<p><strong>ಮಹದೇವಪುರ: </strong> `ಇಂದಿನ ಐಟಿ ಉದ್ಯಮ ಯುವ ಪೀಳಿಗೆಯ ಮೇಲೆ ನಿಂತಿದೆ. ಅವರ ಸತತ ಪರಿಶ್ರಮ, ಪ್ರಯತ್ನದಿಂದಾಗಿ ಐಟಿ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಎತ್ತರಕ್ಕೆ ಬೆಳೆಯುತ್ತಿದೆ~ ಎಂದು ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಸ್.ಎಂ. ವೆಂಕಟಪತಿ ಅಭಿಪ್ರಾಯಪಟ್ಟರು.<br /> <br /> ಕ್ಷೇತ್ರದ ಬಿದರಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಈಸ್ಟ್ ಪಾಯಿಂಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.<br /> <br /> ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಇನ್ಫೋಸಿಸ್ ಕುರಿತಾದ ಎಲ್ಲ ಮಾಹಿತಿಗಳನ್ನು ಇಲ್ಲಿಂದಲೇ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.<br /> <br /> ಅಲ್ಲದೆ, ನೇರವಾಗಿ ಇನ್ಫೋಸಿಸ್ನೊಂದಿಗೆ ಇಲ್ಲಿಂದಲೇ ಸಂಪರ್ಕ ಹೊಂದಬಹುದು. ಹೀಗೆ ಹತ್ತಾರು ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಕಾಲೇಜು ಆವರಣದಿಂದಲೇ ಕಲ್ಪಿಸಿಕೊಡುವಂತಹ ಪ್ರಯತ್ನ ಇದಾಗಿದೆ ಎಂದು ಅವರು ತಿಳಿಸಿದರು.<br /> <br /> ಇನ್ಫೋಸಿಸ್ನ ರಿತೇಶ ಕುಂಬ್ಳೆ, ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ನಿರ್ದೇಶಕರಾದ ಬಿ.ಐ.ರಮಾದೇವಿ, ಎಸ್.ವಿ. ಪ್ರಮೋದ, ಎಸ್.ವಿ.ರಾಜೀವ, ಪ್ರಾಂಶುಪಾಲರಾದ ಡಾ.ಗಿರಿಧರರೆಡ್ಡಿ, ಡಾ.ಬಿ.ಎಂ.ಸತೀಶ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಹದೇವಪುರ: </strong> `ಇಂದಿನ ಐಟಿ ಉದ್ಯಮ ಯುವ ಪೀಳಿಗೆಯ ಮೇಲೆ ನಿಂತಿದೆ. ಅವರ ಸತತ ಪರಿಶ್ರಮ, ಪ್ರಯತ್ನದಿಂದಾಗಿ ಐಟಿ ಕ್ಷೇತ್ರದಲ್ಲಿ ಭಾರತ ಸಾಕಷ್ಟು ಎತ್ತರಕ್ಕೆ ಬೆಳೆಯುತ್ತಿದೆ~ ಎಂದು ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಎಸ್.ಎಂ. ವೆಂಕಟಪತಿ ಅಭಿಪ್ರಾಯಪಟ್ಟರು.<br /> <br /> ಕ್ಷೇತ್ರದ ಬಿದರಹಳ್ಳಿ ಗ್ರಾಮದ ಹೊರವಲಯದಲ್ಲಿರುವ ಈಸ್ಟ್ ಪಾಯಿಂಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಉದ್ಘಾಟಿಸಿದ ಬಳಿಕ ಅವರು ಮಾತನಾಡಿದರು.<br /> <br /> ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಇನ್ಫೋಸಿಸ್ ಕನೆಕ್ಟಿಂಗ್ ಪ್ರಯೋಗಾಲಯ ಸ್ಥಾಪಿಸಲಾಗಿದೆ. ಇನ್ಫೋಸಿಸ್ ಕುರಿತಾದ ಎಲ್ಲ ಮಾಹಿತಿಗಳನ್ನು ಇಲ್ಲಿಂದಲೇ ಪಡೆದುಕೊಳ್ಳಬಹುದು ಎಂದು ಅವರು ತಿಳಿಸಿದರು.<br /> <br /> ಅಲ್ಲದೆ, ನೇರವಾಗಿ ಇನ್ಫೋಸಿಸ್ನೊಂದಿಗೆ ಇಲ್ಲಿಂದಲೇ ಸಂಪರ್ಕ ಹೊಂದಬಹುದು. ಹೀಗೆ ಹತ್ತಾರು ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಕಾಲೇಜು ಆವರಣದಿಂದಲೇ ಕಲ್ಪಿಸಿಕೊಡುವಂತಹ ಪ್ರಯತ್ನ ಇದಾಗಿದೆ ಎಂದು ಅವರು ತಿಳಿಸಿದರು.<br /> <br /> ಇನ್ಫೋಸಿಸ್ನ ರಿತೇಶ ಕುಂಬ್ಳೆ, ಎಂ.ಜಿ. ಚಾರಿಟೇಬಲ್ ಟ್ರಸ್ಟ್ನ ನಿರ್ದೇಶಕರಾದ ಬಿ.ಐ.ರಮಾದೇವಿ, ಎಸ್.ವಿ. ಪ್ರಮೋದ, ಎಸ್.ವಿ.ರಾಜೀವ, ಪ್ರಾಂಶುಪಾಲರಾದ ಡಾ.ಗಿರಿಧರರೆಡ್ಡಿ, ಡಾ.ಬಿ.ಎಂ.ಸತೀಶ ಹಾಗೂ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಹಾಜರಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>