<p><strong>ಬೆಂಗಳೂರು (ಪಿಟಿಐ):</strong> ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಪಕ್ಷದ ವಕ್ತಾರ ಸಿ.ಟಿ. ರವಿ ಮತ್ತು ಸಚಿವ ಸ್ಥಾನ ಕಳೆದುಕೊಂಡ ಅರವಿಂದ ಲಿಂಬಾವಳಿ ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ. </p>.<p> ~ಪಕ್ಷದದಲ್ಲಿ ಕೆಲವು ಸಮಸ್ಯೆಗಳಿವೆ. ಕೆಲವು ಸಚಿವರು ಹಾಗೂ ಶಾಸಕರು ನನ್ನ ಬಳಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ಪಕ್ಷದ ರಾಜ್ಯಧ್ಯಕ್ಷನಾಗಿ ಅತೃಪ್ತ ಶಾಸಕರ ಭಾವನೆಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುವುದು ನನ್ನ ಕರ್ತವ್ಯ~ ಎಂದು ಕೆ.ಎಸ್. ಈಶ್ವರಪ್ಪ ಅವರು ಹೇಳಿದ್ದಾರೆ. ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. </p>.<p>ಇದೇ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು ~ಪಕ್ಷ ಮುಖ್ಯ, ನಂತರ ವ್ಯಕ್ತಿ. ಪ್ರಸ್ತುತ ಕೆಲವು ಶಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ~ ಎಂದು ತಿಳಿಸಿದರು.</p>.<p>ಈಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಮತ್ತೆ ಭ್ರಷ್ಟಾಚಾರದ ಹೊಸ ಆರೋಪಗಳು ಕೇಳಿಬಂದಾಗ, ತಾವು ಭಿನ್ನಮತೀಯರೆಂದು ಗುರುತಿಸಿಕೊಂಡ ಪಕ್ಷದ ಕೆಲವು ಅತೃಪ್ತ ಶಾಸಕರು, ಸಚಿವರು ~ಯಡಿಯೂರಪ್ಪ ಕಳಿಸಿ, ಬಿಜೆಪಿ ಉಳಿಸಿ~ ಚಳವಳಿ~ ಹುಟ್ಟುಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು (ಪಿಟಿಐ):</strong> ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪದಚ್ಯುತಿಗೆ ಮುಂದಾಗಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ, ಪಕ್ಷದ ವಕ್ತಾರ ಸಿ.ಟಿ. ರವಿ ಮತ್ತು ಸಚಿವ ಸ್ಥಾನ ಕಳೆದುಕೊಂಡ ಅರವಿಂದ ಲಿಂಬಾವಳಿ ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ತೆರಳಿದ್ದಾರೆ. </p>.<p> ~ಪಕ್ಷದದಲ್ಲಿ ಕೆಲವು ಸಮಸ್ಯೆಗಳಿವೆ. ಕೆಲವು ಸಚಿವರು ಹಾಗೂ ಶಾಸಕರು ನನ್ನ ಬಳಿ ತಮ್ಮ ಅಸಮಾಧಾನವನ್ನು ತೋಡಿಕೊಂಡಿದ್ದಾರೆ. ಪಕ್ಷದ ರಾಜ್ಯಧ್ಯಕ್ಷನಾಗಿ ಅತೃಪ್ತ ಶಾಸಕರ ಭಾವನೆಗಳನ್ನು ಪಕ್ಷದ ವರಿಷ್ಠರ ಗಮನಕ್ಕೆ ತರುವುದು ನನ್ನ ಕರ್ತವ್ಯ~ ಎಂದು ಕೆ.ಎಸ್. ಈಶ್ವರಪ್ಪ ಅವರು ಹೇಳಿದ್ದಾರೆ. ಅವರು ಗುರುವಾರ ಬೆಳಿಗ್ಗೆ ದೆಹಲಿಗೆ ತೆರಳುವ ಮೊದಲು ವಿಮಾನ ನಿಲ್ದಾಣದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದರು. </p>.<p>ಇದೇ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಸಿ.ಟಿ. ರವಿ ಅವರು ~ಪಕ್ಷ ಮುಖ್ಯ, ನಂತರ ವ್ಯಕ್ತಿ. ಪ್ರಸ್ತುತ ಕೆಲವು ಶಾಸಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಹೈಕಮಾಂಡ್ ಗಮನಕ್ಕೆ ತರುತ್ತೇವೆ~ ಎಂದು ತಿಳಿಸಿದರು.</p>.<p>ಈಚೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ವಿರುದ್ಧ ಮತ್ತೆ ಭ್ರಷ್ಟಾಚಾರದ ಹೊಸ ಆರೋಪಗಳು ಕೇಳಿಬಂದಾಗ, ತಾವು ಭಿನ್ನಮತೀಯರೆಂದು ಗುರುತಿಸಿಕೊಂಡ ಪಕ್ಷದ ಕೆಲವು ಅತೃಪ್ತ ಶಾಸಕರು, ಸಚಿವರು ~ಯಡಿಯೂರಪ್ಪ ಕಳಿಸಿ, ಬಿಜೆಪಿ ಉಳಿಸಿ~ ಚಳವಳಿ~ ಹುಟ್ಟುಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>