<p><strong>ಮೈಸೂರು (ಚಿಕ್ಕಬರಗಿ):</strong> ಎಚ್.ಡಿ. ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮ ಚಿಕ್ಕಬರಗಿ ಮತ್ತು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆಯು ಜಿಲ್ಲೆಯಲ್ಲಿ ಒಂಬತ್ತು ದಿನಗಳಲ್ಲಿ ನಾಲ್ವರನ್ನು ಬಲಿ ತೆಗೆದುಕೊಂಡಿರುವ ನರಭಕ್ಷಕ ಹುಲಿಯ ಸೆರೆಗೆ ಡಿ. 5ರಿಂದ ಆನೆಗಳಿಂದ ವಿಶೇಷ ಕಾರ್ಯಾಚರಣೆ ನಡೆಸಲು ಮುಂದಾಗಿದೆ.<br /> <br /> ಹುಲಿಯ ಅಟ್ಟಹಾಸಕ್ಕೆ ಮಂಗಳವಾರ ಬಲಿಯಾದ ಚಿಕ್ಕಬರಗಿ ಗ್ರಾಮದ ಬಸಪ್ಪ (65) ಅವರ ರಕ್ತಸಿಕ್ತ ರುಂಡ–ಮುಂಡಗಳು ಬುಧವಾರ ಅರಣ್ಯದಲ್ಲಿ ಪತ್ತೆಯಾಗಿವೆ. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಬುಧವಾರ ಬೆಳಿಗ್ಗೆ 6 ಗಂಟೆ ವೇಳೆಗೆ ‘ಕೂಂಬಿಂಗ್’ ಆರಂಭಿಸಿದರು. ಹುಲಿಯು ಶಿವಪ್ಪ ಅವರನ್ನು ಹೊಲದಿಂದ ಹೊತ್ತೊಯ್ದ ಜಾಡು ಹಿಡಿದು ಸಾಗಿದಾಗ ಒಂದು ಪೊದೆ ಬಳಿ ರುಂಡ, ಅನತಿ ದೂರದಲ್ಲಿನ ಮತ್ತೊಂದು ಪೊದೆಯಲ್ಲಿ ಮುಂಡ ಪತ್ತೆಯಾಗಿದೆ. ಜಮೀನನ ಅಂಚಿನ ದಂಡೆಯಲ್ಲಿ ಚಪ್ಪಲಿ ಸಿಕ್ಕಿದೆ. <br /> <br /> ಬುಧವಾರ ಬೆಳಿಗ್ಗೆ 7.30ರ ವೇಳೆಗೆ ಸನಿಹದಲ್ಲಿ ಹುಲಿಯು ಗರ್ಜಿಸಿದ ಶಬ್ದ ಕೇಳಿದ ತಕ್ಷಣವೇ ಕಾರ್ಯಾಚರಣೆ ಸಿಬ್ಬಂದಿ 29 ಸುತ್ತು ಗುಂಡುಗಳನ್ನು ಹಾರಿಸಿತು.<br /> <br /> ವ್ಯಕ್ತಿಯನ್ನು ಗುರುತಿಸಲು ಸಾಧ್ಯವಿಲ್ಲದಂತೆ ದೇಹವನ್ನು ವಿಕಾರಗೊಳಿಸಿರುವ ಹುಲಿಯು ರುಂಡವನ್ನು ಬೇರ್ಪಡಿಸಿ ಮಾಂಸವನ್ನು ಕಬಳಿಸಿದೆ. ಬಲ ತೊಡೆಯ ಮಾಂಸವನ್ನು ಭಕ್ಷಿಸಿ ಆ ಕಾಲನ್ನು ಪ್ರತ್ಯೇಕಗೊಳಿಸಿದೆ. ಶರೀರದ ಮೇಲಿನ ಬಟ್ಟೆ ಕಾಲಿನ ಬೆರಳು ಆಧರಿಸಿ ವ್ಯಕ್ತಿಯನ್ನು ಗುರುತಿಸಲಾಗಿದೆ. ರುಂಡವನ್ನು ಮತ್ತೊಂದು ಕಡೆಗೆ ಒಯ್ದು ಮುಖವನ್ನು ಪೂರ್ಣವಾಗಿ ತಿಂದು, ತಲೆಬುರುಡೆ ಮಾತ್ರ ಉಳಿಸಿದೆ. ಹುಲಿಯ ದೇಹವನ್ನು ಎಳೆದಾಡಿದ ಜಾಗದಲ್ಲಿ ರಕ್ತದ ಕಲೆಗಳು ಅಂಟಿಕೊಂಡಿವೆ.</p>.<p>‘ಮೂವರು ಬಲಿಯಾಗಿರುವುದು ಗೊತ್ತಿದ್ದರೂ ಅರಣ್ಯ ಇಲಾಖೆ ಡಿ. 2 ರಂದು ಹುಲಿ ಬೇಟೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರಿಂದ ಮತ್ತೊಬ್ಬ ಬಲಿಯಾಗಬೇಕಾಯಿತು. ಇದು ಇಲಾಖೆಯ ವೈಫಲ್ಯವಾಗಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ದಕ್ಷಿಣ ವಲಯ ಐಜಿ ಡಾ.ರಾಮಚಂದ್ರರಾವ್, ಬಂಡೀಪುರ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ. ಕಾಂತರಾಜು, ಅರಣ್ಯ ಅಧಿಕಾರಿ ರವಿಕುಮಾರ್, ರೇಂಜರ್ ಗಿರೀಶ್ ಸೇರಿದಂತೆ ವಿವಿಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಭೆಗಳನ್ನು ನಡೆಸಿ, ಕೆರಳಿದ ಗ್ರಾಮಸ್ಥರನ್ನು ಮನವೊಲಿಸುವ ಕಾರ್ಯದಲ್ಲಿ ಸಂಜೆ ವೇಳೆಗೆ ಸಫಲರಾದರು.<br /> <br /> ಮೃತನ ಕುಟುಂಬದವರಿಗೆ ಪರಿಹಾರ ನೀಡುವುದಷ್ಟೇ ಅಲ್ಲ, ಮುಂದೆಂದೂ ಇಂಥ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲೇಬೇಕು. ಪುನಃ ಇಂಥ ಘಟನೆ ನಡೆದರೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದೂ ಗ್ರಾಮಸ್ಥರು ಎಚ್ಚರಿಸಿದರು.<br /> <br /> <strong></strong></p>.<p><strong>ಎರಡು ಕಡೆ ಬೋನು: </strong>ಪರಿಸ್ಥಿತಿ ತಹಬದಿಗೆ ಬಂದ ನಂತರ ನಿರೀಕ್ಷಣಾ ಮಂದಿರದ ಬಳಿ ಮುಖಂಡರು ಮತ್ತು ಗ್ರಾಮಸ್ಥರ ಸಭೆ ನಡೆಸಲಾಯಿತು. ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ. ಕಾಂತರಾಜು ಮಾತನಾಡಿ, ಹುಲಿ ಸೆರೆಗೆ ಅರಣ್ಯದಲ್ಲಿ 10 ಕಡೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಹುಲಿಗೆ ವಯಸ್ಸಾಗಿದ್ದು, ಇದಕ್ಕೆ ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಕಷ್ಟವಾಗಿದೆ.<br /> <br /> ಅಲ್ಲದೇ, ಈಚೆಗೆ ಅರಣ್ಯದೊಳಕ್ಕೆ ಗ್ರಾಮಗಳಿಂದ ರಾಸುಗಳು ಬರುವುದು ಕ್ಷೀಣಿಸಿದ್ದು, ಈ ಹುಲಿ ಮನುಷ್ಯರನ್ನು ತಿನ್ನಲು ಆರಂಭಿಸಿದೆ. ಈ ಹುಲಿ ಕಾಡಿನ ಅಂಚಿನಲ್ಲಿ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ಕ್ಯಾಮೆರಾ ಕಣ್ಣಿಗೆ ಬಿದ್ದಿಲ್ಲ. ಎರಡು ಕಡೆ ಬೋನುಗಳನ್ನೂ ಇಡಲಾಗಿದೆ ಎಂದು ಹೇಳಿದರು.<br /> <br /> ಮೃತನ ಕುಟುಂಬಕ್ಕೆ ₨ 5 ಲಕ್ಷ ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರಿ ನೀಡಲಾಗುವುದು ಎಂದ ಅವರು, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಿದರು.<br /> <br /> ನ. 26ರಂದು ಎಚ್.ಡಿ. ಕೋಟೆ ತಾಲ್ಲೂಕಿನ ಬಂಡೀಪುರ ಕಾಡಿನಂಚಿನ ನಡಹಾಡಿಯಲ್ಲಿ ಬಸವರಾಜು, 29ರಂದು ಸೀಗೆವಾಡಿ ಹಾಡಿಯಲ್ಲಿ ಚೆಲುವ, 30ರಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಅರಣ್ಯ ರಕ್ಷಕ ಸುರೇಶ್ ಅವರು ಹುಲಿಗೆ ಆಹಾರವಾಗಿದ್ದರು.<br /> <br /> ನರಭಕ್ಷಕ ಹುಲಿ ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಮೀನ–ಮೇಷ ಎಣಿಸುತ್ತಿದೆ ಎಂದು ಆಕ್ರೋಶಗೊಂಡಿದ್ದ ಗ್ರಾಮಸ್ಥರು ಮಂಗಳವಾರ ಸಂಜೆಯೇ ಗ್ರಾಮದಲ್ಲಿನ ಅರಣ್ಯ ಇಲಾಖೆಯ ವಾಹನಗಳು, ನಿರೀಕ್ಷಣಾ ಗೃಹಗಳನ್ನು ಧ್ವಂಸಗೊಳಿಸಿದ್ದರು.<br /> <br /> <strong>ಗುಂಡೇಟಿಗೆ ಕಾಡಾನೆ ಬಲಿ</strong><br /> ಗೋಣಿಕೊಪ್ಪಲು: ಇಲ್ಲಿಗೆ ಸಮೀಪದ ತಿತಿಮತಿ ಬಾಳುಮನೆ ಎಸ್ಟೇಟ್ನಲ್ಲಿ ಮಂಗಳವಾರ ದುಷ್ಕರ್ಮಿಗಳಿಂದ ಗುಂಡೇಟು ತಿಂದು ನರಳುತ್ತಿದ್ದ 65 ವರ್ಷದ ಗಂಡು ಕಾಡಾನೆ ಬುಧವಾರ ಸಾವನ್ನಪ್ಪಿದೆ. </p>.<p>ಅದನ್ನುಬದುಕಿಸಲು ಅರಣ್ಯಾಧಿಕಾರಿಗಳು ಮಂಗಳವಾರ ಇಡೀ ದಿನ ನಡೆಸಿದ ಪ್ರಯತ್ನ ವ್ಯರ್ಥವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು (ಚಿಕ್ಕಬರಗಿ):</strong> ಎಚ್.ಡಿ. ಕೋಟೆ ತಾಲ್ಲೂಕಿನ ಕಾಡಂಚಿನ ಗ್ರಾಮ ಚಿಕ್ಕಬರಗಿ ಮತ್ತು ಸುತ್ತಮುತ್ತಲ ಗ್ರಾಮಸ್ಥರ ಆಕ್ರೋಶಕ್ಕೆ ಎಚ್ಚೆತ್ತುಕೊಂಡಿರುವ ಅರಣ್ಯ ಇಲಾಖೆಯು ಜಿಲ್ಲೆಯಲ್ಲಿ ಒಂಬತ್ತು ದಿನಗಳಲ್ಲಿ ನಾಲ್ವರನ್ನು ಬಲಿ ತೆಗೆದುಕೊಂಡಿರುವ ನರಭಕ್ಷಕ ಹುಲಿಯ ಸೆರೆಗೆ ಡಿ. 5ರಿಂದ ಆನೆಗಳಿಂದ ವಿಶೇಷ ಕಾರ್ಯಾಚರಣೆ ನಡೆಸಲು ಮುಂದಾಗಿದೆ.<br /> <br /> ಹುಲಿಯ ಅಟ್ಟಹಾಸಕ್ಕೆ ಮಂಗಳವಾರ ಬಲಿಯಾದ ಚಿಕ್ಕಬರಗಿ ಗ್ರಾಮದ ಬಸಪ್ಪ (65) ಅವರ ರಕ್ತಸಿಕ್ತ ರುಂಡ–ಮುಂಡಗಳು ಬುಧವಾರ ಅರಣ್ಯದಲ್ಲಿ ಪತ್ತೆಯಾಗಿವೆ. ಅರಣ್ಯ ಸಿಬ್ಬಂದಿ ಮತ್ತು ಪೊಲೀಸರು ಬುಧವಾರ ಬೆಳಿಗ್ಗೆ 6 ಗಂಟೆ ವೇಳೆಗೆ ‘ಕೂಂಬಿಂಗ್’ ಆರಂಭಿಸಿದರು. ಹುಲಿಯು ಶಿವಪ್ಪ ಅವರನ್ನು ಹೊಲದಿಂದ ಹೊತ್ತೊಯ್ದ ಜಾಡು ಹಿಡಿದು ಸಾಗಿದಾಗ ಒಂದು ಪೊದೆ ಬಳಿ ರುಂಡ, ಅನತಿ ದೂರದಲ್ಲಿನ ಮತ್ತೊಂದು ಪೊದೆಯಲ್ಲಿ ಮುಂಡ ಪತ್ತೆಯಾಗಿದೆ. ಜಮೀನನ ಅಂಚಿನ ದಂಡೆಯಲ್ಲಿ ಚಪ್ಪಲಿ ಸಿಕ್ಕಿದೆ. <br /> <br /> ಬುಧವಾರ ಬೆಳಿಗ್ಗೆ 7.30ರ ವೇಳೆಗೆ ಸನಿಹದಲ್ಲಿ ಹುಲಿಯು ಗರ್ಜಿಸಿದ ಶಬ್ದ ಕೇಳಿದ ತಕ್ಷಣವೇ ಕಾರ್ಯಾಚರಣೆ ಸಿಬ್ಬಂದಿ 29 ಸುತ್ತು ಗುಂಡುಗಳನ್ನು ಹಾರಿಸಿತು.<br /> <br /> ವ್ಯಕ್ತಿಯನ್ನು ಗುರುತಿಸಲು ಸಾಧ್ಯವಿಲ್ಲದಂತೆ ದೇಹವನ್ನು ವಿಕಾರಗೊಳಿಸಿರುವ ಹುಲಿಯು ರುಂಡವನ್ನು ಬೇರ್ಪಡಿಸಿ ಮಾಂಸವನ್ನು ಕಬಳಿಸಿದೆ. ಬಲ ತೊಡೆಯ ಮಾಂಸವನ್ನು ಭಕ್ಷಿಸಿ ಆ ಕಾಲನ್ನು ಪ್ರತ್ಯೇಕಗೊಳಿಸಿದೆ. ಶರೀರದ ಮೇಲಿನ ಬಟ್ಟೆ ಕಾಲಿನ ಬೆರಳು ಆಧರಿಸಿ ವ್ಯಕ್ತಿಯನ್ನು ಗುರುತಿಸಲಾಗಿದೆ. ರುಂಡವನ್ನು ಮತ್ತೊಂದು ಕಡೆಗೆ ಒಯ್ದು ಮುಖವನ್ನು ಪೂರ್ಣವಾಗಿ ತಿಂದು, ತಲೆಬುರುಡೆ ಮಾತ್ರ ಉಳಿಸಿದೆ. ಹುಲಿಯ ದೇಹವನ್ನು ಎಳೆದಾಡಿದ ಜಾಗದಲ್ಲಿ ರಕ್ತದ ಕಲೆಗಳು ಅಂಟಿಕೊಂಡಿವೆ.</p>.<p>‘ಮೂವರು ಬಲಿಯಾಗಿರುವುದು ಗೊತ್ತಿದ್ದರೂ ಅರಣ್ಯ ಇಲಾಖೆ ಡಿ. 2 ರಂದು ಹುಲಿ ಬೇಟೆ ಕಾರ್ಯಾಚರಣೆ ಸ್ಥಗಿತಗೊಳಿಸಿದ್ದರಿಂದ ಮತ್ತೊಬ್ಬ ಬಲಿಯಾಗಬೇಕಾಯಿತು. ಇದು ಇಲಾಖೆಯ ವೈಫಲ್ಯವಾಗಿದೆ’ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು.<br /> <br /> ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿನವ್ ಖರೆ, ದಕ್ಷಿಣ ವಲಯ ಐಜಿ ಡಾ.ರಾಮಚಂದ್ರರಾವ್, ಬಂಡೀಪುರ ವಲಯದ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ. ಕಾಂತರಾಜು, ಅರಣ್ಯ ಅಧಿಕಾರಿ ರವಿಕುಮಾರ್, ರೇಂಜರ್ ಗಿರೀಶ್ ಸೇರಿದಂತೆ ವಿವಿಧ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸಭೆಗಳನ್ನು ನಡೆಸಿ, ಕೆರಳಿದ ಗ್ರಾಮಸ್ಥರನ್ನು ಮನವೊಲಿಸುವ ಕಾರ್ಯದಲ್ಲಿ ಸಂಜೆ ವೇಳೆಗೆ ಸಫಲರಾದರು.<br /> <br /> ಮೃತನ ಕುಟುಂಬದವರಿಗೆ ಪರಿಹಾರ ನೀಡುವುದಷ್ಟೇ ಅಲ್ಲ, ಮುಂದೆಂದೂ ಇಂಥ ಪ್ರಕರಣಗಳು ಮರುಕಳಿಸದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲೇಬೇಕು. ಪುನಃ ಇಂಥ ಘಟನೆ ನಡೆದರೆ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಬೇಕಾಗುತ್ತದೆ ಎಂದೂ ಗ್ರಾಮಸ್ಥರು ಎಚ್ಚರಿಸಿದರು.<br /> <br /> <strong></strong></p>.<p><strong>ಎರಡು ಕಡೆ ಬೋನು: </strong>ಪರಿಸ್ಥಿತಿ ತಹಬದಿಗೆ ಬಂದ ನಂತರ ನಿರೀಕ್ಷಣಾ ಮಂದಿರದ ಬಳಿ ಮುಖಂಡರು ಮತ್ತು ಗ್ರಾಮಸ್ಥರ ಸಭೆ ನಡೆಸಲಾಯಿತು. ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ. ಕಾಂತರಾಜು ಮಾತನಾಡಿ, ಹುಲಿ ಸೆರೆಗೆ ಅರಣ್ಯದಲ್ಲಿ 10 ಕಡೆ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಹುಲಿಗೆ ವಯಸ್ಸಾಗಿದ್ದು, ಇದಕ್ಕೆ ಕಾಡು ಪ್ರಾಣಿಗಳನ್ನು ಬೇಟೆಯಾಡುವುದು ಕಷ್ಟವಾಗಿದೆ.<br /> <br /> ಅಲ್ಲದೇ, ಈಚೆಗೆ ಅರಣ್ಯದೊಳಕ್ಕೆ ಗ್ರಾಮಗಳಿಂದ ರಾಸುಗಳು ಬರುವುದು ಕ್ಷೀಣಿಸಿದ್ದು, ಈ ಹುಲಿ ಮನುಷ್ಯರನ್ನು ತಿನ್ನಲು ಆರಂಭಿಸಿದೆ. ಈ ಹುಲಿ ಕಾಡಿನ ಅಂಚಿನಲ್ಲಿ ಸಂಚರಿಸುತ್ತಿರುವ ಸಾಧ್ಯತೆ ಇರುವುದರಿಂದ ಕ್ಯಾಮೆರಾ ಕಣ್ಣಿಗೆ ಬಿದ್ದಿಲ್ಲ. ಎರಡು ಕಡೆ ಬೋನುಗಳನ್ನೂ ಇಡಲಾಗಿದೆ ಎಂದು ಹೇಳಿದರು.<br /> <br /> ಮೃತನ ಕುಟುಂಬಕ್ಕೆ ₨ 5 ಲಕ್ಷ ಪರಿಹಾರ, ಕುಟುಂಬದ ಸದಸ್ಯರೊಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಹಂಗಾಮಿ ನೌಕರಿ ನೀಡಲಾಗುವುದು ಎಂದ ಅವರು, ಸ್ಥಳದಲ್ಲೇ ಒಂದು ಲಕ್ಷ ರೂಪಾಯಿ ಚೆಕ್ ವಿತರಿಸಿದರು.<br /> <br /> ನ. 26ರಂದು ಎಚ್.ಡಿ. ಕೋಟೆ ತಾಲ್ಲೂಕಿನ ಬಂಡೀಪುರ ಕಾಡಿನಂಚಿನ ನಡಹಾಡಿಯಲ್ಲಿ ಬಸವರಾಜು, 29ರಂದು ಸೀಗೆವಾಡಿ ಹಾಡಿಯಲ್ಲಿ ಚೆಲುವ, 30ರಂದು ನಾಗರಹೊಳೆಯ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ಅರಣ್ಯ ರಕ್ಷಕ ಸುರೇಶ್ ಅವರು ಹುಲಿಗೆ ಆಹಾರವಾಗಿದ್ದರು.<br /> <br /> ನರಭಕ್ಷಕ ಹುಲಿ ಸೆರೆ ಹಿಡಿಯಲು ಅರಣ್ಯ ಸಿಬ್ಬಂದಿ ಮೀನ–ಮೇಷ ಎಣಿಸುತ್ತಿದೆ ಎಂದು ಆಕ್ರೋಶಗೊಂಡಿದ್ದ ಗ್ರಾಮಸ್ಥರು ಮಂಗಳವಾರ ಸಂಜೆಯೇ ಗ್ರಾಮದಲ್ಲಿನ ಅರಣ್ಯ ಇಲಾಖೆಯ ವಾಹನಗಳು, ನಿರೀಕ್ಷಣಾ ಗೃಹಗಳನ್ನು ಧ್ವಂಸಗೊಳಿಸಿದ್ದರು.<br /> <br /> <strong>ಗುಂಡೇಟಿಗೆ ಕಾಡಾನೆ ಬಲಿ</strong><br /> ಗೋಣಿಕೊಪ್ಪಲು: ಇಲ್ಲಿಗೆ ಸಮೀಪದ ತಿತಿಮತಿ ಬಾಳುಮನೆ ಎಸ್ಟೇಟ್ನಲ್ಲಿ ಮಂಗಳವಾರ ದುಷ್ಕರ್ಮಿಗಳಿಂದ ಗುಂಡೇಟು ತಿಂದು ನರಳುತ್ತಿದ್ದ 65 ವರ್ಷದ ಗಂಡು ಕಾಡಾನೆ ಬುಧವಾರ ಸಾವನ್ನಪ್ಪಿದೆ. </p>.<p>ಅದನ್ನುಬದುಕಿಸಲು ಅರಣ್ಯಾಧಿಕಾರಿಗಳು ಮಂಗಳವಾರ ಇಡೀ ದಿನ ನಡೆಸಿದ ಪ್ರಯತ್ನ ವ್ಯರ್ಥವಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>