<p><strong>ಬೆಂಗಳೂ</strong>ರು: ಬುಧವಾರದಿಂದಲೇ ಜಾರಿಗೆ ಬರುವಂತೆ ಪ್ರತಿ ಕ್ವಿಂಟಲ್ ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರ ರೂ1000 ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ.<br /> <br /> ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಾಮನೂರು ಶಿವಶಂಕರಪ್ಪ ವಿಧಾನ ಪರಿಷತ್ನಲ್ಲಿ ಬುಧವಾರ ಈ ವಿಷಯ ಪ್ರಕಟಿಸಿದರು. `ಬೆಳಿಗ್ಗೆಯಷ್ಟೇ ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆದಿದ್ದು, ಉಂಡೆ ಕೊಬ್ಬರಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ಕೇಂದ್ರದ ಸರ್ಕಾರ ನೀಡುವ ರೂ5,500 ಬೆಂಬಲ ಬೆಲೆಯೂ ಸೇರಿದಂತೆ ಪ್ರತಿ ಕ್ವಿಂಟಲ್ ಉಂಡೆ ಕೊಬ್ಬರಿಗೆ ಈಗ ರೈತರು ರೂ6,500 ಪಡೆಯಲಿದ್ದಾರೆ' ಎಂದು ಹೇಳಿದರು.<br /> <br /> `ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಕೊಬ್ಬರಿ ಖರೀದಿ ದಿನವೇ ಹಣ ಪಾವತಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ಮೊತ್ತವನ್ನು ಆವರ್ತ ನಿಧಿಯಿಂದ ಪಡೆಯಲಾಗುವುದು' ಎಂದು ತಿಳಿಸಿದರು.<br /> <br /> <strong>ಎಲ್ಲ ಜಿಲ್ಲೆಗೆ ಹಾಪ್ಕಾಮ್ಸ</strong><br /> ಹಣ್ಣು ಹಾಗೂ ತರಕಾರಿ ಯೋಗ್ಯ ಬೆಲೆಗೆ ಸಿಗುವಂತೆ ನೋಡಿಕೊಳ್ಳಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಪ್ಕಾಮ್ಸ ಮಳಿಗೆ ಆರಂಭಿಸಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. `ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನವನ್ನು ಯೋಗ್ಯ ಬೆಲೆಗೆ ಒದಗಿಸುವ ಜತೆಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೂ ಹೆಚ್ಚಿನ ಆದಾಯ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ವಿವರಿಸಿದರು.<br /> <br /> `ತೋಟಗಾರಿಕೆ ಯೋಜನೆಗಳಿಗಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ250 ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದೆ' ಎಂದು ತಿಳಿಸಿದರು. ಬಿಜೆಪಿಯ ಡಾ. ಎ.ಎಚ್.ಶಿವಯೋಗಿಸ್ವಾಮಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂ</strong>ರು: ಬುಧವಾರದಿಂದಲೇ ಜಾರಿಗೆ ಬರುವಂತೆ ಪ್ರತಿ ಕ್ವಿಂಟಲ್ ಉಂಡೆ ಕೊಬ್ಬರಿಗೆ ರಾಜ್ಯ ಸರ್ಕಾರ ರೂ1000 ಪ್ರೋತ್ಸಾಹ ಧನ ನೀಡಲು ನಿರ್ಧರಿಸಿದೆ.<br /> <br /> ತೋಟಗಾರಿಕೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಾಮನೂರು ಶಿವಶಂಕರಪ್ಪ ವಿಧಾನ ಪರಿಷತ್ನಲ್ಲಿ ಬುಧವಾರ ಈ ವಿಷಯ ಪ್ರಕಟಿಸಿದರು. `ಬೆಳಿಗ್ಗೆಯಷ್ಟೇ ಸಚಿವ ಸಂಪುಟದ ಉಪ ಸಮಿತಿ ಸಭೆ ನಡೆದಿದ್ದು, ಉಂಡೆ ಕೊಬ್ಬರಿಗೆ ಪ್ರೋತ್ಸಾಹ ಧನ ನೀಡಲು ನಿರ್ಧರಿಸಲಾಗಿದೆ. ಕೇಂದ್ರದ ಸರ್ಕಾರ ನೀಡುವ ರೂ5,500 ಬೆಂಬಲ ಬೆಲೆಯೂ ಸೇರಿದಂತೆ ಪ್ರತಿ ಕ್ವಿಂಟಲ್ ಉಂಡೆ ಕೊಬ್ಬರಿಗೆ ಈಗ ರೈತರು ರೂ6,500 ಪಡೆಯಲಿದ್ದಾರೆ' ಎಂದು ಹೇಳಿದರು.<br /> <br /> `ಅಗತ್ಯಕ್ಕೆ ತಕ್ಕಂತೆ ಖರೀದಿ ಕೇಂದ್ರಗಳನ್ನು ಆರಂಭಿಸಲಾಗುವುದು. ಕೊಬ್ಬರಿ ಖರೀದಿ ದಿನವೇ ಹಣ ಪಾವತಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ಮೊತ್ತವನ್ನು ಆವರ್ತ ನಿಧಿಯಿಂದ ಪಡೆಯಲಾಗುವುದು' ಎಂದು ತಿಳಿಸಿದರು.<br /> <br /> <strong>ಎಲ್ಲ ಜಿಲ್ಲೆಗೆ ಹಾಪ್ಕಾಮ್ಸ</strong><br /> ಹಣ್ಣು ಹಾಗೂ ತರಕಾರಿ ಯೋಗ್ಯ ಬೆಲೆಗೆ ಸಿಗುವಂತೆ ನೋಡಿಕೊಳ್ಳಲು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹಾಪ್ಕಾಮ್ಸ ಮಳಿಗೆ ಆರಂಭಿಸಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ಹೇಳಿದರು. `ಗ್ರಾಹಕರಿಗೆ ಗುಣಮಟ್ಟದ ಉತ್ಪನ್ನವನ್ನು ಯೋಗ್ಯ ಬೆಲೆಗೆ ಒದಗಿಸುವ ಜತೆಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಿ ರೈತರಿಗೂ ಹೆಚ್ಚಿನ ಆದಾಯ ಸಿಗುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು' ಎಂದು ವಿವರಿಸಿದರು.<br /> <br /> `ತೋಟಗಾರಿಕೆ ಯೋಜನೆಗಳಿಗಾಗಿ ಪ್ರಸಕ್ತ ಹಣಕಾಸು ವರ್ಷದಲ್ಲಿ ರೂ250 ಕೋಟಿ ಖರ್ಚು ಮಾಡಲು ಉದ್ದೇಶಿಸಲಾಗಿದೆ' ಎಂದು ತಿಳಿಸಿದರು. ಬಿಜೆಪಿಯ ಡಾ. ಎ.ಎಚ್.ಶಿವಯೋಗಿಸ್ವಾಮಿ ಅವರ ಪ್ರಶ್ನೆಗೆ ಸಚಿವರು ಉತ್ತರ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>