<p><strong>ಇಂಫಾಲ (ಪಿಟಿಐ):</strong> ಮಣಿಪುರದಲ್ಲಿ ಜಾರಿಯಲ್ಲಿರುವ ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹಕ್ಕೆ ಇರೋಮ್ ಶರ್ಮಿಳಾ ಮಂಗಳವಾರ ಅಂತ್ಯ ಹಾಡಲಿದ್ದಾರೆ.<br /> <br /> ಮಣಿಪುರದ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿರುವ ಶರ್ಮಿಳಾ ಅವರಿಗೆ 2000 ಇಸವಿಯಿಂದ ದ್ರವರೂಪದ ಆಹಾರವನ್ನು ಮೂಗಿನ ಮೂಲಕ ಅಳವಡಿಸಲಾಗಿರುವ ನಳಿಕೆಯಿಂದ ನೀಡಲಾಗುತ್ತಿದೆ. <br /> <br /> ‘ಶರ್ಮಿಳಾ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು. ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುವ ಘೋಷಣೆ ಮಾಡಿದ ನಂತರ ನ್ಯಾಯಾಂಗ ಬಂಧನದಿಂದ ಅವರು ಬಿಡುಗಡೆಯಾಗಲಿದ್ದಾರೆ’ ಎಂದು ಶರ್ಮಿಳಾ ಸಹೋದರ ಇರೋಮ್ ಸಿಂಗ್ಜಿತ್ ಹೇಳಿದ್ದಾರೆ.<br /> <br /> ‘ಶರ್ಮಿಳಾ ಕುಂಭ ಲೂಪ್’ ವೇದಿಕೆಯಡಿ ಅವರ ಬೆಂಬಲಿಗರು ಮತ್ತು ಹೋರಾಟಗಾರರು ಒಂದಾಗಿ ಶರ್ಮಿಳಾ ಅವರ ಹೊಸ ಪಯಣಕ್ಕೆ ಸಾಥ್ ನೀಡಲಿದ್ದಾರೆ. ‘ನ್ಯಾಯಾಂಗ ಬಂಧನದಿಂದ ಬಿಡುಗಡೆಯಾದ ನಂತರ ಅವರು (ಶರ್ಮಿಳಾ) ಎಲ್ಲಿ ಹೋಗುತ್ತಾರೆ ಎಂಬುದು ಗೊತ್ತಿಲ್ಲ. ಮನೆಗೆ ಬಂದು ಕುಟುಂಬದವರೊಂದಿಗೆ ಇರಲು ಬಯಸಿದಲ್ಲಿ ಸ್ವಾಗತಕ್ಕೆ ನಾವು ಸಿದ್ಧ’ ಎಂದು ಸಿಂಗ್ಜಿತ್ ತಿಳಿಸಿದ್ದಾರೆ.<br /> <br /> ಈಶಾನ್ಯ ರಾಜ್ಯಗಳು ಮತ್ತು ಕಾಶ್ಮೀರದಲ್ಲಿ ಸೇನಾ ಯೋಧರು ನಡೆಸುತ್ತಿದ್ದ ದಬ್ಬಾಳಿಕೆ ಮತ್ತು ದೌರ್ಜನ್ಯವನ್ನು ಖಂಡಿಸಿ ಇರೋಮ್ ಶರ್ಮಿಳಾ 2000ನೇ ವರ್ಷದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಇಂಫಾಲ (ಪಿಟಿಐ):</strong> ಮಣಿಪುರದಲ್ಲಿ ಜಾರಿಯಲ್ಲಿರುವ ಸಶಸ್ತ್ರಪಡೆ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್ಪಿಎ) ರದ್ದುಮಾಡಬೇಕೆಂದು ಆಗ್ರಹಿಸಿ 16 ವರ್ಷಗಳಿಂದ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹಕ್ಕೆ ಇರೋಮ್ ಶರ್ಮಿಳಾ ಮಂಗಳವಾರ ಅಂತ್ಯ ಹಾಡಲಿದ್ದಾರೆ.<br /> <br /> ಮಣಿಪುರದ ಉಕ್ಕಿನ ಮಹಿಳೆ ಎಂದೇ ಖ್ಯಾತರಾಗಿರುವ ಶರ್ಮಿಳಾ ಅವರಿಗೆ 2000 ಇಸವಿಯಿಂದ ದ್ರವರೂಪದ ಆಹಾರವನ್ನು ಮೂಗಿನ ಮೂಲಕ ಅಳವಡಿಸಲಾಗಿರುವ ನಳಿಕೆಯಿಂದ ನೀಡಲಾಗುತ್ತಿದೆ. <br /> <br /> ‘ಶರ್ಮಿಳಾ ಅವರನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು. ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸುವ ಘೋಷಣೆ ಮಾಡಿದ ನಂತರ ನ್ಯಾಯಾಂಗ ಬಂಧನದಿಂದ ಅವರು ಬಿಡುಗಡೆಯಾಗಲಿದ್ದಾರೆ’ ಎಂದು ಶರ್ಮಿಳಾ ಸಹೋದರ ಇರೋಮ್ ಸಿಂಗ್ಜಿತ್ ಹೇಳಿದ್ದಾರೆ.<br /> <br /> ‘ಶರ್ಮಿಳಾ ಕುಂಭ ಲೂಪ್’ ವೇದಿಕೆಯಡಿ ಅವರ ಬೆಂಬಲಿಗರು ಮತ್ತು ಹೋರಾಟಗಾರರು ಒಂದಾಗಿ ಶರ್ಮಿಳಾ ಅವರ ಹೊಸ ಪಯಣಕ್ಕೆ ಸಾಥ್ ನೀಡಲಿದ್ದಾರೆ. ‘ನ್ಯಾಯಾಂಗ ಬಂಧನದಿಂದ ಬಿಡುಗಡೆಯಾದ ನಂತರ ಅವರು (ಶರ್ಮಿಳಾ) ಎಲ್ಲಿ ಹೋಗುತ್ತಾರೆ ಎಂಬುದು ಗೊತ್ತಿಲ್ಲ. ಮನೆಗೆ ಬಂದು ಕುಟುಂಬದವರೊಂದಿಗೆ ಇರಲು ಬಯಸಿದಲ್ಲಿ ಸ್ವಾಗತಕ್ಕೆ ನಾವು ಸಿದ್ಧ’ ಎಂದು ಸಿಂಗ್ಜಿತ್ ತಿಳಿಸಿದ್ದಾರೆ.<br /> <br /> ಈಶಾನ್ಯ ರಾಜ್ಯಗಳು ಮತ್ತು ಕಾಶ್ಮೀರದಲ್ಲಿ ಸೇನಾ ಯೋಧರು ನಡೆಸುತ್ತಿದ್ದ ದಬ್ಬಾಳಿಕೆ ಮತ್ತು ದೌರ್ಜನ್ಯವನ್ನು ಖಂಡಿಸಿ ಇರೋಮ್ ಶರ್ಮಿಳಾ 2000ನೇ ವರ್ಷದಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>