<p><strong>ಮಲೇಬೆನ್ನೂರು: </strong>ಸಮೀಪದ ಇಂಗ ಳಗೊಂದಿ ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 6,103 ಘ ಮೀ ಮರಳನ್ನು ಕಂದಾಯ, ಪೊಲೀಸ್, ಲೋಕೋಪಯೋಗಿ ಬಂದರು ಹಾಗೂ ಜಲಸಾರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ತಡರಾತ್ರಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.<br /> <br /> ಅಧಿಕಾರಿಗಳ ಕಣ್ತಪ್ಪಿಸಿ ತುಂಗಭದ್ರಾ ನದಿ ದಂಡೆಯ ಸರ್ಕಾರಿ ಜಾಗದಲ್ಲಿ ಮರಳುಗಳ್ಳರು ಹೊರಗೆ ಕಳ್ಳಸಾಗಣೆ ಮಾಡಲು ದಾಸ್ತಾನು ಮಾಡಿದ್ದರು ಎನ್ನಲಾಗಿದೆ. ಅಧಿಕಾರಿಗಳ ತಂಡ ಖಚಿತ ಮಾಹಿತಿಯೊಡನೆ ದಾಳಿ ನಡೆಸಿದಾಗ ಈ ಅಕ್ರಮ ಮರಳು ದಾಸ್ತಾನು ಕುರಿತು ತಿಳಿದು ಬಂದಿದೆ.<br /> <br /> ವಶಪಡಿಸಿಕೊಂಡ ಮರಳಿನ ಮಾರುಕಟ್ಟೆ ಮೌಲ್ಯ ಸುಮಾರು ₹ 55ಲಕ್ಷ ಎಂದು ಲೋಕೋಪಯೋಗಿ ಬಂದರು ಹಾಗೂ ಜಲಸಾರಿಗೆ ಇಲಾಖೆ ಎಇಇ ಕೆ. ನೀಲಗಿರಿಯಪ್ಪ ತಿಳಿಸಿದರು. ದಾಳಿಯಲ್ಲಿ ತಹಶೀಲ್ದಾರ್ ನಜ್ಮಾ, ಡಿವೈಎಸ್ಪಿ ನೇಮಗೌಡ, ಸಿಪಿಐ ಜಯಣ್ಣ ನ್ಯಾಮಗೌಡ, ಪಿಎಸ್ಐ ದೇವರಾಜ್, ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಇಲ್ಲಿನ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಲೇಬೆನ್ನೂರು: </strong>ಸಮೀಪದ ಇಂಗ ಳಗೊಂದಿ ಗ್ರಾಮದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಿದ್ದ 6,103 ಘ ಮೀ ಮರಳನ್ನು ಕಂದಾಯ, ಪೊಲೀಸ್, ಲೋಕೋಪಯೋಗಿ ಬಂದರು ಹಾಗೂ ಜಲಸಾರಿಗೆ ಇಲಾಖೆ ಅಧಿಕಾರಿಗಳು ಸೋಮವಾರ ತಡರಾತ್ರಿ ದಾಳಿ ನಡೆಸಿ ವಶಪಡಿಸಿಕೊಂಡಿದ್ದಾರೆ.<br /> <br /> ಅಧಿಕಾರಿಗಳ ಕಣ್ತಪ್ಪಿಸಿ ತುಂಗಭದ್ರಾ ನದಿ ದಂಡೆಯ ಸರ್ಕಾರಿ ಜಾಗದಲ್ಲಿ ಮರಳುಗಳ್ಳರು ಹೊರಗೆ ಕಳ್ಳಸಾಗಣೆ ಮಾಡಲು ದಾಸ್ತಾನು ಮಾಡಿದ್ದರು ಎನ್ನಲಾಗಿದೆ. ಅಧಿಕಾರಿಗಳ ತಂಡ ಖಚಿತ ಮಾಹಿತಿಯೊಡನೆ ದಾಳಿ ನಡೆಸಿದಾಗ ಈ ಅಕ್ರಮ ಮರಳು ದಾಸ್ತಾನು ಕುರಿತು ತಿಳಿದು ಬಂದಿದೆ.<br /> <br /> ವಶಪಡಿಸಿಕೊಂಡ ಮರಳಿನ ಮಾರುಕಟ್ಟೆ ಮೌಲ್ಯ ಸುಮಾರು ₹ 55ಲಕ್ಷ ಎಂದು ಲೋಕೋಪಯೋಗಿ ಬಂದರು ಹಾಗೂ ಜಲಸಾರಿಗೆ ಇಲಾಖೆ ಎಇಇ ಕೆ. ನೀಲಗಿರಿಯಪ್ಪ ತಿಳಿಸಿದರು. ದಾಳಿಯಲ್ಲಿ ತಹಶೀಲ್ದಾರ್ ನಜ್ಮಾ, ಡಿವೈಎಸ್ಪಿ ನೇಮಗೌಡ, ಸಿಪಿಐ ಜಯಣ್ಣ ನ್ಯಾಮಗೌಡ, ಪಿಎಸ್ಐ ದೇವರಾಜ್, ಕಂದಾಯ, ಪೊಲೀಸ್ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. ಇಲ್ಲಿನ ಪೊಲೀಸ್ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>