<p>ಚಾಮರಾಜನಗರ: `ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಯ ವಿದ್ಯಾರ್ಥಿ ಗಳೊಟ್ಟಿಗೆ ಪೈಪೋಟಿ ನಡೆಸಿ ಉತ್ತಮ ಫಲಿತಾಂಶ ಪಡೆಯುವ ವಾತಾವರಣ ಸೃಷ್ಟಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು~ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. <br /> <br /> ತಾಲ್ಲೂಕಿನ ಕೋಡಿಉಗನೆ ಗ್ರಾಮದಲ್ಲಿ ಈಚೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು. <br /> <br /> ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳೇ ಹೆಚ್ಚಿನ ಸಂಖ್ಯೆಯ್ಲ್ಲಲಿವೆ. ಅಲ್ಲಿನ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಂತೆ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಇದೇ ನನ್ನ ಆಶಯ. <br /> <br /> ಅದಕ್ಕಾಗಿ ಎ್ಲ್ಲಲ ರೀತಿಯ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. <br /> ಕೋಡಿಉಗನೆ ಗ್ರಾಮದಲ್ಲಿ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ಸಮವಸ್ತ್ರ ನೀಡುತ್ತಿದ್ದಾರೆ. ಇದು ಇತರೇ ಶಾಲೆಗಳಿಗೆ ಆದರ್ಶಪ್ರಾಯವಾದ ಕಾರ್ಯಕ್ರಮ ಎಂದರು. <br /> <br /> ತಾ.ಪಂ. ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಅನಾದಾರ ತಳೆಯಬಾರದು. ಮಕ್ಕಳನ್ನು ಶಾಲೆಗೆ ಕಳುಹಿಸಿ ಅವರ ಉಜ್ಜಲ ಭವಿಷ್ಯ ರೂಪಿಸಬೇಕು ಎಂದರು. <br /> <br /> ಮೈಮುಲ್ ನಿರ್ದೇಶಕ ಎಚ್.ಎಸ್. ಬಸವರಾಜು ಮಾತನಾಡಿ, ಸಮವಸ್ತ್ರ ಧರಿಸುವುದರಿಂದ ಮಕ್ಕಳಲ್ಲಿ ಶಿಸ್ತು ಮತ್ತು ಸಂಯಮ ಕಲಿಸಲು ಸಾಧ್ಯ ಎಂದು ನುಡಿದರು. <br /> <br /> ಕಾರ್ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಪುರುಷೋತ್ತಮ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾ.ಪಂ. ಅಧ್ಯಕ್ಷ ನಂಜೇಂದ್ರ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಂಜಯ್ಯ, ಗ್ರಾ.ಪಂ. ಸದಸ್ಯ ಜಾನ್ಸನ್, ಸುನೀತಾ, ಮಹೇಶ್ವರಿ, ಶಿಕ್ಷಣಾಧಿಕಾರಿ ಪ್ರಭಾಕರ್, ಮುಖ್ಯಶಿಕ್ಷಕ ರಂಗನಾಥ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಾಮರಾಜನಗರ: `ಸರ್ಕಾರಿ ಶಾಲಾ ಮಕ್ಕಳು ಖಾಸಗಿ ಶಾಲೆಯ ವಿದ್ಯಾರ್ಥಿ ಗಳೊಟ್ಟಿಗೆ ಪೈಪೋಟಿ ನಡೆಸಿ ಉತ್ತಮ ಫಲಿತಾಂಶ ಪಡೆಯುವ ವಾತಾವರಣ ಸೃಷ್ಟಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು~ ಎಂದು ಶಾಸಕ ಸಿ. ಪುಟ್ಟರಂಗಶೆಟ್ಟಿ ತಿಳಿಸಿದರು. <br /> <br /> ತಾಲ್ಲೂಕಿನ ಕೋಡಿಉಗನೆ ಗ್ರಾಮದಲ್ಲಿ ಈಚೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಉಚಿತ ಸಮವಸ್ತ್ರ ವಿತರಿಸಿ ಅವರು ಮಾತನಾಡಿದರು. <br /> <br /> ತಾಲ್ಲೂಕಿನಲ್ಲಿ ಸರ್ಕಾರಿ ಶಾಲೆಗಳೇ ಹೆಚ್ಚಿನ ಸಂಖ್ಯೆಯ್ಲ್ಲಲಿವೆ. ಅಲ್ಲಿನ ವಿದ್ಯಾರ್ಥಿಗಳು ನಗರ ಪ್ರದೇಶದ ವಿದ್ಯಾರ್ಥಿಗಳಂತೆ ವಿದ್ಯಾಭ್ಯಾಸ ಮಾಡಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು. ಇದೇ ನನ್ನ ಆಶಯ. <br /> <br /> ಅದಕ್ಕಾಗಿ ಎ್ಲ್ಲಲ ರೀತಿಯ ಕ್ರಮಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. <br /> ಕೋಡಿಉಗನೆ ಗ್ರಾಮದಲ್ಲಿ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯಿಂದ ಸ್ವಂತ ಖರ್ಚಿನಲ್ಲಿ ಮಕ್ಕಳಿಗೆ ಸಮವಸ್ತ್ರ ನೀಡುತ್ತಿದ್ದಾರೆ. ಇದು ಇತರೇ ಶಾಲೆಗಳಿಗೆ ಆದರ್ಶಪ್ರಾಯವಾದ ಕಾರ್ಯಕ್ರಮ ಎಂದರು. <br /> <br /> ತಾ.ಪಂ. ಮಾಜಿ ಅಧ್ಯಕ್ಷ ಬಿ.ಕೆ. ರವಿಕುಮಾರ್ ಮಾತನಾಡಿ, ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರು ಅನಾದಾರ ತಳೆಯಬಾರದು. ಮಕ್ಕಳನ್ನು ಶಾಲೆಗೆ ಕಳುಹಿಸಿ ಅವರ ಉಜ್ಜಲ ಭವಿಷ್ಯ ರೂಪಿಸಬೇಕು ಎಂದರು. <br /> <br /> ಮೈಮುಲ್ ನಿರ್ದೇಶಕ ಎಚ್.ಎಸ್. ಬಸವರಾಜು ಮಾತನಾಡಿ, ಸಮವಸ್ತ್ರ ಧರಿಸುವುದರಿಂದ ಮಕ್ಕಳಲ್ಲಿ ಶಿಸ್ತು ಮತ್ತು ಸಂಯಮ ಕಲಿಸಲು ಸಾಧ್ಯ ಎಂದು ನುಡಿದರು. <br /> <br /> ಕಾರ್ಯಕ್ರಮದಲ್ಲಿ ಎಪಿಎಂಸಿ ಉಪಾಧ್ಯಕ್ಷ ಪುರುಷೋತ್ತಮ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾ.ಪಂ. ಅಧ್ಯಕ್ಷ ನಂಜೇಂದ್ರ, ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಚನ್ನಂಜಯ್ಯ, ಗ್ರಾ.ಪಂ. ಸದಸ್ಯ ಜಾನ್ಸನ್, ಸುನೀತಾ, ಮಹೇಶ್ವರಿ, ಶಿಕ್ಷಣಾಧಿಕಾರಿ ಪ್ರಭಾಕರ್, ಮುಖ್ಯಶಿಕ್ಷಕ ರಂಗನಾಥ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>