<p><strong>ದೊಡ್ಡಬಳ್ಳಾಪುರ: </strong>ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಮೇ.4 ರಂದು ಮಧ್ಯಾಹ್ನ 12.30ಕ್ಕೆ ಚುನಾವಣೆ ನಡೆಯಲಿದೆ. ಬಿಸಿಎಂ ‘ಬಿ’ ಅಭ್ಯರ್ಥಿಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನಿಂದ ಜಗದೀಶ್ರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಜಿ.ಎಸ್.ಸೋಮರುದ್ರಶರ್ಮ ಆಕಾಂಕ್ಷಿಗಳಾಗಿದ್ದಾರೆ. <br /> <br /> ಪ್ರಸ್ತುತ 31 ಸ್ಥಾನಗಳನ್ನು ಹೊಂದಿರುವ ನಗರ ಸಭೆಯಲ್ಲಿ ಜೆಡಿಎಸ್ 11, ಕಾಂಗ್ರೆಸ್ 12, ಬಿಜೆಪಿ 4, ಕನ್ನಡ ಪಕ್ಷ 2, ಸಿಪಿಐ(ಎಂ) 1 ಹಾಗೂ ಸ್ವತಂತ್ರ ಅಭ್ಯರ್ಥಿ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಕನ್ನಡ ಪಕ್ಷ, ಸಿಪಿಐ(ಎಂ) ಪಕ್ಷದವರು ಅಧ್ಯಕ್ಷರ ಆಯ್ಕೆ ಕುರಿತು ಇನ್ನು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. <br /> <br /> ಈ ಮದ್ಯೆ ನಾಲ್ಕು ಜನ ಸದಸ್ಯರನ್ನು ಹೊಂದಿರುವ ಬಿಜೆಪಿಯಲ್ಲಿ ಅವಿಶ್ವಾಸ ನಿರ್ಣಯ ಸಂದರ್ಭದಲ್ಲಿ ಇಬ್ಬರು ತಟಸ್ಥವಾಗಿ ಉಳಿದರೆ, ಇಬ್ಬರು ಅವಿಶ್ವಾಸ ನಿರ್ಣಯದ ಪರವಾಗಿ ‘ಕೈ’ ಎತ್ತಿದ್ದರು.<br /> <br /> <strong>ವಿಪ್ ಜಾರಿ :</strong> ಮೇ.4 ರಂದು ಅಧ್ಯಕ್ಷರ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಪ್ ಜಾರಿಮಾಡಲು ಭಾನುವಾರ ನಡೆದ ನಗರ ಸಭಾ ಸದಸ್ಯರ ಹಾಗೂ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ಅಧ್ಯಕ್ಷ ಸ್ಥಾನದ ಅಧಿಕೃತ ಅಭ್ಯರ್ಥಿಯನ್ನು ಬುಧವಾರ ಬೆಳಿಗ್ಗೆ ತಿಳಿಸಲು ಗೋಪ್ಯವಾಗಿ ಇಡಲಾಗಿದೆ. <br /> <br /> ಜೆಡಿಎಸ್ನಲ್ಲಿ ಈಗಾಗಲೇ ಜಗದೀಶ್ರೆಡ್ಡಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಸಿದ್ದತೆಗಳು ನಡೆದಿವೆ. ಅವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಸದಸ್ಯ ವಡ್ಡರಹಳ್ಳಿರವಿ ಅವರು ತಟಸ್ಥವಾಗಿ ಉಳಿದಿದ್ದರು. <br /> <br /> ಇದರಿಂದ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲೂ ತಟಸ್ಥವಾಗಿ ಉಳಿದರೆ ಏನು ? ಎನ್ನುವ ಭೀತಿಯಲ್ಲಿರುವ ಜೆಡಿಎಸ್, ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿಯೇ ಮತಹಾಕುವಂತೆ ‘ವಿಪ್’ ಜಾರಿಗಳಿಸಲು ಸಿದ್ದತೆಗಳು ನಡೆಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದೊಡ್ಡಬಳ್ಳಾಪುರ: </strong>ಅವಿಶ್ವಾಸ ನಿರ್ಣಯದಿಂದ ತೆರವಾಗಿದ್ದ ನಗರ ಸಭೆ ಅಧ್ಯಕ್ಷ ಸ್ಥಾನಕ್ಕೆ ಮೇ.4 ರಂದು ಮಧ್ಯಾಹ್ನ 12.30ಕ್ಕೆ ಚುನಾವಣೆ ನಡೆಯಲಿದೆ. ಬಿಸಿಎಂ ‘ಬಿ’ ಅಭ್ಯರ್ಥಿಗೆ ಮೀಸಲಾಗಿರುವ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ನಿಂದ ಜಗದೀಶ್ರೆಡ್ಡಿ ಹಾಗೂ ಕಾಂಗ್ರೆಸ್ ಪಕ್ಷದಿಂದ ಜಿ.ಎಸ್.ಸೋಮರುದ್ರಶರ್ಮ ಆಕಾಂಕ್ಷಿಗಳಾಗಿದ್ದಾರೆ. <br /> <br /> ಪ್ರಸ್ತುತ 31 ಸ್ಥಾನಗಳನ್ನು ಹೊಂದಿರುವ ನಗರ ಸಭೆಯಲ್ಲಿ ಜೆಡಿಎಸ್ 11, ಕಾಂಗ್ರೆಸ್ 12, ಬಿಜೆಪಿ 4, ಕನ್ನಡ ಪಕ್ಷ 2, ಸಿಪಿಐ(ಎಂ) 1 ಹಾಗೂ ಸ್ವತಂತ್ರ ಅಭ್ಯರ್ಥಿ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಕನ್ನಡ ಪಕ್ಷ, ಸಿಪಿಐ(ಎಂ) ಪಕ್ಷದವರು ಅಧ್ಯಕ್ಷರ ಆಯ್ಕೆ ಕುರಿತು ಇನ್ನು ಯಾವುದೇ ನಿರ್ಧಾರ ಪ್ರಕಟಿಸಿಲ್ಲ. <br /> <br /> ಈ ಮದ್ಯೆ ನಾಲ್ಕು ಜನ ಸದಸ್ಯರನ್ನು ಹೊಂದಿರುವ ಬಿಜೆಪಿಯಲ್ಲಿ ಅವಿಶ್ವಾಸ ನಿರ್ಣಯ ಸಂದರ್ಭದಲ್ಲಿ ಇಬ್ಬರು ತಟಸ್ಥವಾಗಿ ಉಳಿದರೆ, ಇಬ್ಬರು ಅವಿಶ್ವಾಸ ನಿರ್ಣಯದ ಪರವಾಗಿ ‘ಕೈ’ ಎತ್ತಿದ್ದರು.<br /> <br /> <strong>ವಿಪ್ ಜಾರಿ :</strong> ಮೇ.4 ರಂದು ಅಧ್ಯಕ್ಷರ ಆಯ್ಕೆಗಾಗಿ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ವಿಪ್ ಜಾರಿಮಾಡಲು ಭಾನುವಾರ ನಡೆದ ನಗರ ಸಭಾ ಸದಸ್ಯರ ಹಾಗೂ ಮುಖಂಡರ ಸಭೆಯಲ್ಲಿ ನಿರ್ಧರಿಸಲಾಗಿದೆ. ಆದರೆ ಅಧ್ಯಕ್ಷ ಸ್ಥಾನದ ಅಧಿಕೃತ ಅಭ್ಯರ್ಥಿಯನ್ನು ಬುಧವಾರ ಬೆಳಿಗ್ಗೆ ತಿಳಿಸಲು ಗೋಪ್ಯವಾಗಿ ಇಡಲಾಗಿದೆ. <br /> <br /> ಜೆಡಿಎಸ್ನಲ್ಲಿ ಈಗಾಗಲೇ ಜಗದೀಶ್ರೆಡ್ಡಿ ಅವರನ್ನೇ ಅಧ್ಯಕ್ಷರನ್ನಾಗಿ ಮಾಡಲು ಸಿದ್ದತೆಗಳು ನಡೆದಿವೆ. ಅವಿಶ್ವಾಸ ಮತಯಾಚನೆ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಸದಸ್ಯ ವಡ್ಡರಹಳ್ಳಿರವಿ ಅವರು ತಟಸ್ಥವಾಗಿ ಉಳಿದಿದ್ದರು. <br /> <br /> ಇದರಿಂದ ಅಧ್ಯಕ್ಷರ ಆಯ್ಕೆ ಸಂದರ್ಭದಲ್ಲೂ ತಟಸ್ಥವಾಗಿ ಉಳಿದರೆ ಏನು ? ಎನ್ನುವ ಭೀತಿಯಲ್ಲಿರುವ ಜೆಡಿಎಸ್, ತಮ್ಮ ಪಕ್ಷದ ಅಧಿಕೃತ ಅಭ್ಯರ್ಥಿ ಪರವಾಗಿಯೇ ಮತಹಾಕುವಂತೆ ‘ವಿಪ್’ ಜಾರಿಗಳಿಸಲು ಸಿದ್ದತೆಗಳು ನಡೆಸಲಾಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>