<p><strong>ನೆಲಮಂಗಲ: `</strong>ಜಾಗತೀಕರಣದ ಮಾರು ವೇಷದಲ್ಲಿ ಅವತರಿಸಿದ ಇಂಗ್ಲಿಷ್ ಕಲಿಕೆಯು ಇಂದು ಅತ್ಯಂತ ಪ್ರಸ್ತುತವಾಗಿದೆ. ದುಡಿಯುವ ಕೈಗೆ ಕೆಲಸ ಮತ್ತು ಹಸಿದ ಹೊಟ್ಟೆಯ ಅನ್ನಕ್ಕೆ ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ~ ಎಂದು ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಜಿ.ಎ. ವೆಂಕಟೇಶಲು ತಿಳಿಸಿದರು.<br /> <br /> ತಾಲ್ಲೂಕಿನ ಯಂಟಗಾನಹಳ್ಳಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಕಾಲೇಜಿನಲ್ಲಿ ಆಯೋಜಿಸಿದ್ದ ಒಂದು ದಿನದ ಆಂಗ್ಲ ಭಾಷಾ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಲಯನ್ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ.ಸುರೇಶ್ ಆಳ್ವ ಮಾತನಾಡಿ, `ಆಂಗ್ಲ ಭಾಷೆಯ ಬಗ್ಗೆ ಕೀಳರಿಮೆ ಹೊಂದಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ಪ್ರಾಯೋಜಿತ ಇಂಗ್ಲಿಷ್ ಕಲಿಕೆಯ ಈ ಯೋಜನೆಯು ಬಡ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಇದು ನಿರಂತರವಾಗಿ ನಡೆಯಲಿ~ ಎಂದರು. <br /> <br /> ಸಾಹಿತಿ ತ್ಯಾಮಗೊಂಡ್ಲು ಅಂಬರೀಷ್, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಡಿ.ಶ್ರೀನಿವಾಸಯ್ಯ ಮಾತನಾಡಿದರು.<br /> ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಬಿ.ಮಧುಸೂಧನ್ ಪ್ರಾಸ್ತಾವಿಕವಾಗಿ ಮಾತನಾಡಿ, ಆಂಗ್ಲ ಭಾಷಾ ಬೋಧನೆಯನ್ನು ಭಾಷಾ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ರಜಾ ದಿನಗಳಲ್ಲಿ ನಿರಂತರವಾಗಿ ನಡೆಸಲಾಗುವುದು~ ಎಂದರು.<br /> <br /> ಘಟಕದ 96 ಸ್ವಯಂಸೇವಕರು ಭಾಗವಹಿಸಿದ್ದ ಕಾರ್ಯಗಾರದಲ್ಲಿ ಹಿರಿಯ ಉಪನ್ಯಾಸಕ ಟಿ.ವಿ.ಪ್ರಕಾಶ್, ತ್ಯಾಮಗೊಂಡ್ಲು ಅಂಬರೀಷ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ಸ್ವಯಂಸೇವಕ ಕಿರಣ್ ಸ್ವಾಗತಿಸಿ, ವಸಂತ್ಕುಮಾರ್ ವಂದಿಸಿದರು.<br /> <br /> <strong>ಅಸ್ತಮಾಗೆ ಉಚಿತ ಔಷಧಿ ವಿತರಣೆ:</strong> ವನಕಲ್ಲು ಮಲ್ಲೇಶ್ವರ ಕ್ಷೇತ್ರದ ಸಿದ್ದಯೋಗಾನಂದ ಸ್ವಾಮೀಜಿ ಅವರ ಸಂಕಲ್ಪದಂತೆ ಭಾನುವಾರ ತಾಲ್ಲೂಕಿನ ತ್ಯಾಮಗೊಂಡ್ಲು ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಅಸ್ತಮಾ, ಶೀತ ಮತ್ತು ಅಲರ್ಜಿಗೆ ಉಚಿತ ಔಷಧಿ ವಿತರಿಸಲಾಯಿತು. <br /> <br /> ಸುತ್ತಲಿನ ಗ್ರಾಮ ಹಾಗೂ ಬಹೂದೂರದ ಪಟ್ಟಣಗಳಿಂದ ನೂರಾರು ಜನ ಆಗಮಿಸಿ ಔಷಧಿ ಸ್ವೀಕರಿಸಿದರು. ಉದ್ಯಮಿ ಸುರೇಂದ್ರನಾಥ್ ಔಷಧಿ ವಿತರಣೆ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನೆಲಮಂಗಲ: `</strong>ಜಾಗತೀಕರಣದ ಮಾರು ವೇಷದಲ್ಲಿ ಅವತರಿಸಿದ ಇಂಗ್ಲಿಷ್ ಕಲಿಕೆಯು ಇಂದು ಅತ್ಯಂತ ಪ್ರಸ್ತುತವಾಗಿದೆ. ದುಡಿಯುವ ಕೈಗೆ ಕೆಲಸ ಮತ್ತು ಹಸಿದ ಹೊಟ್ಟೆಯ ಅನ್ನಕ್ಕೆ ಆಂಗ್ಲ ಭಾಷೆಯ ಕಲಿಕೆ ಅನಿವಾರ್ಯ~ ಎಂದು ನಿವೃತ್ತ ತಾಲ್ಲೂಕು ವೈದ್ಯಾಧಿಕಾರಿ ಜಿ.ಎ. ವೆಂಕಟೇಶಲು ತಿಳಿಸಿದರು.<br /> <br /> ತಾಲ್ಲೂಕಿನ ಯಂಟಗಾನಹಳ್ಳಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಕಾಲೇಜಿನಲ್ಲಿ ಆಯೋಜಿಸಿದ್ದ ಒಂದು ದಿನದ ಆಂಗ್ಲ ಭಾಷಾ ಕಾರ್ಯಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಲಯನ್ ಸಂಸ್ಥೆಯ ಮಾಜಿ ಅಧ್ಯಕ್ಷ ಬಿ.ಸುರೇಶ್ ಆಳ್ವ ಮಾತನಾಡಿ, `ಆಂಗ್ಲ ಭಾಷೆಯ ಬಗ್ಗೆ ಕೀಳರಿಮೆ ಹೊಂದಿದ ಗ್ರಾಮೀಣ ವಿದ್ಯಾರ್ಥಿಗಳಿಗೆ ಎನ್ಎಸ್ಎಸ್ ಪ್ರಾಯೋಜಿತ ಇಂಗ್ಲಿಷ್ ಕಲಿಕೆಯ ಈ ಯೋಜನೆಯು ಬಡ ವಿದ್ಯಾರ್ಥಿಗಳಿಗೆ ವರದಾನವಾಗಿದೆ. ಇದು ನಿರಂತರವಾಗಿ ನಡೆಯಲಿ~ ಎಂದರು. <br /> <br /> ಸಾಹಿತಿ ತ್ಯಾಮಗೊಂಡ್ಲು ಅಂಬರೀಷ್, ಪ್ರೌಢ ಶಾಲೆಯ ಮುಖ್ಯ ಶಿಕ್ಷಕ ಡಿ.ಶ್ರೀನಿವಾಸಯ್ಯ ಮಾತನಾಡಿದರು.<br /> ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಬಿ.ಮಧುಸೂಧನ್ ಪ್ರಾಸ್ತಾವಿಕವಾಗಿ ಮಾತನಾಡಿ, ಆಂಗ್ಲ ಭಾಷಾ ಬೋಧನೆಯನ್ನು ಭಾಷಾ ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ತರಗತಿಗಳನ್ನು ನಡೆಸುವ ಮೂಲಕ ರಜಾ ದಿನಗಳಲ್ಲಿ ನಿರಂತರವಾಗಿ ನಡೆಸಲಾಗುವುದು~ ಎಂದರು.<br /> <br /> ಘಟಕದ 96 ಸ್ವಯಂಸೇವಕರು ಭಾಗವಹಿಸಿದ್ದ ಕಾರ್ಯಗಾರದಲ್ಲಿ ಹಿರಿಯ ಉಪನ್ಯಾಸಕ ಟಿ.ವಿ.ಪ್ರಕಾಶ್, ತ್ಯಾಮಗೊಂಡ್ಲು ಅಂಬರೀಷ್ ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿ ನೀಡಿದರು. ಸ್ವಯಂಸೇವಕ ಕಿರಣ್ ಸ್ವಾಗತಿಸಿ, ವಸಂತ್ಕುಮಾರ್ ವಂದಿಸಿದರು.<br /> <br /> <strong>ಅಸ್ತಮಾಗೆ ಉಚಿತ ಔಷಧಿ ವಿತರಣೆ:</strong> ವನಕಲ್ಲು ಮಲ್ಲೇಶ್ವರ ಕ್ಷೇತ್ರದ ಸಿದ್ದಯೋಗಾನಂದ ಸ್ವಾಮೀಜಿ ಅವರ ಸಂಕಲ್ಪದಂತೆ ಭಾನುವಾರ ತಾಲ್ಲೂಕಿನ ತ್ಯಾಮಗೊಂಡ್ಲು ಶ್ರೀರಾಮ ಕಲ್ಯಾಣ ಮಂಟಪದಲ್ಲಿ ಅಸ್ತಮಾ, ಶೀತ ಮತ್ತು ಅಲರ್ಜಿಗೆ ಉಚಿತ ಔಷಧಿ ವಿತರಿಸಲಾಯಿತು. <br /> <br /> ಸುತ್ತಲಿನ ಗ್ರಾಮ ಹಾಗೂ ಬಹೂದೂರದ ಪಟ್ಟಣಗಳಿಂದ ನೂರಾರು ಜನ ಆಗಮಿಸಿ ಔಷಧಿ ಸ್ವೀಕರಿಸಿದರು. ಉದ್ಯಮಿ ಸುರೇಂದ್ರನಾಥ್ ಔಷಧಿ ವಿತರಣೆ ವ್ಯವಸ್ಥೆ ಮಾಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>