<p><strong>ಶಿವಮೊಗ್ಗ: </strong>ರೈಲ್ವೆ ಬಜೆಟ್ ಮಾರ್ಚ್ 14ರಂದು ಮಂಡನೆ ಆಗಲಿದ್ದು, ಜಿಲ್ಲೆಯಲ್ಲಿ ಸಹಜ ವಾಗಿಯೇ ನಿರೀಕ್ಷೆಗಳು ಗರಿಗೆದರಿವೆ.<br /> <br /> ಬೆಂಗಳೂರು- ಶಿವಮೊಗ್ಗ ಇಂಟರ್ಸಿಟಿ ಮತ್ತು ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾಳುಗಪ್ಪದವರೆಗೆ ವಿಸ್ತರಣೆ ಹಾಗೂ ಈಗಾಗಲೇ ಮಂಜೂರಾತಿ ಪಡೆದಿರುವ ಶಿವಮೊಗ್ಗ-ಹರಿಹರ ರೈಲು ಮಾರ್ಗದ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸುವುದು ಪ್ರಮುಖ ಬೇಡಿಕೆಗಳು. ಈ ಮಧ್ಯೆ ತಾಳಗುಪ್ಪ ಲೈನನ್ನು ವಿಸ್ತರಿಸಿ, ಕೊಂಕಣ ರೈಲ್ವೆಗೆ ಸೇರಿಸಬೇಕೆಂಬ ಕೂಗು ಇದೆ.<br /> <br /> ಶಿವಮೊಗ್ಗ- ತಾಳಗುಪ್ಪ ಮಾರ್ಗದ ಬ್ರಾಡ್ಗೇಜ್ ಪರಿವರ್ತನಾ ಕಾರ್ಯ ಪೂರ್ಣಗೊಂಡು ಈಗಾಗಲೇ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಂಡಿದೆ. ಪ್ರಸ್ತುತ ಮೈಸೂರು-ಶಿವಮೊಗ್ಗ ಇಂಟರ್ಸಿಟಿ ರೈಲು ಮಾತ್ರ ಸಂಚರಿಸುತ್ತದೆ. ಈ ಮೊದಲು ಮೀಟರ್ಗೇಜ್ ರೈಲು ಮಾರ್ಗವಿದ್ದಾಗ ಬೆಂಗಳೂರು ರೈಲು ಸಂಚಾರ ತಾಳಗುಪ್ಪದಿಂದಲೇ ಆರಂಭಗೊಳ್ಳುತ್ತಿತ್ತು.<br /> <br /> ಆದರೆ, ಗೇಜ್ ಪರಿವರ್ತನೆ ಬಳಿಕ ಈ ರೈಲು ಶಿವಮೊಗ್ಗ- ಬೆಂಗಳೂರು ನಡುವೆ ಸಂಚರಿಸುತ್ತಿದೆ. ಇದು ಮತ್ತೆ ತಾಳಗುಪ್ಪದವರೆಗೆ ಸಂಚರಿಸಬೇಕು ಎಂಬುದು ಜನರ ಬೇಡಿಕೆ.<br /> ಈಗಾಗಲೇ ಶಿವಮೊಗ್ಗ-ಹರಿಹರ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಸುಮಾರು ್ಙ 700 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಗೊಂಡಿದೆ. ಈ ಕಾಮಗಾರಿ ಆರಂಭಕ್ಕೆ ಅನುದಾನದ ಅಗತ್ಯವಿದೆ. ಅದನ್ನು ಈ ಬಜೆಟ್ನಲ್ಲಿ ನಿರೀಕ್ಷಿಸಲಾಗಿದೆ.<br /> <br /> ಹಾಗೆಯೇ, ಶಿವಮೊಗ್ಗ- ಶಿಕಾರಿಪುರ, ರಾಣೆಬೆನ್ನೂರು ಹೊಸ ಮಾರ್ಗ ನಿರ್ಮಾಣದ ಸಮೀಕ್ಷಾ ಕಾರ್ಯ ನಡೆಯಬೇಕು ಎಂದು ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.<br /> <br /> <strong>ಅನುಷ್ಠಾನಕ್ಕೆ ಮನವಿ</strong><br /> ಬೆಂಗಳೂರು -ಶಿವಮೊಗ್ಗ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಸಾಗರ ತಾಲ್ಲೂಕಿನ ತಾಳಗುಪ್ಪದವರೆಗೆ ವಿಸ್ತರಿಸಬೇಕು ಸೇರಿದಂತೆ ಶಿವಮೊಗ್ಗ-ಹರಿಹರ ನೂತನ ರೈಲು ಮಾರ್ಗವನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವಂತೆ ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಮಾಡಿದರು.<br /> <br /> ನವದೆಹಲಿಯಲ್ಲಿ ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿದ ರಾಘವೇಂದ್ರ, ಜಿಲ್ಲೆಯ ರೈಲ್ವೆ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಈ ಬಾರಿ ಬಜೆಟ್ನಲ್ಲಿ ಆದ್ಯತೆ ನೀಡುವಂತೆ ಮನವಿ ಮಾಡಿದರು ಎಂದು ಸಂಸತ್ ಸದಸ್ಯರ ಕಚೇರಿ ಪ್ರಕಟಣೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿವಮೊಗ್ಗ: </strong>ರೈಲ್ವೆ ಬಜೆಟ್ ಮಾರ್ಚ್ 14ರಂದು ಮಂಡನೆ ಆಗಲಿದ್ದು, ಜಿಲ್ಲೆಯಲ್ಲಿ ಸಹಜ ವಾಗಿಯೇ ನಿರೀಕ್ಷೆಗಳು ಗರಿಗೆದರಿವೆ.<br /> <br /> ಬೆಂಗಳೂರು- ಶಿವಮೊಗ್ಗ ಇಂಟರ್ಸಿಟಿ ಮತ್ತು ಎಕ್ಸ್ಪ್ರೆಸ್ ರೈಲು ಸಂಚಾರವನ್ನು ತಾಳುಗಪ್ಪದವರೆಗೆ ವಿಸ್ತರಣೆ ಹಾಗೂ ಈಗಾಗಲೇ ಮಂಜೂರಾತಿ ಪಡೆದಿರುವ ಶಿವಮೊಗ್ಗ-ಹರಿಹರ ರೈಲು ಮಾರ್ಗದ ನಿರ್ಮಾಣಕ್ಕೆ ಹಸಿರು ನಿಶಾನೆ ತೋರಿಸುವುದು ಪ್ರಮುಖ ಬೇಡಿಕೆಗಳು. ಈ ಮಧ್ಯೆ ತಾಳಗುಪ್ಪ ಲೈನನ್ನು ವಿಸ್ತರಿಸಿ, ಕೊಂಕಣ ರೈಲ್ವೆಗೆ ಸೇರಿಸಬೇಕೆಂಬ ಕೂಗು ಇದೆ.<br /> <br /> ಶಿವಮೊಗ್ಗ- ತಾಳಗುಪ್ಪ ಮಾರ್ಗದ ಬ್ರಾಡ್ಗೇಜ್ ಪರಿವರ್ತನಾ ಕಾರ್ಯ ಪೂರ್ಣಗೊಂಡು ಈಗಾಗಲೇ ಈ ಮಾರ್ಗದಲ್ಲಿ ರೈಲು ಸಂಚಾರ ಆರಂಭಗೊಂಡಿದೆ. ಪ್ರಸ್ತುತ ಮೈಸೂರು-ಶಿವಮೊಗ್ಗ ಇಂಟರ್ಸಿಟಿ ರೈಲು ಮಾತ್ರ ಸಂಚರಿಸುತ್ತದೆ. ಈ ಮೊದಲು ಮೀಟರ್ಗೇಜ್ ರೈಲು ಮಾರ್ಗವಿದ್ದಾಗ ಬೆಂಗಳೂರು ರೈಲು ಸಂಚಾರ ತಾಳಗುಪ್ಪದಿಂದಲೇ ಆರಂಭಗೊಳ್ಳುತ್ತಿತ್ತು.<br /> <br /> ಆದರೆ, ಗೇಜ್ ಪರಿವರ್ತನೆ ಬಳಿಕ ಈ ರೈಲು ಶಿವಮೊಗ್ಗ- ಬೆಂಗಳೂರು ನಡುವೆ ಸಂಚರಿಸುತ್ತಿದೆ. ಇದು ಮತ್ತೆ ತಾಳಗುಪ್ಪದವರೆಗೆ ಸಂಚರಿಸಬೇಕು ಎಂಬುದು ಜನರ ಬೇಡಿಕೆ.<br /> ಈಗಾಗಲೇ ಶಿವಮೊಗ್ಗ-ಹರಿಹರ ರೈಲು ಮಾರ್ಗದ ಸಮೀಕ್ಷೆ ಪೂರ್ಣಗೊಂಡಿದ್ದು, ಸುಮಾರು ್ಙ 700 ಕೋಟಿ ರೂ. ವೆಚ್ಚದ ಯೋಜನೆ ಸಿದ್ಧಗೊಂಡಿದೆ. ಈ ಕಾಮಗಾರಿ ಆರಂಭಕ್ಕೆ ಅನುದಾನದ ಅಗತ್ಯವಿದೆ. ಅದನ್ನು ಈ ಬಜೆಟ್ನಲ್ಲಿ ನಿರೀಕ್ಷಿಸಲಾಗಿದೆ.<br /> <br /> ಹಾಗೆಯೇ, ಶಿವಮೊಗ್ಗ- ಶಿಕಾರಿಪುರ, ರಾಣೆಬೆನ್ನೂರು ಹೊಸ ಮಾರ್ಗ ನಿರ್ಮಾಣದ ಸಮೀಕ್ಷಾ ಕಾರ್ಯ ನಡೆಯಬೇಕು ಎಂದು ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.<br /> <br /> <strong>ಅನುಷ್ಠಾನಕ್ಕೆ ಮನವಿ</strong><br /> ಬೆಂಗಳೂರು -ಶಿವಮೊಗ್ಗ ಎಕ್ಸ್ಪ್ರೆಸ್ ರೈಲು ಸಂಚಾರವನ್ನು ಸಾಗರ ತಾಲ್ಲೂಕಿನ ತಾಳಗುಪ್ಪದವರೆಗೆ ವಿಸ್ತರಿಸಬೇಕು ಸೇರಿದಂತೆ ಶಿವಮೊಗ್ಗ-ಹರಿಹರ ನೂತನ ರೈಲು ಮಾರ್ಗವನ್ನು ಪೂರ್ಣಗೊಳಿಸಲು ಅನುದಾನ ಬಿಡುಗಡೆ ಮಾಡುವಂತೆ ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ಮನವಿ ಮಾಡಿದರು.<br /> <br /> ನವದೆಹಲಿಯಲ್ಲಿ ಮಂಗಳವಾರ ಅವರ ನಿವಾಸದಲ್ಲಿ ಭೇಟಿ ಮಾಡಿದ ರಾಘವೇಂದ್ರ, ಜಿಲ್ಲೆಯ ರೈಲ್ವೆ ಯೋಜನೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಈ ಬಾರಿ ಬಜೆಟ್ನಲ್ಲಿ ಆದ್ಯತೆ ನೀಡುವಂತೆ ಮನವಿ ಮಾಡಿದರು ಎಂದು ಸಂಸತ್ ಸದಸ್ಯರ ಕಚೇರಿ ಪ್ರಕಟಣೆ ತಿಳಿಸಿದೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>