<p><strong>ಜೈಪುರ (ಪಿಟಿಐ): </strong>ರಾಜಸ್ತಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಲು ಮುತ್ತಯ್ಯ ಮುರಳೀಧರನ್ ನೀಡಿದ ಮಾರ್ಗದರ್ಶನ ಕಾರಣ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ಸ್ಪಿನ್ನರ್ ಕೆ.ಪಿ.ಅಪ್ಪಣ್ಣ ನುಡಿದರು.<br /> <br /> ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಅಪ್ಪಣ್ಣ ನಾಲ್ಕು ವಿಕೆಟ್ ಪಡೆದು ಮಿಂಚಿದ್ದರು. ಅವರು ನೀಡಿದ್ದು ಕೇವಲ 19 ರನ್. ಇದು ರಾಯಲ್ ಚಾಲೆಂಜರ್ಸ್ 46 ರನ್ಗಳ ಗೆಲುವು ಸಾಧಿಸಲು ಕಾರಣವಾಗಿತ್ತು. `ಮುರಳೀಧರನ್ ಶ್ರೇಷ್ಠ ಬೌಲರ್. <br /> <br /> ಆದರೆ ಈ ಪಂದ್ಯಕ್ಕೆ ಅವರನ್ನು ಕೈಬಿಡಲಾಗಿತ್ತು. ಇದಕ್ಕೆ ಕಾರಣ ತಂಡದ ಸಂಯೋಜನೆ. ವಿದೇಶದ ನಾಲ್ಕು ಮಂದಿ ಆಟಗಾರರನ್ನು ಮಾತ್ರ ಕಣಕ್ಕಿಳಿಸಲು ಅವಕಾಶವಿದೆ. ಆದರೆ ಅವರ ಮಾರ್ಗದರ್ಶನ ನಿರಂತರ. ಈ ಪಿಚ್ನಲ್ಲಿ ಯಾವ ರೀತಿ ಬೌಲಿಂಗ್ ಮಾಡಬೇಕು ಎಂಬುದರ ಬಗ್ಗೆ ಅವರು ನನಗೆ ಸಲಹೆ ನೀಡಿದ್ದರು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜೈಪುರ (ಪಿಟಿಐ): </strong>ರಾಜಸ್ತಾನ ರಾಯಲ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಉತ್ತಮ ಪ್ರದರ್ಶನ ತೋರಲು ಮುತ್ತಯ್ಯ ಮುರಳೀಧರನ್ ನೀಡಿದ ಮಾರ್ಗದರ್ಶನ ಕಾರಣ ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಎಡಗೈ ಸ್ಪಿನ್ನರ್ ಕೆ.ಪಿ.ಅಪ್ಪಣ್ಣ ನುಡಿದರು.<br /> <br /> ಸವಾಯ್ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಸೋಮವಾರ ರಾತ್ರಿ ನಡೆದ ಪಂದ್ಯದಲ್ಲಿ ಅಪ್ಪಣ್ಣ ನಾಲ್ಕು ವಿಕೆಟ್ ಪಡೆದು ಮಿಂಚಿದ್ದರು. ಅವರು ನೀಡಿದ್ದು ಕೇವಲ 19 ರನ್. ಇದು ರಾಯಲ್ ಚಾಲೆಂಜರ್ಸ್ 46 ರನ್ಗಳ ಗೆಲುವು ಸಾಧಿಸಲು ಕಾರಣವಾಗಿತ್ತು. `ಮುರಳೀಧರನ್ ಶ್ರೇಷ್ಠ ಬೌಲರ್. <br /> <br /> ಆದರೆ ಈ ಪಂದ್ಯಕ್ಕೆ ಅವರನ್ನು ಕೈಬಿಡಲಾಗಿತ್ತು. ಇದಕ್ಕೆ ಕಾರಣ ತಂಡದ ಸಂಯೋಜನೆ. ವಿದೇಶದ ನಾಲ್ಕು ಮಂದಿ ಆಟಗಾರರನ್ನು ಮಾತ್ರ ಕಣಕ್ಕಿಳಿಸಲು ಅವಕಾಶವಿದೆ. ಆದರೆ ಅವರ ಮಾರ್ಗದರ್ಶನ ನಿರಂತರ. ಈ ಪಿಚ್ನಲ್ಲಿ ಯಾವ ರೀತಿ ಬೌಲಿಂಗ್ ಮಾಡಬೇಕು ಎಂಬುದರ ಬಗ್ಗೆ ಅವರು ನನಗೆ ಸಲಹೆ ನೀಡಿದ್ದರು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>