<p>ದೊಡ್ಡಬಳ್ಳಾಪುರ: ನಾಗರಿಕರ ಐದು ಅಗತ್ಯ ಸೇವೆಗಳನ್ನು ವಿಳಂಬ ಮಾಡದೇ ಉತ್ತಮ ಸೇವೆ ನೀಡುವ ದಿಸೆಯಲ್ಲಿ ನಾಗರಿಕ ಸೇವಾ ಖಾತರಿ ಕಾಯ್ದೆ-2011 `ಸಕಾಲ~ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಚಿಕ್ಕಣ್ಣ ಹೇಳಿದರು. <br /> <br /> ಸೋಮವಾರ ನಗರಸಭೆ ಆವರಣದಲ್ಲಿ ನಡೆದ ಕರ್ನಾಟಕ ನಾಗರಿಕ ಸೇವಾ ಖಾತರಿ ಕಾಯ್ದೆ-2011 ಜಾರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿರುವ ಈ ಕಾಯ್ದೆಯಡಿ ಸಾರ್ವಜನಿಕರಿಗೆ ವಿವಿಧ ಸೇವೆಗಳನ್ನು ಕಾಲಮಿತಿಯಲ್ಲಿ ಒದಗಿಸಲಾಗುವುದು. ಈ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ಜನಸಾಮಾನ್ಯರ ಬಳಿಗೆ ಯಶಸ್ವಿಯಾಗಿ ಮುಟ್ಟಿಸುವುದು ಈ ಕಾಯ್ದೆಯ ಮುಖ್ಯ ಉದ್ದೆೀಶವಾಗಿದೆ ಎಂದರು.<br /> <br /> ಕಾಯ್ದೆ ಸಮರ್ಪಕ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೇ ಸಿಬ್ಬಂದಿಗೆ ಈ ಬಗ್ಗೆ ಸೂಚನೆ ಹಾಗೂ ತರಬೇತಿ ನೀಡಲಾಗಿದೆ. ಕಾಯ್ದೆಯ ವಿವರಗಳನ್ನು ಕಚೇರಿ ಮುಂಭಾಗ ಸೂಚನಾ ಫಲಕದಲ್ಲಿ ಅಳವಡಿಸಲಾಗಿದೆ. ನಾಗರಿಕರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.<br /> <br /> ನಗರಸಭೆ ಅಧ್ಯಕ್ಷ ಎಂ.ಜಗದೀಶ್ ರೆಡ್ಡಿ ಮಾತನಾಡಿ, ನಾಗರಿಕರಿಗೆ ವಿನಾಕಾರಣ ವಿಳಂಬವಾಗುತ್ತಿದ್ದ ಕೆಲಸಗಳು ಇನ್ನು ಮುಂದೆ ತ್ವರಿತವಾಗಿ ನಡೆಯಲಿವೆ. ಇದರಿಂದ ಆಡಳಿತ ಯಂತ್ರ ಚುರುಕುಗೊಳ್ಳಲಿದೆ ಎಂದರು.<br /> <br /> ನಗರಸಭೆ ಉಪಾಧ್ಯಕ್ಷ ಜಿ.ರಾಮಕೃಷ್ಣ, ನಗರಸಭಾ ಸದಸ್ಯರಾದ ಸೋಮರುದ್ರ ಶರ್ಮಾ, ಟಿ.ಎನ್.ಪ್ರಭುದೇವ್, ವಿಜಯಲಕ್ಷ್ಮೀ, ಮಂಜುಳಾ ಮುಂತಾದವರು ಹಾಜರಿದ್ದರು.<br /> <br /> <strong>ಸಕಾಲ ಯೋಜನೆಗೆ ಚಾಲನೆ<br /> </strong>ವಿಜಯಪುರ: `ಸಕಾಲ~ ಯೋಜನೆಯಡಿ 11ಇಲಾಖೆಯ 151 ವಿಷಯಗಳಿಗೆ ಸಂಬಂಧಿಸಿದಂತೆ ಸೇವಾ ಸೌಲಭ್ಯಗಳನ್ನು ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ಮಾಹಿತಿ ನೀಡಿದರು. <br /> <br /> ಇಲ್ಲಿನ ಪುರಸಭೆ ಕಾರ್ಯಾಲಯದಲ್ಲಿ ಸೋಮವಾರ ರಾಜ್ಯ ಸರ್ಕಾರವು ಜಾರಿಗೊಳಿಸಿರುವ `ಸಕಾಲ~ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಯೋಜನೆಗೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ಮಾತನಾಡಿ, `ಸಕಾಲ~ ಯೋಜನೆಯಂತೆ ಜನರು ಬಯಸುವ ಸೇವೆಗಳನ್ನು ನಿಗದಿತ ಸಮಯದಲ್ಲಿ ಒದಗಿಸಬೇಕು. ಅವಧಿ ಮೀರಿದರೆ ಪ್ರತಿ ನಿತ್ಯವೂ 20 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದರು.<br /> <br /> ಪುರಸಭೆ ಉಪಾಧ್ಯಕ್ಷ ಎಂ.ಎಲ್. ಕೃಷ್ಣಪ್ಪಗೌಡ, ಸದಸ್ಯ ರಾಮು ಭಗವಾನ್, ಮಾಜಿ ಸದಸ್ಯ ಎ.ನಾರಾಯಣ ಸ್ವಾಮಿ, ಆರೋಗ್ಯಾಧಿಕಾರಿ ಮಂಜುಳಾ, ವ್ಯವಸ್ಥಾಪಕಿ ಸರಸ್ವತಿ, ಎಂಜಿನಿಯರ್ ಮಮತಾ, ಪ್ರಥಮ ದರ್ಜೆ ಸಹಾಯಕರಾದ ಬಾಬು, ಭೈರಪ್ಪ, ಕಂದಾಯ ಇಲಾಖೆ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕ ಪ್ರಸನ್ನಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.<br /> <br /> <strong>ಪಾರದರ್ಶಕ ಆಡಳಿತ</strong><br /> ದೇವನಹಳ್ಳಿ: ಕೇಂದ್ರ ಸರ್ಕಾರದ ಮಾಹಿತಿ ಹಕ್ಕು ಕಾಯ್ದೆಯ ರೀತಿಯಲ್ಲಿಯೇ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ `ಸಕಾಲ~ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಪಾರದರ್ಶಕ ಆಡಳಿತ ನಿರ್ವಹಣೆಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ತಹಶೀಲ್ದಾರ್ ಎಲ್.ಸಿ.ನಾಗರಾಜ್ ಅಭಿಪ್ರಾಯಪಟ್ಟರು. <br /> <br /> ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ `ಸಕಾಲ~ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕ ಮಾಹಿತಿ ತಂತ್ರಜ್ಞಾನದಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಯನ್ನು ನಿಗದಿಪಡಿಸಿದ ವೇಳೆಯಲ್ಲಿ ನೀಡುವಂತಾಗಬೇಕು ಎಂದು ಹೇಳಿದರು.<br /> <br /> ಜಿ.ಪಂ.ಸದಸ್ಯ ಬಿ.ರಾಜಣ್ಣ ಮಾತನಾಡಿ, ಸರ್ಕಾರ ಪಡಿತರ ಸಮರ್ಪಕ ವಿತರಣೆ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕೆಂದು ಆಶಿಸಿದರು. <br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ವೆಂಕಟಸ್ವಾಮಿ, ಯೋಜನೆ ಅನುಸಾರ ಅಧಿಕಾರಿಗಳು ನಿಗದಿತ ವೇಳೆಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಪೂರೈಸಬೇಕು. ಯಾವುದೇ ಕಾರಣಕ್ಕೂ ದಂಡ ಪಾವತಿಗೆ ಒಳಗಾಗದೆ ಪ್ರಾಮಾಣಿಕವಾಗಿ ಜನಸಾಮಾನ್ಯರಿಗೆ ಸ್ಪಂದಿಸಬೇಕು ಎಂದು ಹೇಳಿದರು.<br /> ತಾ.ಪಂ.ಅಧ್ಯಕ್ಷ ಬಿ.ಕೆ.ಶಿವಪ್ಪ ಅವರು ಮಾತನಾಡಿದರು. <br /> <br /> ವಿಶೇಷ ತಹಶೀಲ್ದಾರ್ ಕೇಶವಮೂರ್ತಿ, ಸೇವಾದಳ ಅಧ್ಯಕ್ಷ ಲಕ್ಷ್ಮಿ ನಾರಾಯಣ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಆಂಜನಪ್ಪ, ತಾ.ಪಂ.ಉಪಾಧ್ಯಕ್ಷೆ ಕೆ.ಪ್ರಭಾ, ಕಂದಾಯ ಶಿರಸ್ತೇದಾರ್ ಅಜಿತ್ ರಾಯ್, ಚುನಾವಣಾ ಶಿರಸ್ತೇದಾರ್ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೊಡ್ಡಬಳ್ಳಾಪುರ: ನಾಗರಿಕರ ಐದು ಅಗತ್ಯ ಸೇವೆಗಳನ್ನು ವಿಳಂಬ ಮಾಡದೇ ಉತ್ತಮ ಸೇವೆ ನೀಡುವ ದಿಸೆಯಲ್ಲಿ ನಾಗರಿಕ ಸೇವಾ ಖಾತರಿ ಕಾಯ್ದೆ-2011 `ಸಕಾಲ~ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಕುರಿತಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತ ಚಿಕ್ಕಣ್ಣ ಹೇಳಿದರು. <br /> <br /> ಸೋಮವಾರ ನಗರಸಭೆ ಆವರಣದಲ್ಲಿ ನಡೆದ ಕರ್ನಾಟಕ ನಾಗರಿಕ ಸೇವಾ ಖಾತರಿ ಕಾಯ್ದೆ-2011 ಜಾರಿಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.<br /> <br /> ರಾಜ್ಯ ಸರ್ಕಾರದ ಮಹತ್ವದ ಯೋಜನೆಯಾಗಿರುವ ಈ ಕಾಯ್ದೆಯಡಿ ಸಾರ್ವಜನಿಕರಿಗೆ ವಿವಿಧ ಸೇವೆಗಳನ್ನು ಕಾಲಮಿತಿಯಲ್ಲಿ ಒದಗಿಸಲಾಗುವುದು. ಈ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ಜನಸಾಮಾನ್ಯರ ಬಳಿಗೆ ಯಶಸ್ವಿಯಾಗಿ ಮುಟ್ಟಿಸುವುದು ಈ ಕಾಯ್ದೆಯ ಮುಖ್ಯ ಉದ್ದೆೀಶವಾಗಿದೆ ಎಂದರು.<br /> <br /> ಕಾಯ್ದೆ ಸಮರ್ಪಕ ಜಾರಿಗೆ ಅಗತ್ಯ ಕ್ರಮ ಕೈಗೊಳ್ಳಲಾಗಿದ್ದು ಈಗಾಗಲೇ ಸಿಬ್ಬಂದಿಗೆ ಈ ಬಗ್ಗೆ ಸೂಚನೆ ಹಾಗೂ ತರಬೇತಿ ನೀಡಲಾಗಿದೆ. ಕಾಯ್ದೆಯ ವಿವರಗಳನ್ನು ಕಚೇರಿ ಮುಂಭಾಗ ಸೂಚನಾ ಫಲಕದಲ್ಲಿ ಅಳವಡಿಸಲಾಗಿದೆ. ನಾಗರಿಕರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.<br /> <br /> ನಗರಸಭೆ ಅಧ್ಯಕ್ಷ ಎಂ.ಜಗದೀಶ್ ರೆಡ್ಡಿ ಮಾತನಾಡಿ, ನಾಗರಿಕರಿಗೆ ವಿನಾಕಾರಣ ವಿಳಂಬವಾಗುತ್ತಿದ್ದ ಕೆಲಸಗಳು ಇನ್ನು ಮುಂದೆ ತ್ವರಿತವಾಗಿ ನಡೆಯಲಿವೆ. ಇದರಿಂದ ಆಡಳಿತ ಯಂತ್ರ ಚುರುಕುಗೊಳ್ಳಲಿದೆ ಎಂದರು.<br /> <br /> ನಗರಸಭೆ ಉಪಾಧ್ಯಕ್ಷ ಜಿ.ರಾಮಕೃಷ್ಣ, ನಗರಸಭಾ ಸದಸ್ಯರಾದ ಸೋಮರುದ್ರ ಶರ್ಮಾ, ಟಿ.ಎನ್.ಪ್ರಭುದೇವ್, ವಿಜಯಲಕ್ಷ್ಮೀ, ಮಂಜುಳಾ ಮುಂತಾದವರು ಹಾಜರಿದ್ದರು.<br /> <br /> <strong>ಸಕಾಲ ಯೋಜನೆಗೆ ಚಾಲನೆ<br /> </strong>ವಿಜಯಪುರ: `ಸಕಾಲ~ ಯೋಜನೆಯಡಿ 11ಇಲಾಖೆಯ 151 ವಿಷಯಗಳಿಗೆ ಸಂಬಂಧಿಸಿದಂತೆ ಸೇವಾ ಸೌಲಭ್ಯಗಳನ್ನು ಪಡೆಯಬಹುದು ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ಆರ್. ಮಂಜುನಾಥ್ ಮಾಹಿತಿ ನೀಡಿದರು. <br /> <br /> ಇಲ್ಲಿನ ಪುರಸಭೆ ಕಾರ್ಯಾಲಯದಲ್ಲಿ ಸೋಮವಾರ ರಾಜ್ಯ ಸರ್ಕಾರವು ಜಾರಿಗೊಳಿಸಿರುವ `ಸಕಾಲ~ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಯೋಜನೆಗೆ ಚಾಲನೆ ನೀಡಿದ ಪುರಸಭೆ ಅಧ್ಯಕ್ಷೆ ಮಂಜುಳಾ ನಾರಾಯಣಸ್ವಾಮಿ ಮಾತನಾಡಿ, `ಸಕಾಲ~ ಯೋಜನೆಯಂತೆ ಜನರು ಬಯಸುವ ಸೇವೆಗಳನ್ನು ನಿಗದಿತ ಸಮಯದಲ್ಲಿ ಒದಗಿಸಬೇಕು. ಅವಧಿ ಮೀರಿದರೆ ಪ್ರತಿ ನಿತ್ಯವೂ 20 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದರು.<br /> <br /> ಪುರಸಭೆ ಉಪಾಧ್ಯಕ್ಷ ಎಂ.ಎಲ್. ಕೃಷ್ಣಪ್ಪಗೌಡ, ಸದಸ್ಯ ರಾಮು ಭಗವಾನ್, ಮಾಜಿ ಸದಸ್ಯ ಎ.ನಾರಾಯಣ ಸ್ವಾಮಿ, ಆರೋಗ್ಯಾಧಿಕಾರಿ ಮಂಜುಳಾ, ವ್ಯವಸ್ಥಾಪಕಿ ಸರಸ್ವತಿ, ಎಂಜಿನಿಯರ್ ಮಮತಾ, ಪ್ರಥಮ ದರ್ಜೆ ಸಹಾಯಕರಾದ ಬಾಬು, ಭೈರಪ್ಪ, ಕಂದಾಯ ಇಲಾಖೆ ಅಧಿಕಾರಿಗಳು, ಗಣಕಯಂತ್ರ ನಿರ್ವಾಹಕ ಪ್ರಸನ್ನಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.<br /> <br /> <strong>ಪಾರದರ್ಶಕ ಆಡಳಿತ</strong><br /> ದೇವನಹಳ್ಳಿ: ಕೇಂದ್ರ ಸರ್ಕಾರದ ಮಾಹಿತಿ ಹಕ್ಕು ಕಾಯ್ದೆಯ ರೀತಿಯಲ್ಲಿಯೇ ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಯೋಜನೆಯಾದ `ಸಕಾಲ~ ಎಲ್ಲ ಸರ್ಕಾರಿ ಇಲಾಖೆಗಳಲ್ಲಿ ಪಾರದರ್ಶಕ ಆಡಳಿತ ನಿರ್ವಹಣೆಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ತಹಶೀಲ್ದಾರ್ ಎಲ್.ಸಿ.ನಾಗರಾಜ್ ಅಭಿಪ್ರಾಯಪಟ್ಟರು. <br /> <br /> ಪಟ್ಟಣದ ಮಿನಿ ವಿಧಾನಸೌಧದಲ್ಲಿ ಸೋಮವಾರ `ಸಕಾಲ~ ಯೋಜನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಧುನಿಕ ಮಾಹಿತಿ ತಂತ್ರಜ್ಞಾನದಲ್ಲಿ ರಾಜ್ಯವು ಮುಂಚೂಣಿಯಲ್ಲಿದ್ದು ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆಯನ್ನು ನಿಗದಿಪಡಿಸಿದ ವೇಳೆಯಲ್ಲಿ ನೀಡುವಂತಾಗಬೇಕು ಎಂದು ಹೇಳಿದರು.<br /> <br /> ಜಿ.ಪಂ.ಸದಸ್ಯ ಬಿ.ರಾಜಣ್ಣ ಮಾತನಾಡಿ, ಸರ್ಕಾರ ಪಡಿತರ ಸಮರ್ಪಕ ವಿತರಣೆ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕೆಂದು ಆಶಿಸಿದರು. <br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕ ಕೆ.ವೆಂಕಟಸ್ವಾಮಿ, ಯೋಜನೆ ಅನುಸಾರ ಅಧಿಕಾರಿಗಳು ನಿಗದಿತ ವೇಳೆಯಲ್ಲಿ ಸಾರ್ವಜನಿಕರ ಕೆಲಸಗಳನ್ನು ಪೂರೈಸಬೇಕು. ಯಾವುದೇ ಕಾರಣಕ್ಕೂ ದಂಡ ಪಾವತಿಗೆ ಒಳಗಾಗದೆ ಪ್ರಾಮಾಣಿಕವಾಗಿ ಜನಸಾಮಾನ್ಯರಿಗೆ ಸ್ಪಂದಿಸಬೇಕು ಎಂದು ಹೇಳಿದರು.<br /> ತಾ.ಪಂ.ಅಧ್ಯಕ್ಷ ಬಿ.ಕೆ.ಶಿವಪ್ಪ ಅವರು ಮಾತನಾಡಿದರು. <br /> <br /> ವಿಶೇಷ ತಹಶೀಲ್ದಾರ್ ಕೇಶವಮೂರ್ತಿ, ಸೇವಾದಳ ಅಧ್ಯಕ್ಷ ಲಕ್ಷ್ಮಿ ನಾರಾಯಣ, ತಾ.ಪಂ ಕಾರ್ಯ ನಿರ್ವಹಣಾಧಿಕಾರಿ ಆಂಜನಪ್ಪ, ತಾ.ಪಂ.ಉಪಾಧ್ಯಕ್ಷೆ ಕೆ.ಪ್ರಭಾ, ಕಂದಾಯ ಶಿರಸ್ತೇದಾರ್ ಅಜಿತ್ ರಾಯ್, ಚುನಾವಣಾ ಶಿರಸ್ತೇದಾರ್ ರಾಘವೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>