<p><strong>ಬೆಂಗಳೂರು: </strong>`ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 115 ರ ಈಡಬ್ಲ್ಯುಎಸ್ ಸಮುಚ್ಚಯದ ಭೂಮಿಯನ್ನು ಖಾಸಗಿ ಕಂಪೆನಿಯಿಂದ ರಕ್ಷಿಸಬೇಕು~ ಎಂದು ದಲಿತ ಮತ್ತು ಅಲ್ಪಸಂಖ್ಯಾತರ ಭೂಮಿ ರಕ್ಷಣಾ ಒಕ್ಕೂಟವು ಒತ್ತಾಯಿಸಿತು.<br /> <br /> ಸಮತಾ ಸೈನಿಕ ದಳದ ರಾಜ್ಯ ಅಧ್ಯಕ್ಷ ಎಂ.ವೆಂಕಟಸ್ವಾಮಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಆ ಸ್ಥಳದಲ್ಲಿ 3000 ಮನೆಗಳನ್ನು ನಿರ್ಮಸಲು ಅವಕಾಶವಿದೆ. ಆದರೆ, ಅಲ್ಲಿ ಬರೀ 1640 ಮನೆಗಳನ್ನು ನಿರ್ಮಿಸಿ ಮೂಲ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಖಾಸಗಿ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದಕ್ಕೆ ಪ್ರತಿಯಾಗಿ 8 ಎಕರೆ ಭೂಮಿ ಬಿಟ್ಟು ಕೊಡಲು ತೀರ್ಮಾನಿಸಲಾಗಿದೆ~ ಎಂದು ಆರೋಪಿಸಿದರು.<br /> <br /> `ಈಡಬ್ಲ್ಯುಎಸ್ ಭೂಮಿಯನ್ನು ಕಬಳಿಸಲು ಖಾಸಗಿ ಕಂಪೆನಿಯೊಂದಿಗೆ ಮಾಡಿಕೊಂಡಿರುವ ಜನ ವಿರೋಧಿ ಒಪ್ಪಂದವನ್ನು ಈ ಕೂಡಲೇ ರದ್ದುಗೊಳಿಸಬೇಕು. ಅದೇ ಭೂಮಿಯನ್ನು ನಂಬಿಕೊಂಡಿರುವ ಅಲ್ಲಿ ವಾಸವಿರುವ ವಸತಿಹೀನರಿಗೆ ಅದೇ ಜಾಗದಲ್ಲಿ ಮನೆಗಳನ್ನು ನಿರ್ಮಿಸಿ ಕೊಡಬೇಕು~ ಎಂದು ಒತ್ತಾಯಿಸಿದರು.<br /> <br /> `ದಲಿತರ ಮತ್ತು ಅಲ್ಪಸಂಖ್ಯಾತರ ಭೂಮಿ ರಕ್ಷಣೆಗಾಗಿ ಏ.7 ರಂದು ಬೆಂಗಳೂರು ಮಹಾನಗರ ಪಾಲಿಕೆ ಎದುರು ಧರಣಿ ಕೈಗೊಳ್ಳಲಾಗುವುದು. ಅದರ ನಂತರ ಒಂದು ವಾರ ಕಾಲಾವಧಿಯನ್ನು ನೀಡಲಾಗುವುದು. ಇದಕ್ಕೆ ಸರಿಯಾದ ಸ್ಪಂದನೆ ದೊರೆಯದಿದ್ದರೆ, ಏ.16 ರಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಿರಂತರ ಧರಣಿ ನಡೆಸಲಾಗುವುದು~ ಎಂದು ಎಚ್ಚರಿಸಿದರು.<br /> <br /> ಒಕ್ಕೂಟದ ಅಧ್ಯಕ್ಷ ರಾಜೇಂದ್ರನ್ ಪ್ರಭಾಕರ್, ಸ್ವಾಭಿಮಾನಿ ಬಹುಜನರ ವೇದಿಕೆಯ ಎಸ್.ಎಂ.ಮಾರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>`ಬೆಂಗಳೂರು ಮಹಾನಗರ ಪಾಲಿಕೆಯ ವಾರ್ಡ್ ಸಂಖ್ಯೆ 115 ರ ಈಡಬ್ಲ್ಯುಎಸ್ ಸಮುಚ್ಚಯದ ಭೂಮಿಯನ್ನು ಖಾಸಗಿ ಕಂಪೆನಿಯಿಂದ ರಕ್ಷಿಸಬೇಕು~ ಎಂದು ದಲಿತ ಮತ್ತು ಅಲ್ಪಸಂಖ್ಯಾತರ ಭೂಮಿ ರಕ್ಷಣಾ ಒಕ್ಕೂಟವು ಒತ್ತಾಯಿಸಿತು.<br /> <br /> ಸಮತಾ ಸೈನಿಕ ದಳದ ರಾಜ್ಯ ಅಧ್ಯಕ್ಷ ಎಂ.ವೆಂಕಟಸ್ವಾಮಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಆ ಸ್ಥಳದಲ್ಲಿ 3000 ಮನೆಗಳನ್ನು ನಿರ್ಮಸಲು ಅವಕಾಶವಿದೆ. ಆದರೆ, ಅಲ್ಲಿ ಬರೀ 1640 ಮನೆಗಳನ್ನು ನಿರ್ಮಿಸಿ ಮೂಲ ಫಲಾನುಭವಿಗಳಿಗೆ ಹಂಚಿಕೆ ಮಾಡಲು ಖಾಸಗಿ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಇದಕ್ಕೆ ಪ್ರತಿಯಾಗಿ 8 ಎಕರೆ ಭೂಮಿ ಬಿಟ್ಟು ಕೊಡಲು ತೀರ್ಮಾನಿಸಲಾಗಿದೆ~ ಎಂದು ಆರೋಪಿಸಿದರು.<br /> <br /> `ಈಡಬ್ಲ್ಯುಎಸ್ ಭೂಮಿಯನ್ನು ಕಬಳಿಸಲು ಖಾಸಗಿ ಕಂಪೆನಿಯೊಂದಿಗೆ ಮಾಡಿಕೊಂಡಿರುವ ಜನ ವಿರೋಧಿ ಒಪ್ಪಂದವನ್ನು ಈ ಕೂಡಲೇ ರದ್ದುಗೊಳಿಸಬೇಕು. ಅದೇ ಭೂಮಿಯನ್ನು ನಂಬಿಕೊಂಡಿರುವ ಅಲ್ಲಿ ವಾಸವಿರುವ ವಸತಿಹೀನರಿಗೆ ಅದೇ ಜಾಗದಲ್ಲಿ ಮನೆಗಳನ್ನು ನಿರ್ಮಿಸಿ ಕೊಡಬೇಕು~ ಎಂದು ಒತ್ತಾಯಿಸಿದರು.<br /> <br /> `ದಲಿತರ ಮತ್ತು ಅಲ್ಪಸಂಖ್ಯಾತರ ಭೂಮಿ ರಕ್ಷಣೆಗಾಗಿ ಏ.7 ರಂದು ಬೆಂಗಳೂರು ಮಹಾನಗರ ಪಾಲಿಕೆ ಎದುರು ಧರಣಿ ಕೈಗೊಳ್ಳಲಾಗುವುದು. ಅದರ ನಂತರ ಒಂದು ವಾರ ಕಾಲಾವಧಿಯನ್ನು ನೀಡಲಾಗುವುದು. ಇದಕ್ಕೆ ಸರಿಯಾದ ಸ್ಪಂದನೆ ದೊರೆಯದಿದ್ದರೆ, ಏ.16 ರಿಂದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಿರಂತರ ಧರಣಿ ನಡೆಸಲಾಗುವುದು~ ಎಂದು ಎಚ್ಚರಿಸಿದರು.<br /> <br /> ಒಕ್ಕೂಟದ ಅಧ್ಯಕ್ಷ ರಾಜೇಂದ್ರನ್ ಪ್ರಭಾಕರ್, ಸ್ವಾಭಿಮಾನಿ ಬಹುಜನರ ವೇದಿಕೆಯ ಎಸ್.ಎಂ.ಮಾರಿ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>