<p>ಮಾಲೂರು : ಶಿಕ್ಷಕರು ಪ್ರಾಮಾಣಿಕತೆ ಮತ್ತು ಶ್ರೇಷ್ಠತೆ ಅಂಶಗಳನ್ನು ಅಧ್ಯಯನದಲ್ಲಿ ಅಳವಡಿಸಿಕೊಂಡು ಭೋದಿಸಿದಾಗ ವಿದ್ಯಾರ್ಥಿಗಳು ಸತ್ಪ್ರಜೆಗಳಾಗಲು ಸಾಧ್ಯ ಎಂದು ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಅಧ್ಯಕ್ಷ ಎಂ.ವಿ. ಹನುಮಂತಯ್ಯ ಅಭಿಪ್ರಾಯ ಪಟ್ಟರು. <br /> <br /> ಸೋಮವಾರ ಪಟ್ಟಣದ ಹೊರ ವಲಯದ ಬಾಪೂಜಿ ಡಿಇಡಿ ಕಾಲೇಜಿ ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಇಂದಿನ ಮಕ್ಕಳಿಗೆ ಶಿಕ್ಷಕರು ನೀತಿ ಮತ್ತು ಸನ್ಮಾರ್ಗದ ಬಗ್ಗೆ ಭೋದನೆ ನೀಡಬೇಕಾಗಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಮಾಸ್ತಿ ಕೃಷ್ಣಪ್ಪ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಸಿದ್ದಪ್ಪ, ವೆಂಕಟಸ್ವಾಮಿ, ಹಾಗೂ ಕೆಂಪಯ್ಯ ಅವರನ್ನು ಸನ್ಮಾನಿಸಲಾಯಿತು.<br /> <br /> ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕ ಮಾಸ್ತಿ ಕೃಷ್ಣಪ್ಪ, ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡುವ ಕೆಲಸವನ್ನು ಸರ್ಕಾರ ಹಾಗೂ ಸಮಾಜವು ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಸಂಸ್ಥೆ ಕಾರ್ಯದರ್ಶಿ ರುದ್ರಪ್ಪ, ನಿರ್ದೇಶಕ ವೆಂಕಟಸ್ವಾಮಿ, ಶಿಕ್ಷಕ ಸಿದ್ದಪ್ಪ, ವೆಂಕಟಸ್ವಾಮಿ, ಕೆಂಪಯ್ಯ, ಬಿಆರ್ಸಿ ವಿಜಯಕುಮಾರ್, ಸಿಆರ್ಸಿ ಹೊನ್ನಕಟ್ಟಿ, ಮುಖ್ಯ ಶಿಕ್ಷಕ ವೆಂಕಟರಮಣಪ್ಪ ಇದ್ದರು. ಶಿಕ್ಷಕ ಪ್ರಕಾಶ್ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಮಾಲೂರು : ಶಿಕ್ಷಕರು ಪ್ರಾಮಾಣಿಕತೆ ಮತ್ತು ಶ್ರೇಷ್ಠತೆ ಅಂಶಗಳನ್ನು ಅಧ್ಯಯನದಲ್ಲಿ ಅಳವಡಿಸಿಕೊಂಡು ಭೋದಿಸಿದಾಗ ವಿದ್ಯಾರ್ಥಿಗಳು ಸತ್ಪ್ರಜೆಗಳಾಗಲು ಸಾಧ್ಯ ಎಂದು ಬಾಪೂಜಿ ವಿದ್ಯಾ ಸಂಸ್ಥೆಯ ಗೌರವ ಅಧ್ಯಕ್ಷ ಎಂ.ವಿ. ಹನುಮಂತಯ್ಯ ಅಭಿಪ್ರಾಯ ಪಟ್ಟರು. <br /> <br /> ಸೋಮವಾರ ಪಟ್ಟಣದ ಹೊರ ವಲಯದ ಬಾಪೂಜಿ ಡಿಇಡಿ ಕಾಲೇಜಿ ನಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾ ಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> <br /> ರಾಷ್ಟ್ರದ ಅಭಿವೃದ್ಧಿಗೆ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಇಂದಿನ ಮಕ್ಕಳಿಗೆ ಶಿಕ್ಷಕರು ನೀತಿ ಮತ್ತು ಸನ್ಮಾರ್ಗದ ಬಗ್ಗೆ ಭೋದನೆ ನೀಡಬೇಕಾಗಿದೆ ಎಂದರು.<br /> <br /> ಇದೇ ಸಂದರ್ಭದಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಮಾಸ್ತಿ ಕೃಷ್ಣಪ್ಪ, ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಸಿದ್ದಪ್ಪ, ವೆಂಕಟಸ್ವಾಮಿ, ಹಾಗೂ ಕೆಂಪಯ್ಯ ಅವರನ್ನು ಸನ್ಮಾನಿಸಲಾಯಿತು.<br /> <br /> ಪ್ರಶಸ್ತಿ ಸ್ವೀಕರಿಸಿದ ಶಿಕ್ಷಕ ಮಾಸ್ತಿ ಕೃಷ್ಣಪ್ಪ, ಉತ್ತಮ ಶಿಕ್ಷಕರನ್ನು ಆಯ್ಕೆ ಮಾಡುವ ಕೆಲಸವನ್ನು ಸರ್ಕಾರ ಹಾಗೂ ಸಮಾಜವು ವಹಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. <br /> <br /> ಸಂಸ್ಥೆ ಕಾರ್ಯದರ್ಶಿ ರುದ್ರಪ್ಪ, ನಿರ್ದೇಶಕ ವೆಂಕಟಸ್ವಾಮಿ, ಶಿಕ್ಷಕ ಸಿದ್ದಪ್ಪ, ವೆಂಕಟಸ್ವಾಮಿ, ಕೆಂಪಯ್ಯ, ಬಿಆರ್ಸಿ ವಿಜಯಕುಮಾರ್, ಸಿಆರ್ಸಿ ಹೊನ್ನಕಟ್ಟಿ, ಮುಖ್ಯ ಶಿಕ್ಷಕ ವೆಂಕಟರಮಣಪ್ಪ ಇದ್ದರು. ಶಿಕ್ಷಕ ಪ್ರಕಾಶ್ನಿರೂಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>