<p><strong>ಬೆಂಗಳೂರು</strong>: `ದೋಷದಿಂದ ಕೂಡಿವೆ ಎನ್ನಲಾಗಿದ್ದ ದಾಖಲೆಗಳ ಪರಿಶೀಲನೆ ನಡೆದರೂ ಸಹ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಇನ್ನೂ ಪ್ರಶಸ್ತಿ ಪ್ರದಾನದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ನಿತ್ಯ ಮುಜುಗರ ಎದುರಿಸುವಂತಾಗಿದೆ~ ಎಂದು ಈ ಸಲ ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕರಾಟೆ ಪಟು ನವೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಸೆಪ್ಟಂಬರ್ ಮೊದಲ ವಾರದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ದೇಹದಾರ್ಢ್ಯ ಪಟು ರೋಷನ್ ಫರಾರೋ ಹಾಗೂ ನಾನು ಸಮಿತಿ ಎದುರು ದಾಖಲೆ ಹಾಜರು ಪಡಿಸಿದ್ದೆವು. ಇದಾಗಿ ಹತ್ತು ದಿನ ಕಳೆದರೂ ನಮಗೆ ಯಾವುದೇ ಮಾಹಿತಿ ಗೊತ್ತಾಗುತ್ತಿಲ್ಲ. ಸಂಪರ್ಕಕ್ಕೆ ಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಅನಿವಾರ್ಯವಾಗಿ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ~ ಎಂದು ಪತ್ರಿಕೆಗೆ ತಿಳಿಸಿದರು.<br /> <br /> `ಪ್ರಶಸ್ತಿ ಬರದಿದ್ದರೂ ಖುಷಿಯಾಗಿರುತ್ತಿತ್ತು. ಆದರೆ ಹೆಸರು ಘೋಷಣೆ ಮಾಡಿ ನೀಡದೇ ಇದ್ದದ್ದು ನಿರಾಸೆ ಉಂಟು ಮಾಡಿದೆ. ಸ್ನೇಹಿತರ ಎದುರು, ಕಚೇರಿಯಲ್ಲಿ ತಲೆ ತಗ್ಗಿಸುವಂತಾಗಿದೆ~ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> <strong>ವರದಿ ಬಂದ ಬಳಿಕ ಕ್ರಮ:</strong> 15 ಜನ ಆಟಗಾರರಿಗೆ ಆಗಸ್ಟ್ 29ರಂದು ಪ್ರಶಸ್ತಿ ನೀಡಲು ನಿರ್ಧರಿಸಿದ್ದೆವು. ಆದರೆ ಮೂವರು ಆಟಗಾರರ ದಾಖಲೆಗಳಲ್ಲಿ ದೋಷ ಇರುವ ಬಗ್ಗೆ ಆಕ್ಷೇಪಣೆ ಬಂದಿತ್ತು. ಆದ್ದರಿಂದ ಆ ದಾಖಲೆಗಳನ್ನು ಸಮಿತಿ ಪರಿಶೀಲನೆ ನಡೆಸುತ್ತಿದೆ. ಸಮಿತಿ ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಈ ಕುರಿತು ಕ್ರೀಡಾ ಇಲಾಖೆಯ ಅಧಿಕಾರಿಗಳ ಸ್ಪಷ್ಟನೆ ಪಡೆಯಲು ದೂರವಾಣಿ ಮೂಲಕ ಸಂಪರ್ಕಿಸಲಾಯಿತಾದರೂ ಅದಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: `ದೋಷದಿಂದ ಕೂಡಿವೆ ಎನ್ನಲಾಗಿದ್ದ ದಾಖಲೆಗಳ ಪರಿಶೀಲನೆ ನಡೆದರೂ ಸಹ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಇನ್ನೂ ಪ್ರಶಸ್ತಿ ಪ್ರದಾನದ ಬಗ್ಗೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ. ಇದರಿಂದ ನಿತ್ಯ ಮುಜುಗರ ಎದುರಿಸುವಂತಾಗಿದೆ~ ಎಂದು ಈ ಸಲ ಏಕಲವ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕರಾಟೆ ಪಟು ನವೀನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<br /> <br /> ಸೆಪ್ಟಂಬರ್ ಮೊದಲ ವಾರದಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ದೇಹದಾರ್ಢ್ಯ ಪಟು ರೋಷನ್ ಫರಾರೋ ಹಾಗೂ ನಾನು ಸಮಿತಿ ಎದುರು ದಾಖಲೆ ಹಾಜರು ಪಡಿಸಿದ್ದೆವು. ಇದಾಗಿ ಹತ್ತು ದಿನ ಕಳೆದರೂ ನಮಗೆ ಯಾವುದೇ ಮಾಹಿತಿ ಗೊತ್ತಾಗುತ್ತಿಲ್ಲ. ಸಂಪರ್ಕಕ್ಕೆ ಯತ್ನಿಸಿದರೂ ಸಾಧ್ಯವಾಗುತ್ತಿಲ್ಲ. ಅನಿವಾರ್ಯವಾಗಿ ಕೋರ್ಟ್ ಮೊರೆ ಹೋಗಬೇಕಾದ ಪರಿಸ್ಥಿತಿ ಎದುರಾಗಿದೆ~ ಎಂದು ಪತ್ರಿಕೆಗೆ ತಿಳಿಸಿದರು.<br /> <br /> `ಪ್ರಶಸ್ತಿ ಬರದಿದ್ದರೂ ಖುಷಿಯಾಗಿರುತ್ತಿತ್ತು. ಆದರೆ ಹೆಸರು ಘೋಷಣೆ ಮಾಡಿ ನೀಡದೇ ಇದ್ದದ್ದು ನಿರಾಸೆ ಉಂಟು ಮಾಡಿದೆ. ಸ್ನೇಹಿತರ ಎದುರು, ಕಚೇರಿಯಲ್ಲಿ ತಲೆ ತಗ್ಗಿಸುವಂತಾಗಿದೆ~ ಎಂದು ಅವರು ಬೇಸರ ವ್ಯಕ್ತಪಡಿಸಿದರು.<br /> <br /> <strong>ವರದಿ ಬಂದ ಬಳಿಕ ಕ್ರಮ:</strong> 15 ಜನ ಆಟಗಾರರಿಗೆ ಆಗಸ್ಟ್ 29ರಂದು ಪ್ರಶಸ್ತಿ ನೀಡಲು ನಿರ್ಧರಿಸಿದ್ದೆವು. ಆದರೆ ಮೂವರು ಆಟಗಾರರ ದಾಖಲೆಗಳಲ್ಲಿ ದೋಷ ಇರುವ ಬಗ್ಗೆ ಆಕ್ಷೇಪಣೆ ಬಂದಿತ್ತು. ಆದ್ದರಿಂದ ಆ ದಾಖಲೆಗಳನ್ನು ಸಮಿತಿ ಪರಿಶೀಲನೆ ನಡೆಸುತ್ತಿದೆ. ಸಮಿತಿ ವರದಿ ನೀಡಿದ ಬಳಿಕ ಕ್ರಮ ಕೈಗೊಳ್ಳಲಾಗುವುದು ಎಂದು ಕ್ರೀಡಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಐ.ಆರ್. ಪೆರುಮಾಳ್ `ಪ್ರಜಾವಾಣಿ~ಗೆ ತಿಳಿಸಿದರು.<br /> <br /> ಈ ಕುರಿತು ಕ್ರೀಡಾ ಇಲಾಖೆಯ ಅಧಿಕಾರಿಗಳ ಸ್ಪಷ್ಟನೆ ಪಡೆಯಲು ದೂರವಾಣಿ ಮೂಲಕ ಸಂಪರ್ಕಿಸಲಾಯಿತಾದರೂ ಅದಕ್ಕೆ ಅವರು ಪ್ರತಿಕ್ರಿಯಿಸಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>