<p><strong>ಉಡುಪಿ: </strong>`ಇತ್ತೀಚಿನ ದಿನಗಳಲ್ಲಿ ಮಾಹಿತಿ ತಂತ್ರಜ್ಞಾನದ ಬೆಳೆವಣಿಗೆ ಶೀಘ್ರಗತಿಯಲ್ಲಿ ಆಗುತ್ತಿದೆ. ಅದೇ ರೀತಿ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿದ್ದು, ಇಂತಹ ಅಪರಾಧ ಪ್ರಕರಣಗಳ ತನಿಖೆ ಮಾಡುವ ಅಧಿಕಾರಿಗಳಿಗೆ ತರಬೇತಿ ನೀಡುವ ಅಗತ್ಯ ಇದೆ~ ಎಂದು ಉಡುಪಿ ಜಿಲ್ಲಾ ತ್ವರಿತ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ಜಿ.ಎಸ್. ರೇವಣಕರ ಅಭಿಪ್ರಾಯಪಟ್ಟರು.<br /> <br /> ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಉಡುಪಿ ಜಿಲ್ಲಾ ವಕೀಲರ ಸಂಘ ಜಂಟಿಯಾಗಿ ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಭಾರತೀಯ ದಂಡ ಸಂಹಿತೆ, ಇತರ ಕಾನೂನುಗಳಿಗೂ ಸೈಬರ್ ಅಪರಾಧಗಳಿಗೂ ಬಹಳಷ್ಟು ವ್ಯತ್ಯಾಸ ಇದೆ. ಇತರೆ ಪ್ರಕರಣಗಳ ತನಿಖೆಯಲ್ಲಿ ಆಗುವಷ್ಟು ಪ್ರಗತಿ ಸೈಬರ್ ಅಪರಾಧಗಳಲ್ಲಿ ಆಗದಿರುವುದನ್ನು ಗಮನಿಸಬಹುದು. <br /> <br /> ಪ್ರಪಂಚದ ಯಾವುದಾದರೂ ಮೂಲೆಯಲ್ಲಿ ಕುಳಿತು ಸೈಬರ್ ಅಪರಾಧ ಎಸಗಲು ಅವಕಾಶ ಇರುವುದೇ ಇದಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.ಭಾರತೀಯ ಸಾಕ್ಷ್ಯ ಕಾಯ್ದೆಯಲ್ಲಿ (ಎವಿಡೆನ್ಸ್ ಆಕ್ಟ್) ಇರುವ ಸಾಕ್ಷ್ಯಗಳನ್ನು ನೀಡಲು ಸೈಪರ್ ಅಪರಾಧಗಳಲ್ಲಿ ಸಾಧ್ಯವಿಲ್ಲ. <br /> <br /> ಮಾಹಿತಿ ತಂತ್ರಜ್ಞಾನ ಕಾಯ್ದೆ ಅನ್ವಯ ಎಲೆಕ್ಟ್ರಾನಿಕ್ಸ್ ದಾಖಲೆಗಳನ್ನು ಈ ಪ್ರಕರಣಗಳಲ್ಲಿ ಒದಗಿಸಬೇಕಾಗುತ್ತದೆ. ಆದ್ದರಿಂದ ಸೈಪರ್ ಅಪರಾಧಗಳ ತನಿಖೆ ಮಾಡುವವರಿಗೆ ಹೆಚ್ಚಿನ ತರಬೇತಿ ನೀಡಬೇಕು ಎಂದರು.<br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ನರೇಂದ್ರ ಕುಮಾರ್ ಗುಣಕಿ, ಕಾನೂನು ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರವನ್ನು ದೇಶದಲ್ಲಿ ಜಾರಿಗೆ ತರಲಾಗಿದೆ. <br /> <br /> ಅಗತ್ಯ ಇರುವವರಿಗೆ ಕಾನೂನು ಸೇವೆಗಳನ್ನು ನೀಡುವಲ್ಲಿ ರಾಜ್ಯ ಮುಂದಿದೆ ಎಂದು ಹೇಳಿದರು.<br /> ಜಿಲ್ಲಾ ಸಹಾಯಕ ಸರ್ಕಾರಿ ವಕೀಲ ಗುರುರಾಜ ಐತಾಳ್ ಅವರು ಸೈಬರ್ ಕಾನೂನು ಬಗ್ಗೆ ಮಾಹಿತಿ ನೀಡಿದರು. <br /> ಮದುಸೂಧನ್ ಸಾಮಗ ಪ್ರಾರ್ಥಿಸಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾವಿತ್ರಿ ವಿ ಭಟ್ ಸ್ವಾಗತಿಸಿದರು. ವಕೀಲೆ ದೀಪಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ. ವಿಜಯಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಡುಪಿ: </strong>`ಇತ್ತೀಚಿನ ದಿನಗಳಲ್ಲಿ ಮಾಹಿತಿ ತಂತ್ರಜ್ಞಾನದ ಬೆಳೆವಣಿಗೆ ಶೀಘ್ರಗತಿಯಲ್ಲಿ ಆಗುತ್ತಿದೆ. ಅದೇ ರೀತಿ ಸೈಬರ್ ಅಪರಾಧಗಳೂ ಹೆಚ್ಚಾಗುತ್ತಿದ್ದು, ಇಂತಹ ಅಪರಾಧ ಪ್ರಕರಣಗಳ ತನಿಖೆ ಮಾಡುವ ಅಧಿಕಾರಿಗಳಿಗೆ ತರಬೇತಿ ನೀಡುವ ಅಗತ್ಯ ಇದೆ~ ಎಂದು ಉಡುಪಿ ಜಿಲ್ಲಾ ತ್ವರಿತ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶ ಜಿ.ಎಸ್. ರೇವಣಕರ ಅಭಿಪ್ರಾಯಪಟ್ಟರು.<br /> <br /> ರಾಷ್ಟ್ರೀಯ ಕಾನೂನು ಸೇವಾ ದಿನಾಚರಣೆ ಅಂಗವಾಗಿ ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಉಡುಪಿ ಜಿಲ್ಲಾ ವಕೀಲರ ಸಂಘ ಜಂಟಿಯಾಗಿ ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾನೂನು ಸಾಕ್ಷರತಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.<br /> <br /> ಭಾರತೀಯ ದಂಡ ಸಂಹಿತೆ, ಇತರ ಕಾನೂನುಗಳಿಗೂ ಸೈಬರ್ ಅಪರಾಧಗಳಿಗೂ ಬಹಳಷ್ಟು ವ್ಯತ್ಯಾಸ ಇದೆ. ಇತರೆ ಪ್ರಕರಣಗಳ ತನಿಖೆಯಲ್ಲಿ ಆಗುವಷ್ಟು ಪ್ರಗತಿ ಸೈಬರ್ ಅಪರಾಧಗಳಲ್ಲಿ ಆಗದಿರುವುದನ್ನು ಗಮನಿಸಬಹುದು. <br /> <br /> ಪ್ರಪಂಚದ ಯಾವುದಾದರೂ ಮೂಲೆಯಲ್ಲಿ ಕುಳಿತು ಸೈಬರ್ ಅಪರಾಧ ಎಸಗಲು ಅವಕಾಶ ಇರುವುದೇ ಇದಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದರು.ಭಾರತೀಯ ಸಾಕ್ಷ್ಯ ಕಾಯ್ದೆಯಲ್ಲಿ (ಎವಿಡೆನ್ಸ್ ಆಕ್ಟ್) ಇರುವ ಸಾಕ್ಷ್ಯಗಳನ್ನು ನೀಡಲು ಸೈಪರ್ ಅಪರಾಧಗಳಲ್ಲಿ ಸಾಧ್ಯವಿಲ್ಲ. <br /> <br /> ಮಾಹಿತಿ ತಂತ್ರಜ್ಞಾನ ಕಾಯ್ದೆ ಅನ್ವಯ ಎಲೆಕ್ಟ್ರಾನಿಕ್ಸ್ ದಾಖಲೆಗಳನ್ನು ಈ ಪ್ರಕರಣಗಳಲ್ಲಿ ಒದಗಿಸಬೇಕಾಗುತ್ತದೆ. ಆದ್ದರಿಂದ ಸೈಪರ್ ಅಪರಾಧಗಳ ತನಿಖೆ ಮಾಡುವವರಿಗೆ ಹೆಚ್ಚಿನ ತರಬೇತಿ ನೀಡಬೇಕು ಎಂದರು.<br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ನರೇಂದ್ರ ಕುಮಾರ್ ಗುಣಕಿ, ಕಾನೂನು ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕಾನೂನು ಸೇವಾ ಪ್ರಾಧಿಕಾರವನ್ನು ದೇಶದಲ್ಲಿ ಜಾರಿಗೆ ತರಲಾಗಿದೆ. <br /> <br /> ಅಗತ್ಯ ಇರುವವರಿಗೆ ಕಾನೂನು ಸೇವೆಗಳನ್ನು ನೀಡುವಲ್ಲಿ ರಾಜ್ಯ ಮುಂದಿದೆ ಎಂದು ಹೇಳಿದರು.<br /> ಜಿಲ್ಲಾ ಸಹಾಯಕ ಸರ್ಕಾರಿ ವಕೀಲ ಗುರುರಾಜ ಐತಾಳ್ ಅವರು ಸೈಬರ್ ಕಾನೂನು ಬಗ್ಗೆ ಮಾಹಿತಿ ನೀಡಿದರು. <br /> ಮದುಸೂಧನ್ ಸಾಮಗ ಪ್ರಾರ್ಥಿಸಿದರು. ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಾವಿತ್ರಿ ವಿ ಭಟ್ ಸ್ವಾಗತಿಸಿದರು. ವಕೀಲೆ ದೀಪಾ ಕಾರ್ಯಕ್ರಮದ ನಿರೂಪಣೆ ಮಾಡಿದರು. ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಟಿ. ವಿಜಯಕುಮಾರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>