<p><strong>ಬೆಂಗಳೂರು:</strong> `ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪೌರ ಕಾರ್ಮಿಕರು ಸ್ವಚ್ಛತಾ ಕೆಲಸವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಗುರುವಾರ (ಏ.19) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಿದ್ದಾರೆ. <br /> <br /> ಧರಣಿಯಲ್ಲಿ ಸುಮಾರು 15 ಸಾವಿರ ಪೌರಕಾರ್ಮಿಕರು ಭಾಗವಹಿಸುವರು~ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಅಧ್ಯಕ್ಷ ನಾರಾಯಣ ಹೇಳಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `6,600 ರೂಪಾಯಿ ಕನಿಷ್ಠ ವೇತನ ನೀಡುವವರೆಗೆ ಸತ್ಯಾಗ್ರಹವನ್ನು ಮುಂದುವರೆಸಲಾಗುವುದು~ ಎಂದು ತಿಳಿಸಿದರು.<br /> <br /> `ಕಾರ್ಮಿಕ ಇಲಾಖೆಯು 2010 ಸೆಪ್ಟೆಂಬರ್ 21ರಂದು 6,600 ರೂಪಾಯಿ ಕನಿಷ್ಠ ವೇತನ ನೀಡುವಂತೆ ಆದೇಶವನ್ನು ಹೊರಡಿಸಲಾಗಿತ್ತು, ಸರ್ಕಾರ ಈ ಆದೇಶವನ್ನು ಪಾಲನೆ ಮಾಡಿಲ್ಲ. ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳೂ ಈ ಆದೇಶವನ್ನು ಜಾರಿಗೊಳಿಸದೇ ವಂಚನೆ ಮಾಡುತ್ತಿವೆ~ ಎಂದು ಅವರು ದೂರಿದರು.<br /> <br /> `ಗುತ್ತಿಗೆ ಕಾರ್ಮಿಕರಿಗೆ ಚೆಕ್ ಮೂಲಕ ವೇತನ ನೀಡಬೇಕು. ಕೆಲಸ ಮಾಡುವ ಸಂದರ್ಭದಲ್ಲಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಕಾನೂನಿನ ಪ್ರಕಾರ ಇಎಸ್ಐ ಮತ್ತು ಪಿಎಫ್ ಸೌಲಭ್ಯ ಹಾಗೂ ಮತ್ತಿತರ ವಿವಿಧ ಬೇಡಿಕೆಗಳನ್ನು ಕಲ್ಪಿಸಬೇಕು~ ಎಂದು ಅವರು ಒತ್ತಾಯಿಸಿದರು.<br /> <br /> `ಬಿಬಿಎಂಪಿಯಲ್ಲಿ 4 ಸಾವಿರ ಕಾಯಂ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಈ ನೇಮಕಾತಿಗೆ ಕಳೆದ 15 ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ಪೌರಕಾರ್ಮಿಕರನ್ನಾಗಿ ನೇಮಕ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.<br /> <br /> ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ವೆಂಕಟೇಶ್, ಮಹಾಪ್ರಧಾನ ಕಾರ್ಯದರ್ಶಿ ಎ.ಜೈರಿಮ್ ಮತ್ತಿರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> `ಕನಿಷ್ಠ ವೇತನ ಜಾರಿಗೆ ಒತ್ತಾಯಿಸಿ ಪೌರ ಕಾರ್ಮಿಕರು ಸ್ವಚ್ಛತಾ ಕೆಲಸವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಿ ಗುರುವಾರ (ಏ.19) ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಧರಣಿ ಸತ್ಯಾಗ್ರಹ ಪ್ರಾರಂಭಿಸಲಿದ್ದಾರೆ. <br /> <br /> ಧರಣಿಯಲ್ಲಿ ಸುಮಾರು 15 ಸಾವಿರ ಪೌರಕಾರ್ಮಿಕರು ಭಾಗವಹಿಸುವರು~ ಎಂದು ಕರ್ನಾಟಕ ರಾಜ್ಯ ನಗರಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಅಧ್ಯಕ್ಷ ನಾರಾಯಣ ಹೇಳಿದರು.<br /> <br /> ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `6,600 ರೂಪಾಯಿ ಕನಿಷ್ಠ ವೇತನ ನೀಡುವವರೆಗೆ ಸತ್ಯಾಗ್ರಹವನ್ನು ಮುಂದುವರೆಸಲಾಗುವುದು~ ಎಂದು ತಿಳಿಸಿದರು.<br /> <br /> `ಕಾರ್ಮಿಕ ಇಲಾಖೆಯು 2010 ಸೆಪ್ಟೆಂಬರ್ 21ರಂದು 6,600 ರೂಪಾಯಿ ಕನಿಷ್ಠ ವೇತನ ನೀಡುವಂತೆ ಆದೇಶವನ್ನು ಹೊರಡಿಸಲಾಗಿತ್ತು, ಸರ್ಕಾರ ಈ ಆದೇಶವನ್ನು ಪಾಲನೆ ಮಾಡಿಲ್ಲ. ಬಿಬಿಎಂಪಿ ಸೇರಿದಂತೆ ಸ್ಥಳೀಯ ಸಂಸ್ಥೆಗಳೂ ಈ ಆದೇಶವನ್ನು ಜಾರಿಗೊಳಿಸದೇ ವಂಚನೆ ಮಾಡುತ್ತಿವೆ~ ಎಂದು ಅವರು ದೂರಿದರು.<br /> <br /> `ಗುತ್ತಿಗೆ ಕಾರ್ಮಿಕರಿಗೆ ಚೆಕ್ ಮೂಲಕ ವೇತನ ನೀಡಬೇಕು. ಕೆಲಸ ಮಾಡುವ ಸಂದರ್ಭದಲ್ಲಿ ಮರಣ ಹೊಂದಿದರೆ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರ ಕೊಡಬೇಕು. ಕಾನೂನಿನ ಪ್ರಕಾರ ಇಎಸ್ಐ ಮತ್ತು ಪಿಎಫ್ ಸೌಲಭ್ಯ ಹಾಗೂ ಮತ್ತಿತರ ವಿವಿಧ ಬೇಡಿಕೆಗಳನ್ನು ಕಲ್ಪಿಸಬೇಕು~ ಎಂದು ಅವರು ಒತ್ತಾಯಿಸಿದರು.<br /> <br /> `ಬಿಬಿಎಂಪಿಯಲ್ಲಿ 4 ಸಾವಿರ ಕಾಯಂ ಪೌರಕಾರ್ಮಿಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ತೀರ್ಮಾನಿಸಿದ್ದು, ಈ ನೇಮಕಾತಿಗೆ ಕಳೆದ 15 ವರ್ಷಗಳಿಂದ ಕೆಲಸ ಮಾಡುತ್ತಿರುವ ಗುತ್ತಿಗೆ ಪೌರಕಾರ್ಮಿಕರನ್ನು ಕಾಯಂ ಪೌರಕಾರ್ಮಿಕರನ್ನಾಗಿ ನೇಮಕ ಮಾಡಿಕೊಳ್ಳಬೇಕು~ ಎಂದು ಒತ್ತಾಯಿಸಿದರು.<br /> <br /> ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ನಗರಪಾಲಿಕೆ, ನಗರ ಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ.ವೆಂಕಟೇಶ್, ಮಹಾಪ್ರಧಾನ ಕಾರ್ಯದರ್ಶಿ ಎ.ಜೈರಿಮ್ ಮತ್ತಿರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>