<p><strong>ಹುಬ್ಬಳ್ಳಿ:</strong> ಸರ್ಕಾರದ ಸಾಧನೆ ತಿಳಿಸಲು ಸೋಮವಾರದಿಂದಲೇ ತಮ್ಮ ರಾಜ್ಯ ಪ್ರವಾಸ ಆರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.<br /> <br /> `ಗುಲ್ಬರ್ಗದಿಂದ ನನ್ನ ಪ್ರವಾಸ ಆರಂಭವಾಗಲಿದೆ. ಸೋಮವಾರ ಗುಲ್ಬರ್ಗದಲ್ಲಿ ಸಮಾವೇಶ ನಡೆಯಲಿದೆ. ಜನತೆಗೆ ಸರ್ಕಾರದ ಸಾಧನೆ ತಿಳಿಸುವುದು ಪ್ರವಾಸದ ಉದ್ದೇಶ~ ಎಂದು ಅವರು ಹೇಳಿದರು.<br /> <br /> ಬಿಜೆಪಿಯಲ್ಲಿ ಈಗ ಯಾವುದೇ ಗೊಂದಲ ಇಲ್ಲ ಎಂದು ಪುನರುಚ್ಚರಿಸಿದ ಅವರು, ಸರ್ಕಾರದ ಸಾಧನೆ ತಿಳಿಸಲು ಮುಖಂಡರೆಲ್ಲ ಸಾಮೂಹಿಕವಾಗಿ ಪ್ರವಾಸ ಮಾಡುವುದು ಕಾರ್ಯಸಾಧುವಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. `ನಾವೆಲ್ಲ ಒಗ್ಗಟ್ಟಾಗಿದ್ದೇವೆ. <br /> <br /> ಸಂಕ್ರ ಮಣದ ನಂತರ ಯಾವ ಬದಲಾ ವ ಣೆಯೂ ಆಗುವುದಿಲ್ಲ~ ಎಂದು ಅವರು ಇನ್ನೊಂದು ಪ್ರಶ್ನೆಗೆ ಚುಟುಕಾಗಿ ಉತ್ತರಿ ಸಿದರು. ಶನಿವಾರ ರಾತ್ರಿ ಬೆಳಗಾವಿಯಿಂದ ಆಗಮಿಸಿ ಇಲ್ಲಿ ತಂಗಿದ್ದ ಮಾಜಿ ಮುಖ್ಯಮಂತ್ರಿ, ಸೋಮವಾರ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮದುರೈಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಸರ್ಕಾರದ ಸಾಧನೆ ತಿಳಿಸಲು ಸೋಮವಾರದಿಂದಲೇ ತಮ್ಮ ರಾಜ್ಯ ಪ್ರವಾಸ ಆರಂಭಿಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.<br /> <br /> `ಗುಲ್ಬರ್ಗದಿಂದ ನನ್ನ ಪ್ರವಾಸ ಆರಂಭವಾಗಲಿದೆ. ಸೋಮವಾರ ಗುಲ್ಬರ್ಗದಲ್ಲಿ ಸಮಾವೇಶ ನಡೆಯಲಿದೆ. ಜನತೆಗೆ ಸರ್ಕಾರದ ಸಾಧನೆ ತಿಳಿಸುವುದು ಪ್ರವಾಸದ ಉದ್ದೇಶ~ ಎಂದು ಅವರು ಹೇಳಿದರು.<br /> <br /> ಬಿಜೆಪಿಯಲ್ಲಿ ಈಗ ಯಾವುದೇ ಗೊಂದಲ ಇಲ್ಲ ಎಂದು ಪುನರುಚ್ಚರಿಸಿದ ಅವರು, ಸರ್ಕಾರದ ಸಾಧನೆ ತಿಳಿಸಲು ಮುಖಂಡರೆಲ್ಲ ಸಾಮೂಹಿಕವಾಗಿ ಪ್ರವಾಸ ಮಾಡುವುದು ಕಾರ್ಯಸಾಧುವಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. `ನಾವೆಲ್ಲ ಒಗ್ಗಟ್ಟಾಗಿದ್ದೇವೆ. <br /> <br /> ಸಂಕ್ರ ಮಣದ ನಂತರ ಯಾವ ಬದಲಾ ವ ಣೆಯೂ ಆಗುವುದಿಲ್ಲ~ ಎಂದು ಅವರು ಇನ್ನೊಂದು ಪ್ರಶ್ನೆಗೆ ಚುಟುಕಾಗಿ ಉತ್ತರಿ ಸಿದರು. ಶನಿವಾರ ರಾತ್ರಿ ಬೆಳಗಾವಿಯಿಂದ ಆಗಮಿಸಿ ಇಲ್ಲಿ ತಂಗಿದ್ದ ಮಾಜಿ ಮುಖ್ಯಮಂತ್ರಿ, ಸೋಮವಾರ ಬೆಳಿಗ್ಗೆ ವಿಶೇಷ ವಿಮಾನದಲ್ಲಿ ಮದುರೈಗೆ ತೆರಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>