<p><strong>ಹೈದರಾಬಾದ್ (ಪಿಟಿಐ): </strong>`ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಆಕರ್ಷಕ ಶೈಲಿಯ ಉಡುಪು ಕೂಡ ಒಂದು ಕಾರಣವೇ ಹೊರತು ಅದರಿಂದಲೇ ಅಂತಹ ಪ್ರಕರಣಗಳು ಘಟಿಸುತ್ತವೆ ಎಂಬುದಾಗಿ ನಾನು ಹೇಳಿಲ್ಲ~ ಎಂದು ಆಂಧ್ರ ಪ್ರದೇಶದ ಡಿಜಿಪಿ ವಿ.ದಿನೇಶ್ ರೆಡ್ಡಿ ಬುಧವಾರ ಸ್ಪಷ್ಟೀಕರಣ ನೀಡಿದ್ದಾರೆ.<br /> <br /> ಸಿನಿಮೀಯ ಮತ್ತು ಆಕರ್ಷಕ ಶೈಲಿಯ ಪ್ರಚೋದನಕಾರಿ ಉಡುಪು ಧರಿಸುವುದು ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿರುವುದಕ್ಕೆ ಮುಖ್ಯ ಕಾರಣ ಎಂದು ಇತ್ತೀಚೆಗೆ ಹೇಳಿಕೆ ನೀಡಿ ಅವರು ವಿವಾದಕ್ಕೆ ಒಳಗಾಗಿದ್ದರು. ಅವರ ಈ ಹೇಳಿಕೆಯ ಬಗ್ಗೆ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಮಹಿಳಾ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿ ಕಟುವಾದ ಶಬ್ದಗಳಲ್ಲಿ ಖಂಡಿಸಿದ್ದವು.<br /> <br /> ಮಹಿಳೆಯರನ್ನು ಕೀಳಾಗಿ ಬಿಂಬಿಸುವ ಯಾವುದೇ ಉದ್ದೇಶ ತಮಗಿರಲಿಲ್ಲ ಮತ್ತು ಸಾಮಾಜಿಕ ಅಧ್ಯಯನದ ಹಿನ್ನೆಲೆಯಲ್ಲಿ ಈ ರೀತಿಯ ಹೇಳಿಕೆ ನೀಡ್ದ್ದಿದೇನೆ ಎಂದು ರೆಡ್ಡಿ ತಿಳಿಸಿದ್ದಾರೆ.<br /> <br /> ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಮಹಿಳೆಯರು ಧರಿಸುವ ಪ್ರಚೋದನಕಾರಿ ಉಡುಪು ಕೂಡ ಒಂದು ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಈ ಹಿಂದೆ ಹೇಳಿರುವುದು ಮತ್ತು ಸಾಮಾಜಿಕ ಅಧ್ಯಯನದ ಹಿನ್ನೆಲೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾಗಿ ಅವರು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.<br /> <br /> ಈ ವಿವಾದ ಹುಟ್ಟಿಕೊಳ್ಳಲು ಮಾಧ್ಯಮಗಳೇ ಕಾರಣ ಎಂದು ದೂರಿರುವ ಅವರು, ಕೆಲ ಸ್ವಹಿತಾಸಕ್ತಿಗಳು ಇಂತಹ ವಿಷಯವನ್ನು ಗಾಳಿಯಲ್ಲಿ ತೇಲಿ ಬಿಡುತ್ತವೆ. ಇದರಿಂದ ಸಮಾಜಕ್ಕೆ ಯಾವುದೇ ಒಳಿತಾಗುವುದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಪಿಟಿಐ): </strong>`ಮಹಿಳೆಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಆಕರ್ಷಕ ಶೈಲಿಯ ಉಡುಪು ಕೂಡ ಒಂದು ಕಾರಣವೇ ಹೊರತು ಅದರಿಂದಲೇ ಅಂತಹ ಪ್ರಕರಣಗಳು ಘಟಿಸುತ್ತವೆ ಎಂಬುದಾಗಿ ನಾನು ಹೇಳಿಲ್ಲ~ ಎಂದು ಆಂಧ್ರ ಪ್ರದೇಶದ ಡಿಜಿಪಿ ವಿ.ದಿನೇಶ್ ರೆಡ್ಡಿ ಬುಧವಾರ ಸ್ಪಷ್ಟೀಕರಣ ನೀಡಿದ್ದಾರೆ.<br /> <br /> ಸಿನಿಮೀಯ ಮತ್ತು ಆಕರ್ಷಕ ಶೈಲಿಯ ಪ್ರಚೋದನಕಾರಿ ಉಡುಪು ಧರಿಸುವುದು ಮಹಿಳೆಯರ ಮೇಲೆ ಅತ್ಯಾಚಾರ ನಡೆಯುತ್ತಿರುವುದಕ್ಕೆ ಮುಖ್ಯ ಕಾರಣ ಎಂದು ಇತ್ತೀಚೆಗೆ ಹೇಳಿಕೆ ನೀಡಿ ಅವರು ವಿವಾದಕ್ಕೆ ಒಳಗಾಗಿದ್ದರು. ಅವರ ಈ ಹೇಳಿಕೆಯ ಬಗ್ಗೆ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, ಮಹಿಳಾ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿ ಕಟುವಾದ ಶಬ್ದಗಳಲ್ಲಿ ಖಂಡಿಸಿದ್ದವು.<br /> <br /> ಮಹಿಳೆಯರನ್ನು ಕೀಳಾಗಿ ಬಿಂಬಿಸುವ ಯಾವುದೇ ಉದ್ದೇಶ ತಮಗಿರಲಿಲ್ಲ ಮತ್ತು ಸಾಮಾಜಿಕ ಅಧ್ಯಯನದ ಹಿನ್ನೆಲೆಯಲ್ಲಿ ಈ ರೀತಿಯ ಹೇಳಿಕೆ ನೀಡ್ದ್ದಿದೇನೆ ಎಂದು ರೆಡ್ಡಿ ತಿಳಿಸಿದ್ದಾರೆ.<br /> <br /> ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿರುವುದಕ್ಕೆ ಮಹಿಳೆಯರು ಧರಿಸುವ ಪ್ರಚೋದನಕಾರಿ ಉಡುಪು ಕೂಡ ಒಂದು ಕಾರಣ ಎಂದು ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರು ಈ ಹಿಂದೆ ಹೇಳಿರುವುದು ಮತ್ತು ಸಾಮಾಜಿಕ ಅಧ್ಯಯನದ ಹಿನ್ನೆಲೆಯಲ್ಲಿ ಈ ರೀತಿಯ ಹೇಳಿಕೆ ನೀಡಿದ್ದಾಗಿ ಅವರು ತಮ್ಮನ್ನು ಸಮರ್ಥಿಸಿಕೊಂಡಿದ್ದಾರೆ.<br /> <br /> ಈ ವಿವಾದ ಹುಟ್ಟಿಕೊಳ್ಳಲು ಮಾಧ್ಯಮಗಳೇ ಕಾರಣ ಎಂದು ದೂರಿರುವ ಅವರು, ಕೆಲ ಸ್ವಹಿತಾಸಕ್ತಿಗಳು ಇಂತಹ ವಿಷಯವನ್ನು ಗಾಳಿಯಲ್ಲಿ ತೇಲಿ ಬಿಡುತ್ತವೆ. ಇದರಿಂದ ಸಮಾಜಕ್ಕೆ ಯಾವುದೇ ಒಳಿತಾಗುವುದಿಲ್ಲ ಎಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>