<p><strong>ಹೊನ್ನಾಳಿ:</strong> ಕನ್ನಡ ಭಾಷಾ ವಿಷಯದಲ್ಲಿ ಶೇ. ನೂರರಷ್ಟು ಫಲಿತಾಂಶ ಗಳಿಸಲು ಎಲ್ಲಾ ಪ್ರೌಢಶಾಲೆಗಳ ಮುಖ್ಯಸ್ಥರೂ ಪ್ರಯತ್ನಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ. ಮಲ್ಲಿಕಾರ್ಜುನ್ ಹೇಳಿದರು. <br /> ಗೊಲ್ಲರಹಳ್ಳಿಯ ವೆಂಕಟೇಶ್ವರ ವಿದ್ಯಾ ಸಂಸ್ಥೆಯಲ್ಲಿ ಸೋಮವಾರ ನಡೆದ ಕನ್ನಡ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಎಲ್ಲಾ ಶಾಲೆಗಳೂ ಉತ್ತಮ ಫಲಿತಾಂಶ ಗಳಿಸಬೇಕು. ಇದಕ್ಕಾಗಿ ಶಿಕ್ಷಕರು ಗುಣಾತ್ಮಕ ಬೋಧನೆ ಮಾಡಬೇಕು. ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದರು.<br /> <br /> ದಾವಣಗೆರೆಯ ಸಂಪನ್ಮೂಲ ವ್ಯಕ್ತಿ ಗಣೇಶಾಚಾರ್ ದಿನವಿಡೀ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. <br /> ಡಿಡಿಪಿಐ ಕಚೇರಿಯ ಕನ್ನಡ ವಿಷಯ ಪರಿವೀಕ್ಷಕಿ ಲಕ್ಷ್ಮೀದೇವಿ, ಬಿಇಒ ಕಚೇರಿಯ ಕನ್ನಡ ವಿಷಯ ಪರಿವೀಕ್ಷಕ ಕರಿಸಿದ್ದಪ್ಪ, ಕನ್ನಡ ಭಾಷಾ ವೇದಿಕೆಯ ಅಧ್ಯಕ್ಷ ಬಸವರಾಜಪ್ಪ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ಎಂಪಿಎಂ ಚನ್ನಬಸಯ್ಯ, ಖಜಾಂಚಿ ಶಿವಲಿಂಗಪ್ಪ ಜಾಡರ್ ಇತರರು ಉಪಸ್ಥಿತರಿದ್ದರು. <br /> <br /> ಆರ್.ಎಚ್. ನೂಲಗೇರಿ ಸ್ವಾಗತಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಶಕೀಲ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷ ಎನ್.ಎಚ್. ರವಿಗೌಡರ್ ವಂದಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊನ್ನಾಳಿ:</strong> ಕನ್ನಡ ಭಾಷಾ ವಿಷಯದಲ್ಲಿ ಶೇ. ನೂರರಷ್ಟು ಫಲಿತಾಂಶ ಗಳಿಸಲು ಎಲ್ಲಾ ಪ್ರೌಢಶಾಲೆಗಳ ಮುಖ್ಯಸ್ಥರೂ ಪ್ರಯತ್ನಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಸಿ. ಮಲ್ಲಿಕಾರ್ಜುನ್ ಹೇಳಿದರು. <br /> ಗೊಲ್ಲರಹಳ್ಳಿಯ ವೆಂಕಟೇಶ್ವರ ವಿದ್ಯಾ ಸಂಸ್ಥೆಯಲ್ಲಿ ಸೋಮವಾರ ನಡೆದ ಕನ್ನಡ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಮುಂಬರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ತಾಲ್ಲೂಕಿನ ಎಲ್ಲಾ ಶಾಲೆಗಳೂ ಉತ್ತಮ ಫಲಿತಾಂಶ ಗಳಿಸಬೇಕು. ಇದಕ್ಕಾಗಿ ಶಿಕ್ಷಕರು ಗುಣಾತ್ಮಕ ಬೋಧನೆ ಮಾಡಬೇಕು. ನಿಯಮಿತವಾಗಿ ಪರೀಕ್ಷೆಗಳನ್ನು ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು ಎಂದರು.<br /> <br /> ದಾವಣಗೆರೆಯ ಸಂಪನ್ಮೂಲ ವ್ಯಕ್ತಿ ಗಣೇಶಾಚಾರ್ ದಿನವಿಡೀ ಶಿಕ್ಷಕರಿಗೆ ಮಾರ್ಗದರ್ಶನ ನೀಡಿದರು. <br /> ಡಿಡಿಪಿಐ ಕಚೇರಿಯ ಕನ್ನಡ ವಿಷಯ ಪರಿವೀಕ್ಷಕಿ ಲಕ್ಷ್ಮೀದೇವಿ, ಬಿಇಒ ಕಚೇರಿಯ ಕನ್ನಡ ವಿಷಯ ಪರಿವೀಕ್ಷಕ ಕರಿಸಿದ್ದಪ್ಪ, ಕನ್ನಡ ಭಾಷಾ ವೇದಿಕೆಯ ಅಧ್ಯಕ್ಷ ಬಸವರಾಜಪ್ಪ, ಪ್ರೌಢಶಾಲಾ ಮುಖ್ಯೋಪಾಧ್ಯಾಯರ ಸಂಘದ ಕಾರ್ಯದರ್ಶಿ ಎಂಪಿಎಂ ಚನ್ನಬಸಯ್ಯ, ಖಜಾಂಚಿ ಶಿವಲಿಂಗಪ್ಪ ಜಾಡರ್ ಇತರರು ಉಪಸ್ಥಿತರಿದ್ದರು. <br /> <br /> ಆರ್.ಎಚ್. ನೂಲಗೇರಿ ಸ್ವಾಗತಿಸಿದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಕಾರ್ಯದರ್ಶಿ ಶಕೀಲ್ ಅಹಮ್ಮದ್ ಕಾರ್ಯಕ್ರಮ ನಿರೂಪಿಸಿದರು. ಅಧ್ಯಕ್ಷ ಎನ್.ಎಚ್. ರವಿಗೌಡರ್ ವಂದಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>