<p><strong>ಬೆಂಗಳೂರು:</strong> ಕ್ಷೇತ್ರಗಳ ಪುನರ್ ವಿಂಗಡಣೆ ನಂತರ ಅಸ್ತಿತ್ವಕ್ಕೆ ಬಂದಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ರಾಜಧಾನಿಯ ಹೃದಯ ಭಾಗದ ಜೊತೆಗೆ ಹೊರವಲಯದ ಗ್ರಾಮೀಣ ಪ್ರದೇಶವನ್ನೂ ತನ್ನ ಮಡಿಲಲ್ಲಿ ಇಟ್ಟುಕೊಂಡಿದೆ.<br /> <br /> ಆಡಳಿತ ಯಂತ್ರದ ಕೇಂದ್ರ ಬಿಂದುವಾದ ವಿಧಾನಸೌಧ, ವಿಕಾಸಸೌಧ ಅಷ್ಟೆ ಅಲ್ಲದೆ ಶಾಸಕರ ಭವನ, ಹೈಕೋರ್ಟ್, ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಪ್ರಮುಖ ಪ್ರದೇಶಗಳು ಇದರ ವ್ಯಾಪ್ತಿ ಯಲ್ಲಿ ಸೇರಿರುವುದರಿಂದ ಕೇಂದ್ರ ಲೋಕಸಭಾ ಕ್ಷೇತ್ರ ಗಮನ ಸೆಳೆದಿದೆ.<br /> <br /> ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಮೂರು ಮತ್ತು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ 5 ವಿಧಾನಸಭಾ ಕ್ಷೇತ್ರಗಳನ್ನು 2008ರಲ್ಲಿ ಬೇರ್ಪಡಿಸಿ, ಹೊಸದಾಗಿ ರಚನೆಯಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸೇರಿಸಲಾಯಿತು. ಇದರ ಬೆನ್ನಿಗೇ ಬೆಂಗಳೂರಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆ 2ರಿಂದ 3ಕ್ಕೆ ಏರಿತು.<br /> <br /> ಈಗ ಕೇಂದ್ರ ಕ್ಷೇತ್ರದ ವ್ಯಾಪ್ತಿಗೆ ಬರುವ ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಹಿಂದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿದ್ದವು. ಇನ್ನು ಶಿವಾಜಿನಗರ, ಸಿ.ವಿ.ರಾಮನ್ನಗರ, ಸರ್ವಜ್ಞನಗರ, ಶಾಂತಿನಗರ, ಮಹದೇವಪುರ ಕ್ಷೇತ್ರಗಳು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದವು.<br /> <br /> ಈಗ ಕೇಂದ್ರ ವ್ಯಾಪ್ತಿಯಲ್ಲಿರುವ ಕೆಲ ಪ್ರದೇಶಗಳು ಹಿಂದೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದವು ಎನ್ನುತ್ತಾರೆ ಈ ಕ್ಷೇತ್ರವನ್ನು ಚೆನ್ನಾಗಿ ಬಲ್ಲ ರಾಜಕೀಯ ಮುಖಂಡರು.<br /> <br /> ಬೆಂಗಳೂರಿನ ಕೇಂದ್ರ ಪ್ರದೇಶಗಳನ್ನು ಈ ಕ್ಷೇತ್ರ ಹೆಚ್ಚಾಗಿ ಒಳಗೊಂಡಿದೆ. ಆದರೆ ನಗರವಾಸಿಗಳಿಗಿಂತ ಕೊಳೆ-ಗೇರಿಗಳು, ಬಡವರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮತದಾರರು ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ.<br /> <br /> ಕ್ಷೇತ್ರಗಳ ಪುನರ್ ವಿಂಗಡಣೆ ನಂತರ 2009ರಲ್ಲಿ ಅಸ್ತಿತ್ವಕ್ಕೆ ಬಂದ ಈ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಈ ಕ್ಷೇತ್ರದ ಮೊದಲ ಸಂಸದ ಎಂಬ ಹೆಗ್ಗಳಿಕೆ ಹೊಂದಿರುವ ಬಿಜೆಪಿಯ ಪಿ.ಸಿ.ಮೋಹನ್ ಪುನರಾಯ್ಕೆ ಬಯಸಿ ಕಣಕ್ಕೆ ಇಳಿದಿದ್ದಾರೆ.<br /> <br /> ಕಾಂಗ್ರೆಸ್ನ ಹಿರಿಯ ಮುಖಂಡ ಸಿ.ಕೆ.ಜಾಫರ್ ಷರೀಫ್ ಅವರಿಗೆ ಎರಡನೇ ಬಾರಿಗೆ ಈ ಕ್ಷೇತ್ರದ ಟಿಕೆಟ್ ಕೈತಪ್ಪಿದೆ. ಕಳೆದ ಬಾರಿಯೂ ಅವರು ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕೆ ಇಳಿಯಲು ಬಯಸಿದ್ದರು. ಆದರೆ, ಪಕ್ಷದ ಹೈಕಮಾಂಡ್ ಬೆಂಗಳೂರು ಉತ್ತರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು.<br /> <br /> ಈ ಬಾರಿ ಮತ್ತೆ ಸೆಂಟ್ರಲ್ ಕ್ಷೇತ್ರದ ಟಿಕೆಟ್ಗಾಗಿ ಷರೀಫ್ ತೀವ್ರ ಯತ್ನ ನಡೆಸಿದರೂ ಫಲ ನೀಡಿಲ್ಲ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೃಪಾಕಟಾಕ್ಷದಿಂದಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.<br /> 2004ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ 2009ರಲ್ಲಿ ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದರು.<br /> <br /> ಅಲ್ಲದೆ ಷರೀಫ್ ಅವರೊಂದಿಗೆ ಪೈಪೋಟಿ ನಡೆಸಿ ಬೆಂಗಳೂರು ಉತ್ತರ ಕ್ಷೇತ್ರದ ಬದಲು, ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಆದರೆ, ಚುನಾವಣೆಯಲ್ಲಿ ಸೋಲಿನ ರುಚಿ ಉಂಡರು. ಈ ಬಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಕಾಂಗ್ರೆಸ್ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಜೆಡಿಎಸ್ಗೆ ಕರೆತಂದು, ಸೆಂಟ್ರಲ್ನಿಂದ ಕಣಕ್ಕೆ ಇಳಿಸಲು ಆ ಪಕ್ಷದ ಮುಖಂಡರು ಮಾತುಕತೆ ನಡೆಸಿದ್ದಾರೆ.</p>.<p>ಈ ಮಧ್ಯೆ ಪಕ್ಷ ತೊರೆಯದಂತೆ ಅವರ ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಹೆಸರೂ ಈ ಕ್ಷೇತ್ರದಿಂದ ಕೇಳಿಬರುತ್ತಿದೆ. ಆದರೆ, ಯಾರು ಕಣಕ್ಕೆ ಇಳಿಯಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.<br /> ಸದ್ಯದ ಮಟ್ಟಿಗೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಆಮ್ ಆದ್ಮಿ ಪಕ್ಷದಿಂದ ಇನ್ಫೊಸಿಸ್ನ ಮಾಜಿ ಸಿಎಫ್ಒ ವಿ.ಬಾಲಕೃಷ್ಣನ್ ಕಣಕ್ಕೆ ಇಳಿಯಲಿದ್ದಾರೆ. ರಿಜ್ವಾನ್, ಬಾಲಕೃಷ್ಣನ್ ಹೊಸ ಮುಖಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕ್ಷೇತ್ರಗಳ ಪುನರ್ ವಿಂಗಡಣೆ ನಂತರ ಅಸ್ತಿತ್ವಕ್ಕೆ ಬಂದಿರುವ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರ ರಾಜಧಾನಿಯ ಹೃದಯ ಭಾಗದ ಜೊತೆಗೆ ಹೊರವಲಯದ ಗ್ರಾಮೀಣ ಪ್ರದೇಶವನ್ನೂ ತನ್ನ ಮಡಿಲಲ್ಲಿ ಇಟ್ಟುಕೊಂಡಿದೆ.<br /> <br /> ಆಡಳಿತ ಯಂತ್ರದ ಕೇಂದ್ರ ಬಿಂದುವಾದ ವಿಧಾನಸೌಧ, ವಿಕಾಸಸೌಧ ಅಷ್ಟೆ ಅಲ್ಲದೆ ಶಾಸಕರ ಭವನ, ಹೈಕೋರ್ಟ್, ಕೇಂದ್ರ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಪ್ರಮುಖ ಪ್ರದೇಶಗಳು ಇದರ ವ್ಯಾಪ್ತಿ ಯಲ್ಲಿ ಸೇರಿರುವುದರಿಂದ ಕೇಂದ್ರ ಲೋಕಸಭಾ ಕ್ಷೇತ್ರ ಗಮನ ಸೆಳೆದಿದೆ.<br /> <br /> ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ ಮೂರು ಮತ್ತು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿದ್ದ 5 ವಿಧಾನಸಭಾ ಕ್ಷೇತ್ರಗಳನ್ನು 2008ರಲ್ಲಿ ಬೇರ್ಪಡಿಸಿ, ಹೊಸದಾಗಿ ರಚನೆಯಾದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರಕ್ಕೆ ಸೇರಿಸಲಾಯಿತು. ಇದರ ಬೆನ್ನಿಗೇ ಬೆಂಗಳೂರಿನ ಲೋಕಸಭಾ ಕ್ಷೇತ್ರಗಳ ಸಂಖ್ಯೆ 2ರಿಂದ 3ಕ್ಕೆ ಏರಿತು.<br /> <br /> ಈಗ ಕೇಂದ್ರ ಕ್ಷೇತ್ರದ ವ್ಯಾಪ್ತಿಗೆ ಬರುವ ಗಾಂಧಿನಗರ, ರಾಜಾಜಿನಗರ, ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರಗಳು ಹಿಂದೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿದ್ದವು. ಇನ್ನು ಶಿವಾಜಿನಗರ, ಸಿ.ವಿ.ರಾಮನ್ನಗರ, ಸರ್ವಜ್ಞನಗರ, ಶಾಂತಿನಗರ, ಮಹದೇವಪುರ ಕ್ಷೇತ್ರಗಳು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿದ್ದವು.<br /> <br /> ಈಗ ಕೇಂದ್ರ ವ್ಯಾಪ್ತಿಯಲ್ಲಿರುವ ಕೆಲ ಪ್ರದೇಶಗಳು ಹಿಂದೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿದ್ದವು ಎನ್ನುತ್ತಾರೆ ಈ ಕ್ಷೇತ್ರವನ್ನು ಚೆನ್ನಾಗಿ ಬಲ್ಲ ರಾಜಕೀಯ ಮುಖಂಡರು.<br /> <br /> ಬೆಂಗಳೂರಿನ ಕೇಂದ್ರ ಪ್ರದೇಶಗಳನ್ನು ಈ ಕ್ಷೇತ್ರ ಹೆಚ್ಚಾಗಿ ಒಳಗೊಂಡಿದೆ. ಆದರೆ ನಗರವಾಸಿಗಳಿಗಿಂತ ಕೊಳೆ-ಗೇರಿಗಳು, ಬಡವರು ಮತ್ತು ಅಲ್ಪಸಂಖ್ಯಾತ ಸಮುದಾಯದ ಮತದಾರರು ಅಭ್ಯರ್ಥಿಯ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಾರೆ.<br /> <br /> ಕ್ಷೇತ್ರಗಳ ಪುನರ್ ವಿಂಗಡಣೆ ನಂತರ 2009ರಲ್ಲಿ ಅಸ್ತಿತ್ವಕ್ಕೆ ಬಂದ ಈ ಕ್ಷೇತ್ರದ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ಈ ಕ್ಷೇತ್ರದ ಮೊದಲ ಸಂಸದ ಎಂಬ ಹೆಗ್ಗಳಿಕೆ ಹೊಂದಿರುವ ಬಿಜೆಪಿಯ ಪಿ.ಸಿ.ಮೋಹನ್ ಪುನರಾಯ್ಕೆ ಬಯಸಿ ಕಣಕ್ಕೆ ಇಳಿದಿದ್ದಾರೆ.<br /> <br /> ಕಾಂಗ್ರೆಸ್ನ ಹಿರಿಯ ಮುಖಂಡ ಸಿ.ಕೆ.ಜಾಫರ್ ಷರೀಫ್ ಅವರಿಗೆ ಎರಡನೇ ಬಾರಿಗೆ ಈ ಕ್ಷೇತ್ರದ ಟಿಕೆಟ್ ಕೈತಪ್ಪಿದೆ. ಕಳೆದ ಬಾರಿಯೂ ಅವರು ಸೆಂಟ್ರಲ್ ಕ್ಷೇತ್ರದಿಂದ ಕಣಕ್ಕೆ ಇಳಿಯಲು ಬಯಸಿದ್ದರು. ಆದರೆ, ಪಕ್ಷದ ಹೈಕಮಾಂಡ್ ಬೆಂಗಳೂರು ಉತ್ತರದಿಂದ ಸ್ಪರ್ಧಿಸಲು ಅವಕಾಶ ನೀಡಿತ್ತು.<br /> <br /> ಈ ಬಾರಿ ಮತ್ತೆ ಸೆಂಟ್ರಲ್ ಕ್ಷೇತ್ರದ ಟಿಕೆಟ್ಗಾಗಿ ಷರೀಫ್ ತೀವ್ರ ಯತ್ನ ನಡೆಸಿದರೂ ಫಲ ನೀಡಿಲ್ಲ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಕೃಪಾಕಟಾಕ್ಷದಿಂದಾಗಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಅರ್ಷದ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ.<br /> 2004ರಲ್ಲಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ನಿವೃತ್ತ ಐಪಿಎಸ್ ಅಧಿಕಾರಿ ಎಚ್.ಟಿ.ಸಾಂಗ್ಲಿಯಾನ 2009ರಲ್ಲಿ ಕಾಂಗ್ರೆಸ್ಗೆ ಪಕ್ಷಾಂತರ ಮಾಡಿದರು.<br /> <br /> ಅಲ್ಲದೆ ಷರೀಫ್ ಅವರೊಂದಿಗೆ ಪೈಪೋಟಿ ನಡೆಸಿ ಬೆಂಗಳೂರು ಉತ್ತರ ಕ್ಷೇತ್ರದ ಬದಲು, ಸೆಂಟ್ರಲ್ ಕ್ಷೇತ್ರದಿಂದ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಆದರೆ, ಚುನಾವಣೆಯಲ್ಲಿ ಸೋಲಿನ ರುಚಿ ಉಂಡರು. ಈ ಬಾರಿ ಅವರಿಗೆ ಕಾಂಗ್ರೆಸ್ ಟಿಕೆಟ್ ದೊರೆಯದ ಕಾರಣ ಕಾಂಗ್ರೆಸ್ನಿಂದ ಒಂದು ಕಾಲು ಹೊರಗಿಟ್ಟಿದ್ದಾರೆ. ಜೆಡಿಎಸ್ಗೆ ಕರೆತಂದು, ಸೆಂಟ್ರಲ್ನಿಂದ ಕಣಕ್ಕೆ ಇಳಿಸಲು ಆ ಪಕ್ಷದ ಮುಖಂಡರು ಮಾತುಕತೆ ನಡೆಸಿದ್ದಾರೆ.</p>.<p>ಈ ಮಧ್ಯೆ ಪಕ್ಷ ತೊರೆಯದಂತೆ ಅವರ ಮನವೊಲಿಸಲು ಕಾಂಗ್ರೆಸ್ ಹೈಕಮಾಂಡ್ ಮುಂದಾಗಿದೆ.ಜೆಡಿಎಸ್ ಮಹಾಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಜೀಂ ಹೆಸರೂ ಈ ಕ್ಷೇತ್ರದಿಂದ ಕೇಳಿಬರುತ್ತಿದೆ. ಆದರೆ, ಯಾರು ಕಣಕ್ಕೆ ಇಳಿಯಲಿದ್ದಾರೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.<br /> ಸದ್ಯದ ಮಟ್ಟಿಗೆ ರಾಷ್ಟ್ರ ರಾಜಕಾರಣದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಆಮ್ ಆದ್ಮಿ ಪಕ್ಷದಿಂದ ಇನ್ಫೊಸಿಸ್ನ ಮಾಜಿ ಸಿಎಫ್ಒ ವಿ.ಬಾಲಕೃಷ್ಣನ್ ಕಣಕ್ಕೆ ಇಳಿಯಲಿದ್ದಾರೆ. ರಿಜ್ವಾನ್, ಬಾಲಕೃಷ್ಣನ್ ಹೊಸ ಮುಖಗಳು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>