<p><strong>ಜಮ್ಮು (ಐಎಎನ್ಎಸ್): </strong> ದೆಹಲಿ ಹೈಕೋರ್ಟ್ನಲ್ಲಿ ಬುಧವಾರ ನಡೆದ ಸ್ಫೋಟದ ಹೊಣೆ ಹೊತ್ತ ಇ-ಮೇಲ್ ಕಳುಹಿಸಿದ ವ್ಯಕ್ತಿಯನ್ನು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.<br /> <br /> ಈ ಸ್ಫೋಟವನ್ನು ಹುಜಿ ಸಂಘಟನೆಯು ನಡೆಸಿದೆ ಎಂಬ ಮಾಹಿತಿ ಆ ಇ-ಮೇಲ್ನಲ್ಲಿತ್ತು.<br /> ಬಂಧಿತ ವ್ಯಕ್ತಿಯನ್ನು ಮಹಮದ್ ಸಯೀದ್ ಎಂದು ಗುರುತಿಸಲಾಗಿದೆ. ಪೊಲೀಸರು ಆತನ ವಿಚಾರಣೆಯನ್ನು ನಡೆಸುತ್ತಿದ್ದಾರೆ.<br /> <br /> ಕಿಶ್ತ್ವಾರ್ ಪಟ್ಟಣದಲ್ಲಿರುವ ಗ್ಲೋಬಲ್ ಇಂಟರ್ನೆಟ್ ಕೆಫೆಯಿಂದ ಇ-ಮೇಲ್ ಕಳುಹಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.</p>.<p>`ಇ-ಮೇಲ್ ಕಳುಹಿಸಲು ಆತನಿಗೆ ಪ್ರೇರಣೆ ನೀಡಿದ ಅಂಶಗಳ ಮತ್ತು ಯಾರು ಆತನಿಂದ ಈ ಕೆಲಸ ಮಾಡಿಸಿದರು ಎಂಬ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ~ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ದೆಹಲಿಯಲ್ಲಿ ಸ್ಫೋಟ ನಡೆದ ಕೆಲವು ಗಂಟೆಗಳಲ್ಲಿ ಬಂದ ಈ ಇ-ಮೇಲ್ಗೆ ಸಂಬಂಧಿಸಿದಂತೆ ಸೈಬರ್ ಕೆಫೆಯ ಇಬ್ಬರು ಮಾಲೀಕರು ಸೇರಿದಂತೆ ಒಟ್ಟು ಐವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿತ್ತು.<br /> <br /> ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳು ತನಿಖೆ ನಡೆಸಲು ಶುಕ್ರವಾರ ಕಿಶ್ತ್ವಾರ್ ಪಟ್ಟಣಕ್ಕೆ ಆಗಮಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಮ್ಮು (ಐಎಎನ್ಎಸ್): </strong> ದೆಹಲಿ ಹೈಕೋರ್ಟ್ನಲ್ಲಿ ಬುಧವಾರ ನಡೆದ ಸ್ಫೋಟದ ಹೊಣೆ ಹೊತ್ತ ಇ-ಮೇಲ್ ಕಳುಹಿಸಿದ ವ್ಯಕ್ತಿಯನ್ನು ಶುಕ್ರವಾರ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.<br /> <br /> ಈ ಸ್ಫೋಟವನ್ನು ಹುಜಿ ಸಂಘಟನೆಯು ನಡೆಸಿದೆ ಎಂಬ ಮಾಹಿತಿ ಆ ಇ-ಮೇಲ್ನಲ್ಲಿತ್ತು.<br /> ಬಂಧಿತ ವ್ಯಕ್ತಿಯನ್ನು ಮಹಮದ್ ಸಯೀದ್ ಎಂದು ಗುರುತಿಸಲಾಗಿದೆ. ಪೊಲೀಸರು ಆತನ ವಿಚಾರಣೆಯನ್ನು ನಡೆಸುತ್ತಿದ್ದಾರೆ.<br /> <br /> ಕಿಶ್ತ್ವಾರ್ ಪಟ್ಟಣದಲ್ಲಿರುವ ಗ್ಲೋಬಲ್ ಇಂಟರ್ನೆಟ್ ಕೆಫೆಯಿಂದ ಇ-ಮೇಲ್ ಕಳುಹಿಸಿರುವುದಾಗಿ ಆತ ಒಪ್ಪಿಕೊಂಡಿದ್ದಾನೆ.</p>.<p>`ಇ-ಮೇಲ್ ಕಳುಹಿಸಲು ಆತನಿಗೆ ಪ್ರೇರಣೆ ನೀಡಿದ ಅಂಶಗಳ ಮತ್ತು ಯಾರು ಆತನಿಂದ ಈ ಕೆಲಸ ಮಾಡಿಸಿದರು ಎಂಬ ಬಗ್ಗೆ ನಾವು ತನಿಖೆ ನಡೆಸುತ್ತಿದ್ದೇವೆ~ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.<br /> <br /> ದೆಹಲಿಯಲ್ಲಿ ಸ್ಫೋಟ ನಡೆದ ಕೆಲವು ಗಂಟೆಗಳಲ್ಲಿ ಬಂದ ಈ ಇ-ಮೇಲ್ಗೆ ಸಂಬಂಧಿಸಿದಂತೆ ಸೈಬರ್ ಕೆಫೆಯ ಇಬ್ಬರು ಮಾಲೀಕರು ಸೇರಿದಂತೆ ಒಟ್ಟು ಐವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗುರುವಾರ ವಶಕ್ಕೆ ತೆಗೆದುಕೊಳ್ಳಲಾಗಿತ್ತು.<br /> <br /> ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳು ತನಿಖೆ ನಡೆಸಲು ಶುಕ್ರವಾರ ಕಿಶ್ತ್ವಾರ್ ಪಟ್ಟಣಕ್ಕೆ ಆಗಮಿಸಿದ್ದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>