<p><strong>ಬೆಂಗಳೂರು: </strong>ನಗರದ ಹಲಸೂರು ಮತ್ತು ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲಸೂರು ಸಮೀಪದ ಮುನಿಯಪ್ಪ ಕಾಂಪೌಂಡ್ ಬಡಾವಣೆಯಲ್ಲಿ ಶನಿವಾರ ಸಂಜೆ ನಡೆದಿದೆ.<br /> <br /> ತರಕಾರಿ ವ್ಯಾಪಾರಿ ನಾರಾಯಣ ಎಂಬುವರ ಪುತ್ರ ಕಾರ್ತಿಕ್ (21) ಆತ್ಮಹತ್ಯೆ ಮಾಡಿಕೊಂಡವರು. ಅವರು ಇಂದಿರಾನಗರದ ಜೈನ್ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಕಾರ್ತಿಕ್ ಮನೆಯ ಸಮೀಪವೇ ಸಂಜೆ ಐದು ಗಂಟೆ ಸುಮಾರಿಗೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬ ಸದಸ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಹಲಸೂರು ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> <strong>ಸಾಲ ಬಾಧೆ ಪ್ರಕರಣ <br /> </strong>ಹೆಬ್ಬಾಳ ಸಮೀಪದ ಸನ್ರೈಸ್ ಕಾಲೊನಿ ನಿವಾಸಿ ಕನ್ಯಾಕುಮಾರಿ (33) ಎಂಬುವರು ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. <br /> <br /> ಸ್ತ್ರೀಶಕ್ತಿ ಸಂಘದ ಸದಸ್ಯರಾಗಿದ್ದ ಕನ್ಯಾಕುಮಾರಿ, ಪತಿ ನಂದಕುಮಾರ್ ಅವರಿಗೆ ತಿಳಿಯದಂತೆ ಸಂಘದಿಂದ ಸಾಕಷ್ಟು ಸಾಲ ತೆಗೆದುಕೊಂಡಿದ್ದರು. <br /> <br /> ದಂಪತಿಗೆ ಇಬ್ಬರು ಮಕ್ಕಳಿದ್ದು, ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ. ಮಕ್ಕಳು ರಾತ್ರಿ ಎರಡು ಗಂಟೆ ಸುಮಾರಿಗೆ ಎಚ್ಚರಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> `ಸಾಲ ಮಾಡಿರುವುದು ಪತಿಗೆ ಗೊತ್ತಿರಲಿಲ್ಲ. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ಪತಿಯ ಬಳಿ ಸಾಲದ ಹಣ ಕೇಳಬೇಡಿ~ ಎಂದು ಕನ್ಯಾಕುಮಾರಿ ಪತ್ರ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ನಗರದ ಹಲಸೂರು ಮತ್ತು ಹೆಬ್ಬಾಳ ಠಾಣೆ ವ್ಯಾಪ್ತಿಯಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಪ್ರತ್ಯೇಕ ಪ್ರಕರಣಗಳಲ್ಲಿ ವಿದ್ಯಾರ್ಥಿ ಸೇರಿದಂತೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> <br /> ವಿದ್ಯಾರ್ಥಿಯೊಬ್ಬ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಲಸೂರು ಸಮೀಪದ ಮುನಿಯಪ್ಪ ಕಾಂಪೌಂಡ್ ಬಡಾವಣೆಯಲ್ಲಿ ಶನಿವಾರ ಸಂಜೆ ನಡೆದಿದೆ.<br /> <br /> ತರಕಾರಿ ವ್ಯಾಪಾರಿ ನಾರಾಯಣ ಎಂಬುವರ ಪುತ್ರ ಕಾರ್ತಿಕ್ (21) ಆತ್ಮಹತ್ಯೆ ಮಾಡಿಕೊಂಡವರು. ಅವರು ಇಂದಿರಾನಗರದ ಜೈನ್ ಕಾಲೇಜಿನಲ್ಲಿ ಬಿ.ಕಾಂ ಓದುತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.<br /> <br /> ಕಾರ್ತಿಕ್ ಮನೆಯ ಸಮೀಪವೇ ಸಂಜೆ ಐದು ಗಂಟೆ ಸುಮಾರಿಗೆ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದರು. ಅಸ್ವಸ್ಥಗೊಂಡಿದ್ದ ಅವರನ್ನು ಕುಟುಂಬ ಸದಸ್ಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು. ಆದರೆ, ಅವರು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಹಲಸೂರು ಠಾಣೆಯಲ್ಲಿ ದೂರು ದಾಖಲಾಗಿದೆ.<br /> <br /> <strong>ಸಾಲ ಬಾಧೆ ಪ್ರಕರಣ <br /> </strong>ಹೆಬ್ಬಾಳ ಸಮೀಪದ ಸನ್ರೈಸ್ ಕಾಲೊನಿ ನಿವಾಸಿ ಕನ್ಯಾಕುಮಾರಿ (33) ಎಂಬುವರು ಸಾಲ ಬಾಧೆಯಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. <br /> <br /> ಸ್ತ್ರೀಶಕ್ತಿ ಸಂಘದ ಸದಸ್ಯರಾಗಿದ್ದ ಕನ್ಯಾಕುಮಾರಿ, ಪತಿ ನಂದಕುಮಾರ್ ಅವರಿಗೆ ತಿಳಿಯದಂತೆ ಸಂಘದಿಂದ ಸಾಕಷ್ಟು ಸಾಲ ತೆಗೆದುಕೊಂಡಿದ್ದರು. <br /> <br /> ದಂಪತಿಗೆ ಇಬ್ಬರು ಮಕ್ಕಳಿದ್ದು, ಮನೆಯಲ್ಲಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಅವರು ನೇಣು ಹಾಕಿಕೊಂಡಿದ್ದಾರೆ. ಮಕ್ಕಳು ರಾತ್ರಿ ಎರಡು ಗಂಟೆ ಸುಮಾರಿಗೆ ಎಚ್ಚರಗೊಂಡಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ.<br /> <br /> `ಸಾಲ ಮಾಡಿರುವುದು ಪತಿಗೆ ಗೊತ್ತಿರಲಿಲ್ಲ. ಸಾಲ ತೀರಿಸಲಾಗದೆ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ಯಾರೂ ಕಾರಣರಲ್ಲ. ಪತಿಯ ಬಳಿ ಸಾಲದ ಹಣ ಕೇಳಬೇಡಿ~ ಎಂದು ಕನ್ಯಾಕುಮಾರಿ ಪತ್ರ ಬರೆದಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಹೆಬ್ಬಾಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>