<p><strong>ಮುಂಬೈ (ಪಿಟಿಐ): </strong>`ಲಂಡನ್ ಒಲಿಂಪಿಕ್ಸ್ನ ಟೆನಿಸ್ ಕ್ರೀಡೆಯಲ್ಲಿ ಪದಕಗಳನ್ನು ಗೆಲ್ಲುತ್ತೇವೆ ಎಂದು ಭರವಸೆ ನೀಡುವುದಿಲ್ಲ. ಆದರೆ ಉತ್ತಮ ಪ್ರದರ್ಶನದ ಭರವಸೆ ಮಾತ್ರ ನೀಡಬಲ್ಲೆ~ ಎಂದು ಭಾರತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹೇಳಿದರು. <br /> <br /> `ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಬೇಕು ಎನ್ನುವುದು ಎಲ್ಲರ ಆಸೆಯಾಗಿರುತ್ತದೆ. ಆದ್ದರಿಂದ ನಾವೂ ಒತ್ತಡದಲ್ಲಿರುತ್ತೇವೆ. ಆದ್ದರಿಂದ ಪದಕದ ಭರವಸೆ ನೀಡಲಾರೆವು. ಖಂಡಿತವಾಗಿಯೂ ಹೇಳುತ್ತೇನೆ, ನಮ್ಮಿಂದ ಉತ್ತಮ ಪ್ರದರ್ಶನ ಮೂಡಿ ಬರುತ್ತದೆ~ ಎಂದು ಹೈದರಾಬಾದ್ನ ಸಾನಿಯಾ ನುಡಿದರು. <br /> <br /> ಶುಕ್ರವಾರ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಈ ಸಲದ ಒಲಿಂಪಿಕ್ಸ್ನಲ್ಲಿ ಸಾನಿಯಾ ಡಬಲ್ಸ್ ವಿಭಾಗದಲ್ಲಿ ರುಷ್ಮಿ ಚಕ್ರವರ್ತಿ ಜೊತೆ ಹಾಗೂ ಮಿಶ್ರ ಡಬಲ್ಸ್ನಲ್ಲಿ ಲಿಯಾಂಡರ್ ಪೇಸ್ ಜೊತೆ ಕಣಕ್ಕಿಳಿಯಲಿದ್ದಾರೆ. <br /> <br /> ಒಲಿಂಪಿಕ್ಸ್ನಲ್ಲಿ ಭಾರತ ಯಾವ ಕ್ರೀಡೆಗಳಲ್ಲಿ ಪದಕ ಗೆಲ್ಲುವ ವಿಶ್ವಾಸವಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕ್ರೀಡಾ ಸಚಿವ ಅಜಯ್ ಮಾಕನ್ ಅವರನ್ನು ಪ್ರಶ್ನಿಸಿದಾಗ, `ಪದಕ ಗೆಲ್ಲುವ ಬಗ್ಗೆ ಭವಿಷ್ಯ ನುಡಿಯಲಾರೆ~ ಎಂದಷ್ಟೇ ಹೇಳಿದರು.<br /> <br /> `ಪದಕ ಗೆಲ್ಲುವ ಸಂಖ್ಯೆಯ ಬಗ್ಗೆ ಮುಂಚಿತವಾಗಿ ಏನನ್ನೂ ಹೇಳಲಾರೆ. 2008ರ ಒಲಿಂಪಿಕ್ಸ್ಗೆ 56 ಸ್ಪರ್ಧಿಗಳು ಅರ್ಹತೆ ಪಡೆದಿದ್ದರು. ಈ ಸಲ 81ಅಥ್ಲೀಟ್ಗಳು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ~ ಎಂದು ಮಾಕನ್ ನುಡಿದರು.<br /> <br /> ರಾಷ್ಟ್ರೀಯ ಕ್ರೀಡೆ ಹಾಕಿ ಬಗ್ಗೆ ಮಾತನಾಡಿದ ಅವರು, ಬೀಜಿಂಗ್ ಒಲಿಂಪಿಕ್ಸ್ಗೆ ಅರ್ಹತೆ ಪಡೆಯದೇ ಪರದಾಡಿದ್ದ ಭಾರತ ಹಾಕಿ ತಂಡ ಈ ಸಲ ಅರ್ಹತೆ ಪಡೆದಿದೆ. ಈಗಿರುವ ತಂಡ ಹಾಕಿ ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳಸಬೇಕು ಎಂದು ಸಲಹೆ ನೀಡಿದರು.<br /> <br /> ಕೊರೆತೆ ಇರುವುದು ನಿಜ: ಒಲಿಂಪಿಕ್ಸ್ಗೆ ಸಜ್ಜುಗೊಳ್ಳಲು ಸೌಲಭ್ಯಗಳ ಕೊರತೆಯಿದೆಯಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಕನ್, `ಕೊರತೆಗಳಿರುವುದು ನಿಜ~ ಎಂದು ಒಪ್ಪಿಕೊಂಡರು. <br /> <br /> `ಮೊದಲನೆಯದಾಗಿ ಆಟಗಾರರ ದೈಹಿಕ ಸಾಮರ್ಥ್ಯ ಉತ್ತಮಗೊಳ್ಳಬೇಕು. ನಂತರ ಸೌಲಭ್ಯಗಳ ಕೊರತೆಗಳಿವೆ. ರಾತ್ರಿಯ ವೇಳೆಯಲ್ಲೂ ಅಭ್ಯಾಸ ನಡೆಸಲು ಸರಿಯಾಗಿ ಬೆಳಕಿನ ವ್ಯವಸ್ಥೆ ಹಾಗೂ ತರಬೇತಿಗೆ ವೈಜ್ಞಾನಿಕ ಸಿಬ್ಬಂದಿ ಇಲ್ಲದಿರುವುದು. ಹೀಗೆ ಹಲವು ಸಮಸ್ಯೆಗಳಿವೆ. ಅವುಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು~ ಸಚಿವರು ನುಡಿದರು.<br /> <br /> `ಒಲಿಂಪಿಕ್ಸ್ಗೆ ಅರ್ಹತೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 2016 ಹಾಗೂ 2020ರ ಒಲಿಂಪಿಕ್ಸ್ ವೇಳೆಗೆ ಈ ಸಂಖ್ಯೆಯಲ್ಲಿ ಸುಧಾರಣೆ ಕಾಣಲಿದೆ~ ಎನ್ನುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. <br /> <br /> ಟೆನಿಸ್ ಆಟಗಾರ ಮಹೇಶ್ ಭೂಪತಿ, ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ, ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong>`ಲಂಡನ್ ಒಲಿಂಪಿಕ್ಸ್ನ ಟೆನಿಸ್ ಕ್ರೀಡೆಯಲ್ಲಿ ಪದಕಗಳನ್ನು ಗೆಲ್ಲುತ್ತೇವೆ ಎಂದು ಭರವಸೆ ನೀಡುವುದಿಲ್ಲ. ಆದರೆ ಉತ್ತಮ ಪ್ರದರ್ಶನದ ಭರವಸೆ ಮಾತ್ರ ನೀಡಬಲ್ಲೆ~ ಎಂದು ಭಾರತ ಟೆನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ ಹೇಳಿದರು. <br /> <br /> `ಒಲಿಂಪಿಕ್ಸ್ನಲ್ಲಿ ಪದಕ ಗೆಲ್ಲಬೇಕು ಎನ್ನುವುದು ಎಲ್ಲರ ಆಸೆಯಾಗಿರುತ್ತದೆ. ಆದ್ದರಿಂದ ನಾವೂ ಒತ್ತಡದಲ್ಲಿರುತ್ತೇವೆ. ಆದ್ದರಿಂದ ಪದಕದ ಭರವಸೆ ನೀಡಲಾರೆವು. ಖಂಡಿತವಾಗಿಯೂ ಹೇಳುತ್ತೇನೆ, ನಮ್ಮಿಂದ ಉತ್ತಮ ಪ್ರದರ್ಶನ ಮೂಡಿ ಬರುತ್ತದೆ~ ಎಂದು ಹೈದರಾಬಾದ್ನ ಸಾನಿಯಾ ನುಡಿದರು. <br /> <br /> ಶುಕ್ರವಾರ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಅವರು ಮಾತನಾಡಿದರು. ಈ ಸಲದ ಒಲಿಂಪಿಕ್ಸ್ನಲ್ಲಿ ಸಾನಿಯಾ ಡಬಲ್ಸ್ ವಿಭಾಗದಲ್ಲಿ ರುಷ್ಮಿ ಚಕ್ರವರ್ತಿ ಜೊತೆ ಹಾಗೂ ಮಿಶ್ರ ಡಬಲ್ಸ್ನಲ್ಲಿ ಲಿಯಾಂಡರ್ ಪೇಸ್ ಜೊತೆ ಕಣಕ್ಕಿಳಿಯಲಿದ್ದಾರೆ. <br /> <br /> ಒಲಿಂಪಿಕ್ಸ್ನಲ್ಲಿ ಭಾರತ ಯಾವ ಕ್ರೀಡೆಗಳಲ್ಲಿ ಪದಕ ಗೆಲ್ಲುವ ವಿಶ್ವಾಸವಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೇಂದ್ರ ಕ್ರೀಡಾ ಸಚಿವ ಅಜಯ್ ಮಾಕನ್ ಅವರನ್ನು ಪ್ರಶ್ನಿಸಿದಾಗ, `ಪದಕ ಗೆಲ್ಲುವ ಬಗ್ಗೆ ಭವಿಷ್ಯ ನುಡಿಯಲಾರೆ~ ಎಂದಷ್ಟೇ ಹೇಳಿದರು.<br /> <br /> `ಪದಕ ಗೆಲ್ಲುವ ಸಂಖ್ಯೆಯ ಬಗ್ಗೆ ಮುಂಚಿತವಾಗಿ ಏನನ್ನೂ ಹೇಳಲಾರೆ. 2008ರ ಒಲಿಂಪಿಕ್ಸ್ಗೆ 56 ಸ್ಪರ್ಧಿಗಳು ಅರ್ಹತೆ ಪಡೆದಿದ್ದರು. ಈ ಸಲ 81ಅಥ್ಲೀಟ್ಗಳು ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ. ಇದೊಂದು ಆಶಾದಾಯಕ ಬೆಳವಣಿಗೆ~ ಎಂದು ಮಾಕನ್ ನುಡಿದರು.<br /> <br /> ರಾಷ್ಟ್ರೀಯ ಕ್ರೀಡೆ ಹಾಕಿ ಬಗ್ಗೆ ಮಾತನಾಡಿದ ಅವರು, ಬೀಜಿಂಗ್ ಒಲಿಂಪಿಕ್ಸ್ಗೆ ಅರ್ಹತೆ ಪಡೆಯದೇ ಪರದಾಡಿದ್ದ ಭಾರತ ಹಾಕಿ ತಂಡ ಈ ಸಲ ಅರ್ಹತೆ ಪಡೆದಿದೆ. ಈಗಿರುವ ತಂಡ ಹಾಕಿ ಕ್ರೀಡೆಯನ್ನು ಇನ್ನಷ್ಟು ಎತ್ತರಕ್ಕೆ ಬೆಳಸಬೇಕು ಎಂದು ಸಲಹೆ ನೀಡಿದರು.<br /> <br /> ಕೊರೆತೆ ಇರುವುದು ನಿಜ: ಒಲಿಂಪಿಕ್ಸ್ಗೆ ಸಜ್ಜುಗೊಳ್ಳಲು ಸೌಲಭ್ಯಗಳ ಕೊರತೆಯಿದೆಯಲ್ಲಾ ಎನ್ನುವ ಪ್ರಶ್ನೆಗೆ ಉತ್ತರಿಸಿದ ಮಾಕನ್, `ಕೊರತೆಗಳಿರುವುದು ನಿಜ~ ಎಂದು ಒಪ್ಪಿಕೊಂಡರು. <br /> <br /> `ಮೊದಲನೆಯದಾಗಿ ಆಟಗಾರರ ದೈಹಿಕ ಸಾಮರ್ಥ್ಯ ಉತ್ತಮಗೊಳ್ಳಬೇಕು. ನಂತರ ಸೌಲಭ್ಯಗಳ ಕೊರತೆಗಳಿವೆ. ರಾತ್ರಿಯ ವೇಳೆಯಲ್ಲೂ ಅಭ್ಯಾಸ ನಡೆಸಲು ಸರಿಯಾಗಿ ಬೆಳಕಿನ ವ್ಯವಸ್ಥೆ ಹಾಗೂ ತರಬೇತಿಗೆ ವೈಜ್ಞಾನಿಕ ಸಿಬ್ಬಂದಿ ಇಲ್ಲದಿರುವುದು. ಹೀಗೆ ಹಲವು ಸಮಸ್ಯೆಗಳಿವೆ. ಅವುಗಳನ್ನು ಅಭಿವೃದ್ಧಿ ಪಡಿಸಬೇಕಿದೆ ಎಂದು~ ಸಚಿವರು ನುಡಿದರು.<br /> <br /> `ಒಲಿಂಪಿಕ್ಸ್ಗೆ ಅರ್ಹತೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. 2016 ಹಾಗೂ 2020ರ ಒಲಿಂಪಿಕ್ಸ್ ವೇಳೆಗೆ ಈ ಸಂಖ್ಯೆಯಲ್ಲಿ ಸುಧಾರಣೆ ಕಾಣಲಿದೆ~ ಎನ್ನುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. <br /> <br /> ಟೆನಿಸ್ ಆಟಗಾರ ಮಹೇಶ್ ಭೂಪತಿ, ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಬೈಚುಂಗ್ ಭುಟಿಯಾ, ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>