<p><strong>ಚೆನ್ನೈ (ಪಿಟಿಐ):</strong> ಈ ಬಾರಿ ಉತ್ತಮ ಮುಂಗಾರು ನಿರೀಕ್ಷಿಸಲಾಗಿದ್ದು, ಕೃಷಿ ಕ್ಷೇತ್ರದಲ್ಲಿ ಶೇ 4ರಷ್ಟು ಬೆಳವಣಿಗೆಯ ಗುರಿ ಇಟ್ಟುಕೊಳ್ಳುವ ಅಗತ್ಯ ಇದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಸಲಹೆ ಮಾಡಿದೆ. ಈ ವರ್ಷ ಸಹಜ ಮುಂಗಾರು ಆದ ಪಕ್ಷದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ ದರವನ್ನು ವೃದ್ಧಿಸುವತ್ತಲೂ ಗಮನ ಹರಿಸಬೇಕು ಎಂದು ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಸಿ.ರಂಗರಾಜನ್ ಸುದ್ದಿಗಾರರಿಗೆ ತಿಳಿಸಿದರು.<br /> <br /> ಭೂ ವಿಜ್ಞಾನ ಸಚಿವಾಲಯ ಹಮ್ಮಿಕೊಂಡಿದ್ದ ಎರಡು ದಿನಗಳ ಸಮ್ಮೇಳನದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ದೇಶಾದ್ಯಂತ ಉತ್ತಮ ಮುಂಗಾರು ನಿರೀಕ್ಷಿಸಲಾಗಿದೆ ಎಂದರು.ಬೆಲೆ ಏರಿಕೆ ಬಗ್ಗೆ ಮಾತನಾಡಿದ ಅವರು, ಮಾರ್ಚ್ ತಿಂಗಳಿನಲ್ಲಿ ಹಣದುಬ್ಬರ ಅನಿರೀಕ್ಷಿತ. ಮುಂಬರುವ ದಿನಗಳಲ್ಲಿ ಶೇ 6ಕ್ಕೆ ಇಳಿಯಲಿದೆ ಎನ್ನುವ ನಿರೀಕ್ಷೆ ಇದೆ ಎಂದರು.<br /> <br /> ಅಹಾರ ಪದಾರ್ಥಗಳ ಬೆಲೆಯಲ್ಲಿ ಇಳಿಕೆ ಕಂಡಿರುವುದರಿಂದ ಹಣದುಬ್ಬರ ಸಹ ಇಳಿಮುಖವಾಗಲಿದೆ. ಜತೆಗೆ ಉತ್ಪಾದನಾ ರಂಗದಲ್ಲಿಯೂ ಹೆಚ್ಚಿನ ಉತ್ಪಾದನೆಗೆ ಒತ್ತು ನೀಡಿರುವುದರಿಂದ ಸಹಜವಾಗಿ ಹಣದುಬ್ಬರ ಇಳಿಮುಖವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚೆನ್ನೈ (ಪಿಟಿಐ):</strong> ಈ ಬಾರಿ ಉತ್ತಮ ಮುಂಗಾರು ನಿರೀಕ್ಷಿಸಲಾಗಿದ್ದು, ಕೃಷಿ ಕ್ಷೇತ್ರದಲ್ಲಿ ಶೇ 4ರಷ್ಟು ಬೆಳವಣಿಗೆಯ ಗುರಿ ಇಟ್ಟುಕೊಳ್ಳುವ ಅಗತ್ಯ ಇದೆ ಎಂದು ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿ ಸಲಹೆ ಮಾಡಿದೆ. ಈ ವರ್ಷ ಸಹಜ ಮುಂಗಾರು ಆದ ಪಕ್ಷದಲ್ಲಿ ಕೃಷಿ ಕ್ಷೇತ್ರದ ಅಭಿವೃದ್ಧಿ ದರವನ್ನು ವೃದ್ಧಿಸುವತ್ತಲೂ ಗಮನ ಹರಿಸಬೇಕು ಎಂದು ಆರ್ಥಿಕ ಸಲಹಾ ಮಂಡಳಿ ಅಧ್ಯಕ್ಷ ಸಿ.ರಂಗರಾಜನ್ ಸುದ್ದಿಗಾರರಿಗೆ ತಿಳಿಸಿದರು.<br /> <br /> ಭೂ ವಿಜ್ಞಾನ ಸಚಿವಾಲಯ ಹಮ್ಮಿಕೊಂಡಿದ್ದ ಎರಡು ದಿನಗಳ ಸಮ್ಮೇಳನದ ಸಂದರ್ಭದಲ್ಲಿ ಮಾತನಾಡಿದ ಅವರು, ಈ ಬಾರಿ ದೇಶಾದ್ಯಂತ ಉತ್ತಮ ಮುಂಗಾರು ನಿರೀಕ್ಷಿಸಲಾಗಿದೆ ಎಂದರು.ಬೆಲೆ ಏರಿಕೆ ಬಗ್ಗೆ ಮಾತನಾಡಿದ ಅವರು, ಮಾರ್ಚ್ ತಿಂಗಳಿನಲ್ಲಿ ಹಣದುಬ್ಬರ ಅನಿರೀಕ್ಷಿತ. ಮುಂಬರುವ ದಿನಗಳಲ್ಲಿ ಶೇ 6ಕ್ಕೆ ಇಳಿಯಲಿದೆ ಎನ್ನುವ ನಿರೀಕ್ಷೆ ಇದೆ ಎಂದರು.<br /> <br /> ಅಹಾರ ಪದಾರ್ಥಗಳ ಬೆಲೆಯಲ್ಲಿ ಇಳಿಕೆ ಕಂಡಿರುವುದರಿಂದ ಹಣದುಬ್ಬರ ಸಹ ಇಳಿಮುಖವಾಗಲಿದೆ. ಜತೆಗೆ ಉತ್ಪಾದನಾ ರಂಗದಲ್ಲಿಯೂ ಹೆಚ್ಚಿನ ಉತ್ಪಾದನೆಗೆ ಒತ್ತು ನೀಡಿರುವುದರಿಂದ ಸಹಜವಾಗಿ ಹಣದುಬ್ಬರ ಇಳಿಮುಖವಾಗಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>