ಇಂಫಾಲ (ಪಿಟಿಐ): ಮಣಿಪುರದ ಉಖ್ರಲ್ ಜಿಲ್ಲೆಯಲ್ಲಿ ಗುರುವಾರ ಅರೆಸೇನಾ ಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಕನಿಷ್ಠ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ.
ಅಸ್ಸಾಂ ರೈಫಲ್ಸ್ ಸಿಬ್ಬಂದಿ ಛಸದ್ನಲ್ಲಿ ಗಸ್ತು ತಿರುಗುತ್ತಿದ್ದಾಗ ಉಗ್ರರು ಅವರ ಮೇಲೆ ಆಕ್ರಮಣ ಮಾಡಿದರು. ಆಗ ನಡೆದ ಗುಂಡಿನ ಕಾಳಗದಲ್ಲಿ ಅವರು ಮೃತಪಟ್ಟರು ಎಂದು ಮೂಲಗಳು ತಿಳಿಸಿವೆ.