ ಆರೋಪ ನಿಜವಾದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಡೀನ್ ಹೇಳಿದರು.<br /> ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಪಡೆಯಲು ಡಾ.ಗೋಲೆವಾಲೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದರೂ ಯಾವುದೇ ಪ್ರತಿಕ್ರಿಯೆ ಸಿಗಲಿಲ್ಲ.<br /> <br /> <strong>ವೃದ್ಧೆ ಕೊಲೆ</strong><br /> ವಿಜಯಪುರ ನಗರದ ಪಟೇಲಗಲ್ಲಿಯಲ್ಲಿ ವೃದ್ಧೆ ಕೊಲೆಗೀಡಾದ ಘಟನೆ ಮಂಗಳವಾರ ನಸುಕಿನಲ್ಲಿ ನಡೆದಿದೆ.<br /> ಸ್ಥಳೀಯ ನಿವಾಸಿ ರಜಾಕ್ಬಿ ಪಟೇಲ (90) ಕೊಲೆಗೀಡಾದವರು.<br /> <br /> ಹಲ ವರ್ಷಗಳಿಂದ ಗಂಡನ ಕಳೆದುಕೊಂಡು ಏಕಾಂಗಿ ಜೀವನ ಸಾಗಿಸುತ್ತಿದ್ದ ರಜಾಕ್ಬಿ ಏಕಾಏಕಿ ಕೊಲೆಗೀಡಾಗಿದ್ದಾರೆ.<br /> ವೃದ್ಧೆ ತಲೆಗೆ ಕಟ್ಟಿಗೆಯಿಂದ ಬಲವಾಗಿ ಹೊಡೆದಿದ್ದಾರೆ. ತಲೆಯಲ್ಲಿ ಗಾಯದ ಗುರುತುಗಳು ಕಂಡು ಬಂದಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.<br /> <br /> <strong>ನಿಲ್ಲದ ಕಳ್ಳತನ: ಹೆಚ್ಚಿದ ಆತಂಕ</strong><br /> ವಿಜಯಪುರ ನಗರದಲ್ಲಿ ದಿನೇ ದಿನೇ ಕಳ್ಳತನ ಪ್ರಕರಣ ಹೆಚ್ಚುತ್ತಿದ್ದು, ಸಾರ್ವಜನಿಕರು ಆತಂಕಗೊಂಡಿದ್ದಾರೆ.<br /> ಗಾಂಧಿಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯ ಮಿರ್ದೆ ಗಲ್ಲಿಯ ಪ್ರಹ್ಲಾದ ಗೋವಿಂದ ದಶವಂತ ಎಂಬುವರ ಮನೆ ಬಾಗಿಲ ಬೀಗ ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ, ಮನೆಬಳಕೆ ವಸ್ತುಗಳನ್ನು ಕಳವು ಮಾಡಿದ್ದಾರೆ.<br /> <br /> ನಗರದ ಹೊರವಲಯದ ಬೂತನಾಳ ತಾಂಡಾದಲ್ಲಿ ಸರಣಿಗಳ್ಳತನವಾಗಿದ್ದು, ಪ್ರಕಾಶ ಸೀತಾರಾಮ ರಾಠೋಡ, ಡಾಕು ಅಣದು ಚವ್ಹಾಣ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದೆ. ಎರಡೂ ಮನೆ ಸೇರಿ ರೂ 1.49 ಲಕ್ಷ ಮೌಲ್ಯದ ಚಿನ್ನಾಭರಣ, ನಗದು, ಬೆಲೆಬಾಳುವ ಸಾಮಗ್ರಿಗಳನ್ನು ಕಳವು ಮಾಡಿದ್ದಾರೆ.<br /> <br /> ಮನೆಯಲ್ಲಿ ಯಾರೂ ಇಲ್ಲದ ವೇಳೆ ಬಾಗಿಲ ಬೀಗ ಮುರಿದ ಕಳ್ಳರು, ಪ್ಯಾಂಟ್ ಜೇಬಿನಲ್ಲಿಟ್ಟ ರೂ 50 ಸಾವಿರ ನಗದು, ಟ್ರೆಜರಿಯಲ್ಲಿದ್ದ ರೂ 37 ಸಾವಿರ, 15 ಗ್ರಾಂ ತೂಕದ ನೆಕ್ಲೆಸ್ ಸೇರಿದಂತೆ ಇನ್ನಿತರ ಸಾಮಗ್ರಿ ಕಳವು ಮಾಡಲಾಗಿದೆ.<br /> ಇದೇ ಗ್ರಾಮದ ಅಶೋಕ ಸೇವು ರಾಠೋಡ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಒಟ್ಟು ರೂ 34 ಸಾವಿರ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕಳ್ಳತನವಾಗಿದೆ.<br /> <br /> ಬೇಸಿಗೆ ಸಮಯವಾದ್ದರಿಂದ ಮನೆ ಸದಸ್ಯರು ಮಾಳಿಗೆ ಮೇಲೆ ಮಲಗಿದ್ದ ಸಂದರ್ಭ ಕಳ್ಳರು ಬಾಗಿಲು ಮುರಿದು ಕಳ್ಳತನ ನಡೆಸಿದ್ದಾರೆ. ಈ ಬಗ್ಗೆ ಆದರ್ಶ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.<br /> <br /> <strong>ಬೈಕ್ ಕಳ್ಳತನ:</strong> ನಗರದ ನಾಡಗೌಡ ಪೆಟ್ರೋಲ್ ಬಂಕ್ ಹತ್ತಿರ ನಿಲ್ಲಿಸಿದ ಬೈಕ್ ಕಳವಾಗಿದೆ. ಶಂಕರಗೌಡ ನಿಂಗನಗೌಡ ಪಾಟೀಲ ಎಂಬುವರ ಬೈಕ್ ಕಳವಾಗಿದೆ. ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> ಗೋಳಗುಮ್ಮಟ ಎದುರಿನ ದುರ್ಗಾ ಹೋಟೆಲ್ ಮುಂದೆ ಹ್ಯಾಂಡ್ಲಾಕ್ ಮಾಡಿ ನಿಲ್ಲಿಸಿದ ಬೈಕ್ ಕಳವಾಗಿದೆ. ಉಮೇಶ ದುಂಡಪ್ಪ ಕುಂಬಾರ ಎಂಬವರ ಬೈಕ್ ಕಳವಾಗಿದೆ. ಗೋಳಗುಮ್ಮಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>