ಉಗ್ರರ ಹತ್ಯೆ
ಶ್ರೀನಗರ(ಪಿಟಿಐ): ಕಾಶ್ಮೀರ ಕಣಿವೆಯಲ್ಲಿ ಭದ್ರತಾ ಪಡೆಯ ಯೋಧರು ಸೋಮವಾರ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಲಷ್ಕರ್ ಎ ತೊಯ್ಬಾದ ಕಮಾಂಡರ್ ಸೇರಿದಂತೆ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ.
ದಕ್ಷಿಣ ಪುಲ್ವಾನ ಪ್ರದೇಶದ ಸುಬ್ದಿನಿ ಗ್ರಾಮದ ಬಳಿ ಯೋಧರು ಮತ್ತು ಉಗ್ರ ಅಬ್ದುಲ್ ರೆಹಮಾನ್ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಆತ ಮೃತಪಟ್ಟರೆ, ಕುಪ್ವಾರ ಅರಣ್ಯ ಪ್ರದೇಶದಲ್ಲಿ ಮತ್ತೊಬ್ಬ ಉಗ್ರನನ್ನು ಸೈನಿಕರು ಕೊಂದಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.