<p><strong>ಬೆಂಗಳೂರು: </strong>ಬೀದರ್ನಲ್ಲಿ ಸುಧಾರಿತ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪಿಸಲು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ (ಎಚ್ಎಎಲ್) 500 ಎಕರೆ ಭೂಮಿ ನೀಡುವ ಪ್ರಸ್ತಾವಕ್ಕೆ ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.<br /> <br /> ಸುಧಾರಿತ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಬೀದರ್ನಲ್ಲೇ ಸ್ಥಾಪಿಸುವಂತೆ ಸಂಸದ ಧರ್ಮಸಿಂಗ್ ಮಾಡಿದ್ದ ಮನವಿಯನ್ನು ರಕ್ಷಣಾ ಸಚಿವ ಎ.ಕೆ.ಆಂಟನಿ ಇತ್ತೀಚೆಗಷ್ಟೇ ಒಪ್ಪಿಕೊಂಡಿದ್ದರು. ನಂತರ ರಾಜ್ಯ ಸರ್ಕಾರಕ್ಕೆ ಪ್ರಸ್ತಾವವೊಂದನ್ನು ಕಳುಹಿಸಿದ್ದ ಎಚ್ಎಎಲ್ ಬೀದರ್ನಲ್ಲಿ 500 ಎಕರೆ ಭೂಮಿ ನೀಡುವಂತೆ ಕೋರಿತ್ತು. ಈ ವಿಷಯ ಗುರುವಾರ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ.<br /> <br /> <strong>ಮಸೂದೆಗೆ ಒಪ್ಪಿಗೆ ಸಾಧ್ಯತೆ</strong>: ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡುವ `ಕೆರೆ ಅಭಿವೃದ್ಧಿ ಪ್ರಾಧಿಕಾರ ಮಸೂದೆ~ಗೂ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ. 2006ರಿಂದಲೂ ಈ ಮಸೂದೆ ಹಲವು ಬಾರಿ ಪರಿಷ್ಕರಣೆಗೆ ಒಳಗಾಗಿತ್ತು.<br /> <br /> ಶಿಕ್ಷಣ ಹಕ್ಕು ಕಾಯ್ದೆಯ ಕರಡು ನಿಯಮಗಳಿಗೆ ಒಪ್ಪಿಗೆ ನೀಡುವ ಪ್ರಸ್ತಾವವೂ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಬೀದರ್ನಲ್ಲಿ ಸುಧಾರಿತ ಹೆಲಿಕಾಪ್ಟರ್ ತಯಾರಿಕಾ ಘಟಕ ಸ್ಥಾಪಿಸಲು ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ಗೆ (ಎಚ್ಎಎಲ್) 500 ಎಕರೆ ಭೂಮಿ ನೀಡುವ ಪ್ರಸ್ತಾವಕ್ಕೆ ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡುವ ಸಾಧ್ಯತೆ ಇದೆ.<br /> <br /> ಸುಧಾರಿತ ಹೆಲಿಕಾಪ್ಟರ್ ತಯಾರಿಕಾ ಘಟಕವನ್ನು ಬೀದರ್ನಲ್ಲೇ ಸ್ಥಾಪಿಸುವಂತೆ ಸಂಸದ ಧರ್ಮಸಿಂಗ್ ಮಾಡಿದ್ದ ಮನವಿಯನ್ನು ರಕ್ಷಣಾ ಸಚಿವ ಎ.ಕೆ.ಆಂಟನಿ ಇತ್ತೀಚೆಗಷ್ಟೇ ಒಪ್ಪಿಕೊಂಡಿದ್ದರು. ನಂತರ ರಾಜ್ಯ ಸರ್ಕಾರಕ್ಕೆ ಪ್ರಸ್ತಾವವೊಂದನ್ನು ಕಳುಹಿಸಿದ್ದ ಎಚ್ಎಎಲ್ ಬೀದರ್ನಲ್ಲಿ 500 ಎಕರೆ ಭೂಮಿ ನೀಡುವಂತೆ ಕೋರಿತ್ತು. ಈ ವಿಷಯ ಗುರುವಾರ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ.<br /> <br /> <strong>ಮಸೂದೆಗೆ ಒಪ್ಪಿಗೆ ಸಾಧ್ಯತೆ</strong>: ಕೆರೆ ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡುವ `ಕೆರೆ ಅಭಿವೃದ್ಧಿ ಪ್ರಾಧಿಕಾರ ಮಸೂದೆ~ಗೂ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡುವ ಸಾಧ್ಯತೆ ಇದೆ. 2006ರಿಂದಲೂ ಈ ಮಸೂದೆ ಹಲವು ಬಾರಿ ಪರಿಷ್ಕರಣೆಗೆ ಒಳಗಾಗಿತ್ತು.<br /> <br /> ಶಿಕ್ಷಣ ಹಕ್ಕು ಕಾಯ್ದೆಯ ಕರಡು ನಿಯಮಗಳಿಗೆ ಒಪ್ಪಿಗೆ ನೀಡುವ ಪ್ರಸ್ತಾವವೂ ಸಂಪುಟ ಸಭೆಯಲ್ಲಿ ಚರ್ಚೆಗೆ ಬರುವ ಸಾಧ್ಯತೆ ಇದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>