<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರ ಆರಂಭವಾಗಲಿದ್ದು, 27ರ ವರೆಗೆ ನಡೆಯಲಿದೆ.<br /> ಪರೀಕ್ಷೆ ಸಂದರ್ಭದಲ್ಲಿ ನಕಲು, ಪ್ರಶ್ನೆಪತ್ರಿಕೆ ಬಹಿರಂಗ ಮೊದಲಾದ ಅಹಿತಕರ ಘಟನೆಗಳನ್ನು ತಡೆಯಲು ವಿಚಕ್ಷಣಾದಳ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.<br /> <br /> ಈ ಬಾರಿ ಕಲಾ ವಿಭಾಗದಲ್ಲಿ 1,72,613, ವಾಣಿಜ್ಯ ವಿಭಾಗದಲ್ಲಿ 1,66,601 ಹಾಗೂ ವಿಜ್ಞಾನದಲ್ಲಿ 1,42,591 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ.<br /> <br /> 984 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 188 ಸೂಕ್ಷ್ಮ ಮತ್ತು 70 ಅತಿ ಸೂಕ್ಷ್ಮ ಕೇಂದ್ರಗಳು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.<br /> <br /> ಏ.1ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೇ 1ರಿಂದ 3ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ನಂತರ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.<br /> <br /> <strong>ಮಾರ್ಚ್ 28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ</strong><br /> ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಇದೇ 28ರಿಂದ ಆರಂಭವಾಗಲಿದೆ. ಈ ಬಾರಿ 8,26,269 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಒಟ್ಟು 3,016 ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ 163 ಸೂಕ್ಷ್ಮ ಮತ್ತು 51 ಅತಿ ಸೂಕ್ಷ್ಮ ಕೇಂದ್ರಗಳು. ಏಪ್ರಿಲ್ 19ರಿಂದ ಮೌಲ್ಯಮಾಪನ ನಡೆಯಲಿದ್ದು, ಮೇ ತಿಂಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.<br /> <br /> ಸಹಾಯವಾಣಿ: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಹಿಸಿನ್ ಅವರು ಮಂಗಳವಾರ ಸಹಾಯವಾಣಿಗೆ ಚಾಲನೆ ನೀಡಿದರು.<br /> <br /> ಬೆಳಿಗ್ಗೆ 10.15ರಿಂದ ಸಂಜೆ 5ರವರೆಗೆ ದೂರವಾಣಿ ಸಂಖ್ಯೆ: 080–23310075, 080–23310076.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರ ಆರಂಭವಾಗಲಿದ್ದು, 27ರ ವರೆಗೆ ನಡೆಯಲಿದೆ.<br /> ಪರೀಕ್ಷೆ ಸಂದರ್ಭದಲ್ಲಿ ನಕಲು, ಪ್ರಶ್ನೆಪತ್ರಿಕೆ ಬಹಿರಂಗ ಮೊದಲಾದ ಅಹಿತಕರ ಘಟನೆಗಳನ್ನು ತಡೆಯಲು ವಿಚಕ್ಷಣಾದಳ ರಚಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.<br /> <br /> ಈ ಬಾರಿ ಕಲಾ ವಿಭಾಗದಲ್ಲಿ 1,72,613, ವಾಣಿಜ್ಯ ವಿಭಾಗದಲ್ಲಿ 1,66,601 ಹಾಗೂ ವಿಜ್ಞಾನದಲ್ಲಿ 1,42,591 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿದ್ದಾರೆ.<br /> <br /> 984 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಇದರಲ್ಲಿ 188 ಸೂಕ್ಷ್ಮ ಮತ್ತು 70 ಅತಿ ಸೂಕ್ಷ್ಮ ಕೇಂದ್ರಗಳು. ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ವಿಡಿಯೊ ಚಿತ್ರೀಕರಣ ಮಾಡಲಾಗುತ್ತದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.<br /> <br /> ಏ.1ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೇ 1ರಿಂದ 3ರವರೆಗೆ ಸಿಇಟಿ ಪರೀಕ್ಷೆ ನಡೆಯಲಿದೆ. ನಂತರ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.<br /> <br /> <strong>ಮಾರ್ಚ್ 28ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ</strong><br /> ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಇದೇ 28ರಿಂದ ಆರಂಭವಾಗಲಿದೆ. ಈ ಬಾರಿ 8,26,269 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದಾರೆ. ಒಟ್ಟು 3,016 ಪರೀಕ್ಷಾ ಕೇಂದ್ರಗಳಿವೆ. ಇದರಲ್ಲಿ 163 ಸೂಕ್ಷ್ಮ ಮತ್ತು 51 ಅತಿ ಸೂಕ್ಷ್ಮ ಕೇಂದ್ರಗಳು. ಏಪ್ರಿಲ್ 19ರಿಂದ ಮೌಲ್ಯಮಾಪನ ನಡೆಯಲಿದ್ದು, ಮೇ ತಿಂಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.<br /> <br /> ಸಹಾಯವಾಣಿ: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಹಿಸಿನ್ ಅವರು ಮಂಗಳವಾರ ಸಹಾಯವಾಣಿಗೆ ಚಾಲನೆ ನೀಡಿದರು.<br /> <br /> ಬೆಳಿಗ್ಗೆ 10.15ರಿಂದ ಸಂಜೆ 5ರವರೆಗೆ ದೂರವಾಣಿ ಸಂಖ್ಯೆ: 080–23310075, 080–23310076.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>