<p>ಬೆಂಗಳೂರು: ಅಧಿಕೃತವಾಗಿ ಜಾಮೀನು ಸಿಗದಿದ್ದರೂ ಕುಖ್ಯಾತ ಕ್ರಿಮಿನಲ್ ಸೈಯದ್ ಮಸೂದ್ ಎಂಬಾತನನ್ನು ಬಿಡುಗಡೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಟಿ.ಎಚ್. ಲಕ್ಷ್ಮೀನಾರಾಯಣ ಮತ್ತು ಸಹಾಯಕ ಅಧೀಕ್ಷಕಿ ಡಾ. ಅನಿತಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.<br /> <br /> ಮಸೂದ್ ವಿರುದ್ಧ ದೇಶದ ವಿವಿಧೆಡೆ 65ಕ್ಕೂ ಹೆಚ್ಚು ಮೊಕದ್ದಮೆಗಳು ದಾಖಲಾಗಿವೆ. ಇಷ್ಟೂ ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದಾನೆ. ವಂಚನೆ, ವಿದೇಶಿ ವಿನಿಮಯಕ್ಕೆ ಸಂಬಂಧಿಸಿದ ಅಕ್ರಮಗಳಲ್ಲಿ ಈತ ಭಾಗಿಯಾಗಿದ್ದಾನೆ.<br /> <br /> ಡಿಸೆಂಬರ್ನಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಪುರದ ಜೈಲಿನಿಂದ ಈತನನ್ನು ನಗರಕ್ಕೆ ಕರೆತರಲಾಗಿತ್ತು. ಆ ಸಂದರ್ಭದಲ್ಲಿ ಕೋರ್ಟ್ ವಿಚಾರಣೆ ನಂತರ ಆತನನ್ನು ಪುನಃ ವಾಪಸ್ ಜೈಪುರಕ್ಕೆ ಕರೆದುಕೊಂಡು ಹೋಗಿ ಬಿಡಬೇಕಿತ್ತು. ಹಾಗೆ ಮಾಡದೆ ನಗರದ ಜೈಲಿನಲ್ಲೇ ಈ ಅಧಿಕಾರಿಗಳು ಇಟ್ಟುಕೊಂಡಿದ್ದರು. ಇದೇ ಸಂದರ್ಭದಲ್ಲಿ ಮುಂಬೈ ಮೂಲದ ವಕೀಲರೊಬ್ಬರು ಈತನಿಗೆ 35 ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ ಎಂದು ಜೈಲು ಅಧಿಕಾರಿಗಳಿಗೆ ಫ್ಯಾಕ್ಸ್ ಮೂಲಕ ಮಾಹಿತಿ ನೀಡಿದರು.<br /> <br /> ಫ್ಯಾಕ್ಸ್ ಪ್ರತಿ ಆಧಾರದ ಮೇಲೆಯೇ ಮಸೂದ್ನನ್ನು ಈ ಅಧಿಕಾರಿಗಳು ಜೈಲಿನಿಂದ ಬಿಡುಗಡೆ ಮಾಡಿದ್ದರು. ಬಳಿಕ ಆತ ವಿದೇಶಕ್ಕೆ ಹೋಗಿದ್ದಾನೆ. ಅದರ ನಂತರ ಜೈಪುರ ನ್ಯಾಯಾಲಯದಿಂದ ಆತನಿಗಾಗಿ ವಾರೆಂಟ್ ತಂದಿದ್ದು, ಆ ಸಂದರ್ಭದಲ್ಲಿ ಪರಿಶೀಲಿಸಿದಾಗ ಆತನಿಗೆ ಜಾಮೀನು ಮಂಜೂರಾಗಿರಲಿಲ್ಲ ಎಂಬುದು ಗೊತ್ತಾಗಿದೆ.<br /> <br /> ಈ ವಿಷಯ ಗೊತ್ತಾದ ತಕ್ಷಣವೇ ವಿಚಾರಣೆ ಸಲುವಾಗಿ ಡಿಐಜಿ (ಕಾರಾಗೃಹ) ಎಸ್.ರವಿ ಅವರನ್ನು ನೇಮಿಸಲಾಗಿತ್ತು. ಅವರು ಕೊಟ್ಟ ವರದಿಯಲ್ಲಿ ಈ ಇಬ್ಬರೂ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಬಂದಿಖಾನೆ ಸಚಿವ ಎ.ನಾರಾಯಣಸ್ವಾಮಿ ಅವರು ಅಧಿಕಾರಿಗಳ ಅಮಾನತಿಗೆ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಅಧಿಕೃತವಾಗಿ ಜಾಮೀನು ಸಿಗದಿದ್ದರೂ ಕುಖ್ಯಾತ ಕ್ರಿಮಿನಲ್ ಸೈಯದ್ ಮಸೂದ್ ಎಂಬಾತನನ್ನು ಬಿಡುಗಡೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧೀಕ್ಷಕ ಟಿ.ಎಚ್. ಲಕ್ಷ್ಮೀನಾರಾಯಣ ಮತ್ತು ಸಹಾಯಕ ಅಧೀಕ್ಷಕಿ ಡಾ. ಅನಿತಾ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.<br /> <br /> ಮಸೂದ್ ವಿರುದ್ಧ ದೇಶದ ವಿವಿಧೆಡೆ 65ಕ್ಕೂ ಹೆಚ್ಚು ಮೊಕದ್ದಮೆಗಳು ದಾಖಲಾಗಿವೆ. ಇಷ್ಟೂ ಪ್ರಕರಣಗಳಲ್ಲಿ ಈತ ಪೊಲೀಸರಿಗೆ ಬೇಕಾಗಿದ್ದಾನೆ. ವಂಚನೆ, ವಿದೇಶಿ ವಿನಿಮಯಕ್ಕೆ ಸಂಬಂಧಿಸಿದ ಅಕ್ರಮಗಳಲ್ಲಿ ಈತ ಭಾಗಿಯಾಗಿದ್ದಾನೆ.<br /> <br /> ಡಿಸೆಂಬರ್ನಲ್ಲಿ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜೈಪುರದ ಜೈಲಿನಿಂದ ಈತನನ್ನು ನಗರಕ್ಕೆ ಕರೆತರಲಾಗಿತ್ತು. ಆ ಸಂದರ್ಭದಲ್ಲಿ ಕೋರ್ಟ್ ವಿಚಾರಣೆ ನಂತರ ಆತನನ್ನು ಪುನಃ ವಾಪಸ್ ಜೈಪುರಕ್ಕೆ ಕರೆದುಕೊಂಡು ಹೋಗಿ ಬಿಡಬೇಕಿತ್ತು. ಹಾಗೆ ಮಾಡದೆ ನಗರದ ಜೈಲಿನಲ್ಲೇ ಈ ಅಧಿಕಾರಿಗಳು ಇಟ್ಟುಕೊಂಡಿದ್ದರು. ಇದೇ ಸಂದರ್ಭದಲ್ಲಿ ಮುಂಬೈ ಮೂಲದ ವಕೀಲರೊಬ್ಬರು ಈತನಿಗೆ 35 ಪ್ರಕರಣಗಳಲ್ಲಿ ಜಾಮೀನು ಸಿಕ್ಕಿದೆ ಎಂದು ಜೈಲು ಅಧಿಕಾರಿಗಳಿಗೆ ಫ್ಯಾಕ್ಸ್ ಮೂಲಕ ಮಾಹಿತಿ ನೀಡಿದರು.<br /> <br /> ಫ್ಯಾಕ್ಸ್ ಪ್ರತಿ ಆಧಾರದ ಮೇಲೆಯೇ ಮಸೂದ್ನನ್ನು ಈ ಅಧಿಕಾರಿಗಳು ಜೈಲಿನಿಂದ ಬಿಡುಗಡೆ ಮಾಡಿದ್ದರು. ಬಳಿಕ ಆತ ವಿದೇಶಕ್ಕೆ ಹೋಗಿದ್ದಾನೆ. ಅದರ ನಂತರ ಜೈಪುರ ನ್ಯಾಯಾಲಯದಿಂದ ಆತನಿಗಾಗಿ ವಾರೆಂಟ್ ತಂದಿದ್ದು, ಆ ಸಂದರ್ಭದಲ್ಲಿ ಪರಿಶೀಲಿಸಿದಾಗ ಆತನಿಗೆ ಜಾಮೀನು ಮಂಜೂರಾಗಿರಲಿಲ್ಲ ಎಂಬುದು ಗೊತ್ತಾಗಿದೆ.<br /> <br /> ಈ ವಿಷಯ ಗೊತ್ತಾದ ತಕ್ಷಣವೇ ವಿಚಾರಣೆ ಸಲುವಾಗಿ ಡಿಐಜಿ (ಕಾರಾಗೃಹ) ಎಸ್.ರವಿ ಅವರನ್ನು ನೇಮಿಸಲಾಗಿತ್ತು. ಅವರು ಕೊಟ್ಟ ವರದಿಯಲ್ಲಿ ಈ ಇಬ್ಬರೂ ಅಧಿಕಾರಿಗಳು ಕರ್ತವ್ಯ ಲೋಪ ಎಸಗಿರುವುದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಬಂದಿಖಾನೆ ಸಚಿವ ಎ.ನಾರಾಯಣಸ್ವಾಮಿ ಅವರು ಅಧಿಕಾರಿಗಳ ಅಮಾನತಿಗೆ ಆದೇಶ ಹೊರಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>