<p><strong>ನವದೆಹಲಿ (ಪಿಟಿಐ):</strong> ಕಾಲೇಜು ಹಂತದಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಶಿಷ್ಯವೇತನ ಯೋಜನೆ ವ್ಯಾಪ್ತಿಗೆ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಇನ್ನೂ 48 ಲಕ್ಷ ಮಕ್ಕಳನ್ನು ಸೇರಿಸಲು ಸರ್ಕಾರ ಮುಂದಾಗಿದೆ.<br /> <br /> ಅಲ್ಲದೆ ಈ ಉದ್ದೇಶಕ್ಕಾಗಿ ಬಜೆಟ್ನಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಮೊತ್ತ ನಿಗದಿಗೆ ನಿರ್ಧರಿಸಿದೆ.<br /> ಕಾಲೇಜು ಹಂತದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪೂರೈಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಆರಂಭಿಸಿ, ಇದಕ್ಕಾಗಿ 2200 ಕೋಟಿ ರೂಪಾಯಿ ಮಂಜೂರು ಮಾಡಿತ್ತು. <br /> <br /> `ಕೆಲವು ರಾಜ್ಯಗಳು ಈ ಯೋಜನೆಯ ಬಗ್ಗೆ ಅಪಾರ ಆಸಕ್ತಿ ತೋರಿಸಿದ್ದು, ಈಗಾಗಲೇ ನಾವು 2303 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಈ ತಿಂಗಳ ಅಂತ್ಯದೊಳಗೆ ಹೆಚ್ಚಿನ ಹಣ ಹಂಚಲಾಗುತ್ತದೆ~ ಎಂದು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಮುಕುಲ್ ವಾಸ್ನಿಕ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.<br /> <br /> ಶೇ 15ರಷ್ಟು ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಶೇ 37ರಷ್ಟು ಹೆಣ್ಣು ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 643 ಕೋಟಿ ರೂಪಾಯಿ ಗರಿಷ್ಠ ಅನುದಾನದೊಂದಿಗೆ ಆಂಧ್ರ ಪ್ರದೇಶವು ಈ ಯೋಜನೆಯನ್ನು ಜಾರಿಗೊಳಿಸಿದ ಮುಂಚೂಣಿ ರಾಜ್ಯ ಎನಿಸಿಕೊಂಡಿದೆ. ಉತ್ತರ ಪ್ರದೇಶ (505 ಕೋಟಿ ರೂಪಾಯಿ) ಹಾಗೂ ಮಹಾರಾಷ್ಟ್ರ (ರೂ 316 ಕೋಟಿ ) ಕೂಡ ಯೋಜನೆಯ ಪ್ರಯೋಜನ ಪಡೆಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಕಾಲೇಜು ಹಂತದಲ್ಲಿ ಓದುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಆರಂಭಿಸಿರುವ ಶಿಷ್ಯವೇತನ ಯೋಜನೆ ವ್ಯಾಪ್ತಿಗೆ ಪ್ರಸಕ್ತ ಆರ್ಥಿಕ ವರ್ಷದ ಅಂತ್ಯದೊಳಗೆ ಇನ್ನೂ 48 ಲಕ್ಷ ಮಕ್ಕಳನ್ನು ಸೇರಿಸಲು ಸರ್ಕಾರ ಮುಂದಾಗಿದೆ.<br /> <br /> ಅಲ್ಲದೆ ಈ ಉದ್ದೇಶಕ್ಕಾಗಿ ಬಜೆಟ್ನಲ್ಲಿ 100 ಕೋಟಿ ರೂಪಾಯಿಗೂ ಅಧಿಕ ಮೊತ್ತ ನಿಗದಿಗೆ ನಿರ್ಧರಿಸಿದೆ.<br /> ಕಾಲೇಜು ಹಂತದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪೂರೈಸಲು ಆರ್ಥಿಕ ನೆರವು ನೀಡುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ಆರಂಭಿಸಿ, ಇದಕ್ಕಾಗಿ 2200 ಕೋಟಿ ರೂಪಾಯಿ ಮಂಜೂರು ಮಾಡಿತ್ತು. <br /> <br /> `ಕೆಲವು ರಾಜ್ಯಗಳು ಈ ಯೋಜನೆಯ ಬಗ್ಗೆ ಅಪಾರ ಆಸಕ್ತಿ ತೋರಿಸಿದ್ದು, ಈಗಾಗಲೇ ನಾವು 2303 ಕೋಟಿ ರೂಪಾಯಿ ಖರ್ಚು ಮಾಡಿದ್ದೇವೆ. ಈ ತಿಂಗಳ ಅಂತ್ಯದೊಳಗೆ ಹೆಚ್ಚಿನ ಹಣ ಹಂಚಲಾಗುತ್ತದೆ~ ಎಂದು ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಸಚಿವ ಮುಕುಲ್ ವಾಸ್ನಿಕ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.<br /> <br /> ಶೇ 15ರಷ್ಟು ಹಾಸ್ಟೆಲ್ ವಿದ್ಯಾರ್ಥಿಗಳು ಹಾಗೂ ಶೇ 37ರಷ್ಟು ಹೆಣ್ಣು ಮಕ್ಕಳು ಈ ಯೋಜನೆಯ ಪ್ರಯೋಜನ ಪಡೆಯುತ್ತಿದ್ದಾರೆ. 643 ಕೋಟಿ ರೂಪಾಯಿ ಗರಿಷ್ಠ ಅನುದಾನದೊಂದಿಗೆ ಆಂಧ್ರ ಪ್ರದೇಶವು ಈ ಯೋಜನೆಯನ್ನು ಜಾರಿಗೊಳಿಸಿದ ಮುಂಚೂಣಿ ರಾಜ್ಯ ಎನಿಸಿಕೊಂಡಿದೆ. ಉತ್ತರ ಪ್ರದೇಶ (505 ಕೋಟಿ ರೂಪಾಯಿ) ಹಾಗೂ ಮಹಾರಾಷ್ಟ್ರ (ರೂ 316 ಕೋಟಿ ) ಕೂಡ ಯೋಜನೆಯ ಪ್ರಯೋಜನ ಪಡೆಯುತ್ತಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>