<p>ಮಂಡ್ಯ: ದೇಶದ ಅಭಿವೃದ್ಧಿಯನ್ನು ಹಳ್ಳಿಗಳ ಸ್ಥಿತಿ ನೋಡಿ ಗುರುತಿಸಬೇಕೇ ವಿನಾ ಕೆಲವೇ ಕಾರ್ಪೋರೇಟ್ ಸಂಸ್ಥೆಗಳ ಸ್ಥಿತಿಗತಿ ನೋಡಿ ಅಲ್ಲ ಎಂದು ನಾಟಕಕಾರ, ಕವಿ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.<br /> <br /> ನಗರದ ರೈತ ಸಭಾಂಗಣದಲ್ಲಿ ಶನಿವಾರ ಜನದನಿ ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರಿಗೆ `ದೇವಮ್ಮ ಮತ್ತು ಇಂಡುವಾಳು ಎಚ್.ಹೊನ್ನಯ್ಯ ಸ್ಮಾರಕ ಸಮಾಜ ಸೇವಾ ಪ್ರಶಸ್ತಿ~ ಪ್ರದಾನ ಮಾಡಿ ಮಾತನಾಡಿದರು.<br /> <br /> ಮುಂದಿನ ಕೆಲವು ವರ್ಷಗಳಲ್ಲಿ ಭಾರತ, ಚೀನಾ ಅಭಿವೃದ್ಧಿ ರಾಷ್ಟ್ರಗಳು ಆಗುತ್ತವೆ ಎಂದು ಕೆಲವರು ಹೇಳುತ್ತಾರೆ. ಅದು ಸುಳ್ಳು. ಕೆಲವೇ ಮಂದಿ ಶ್ರೀಮಂತರಾದರೆ ದೇಶ ಅಭಿವೃದ್ಧಿ ಆದಂತಲ್ಲ ಎಂದು ಪ್ರತಿಪಾದಿಸಿದರು.<br /> <br /> ಕಾರ್ಪೋರೇಟ್ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿ ದೇಶದ ಅಭಿವೃದ್ಧಿಯನ್ನು ಅಳೆಯುವ ಸಾಧನ ಅಲ್ಲ . ದೇಶದಲ್ಲಿ 7 ಲಕ್ಷ ಹಳ್ಳಿಗಳಿವೆ. ಇಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ ಸುಧಾರಿಸಬೇು. ಅವರು ಅಭಿವೃದ್ಧಿ ಆಗಬೇಕು ಎಂದರು. ಆಗ ಮಾತ್ರವೇ ದೇಶ ಅಭಿವೃದ್ಧಿಯತ್ತ ಕಾಗಲು ಸಾಧ್ಯ ಎಂದರು.<br /> <br /> ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಎಚ್.ಹೊನ್ನಪ್ಪ, ಪ್ರಾಧ್ಯಾಪಕ ಮ.ರಾಮಕೃಷ್ಣ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಂಡ್ಯ: ದೇಶದ ಅಭಿವೃದ್ಧಿಯನ್ನು ಹಳ್ಳಿಗಳ ಸ್ಥಿತಿ ನೋಡಿ ಗುರುತಿಸಬೇಕೇ ವಿನಾ ಕೆಲವೇ ಕಾರ್ಪೋರೇಟ್ ಸಂಸ್ಥೆಗಳ ಸ್ಥಿತಿಗತಿ ನೋಡಿ ಅಲ್ಲ ಎಂದು ನಾಟಕಕಾರ, ಕವಿ ಚಂದ್ರಶೇಖರ ಕಂಬಾರ ಅಭಿಪ್ರಾಯಪಟ್ಟರು.<br /> <br /> ನಗರದ ರೈತ ಸಭಾಂಗಣದಲ್ಲಿ ಶನಿವಾರ ಜನದನಿ ಸಾಂಸ್ಕೃತಿಕ ಟ್ರಸ್ಟ್ ಆಯೋಜಿಸಿದ್ದ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರಿಗೆ `ದೇವಮ್ಮ ಮತ್ತು ಇಂಡುವಾಳು ಎಚ್.ಹೊನ್ನಯ್ಯ ಸ್ಮಾರಕ ಸಮಾಜ ಸೇವಾ ಪ್ರಶಸ್ತಿ~ ಪ್ರದಾನ ಮಾಡಿ ಮಾತನಾಡಿದರು.<br /> <br /> ಮುಂದಿನ ಕೆಲವು ವರ್ಷಗಳಲ್ಲಿ ಭಾರತ, ಚೀನಾ ಅಭಿವೃದ್ಧಿ ರಾಷ್ಟ್ರಗಳು ಆಗುತ್ತವೆ ಎಂದು ಕೆಲವರು ಹೇಳುತ್ತಾರೆ. ಅದು ಸುಳ್ಳು. ಕೆಲವೇ ಮಂದಿ ಶ್ರೀಮಂತರಾದರೆ ದೇಶ ಅಭಿವೃದ್ಧಿ ಆದಂತಲ್ಲ ಎಂದು ಪ್ರತಿಪಾದಿಸಿದರು.<br /> <br /> ಕಾರ್ಪೋರೇಟ್ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿ ದೇಶದ ಅಭಿವೃದ್ಧಿಯನ್ನು ಅಳೆಯುವ ಸಾಧನ ಅಲ್ಲ . ದೇಶದಲ್ಲಿ 7 ಲಕ್ಷ ಹಳ್ಳಿಗಳಿವೆ. ಇಲ್ಲಿ ವಾಸಿಸುತ್ತಿರುವ ಜನರ ಜೀವನಮಟ್ಟ ಸುಧಾರಿಸಬೇು. ಅವರು ಅಭಿವೃದ್ಧಿ ಆಗಬೇಕು ಎಂದರು. ಆಗ ಮಾತ್ರವೇ ದೇಶ ಅಭಿವೃದ್ಧಿಯತ್ತ ಕಾಗಲು ಸಾಧ್ಯ ಎಂದರು.<br /> <br /> ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್ಗೌಡ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಎಚ್.ಹೊನ್ನಪ್ಪ, ಪ್ರಾಧ್ಯಾಪಕ ಮ.ರಾಮಕೃಷ್ಣ ಇದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>