<p><strong>ಹರಪನಹಳ್ಳಿ: </strong>ಮಧ್ಯ ಕರ್ನಾಟಕದ ಇತಿಹಾಸಿಕ ಪ್ರಸಿದ್ಧಿಯ ಶಕ್ತಿದೇವತೆಯ ಕೇಂದ್ರವಾಗಿರುವ ತಾಲ್ಲೂಕಿನ ಉಚ್ಚಂಗಿದುರ್ಗದ ಉತ್ಸವಾಂಬೆಯ ಜಾತ್ರೋತ್ಸವ ಶನಿವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅತ್ಯಂತ ಸಡಗರ-ಸಂಭ್ರಮದ ಮಧ್ಯೆ ವೈಭವೋಪೇತವಾಗಿ ನೆರವೇರಿತು.<br /> <br /> ಉಚ್ಚಂಗೆಮ್ಮ, ಉತ್ಸವಾಂಬೆ, ಹಾಲಮ್ಮ...ಹೀಗೆ ಹಲವು ಬಿರುದಾವಳಿ ಹಾಗೂ ಪವಾಡಗಳ ಮೂಲಕ ಲಕ್ಷಾಂತರ ಭಕ್ತರ ದೈವೀಕರಣಕ್ಕೆ ಪಾತ್ರವಾಗಿರುವ ಉಚ್ಚಂಗೆಮ್ಮದೇವಿ ಜಾತ್ರೆಯ ಅಂಗವಾಗಿ ಕುಂಕುಮಾರ್ಚನೆ, ಎಲೆಪೂಜೆ, ಕ್ಷೀರಾಭಿಷೇಕ ಹಾಗೂ ಓಕುಳಿ ಸೇರಿದಂತೆ ವಿವಿಧ ಉತ್ಸವ ಹಾಗೂ ಪೂಜಾ ವಿಧಿ-ವಿಧಾನಗಳು ಮಾರ್ಚ್ 22ರಿಂದಲೇ ಆರಂಭವಾಗಿದ್ದು, ಮಾರ್ಚ್ 24ರಂದು ಶನಿವಾರ ಆನೆಹೊಂಡ ಉತ್ಸವ ಗಂಗೆಪೂಜೆ ಹಾಗೂ ಚಂದ್ರದರ್ಶನ ಮಾಡುವ ಮೂಲಕ ದೇವಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಂಡಳು.<br /> <br /> ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲದೇ ನೆರೆಯ ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಗದಗ ಹಾಗೂ ಹಾವೇರಿ ಸೇರಿದಂತೆ ರಾಜ್ಯ ಹಾಗೂ ಹೊರರಾಜ್ಯದ ದಶ-ದಿಕ್ಕುಗಳಿಂದಲೂ ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತಸಮೂಹ ಉತ್ಸವಾಂಬೆಯ ಬೆಟ್ಟದ ಹಿಂಭಾಗದಲ್ಲಿನ ವಿಶಾಲವಾದ ಹಾಲಮ್ಮನ ತೋಪಿನಲ್ಲಿ ಸಮಾಗಮಗೊಂಡಿದ್ದಾರೆ. ದೈವಸ್ವರೂಪಿಣಿಯಾಗಿರುವ ದೇವಿಯ ಕೃಪೆಗೆ ಪಾತ್ರರಾಗಲು ಭಕ್ತಗಣ ಶ್ರದ್ಧಾಭಕ್ತಿಯ ಮೂಲಕ ವಿವಿಧ ಹರಕೆ ತೀರಿಸಿ ಭಕ್ತಿಸಮರ್ಪಿಸಿದರು.<br /> <br /> ಭಕ್ತರ ಹರಕೆ-ಅಭೀಷ್ಟೆಯನ್ನು ಈಡೇರಿಸುವ ಶಕ್ತಿಮಾತೆಯಾಗಿರುವ ಆರಾಧ್ಯದೈವ ಜಾತ್ರೆಯ ಅಂಗವಾಗಿ ಹಾಲಮ್ಮನತೋಪಿನಲ್ಲಿ ನೆಲೆಸಿರುತ್ತಾಳೆ ಎಂಬ ನಂಬಿಕೆ ಜನಪದಿಯರಲ್ಲಿ ಹಾಸುಹೊಕ್ಕಿದೆ. ಹೀಗಾಗಿ ಹಾಲಮ್ಮನ ತೋಪಿನಲ್ಲಿ ನಿರ್ಮಿಸಿಕೊಂಡಿರುವ ತಾತ್ಕಾಲಿಕ ಟೆಂಟ್ಗಳಲ್ಲಿ ಭಕ್ತರು ಬೀಡು ಬಿಟ್ಟಿದ್ದಾರೆ.<br /> <br /> ತಾಲ್ಲೂಕು ಆಡಳಿತ ಪ್ರಾಣಿಬಲಿಯನ್ನು ನಿಷೇಧಿಸಿದ್ದರೂ ಸಹ, ಪೊಲೀಸರ ಕಟ್ಟೆಚ್ಚರದ ನಡುವೆಯೂ ಸಹಸ್ರಾರು ಕುರಿ-ಕೋಳಿಗಳು ಭಕ್ತರ ಭಕ್ತಿಪರಾಕಾಷ್ಠೆಯ ಉನ್ಮಾನದಲ್ಲಿ ದೇವಿಗೆ ಹರಕೆಗೆ ತೆಲೆಯೊಡ್ಡಿದವು. ಬಲಿ ತಡೆಯಲು ಪೊಲೀಸರು ನಡೆಸಿದ ಪ್ರಯತ್ನಗಳೆಲ್ಲವೂ ವಿಫಲವಾದವು. ಜತೆಗೆ, ಬೇವಿನುಡುಗೆ, ಪಡ್ಲಿಗಿ ತುಂಬಿಸುವುದು. ದೀಡು ನಮಸ್ಕಾರ ಸೇರಿದಂತೆ ವಿವಿಧ ಬಗೆಯ ಹರಕೆ ತೀರಿಸುವ ಮೂಲಕ ಭಕ್ತರು ಭಕ್ತಿಯ ಭಾವಸಂಗಮದಲ್ಲಿ ಮಿಂದೆದ್ದರು.<br /> <br /> ದೇವಿಯ ಹೆಸರಿನಲ್ಲಿ ತಲತಲಾಂತರದಿಂದಲೂ ಆಚರಣೆ ಮಾಡುತ್ತ ಬಂದಿರುವ ಸಾಮಾಜಿಕ ಅನಿಷ್ಟ ದೇವದಾಸಿ ಪದ್ಧತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಸಾಕಷ್ಟು ಕಟ್ಟಿನಿಟ್ಟಿನ ಕ್ರಮ ಕೈಗೊಂಡಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದಲೂ ಜಾತ್ರೆಯ ಅಂಗವಾಗಿ ಅನಿಷ್ಟ ಪದ್ಧತಿ ನಿಯಂತ್ರಿಸುವ ನಿಟ್ಟಿನಲ್ಲಿ `ತಲಾ ಐದು ಜನರ್ನು ಒಳಗೊಂಡ, ಐದು ತಂಡಗಳು ಜಾತ್ರೆಯಲ್ಲಿ ಹದ್ದಿನ ಕಣ್ಗಾವಲು ಹಾಕಿತ್ತು.<br /> <br /> ಜತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವಾಸುದೇವ್ ಹಾಗೂ ದೇವದಾಸಿ ಮಹಿಳೆಯರ ಪುನರ್ವಸತಿಯ ಜಿಲ್ಲಾ ಯೋಜನಾಧಿಕಾರಿ ಮೋಕ್ಷಪತಿ ಹಾಗೂ ತಾವು ಭೇಟಿ ನೀಡಿ ಕಟ್ಟೆಚ್ಚರ ವಹಿಸಲಾಗಿತ್ತು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್. ಸಿದ್ದೇಶಪ್ಪ `ಪ್ರಜಾವಾಣಿ~ ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹರಪನಹಳ್ಳಿ: </strong>ಮಧ್ಯ ಕರ್ನಾಟಕದ ಇತಿಹಾಸಿಕ ಪ್ರಸಿದ್ಧಿಯ ಶಕ್ತಿದೇವತೆಯ ಕೇಂದ್ರವಾಗಿರುವ ತಾಲ್ಲೂಕಿನ ಉಚ್ಚಂಗಿದುರ್ಗದ ಉತ್ಸವಾಂಬೆಯ ಜಾತ್ರೋತ್ಸವ ಶನಿವಾರ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಅತ್ಯಂತ ಸಡಗರ-ಸಂಭ್ರಮದ ಮಧ್ಯೆ ವೈಭವೋಪೇತವಾಗಿ ನೆರವೇರಿತು.<br /> <br /> ಉಚ್ಚಂಗೆಮ್ಮ, ಉತ್ಸವಾಂಬೆ, ಹಾಲಮ್ಮ...ಹೀಗೆ ಹಲವು ಬಿರುದಾವಳಿ ಹಾಗೂ ಪವಾಡಗಳ ಮೂಲಕ ಲಕ್ಷಾಂತರ ಭಕ್ತರ ದೈವೀಕರಣಕ್ಕೆ ಪಾತ್ರವಾಗಿರುವ ಉಚ್ಚಂಗೆಮ್ಮದೇವಿ ಜಾತ್ರೆಯ ಅಂಗವಾಗಿ ಕುಂಕುಮಾರ್ಚನೆ, ಎಲೆಪೂಜೆ, ಕ್ಷೀರಾಭಿಷೇಕ ಹಾಗೂ ಓಕುಳಿ ಸೇರಿದಂತೆ ವಿವಿಧ ಉತ್ಸವ ಹಾಗೂ ಪೂಜಾ ವಿಧಿ-ವಿಧಾನಗಳು ಮಾರ್ಚ್ 22ರಿಂದಲೇ ಆರಂಭವಾಗಿದ್ದು, ಮಾರ್ಚ್ 24ರಂದು ಶನಿವಾರ ಆನೆಹೊಂಡ ಉತ್ಸವ ಗಂಗೆಪೂಜೆ ಹಾಗೂ ಚಂದ್ರದರ್ಶನ ಮಾಡುವ ಮೂಲಕ ದೇವಿ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆಗೊಂಡಳು.<br /> <br /> ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲದೇ ನೆರೆಯ ಚಿತ್ರದುರ್ಗ, ಬಳ್ಳಾರಿ, ಶಿವಮೊಗ್ಗ, ಗದಗ ಹಾಗೂ ಹಾವೇರಿ ಸೇರಿದಂತೆ ರಾಜ್ಯ ಹಾಗೂ ಹೊರರಾಜ್ಯದ ದಶ-ದಿಕ್ಕುಗಳಿಂದಲೂ ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತಸಮೂಹ ಉತ್ಸವಾಂಬೆಯ ಬೆಟ್ಟದ ಹಿಂಭಾಗದಲ್ಲಿನ ವಿಶಾಲವಾದ ಹಾಲಮ್ಮನ ತೋಪಿನಲ್ಲಿ ಸಮಾಗಮಗೊಂಡಿದ್ದಾರೆ. ದೈವಸ್ವರೂಪಿಣಿಯಾಗಿರುವ ದೇವಿಯ ಕೃಪೆಗೆ ಪಾತ್ರರಾಗಲು ಭಕ್ತಗಣ ಶ್ರದ್ಧಾಭಕ್ತಿಯ ಮೂಲಕ ವಿವಿಧ ಹರಕೆ ತೀರಿಸಿ ಭಕ್ತಿಸಮರ್ಪಿಸಿದರು.<br /> <br /> ಭಕ್ತರ ಹರಕೆ-ಅಭೀಷ್ಟೆಯನ್ನು ಈಡೇರಿಸುವ ಶಕ್ತಿಮಾತೆಯಾಗಿರುವ ಆರಾಧ್ಯದೈವ ಜಾತ್ರೆಯ ಅಂಗವಾಗಿ ಹಾಲಮ್ಮನತೋಪಿನಲ್ಲಿ ನೆಲೆಸಿರುತ್ತಾಳೆ ಎಂಬ ನಂಬಿಕೆ ಜನಪದಿಯರಲ್ಲಿ ಹಾಸುಹೊಕ್ಕಿದೆ. ಹೀಗಾಗಿ ಹಾಲಮ್ಮನ ತೋಪಿನಲ್ಲಿ ನಿರ್ಮಿಸಿಕೊಂಡಿರುವ ತಾತ್ಕಾಲಿಕ ಟೆಂಟ್ಗಳಲ್ಲಿ ಭಕ್ತರು ಬೀಡು ಬಿಟ್ಟಿದ್ದಾರೆ.<br /> <br /> ತಾಲ್ಲೂಕು ಆಡಳಿತ ಪ್ರಾಣಿಬಲಿಯನ್ನು ನಿಷೇಧಿಸಿದ್ದರೂ ಸಹ, ಪೊಲೀಸರ ಕಟ್ಟೆಚ್ಚರದ ನಡುವೆಯೂ ಸಹಸ್ರಾರು ಕುರಿ-ಕೋಳಿಗಳು ಭಕ್ತರ ಭಕ್ತಿಪರಾಕಾಷ್ಠೆಯ ಉನ್ಮಾನದಲ್ಲಿ ದೇವಿಗೆ ಹರಕೆಗೆ ತೆಲೆಯೊಡ್ಡಿದವು. ಬಲಿ ತಡೆಯಲು ಪೊಲೀಸರು ನಡೆಸಿದ ಪ್ರಯತ್ನಗಳೆಲ್ಲವೂ ವಿಫಲವಾದವು. ಜತೆಗೆ, ಬೇವಿನುಡುಗೆ, ಪಡ್ಲಿಗಿ ತುಂಬಿಸುವುದು. ದೀಡು ನಮಸ್ಕಾರ ಸೇರಿದಂತೆ ವಿವಿಧ ಬಗೆಯ ಹರಕೆ ತೀರಿಸುವ ಮೂಲಕ ಭಕ್ತರು ಭಕ್ತಿಯ ಭಾವಸಂಗಮದಲ್ಲಿ ಮಿಂದೆದ್ದರು.<br /> <br /> ದೇವಿಯ ಹೆಸರಿನಲ್ಲಿ ತಲತಲಾಂತರದಿಂದಲೂ ಆಚರಣೆ ಮಾಡುತ್ತ ಬಂದಿರುವ ಸಾಮಾಜಿಕ ಅನಿಷ್ಟ ದೇವದಾಸಿ ಪದ್ಧತಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ತಾಲ್ಲೂಕು ಆಡಳಿತ ಸಾಕಷ್ಟು ಕಟ್ಟಿನಿಟ್ಟಿನ ಕ್ರಮ ಕೈಗೊಂಡಿತ್ತು. ಕಳೆದ ಮೂರ್ನಾಲ್ಕು ದಿನಗಳಿಂದಲೂ ಜಾತ್ರೆಯ ಅಂಗವಾಗಿ ಅನಿಷ್ಟ ಪದ್ಧತಿ ನಿಯಂತ್ರಿಸುವ ನಿಟ್ಟಿನಲ್ಲಿ `ತಲಾ ಐದು ಜನರ್ನು ಒಳಗೊಂಡ, ಐದು ತಂಡಗಳು ಜಾತ್ರೆಯಲ್ಲಿ ಹದ್ದಿನ ಕಣ್ಗಾವಲು ಹಾಕಿತ್ತು.<br /> <br /> ಜತೆಗೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ವಾಸುದೇವ್ ಹಾಗೂ ದೇವದಾಸಿ ಮಹಿಳೆಯರ ಪುನರ್ವಸತಿಯ ಜಿಲ್ಲಾ ಯೋಜನಾಧಿಕಾರಿ ಮೋಕ್ಷಪತಿ ಹಾಗೂ ತಾವು ಭೇಟಿ ನೀಡಿ ಕಟ್ಟೆಚ್ಚರ ವಹಿಸಲಾಗಿತ್ತು ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಆರ್. ಸಿದ್ದೇಶಪ್ಪ `ಪ್ರಜಾವಾಣಿ~ ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>