<p><strong>ಹೈದರಾಬಾದ್: </strong>ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಚಂಚಲಗೂಡ ಕಾರಾಗೃಹದಲ್ಲಿರುವ ಕಡಪಾ ಸಂಸದ ವೈ. ಎಸ್. ಜಗನ್ ಮೋಹನ್ ಅವರು ಸಲ್ಲಿಸಿರುವ ಜಾಮೀನು ಮನವಿ ಅರ್ಜಿಯ ಆದೇಶವು ಶುಕ್ರವಾರ ಹೊರಬೀಳಲಿದೆ.</p>.<p>ಜಗನ್ ಪರ ವಕೀಲರು ಜಗನ್ ಮೋಹನ್ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಿಬಿಐ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿದ ಸಿಬಿಐನ ವಿಶೇಷ ನ್ಯಾಯಾಧೀಶರು ಮನವಿಯ ಆದೇಶವನ್ನು ಇಂದು ಕಾಯ್ದಿರಿಸಿದ್ದಾರೆ.</p>.<p>~ಜೂನ್ 12ರಂದು ವಿಧಾನಸಭೆಯ ಉಪಚುನಾವಣೆಯು ನಡೆಯುವ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ನಡೆಸಬೇಕಿದೆ. ಇದರಿಂದಾಗಿ ಅವರಿಗೆ ನ್ಯಾಯಾಲಯವು ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಬೇಕು.<br /> <br /> ಜಗನ್ ಅವರು ಚುನಾವಣಾ ಪ್ರಚಾರದ ವೇಳೆಯಲ್ಲಿಯೇ ಬಂಧನಕ್ಕೆ ಒಳಗಾಗಿದ್ದಾರೆ. ಅವರಿಗೆ ಮಧ್ಯಾಂತರ ಜಾಮೀನು ನೀಡಿದಲ್ಲಿ, ಅವರು ಜೂನ್ 10ಕ್ಕೆ ಮುಗಿಯಲಿರುವ ಉಪಚುನಾವಣೆಯ ಪ್ರಚಾರದ ನಂತರ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ~ <br /> <br /> ಜತೆಗೆ ಜಗನ್ ತಮ್ಮ ಕ್ಷೇತ್ರದಲ್ಲಿನ ಪೊಲೀಸ್ ಠಾಣೆಗೆ ನಿತ್ಯ ಹಾಜರಾಗಲು ಸಹ ಅವರು ಸಿದ್ಧರಿದ್ದಾರೆ~ ಎಂದು ಜಗನ್ ಪರ ವಕೀಲ ರಂಜಿತ್ ಕುಮಾರ್ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದಾರೆ. <br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್: </strong>ಅಕ್ರಮ ಆಸ್ತಿ ಪ್ರಕರಣಕ್ಕೆ ಸಂಬಂಧಿಸಿದಂತೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿ ಚಂಚಲಗೂಡ ಕಾರಾಗೃಹದಲ್ಲಿರುವ ಕಡಪಾ ಸಂಸದ ವೈ. ಎಸ್. ಜಗನ್ ಮೋಹನ್ ಅವರು ಸಲ್ಲಿಸಿರುವ ಜಾಮೀನು ಮನವಿ ಅರ್ಜಿಯ ಆದೇಶವು ಶುಕ್ರವಾರ ಹೊರಬೀಳಲಿದೆ.</p>.<p>ಜಗನ್ ಪರ ವಕೀಲರು ಜಗನ್ ಮೋಹನ್ ಅವರಿಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಿಬಿಐ ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನಡೆಸಿದ ಸಿಬಿಐನ ವಿಶೇಷ ನ್ಯಾಯಾಧೀಶರು ಮನವಿಯ ಆದೇಶವನ್ನು ಇಂದು ಕಾಯ್ದಿರಿಸಿದ್ದಾರೆ.</p>.<p>~ಜೂನ್ 12ರಂದು ವಿಧಾನಸಭೆಯ ಉಪಚುನಾವಣೆಯು ನಡೆಯುವ ಹಿನ್ನೆಲೆಯಲ್ಲಿ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ಪಕ್ಷದ ಪರವಾಗಿ ಚುನಾವಣೆ ಪ್ರಚಾರ ನಡೆಸಬೇಕಿದೆ. ಇದರಿಂದಾಗಿ ಅವರಿಗೆ ನ್ಯಾಯಾಲಯವು ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಬೇಕು.<br /> <br /> ಜಗನ್ ಅವರು ಚುನಾವಣಾ ಪ್ರಚಾರದ ವೇಳೆಯಲ್ಲಿಯೇ ಬಂಧನಕ್ಕೆ ಒಳಗಾಗಿದ್ದಾರೆ. ಅವರಿಗೆ ಮಧ್ಯಾಂತರ ಜಾಮೀನು ನೀಡಿದಲ್ಲಿ, ಅವರು ಜೂನ್ 10ಕ್ಕೆ ಮುಗಿಯಲಿರುವ ಉಪಚುನಾವಣೆಯ ಪ್ರಚಾರದ ನಂತರ ನ್ಯಾಯಾಲಯಕ್ಕೆ ಹಾಜರಾಗುತ್ತಾರೆ~ <br /> <br /> ಜತೆಗೆ ಜಗನ್ ತಮ್ಮ ಕ್ಷೇತ್ರದಲ್ಲಿನ ಪೊಲೀಸ್ ಠಾಣೆಗೆ ನಿತ್ಯ ಹಾಜರಾಗಲು ಸಹ ಅವರು ಸಿದ್ಧರಿದ್ದಾರೆ~ ಎಂದು ಜಗನ್ ಪರ ವಕೀಲ ರಂಜಿತ್ ಕುಮಾರ್ ನ್ಯಾಯಾಧೀಶರಲ್ಲಿ ಮನವಿ ಮಾಡಿಕೊಂಡಿದ್ದಾರೆ. <br /> <br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>