<p><strong>ಚಳ್ಳಕೆರೆ: </strong>ಸರ್ಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶೇ 7.25ರ ಅಡಿಯಲ್ಲಿ ಕೊಡಮಾಡುವ ಪ್ರೋತ್ಸಾಹಧನದ ಸದುಪಯೋಗ ಪಡೆದುಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷೆ ಪಿ. ಶಂಷಾದ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. <br /> <br /> ಚಳ್ಳಕೆರೆ ಪಟ್ಟಣದ ಪುರಸಭೆಯಲ್ಲಿ ಶನಿವಾರ ಹಿಂದುಳಿದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ಸಹಾಯಧನ ವಿತರಿಸಿ ಅವರು ಮಾತನಾಡಿದರು.<br /> <br /> ಶೈಕ್ಷಣಿಕವಾಗಿ ಉನ್ನತ ಸಾಧನೆ ಮಾಡಬೇಕೆಂಬ ಅದಮ್ಯ ಉತ್ಸಾಹ ಇರುವ ವಿದ್ಯಾರ್ಥಿಗಳಿಗೆ ಬಡತನದ ಕಾರಣದಿಂದ ಉನ್ನತ ಶಿಕ್ಷಣ ಸಾಧ್ಯವಾಗುವುದಿಲ್ಲ. ಇದನ್ನರಿತ ರಾಜ್ಯ ಸರ್ಕಾರ ಹಿಂದುಳಿದ ಎಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಹಾಯಧನ ನೀಡುತ್ತಿದೆ ಎಂದು ವಿವರಿಸಿದರು.<br /> <br /> ಪ್ರಸಕ್ತ ಸಾಲಿನಲ್ಲಿ ಶೇ 7.25 ಅನುದಾನದ ಅಡಿಯಲ್ಲಿ ಒಟ್ಟು 3.54 ಲಕ್ಷ ಹಣ ವಿದ್ಯಾರ್ಥಿ ಸಹಾಯಧನಕ್ಕಾಗಿ ಬಿಡುಗಡೆ ಮಾಡಲಾಗಿದೆ. ಪದವಿ ಹಂತದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಎರಡು ಸಾವಿರ, ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಐದು ಸಾವಿರ, ಸಂಶೋಧನಾ ವಿದ್ಯಾರ್ಥಿಗಳಿಗೆ ` 15 ಸಾವಿರ, ವೃತ್ತಿಪರ ಕೋರ್ಸ್ಗಳಿಗೆ ` 10 ಸಾವಿರ ಸಹಾಯಧನ ವಿತರಿಸಲಾಗುತ್ತಿದೆ ಎಂದರು.<br /> <br /> ಈ ಸಂದರ್ಭದಲ್ಲಿ ಹಾಜರಿದ್ದ ಸ್ನಾತಕೋತ್ತರ ಪದವಿ ಪಡೆಯುತ್ತಿರುವ 4 ವಿದ್ಯಾರ್ಥಿಗಳಿಗೆ ಹಾಗೂ ಪದವಿ ಪಡೆಯುತ್ತಿರುವ 4ಜನ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ಅನ್ನು ವಿತರಿಸಿದರು.<br /> <br /> ಪುರಸಭೆ ಮುಖ್ಯಾಧಿಕಾರಿ ರಾಮಪ್ಪ, ಪುರಸಭೆ ಉಪಾಧ್ಯಕ್ಷೆ ಶೋಭಾ ಜಗದೀಶ್, ವ್ಯವಸ್ಥಾಪಕ ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು. <br /> <br /> <strong>ಸೌಲಭ್ಯಕ್ಕೆ ಆಗ್ರಹ<br /> ಹಿರಿಯೂರು:</strong> ನಗರದ 7 ನೇ ವಾರ್ಡ್ನಲ್ಲಿ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸದೆ ತಾರತಮ್ಯ ಮಾಡಲಾಗಿದೆ ಎಂದು ಬಡಾವಣೆ ನಿವಾಸಿಗಳಾದ ಎಂ. ತಿಪ್ಪೇಸ್ವಾಮಿ, ಎಲ್. ಅಬ್ಬಾಸ್, ಎನ್. ರಾಘು, ರಿಜ್ವಾನ್ ಮತ್ತಿತರರು ಆರೋಪಿಸಿದ್ದಾರೆ.<br /> <br /> ಬಡಾವಣೆಯಲ್ಲಿ ಹತ್ತು ವರ್ಷದ ಹಿಂದೆ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯವನ್ನು ನಿವಾಸಿಗಳಿಗೆ ಇನ್ನೂ ಬಿಟ್ಟುಕೊಟ್ಟಿಲ್ಲ. ಮಹಿಳೆಯರು ಈಗಲೂ ಶೌಚಕ್ರಿಯೆಗೆ ಬಯಲನ್ನೇ ಆಶ್ರಯಿಸಿದ್ದಾರೆ. ಚರಂಡಿ-ರಸ್ತೆ ಕಾಮಗಾರಿಗಳು ಇಲ್ಲಿ ಕಾಣುವುದೇ ಇಲ್ಲ. ಹಲವು ಬಾರಿ ಪುರಸಭೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ತಮ್ಮ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ನಿವಾಸಿಗಳು ಒತ್ತಾಯ ಮಾಡಿದ್ದಾರೆ.<br /> <br /> <strong>ಬದಲಾವಣೆ<br /> ಮೊಳಕಾಲ್ಮುರು:</strong> ಪಕ್ಷದ ಬಲವರ್ಧನೆ ದೃಷ್ಟಿಯಿಂದಾಗಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಪಕ್ಷದ ಕ್ಷೇತ್ರಾಧ್ಯಕ್ಷ ಪಿ.ಇ. ವೆಂಕಟಸ್ವಾಮಿ ತಿಳಿಸಿದ್ದಾರೆ.<br /> <br /> ನೂತನವಾಗಿ ಮಲ್ಲೂರಹಳ್ಳಿಯ ಕೆ. ವೆಂಕಟೇಶ್ ಹಾಗೂ ಕಾಟನಾಯಕನಹಳ್ಳಿಯ ಬಿ. ಭೀಮಣ್ಣ ಅವರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಹಾಗೂ ಕ್ಷೇತ್ರ ಉಪಾಧ್ಯಕ್ಷರಾಗಿ ಕರಿಯಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಳ್ಳಕೆರೆ: </strong>ಸರ್ಕಾರ ಬಡ ಪ್ರತಿಭಾವಂತ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಶೇ 7.25ರ ಅಡಿಯಲ್ಲಿ ಕೊಡಮಾಡುವ ಪ್ರೋತ್ಸಾಹಧನದ ಸದುಪಯೋಗ ಪಡೆದುಕೊಂಡು ಉತ್ತಮ ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಪುರಸಭೆ ಅಧ್ಯಕ್ಷೆ ಪಿ. ಶಂಷಾದ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. <br /> <br /> ಚಳ್ಳಕೆರೆ ಪಟ್ಟಣದ ಪುರಸಭೆಯಲ್ಲಿ ಶನಿವಾರ ಹಿಂದುಳಿದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನೀಡಲಾಗುವ ಸಹಾಯಧನ ವಿತರಿಸಿ ಅವರು ಮಾತನಾಡಿದರು.<br /> <br /> ಶೈಕ್ಷಣಿಕವಾಗಿ ಉನ್ನತ ಸಾಧನೆ ಮಾಡಬೇಕೆಂಬ ಅದಮ್ಯ ಉತ್ಸಾಹ ಇರುವ ವಿದ್ಯಾರ್ಥಿಗಳಿಗೆ ಬಡತನದ ಕಾರಣದಿಂದ ಉನ್ನತ ಶಿಕ್ಷಣ ಸಾಧ್ಯವಾಗುವುದಿಲ್ಲ. ಇದನ್ನರಿತ ರಾಜ್ಯ ಸರ್ಕಾರ ಹಿಂದುಳಿದ ಎಲ್ಲಾ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಸಹಾಯಧನ ನೀಡುತ್ತಿದೆ ಎಂದು ವಿವರಿಸಿದರು.<br /> <br /> ಪ್ರಸಕ್ತ ಸಾಲಿನಲ್ಲಿ ಶೇ 7.25 ಅನುದಾನದ ಅಡಿಯಲ್ಲಿ ಒಟ್ಟು 3.54 ಲಕ್ಷ ಹಣ ವಿದ್ಯಾರ್ಥಿ ಸಹಾಯಧನಕ್ಕಾಗಿ ಬಿಡುಗಡೆ ಮಾಡಲಾಗಿದೆ. ಪದವಿ ಹಂತದಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವವರಿಗೆ ಎರಡು ಸಾವಿರ, ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಐದು ಸಾವಿರ, ಸಂಶೋಧನಾ ವಿದ್ಯಾರ್ಥಿಗಳಿಗೆ ` 15 ಸಾವಿರ, ವೃತ್ತಿಪರ ಕೋರ್ಸ್ಗಳಿಗೆ ` 10 ಸಾವಿರ ಸಹಾಯಧನ ವಿತರಿಸಲಾಗುತ್ತಿದೆ ಎಂದರು.<br /> <br /> ಈ ಸಂದರ್ಭದಲ್ಲಿ ಹಾಜರಿದ್ದ ಸ್ನಾತಕೋತ್ತರ ಪದವಿ ಪಡೆಯುತ್ತಿರುವ 4 ವಿದ್ಯಾರ್ಥಿಗಳಿಗೆ ಹಾಗೂ ಪದವಿ ಪಡೆಯುತ್ತಿರುವ 4ಜನ ವಿದ್ಯಾರ್ಥಿಗಳಿಗೆ ಸಹಾಯಧನದ ಚೆಕ್ ಅನ್ನು ವಿತರಿಸಿದರು.<br /> <br /> ಪುರಸಭೆ ಮುಖ್ಯಾಧಿಕಾರಿ ರಾಮಪ್ಪ, ಪುರಸಭೆ ಉಪಾಧ್ಯಕ್ಷೆ ಶೋಭಾ ಜಗದೀಶ್, ವ್ಯವಸ್ಥಾಪಕ ಜಯಣ್ಣ ಮತ್ತಿತರರು ಉಪಸ್ಥಿತರಿದ್ದರು. <br /> <br /> <strong>ಸೌಲಭ್ಯಕ್ಕೆ ಆಗ್ರಹ<br /> ಹಿರಿಯೂರು:</strong> ನಗರದ 7 ನೇ ವಾರ್ಡ್ನಲ್ಲಿ ಯಾವುದೇ ಮೂಲ ಸೌಲಭ್ಯಗಳನ್ನು ಕಲ್ಪಿಸದೆ ತಾರತಮ್ಯ ಮಾಡಲಾಗಿದೆ ಎಂದು ಬಡಾವಣೆ ನಿವಾಸಿಗಳಾದ ಎಂ. ತಿಪ್ಪೇಸ್ವಾಮಿ, ಎಲ್. ಅಬ್ಬಾಸ್, ಎನ್. ರಾಘು, ರಿಜ್ವಾನ್ ಮತ್ತಿತರರು ಆರೋಪಿಸಿದ್ದಾರೆ.<br /> <br /> ಬಡಾವಣೆಯಲ್ಲಿ ಹತ್ತು ವರ್ಷದ ಹಿಂದೆ ನಿರ್ಮಿಸಿರುವ ಸಾರ್ವಜನಿಕ ಶೌಚಾಲಯವನ್ನು ನಿವಾಸಿಗಳಿಗೆ ಇನ್ನೂ ಬಿಟ್ಟುಕೊಟ್ಟಿಲ್ಲ. ಮಹಿಳೆಯರು ಈಗಲೂ ಶೌಚಕ್ರಿಯೆಗೆ ಬಯಲನ್ನೇ ಆಶ್ರಯಿಸಿದ್ದಾರೆ. ಚರಂಡಿ-ರಸ್ತೆ ಕಾಮಗಾರಿಗಳು ಇಲ್ಲಿ ಕಾಣುವುದೇ ಇಲ್ಲ. ಹಲವು ಬಾರಿ ಪುರಸಭೆಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಜಿಲ್ಲಾಧಿಕಾರಿಗಳು ತಮ್ಮ ಸಮಸ್ಯೆಗಳತ್ತ ಗಮನಹರಿಸಬೇಕು ಎಂದು ನಿವಾಸಿಗಳು ಒತ್ತಾಯ ಮಾಡಿದ್ದಾರೆ.<br /> <br /> <strong>ಬದಲಾವಣೆ<br /> ಮೊಳಕಾಲ್ಮುರು:</strong> ಪಕ್ಷದ ಬಲವರ್ಧನೆ ದೃಷ್ಟಿಯಿಂದಾಗಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದ ಇಬ್ಬರು ಕ್ಷೇತ್ರ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳನ್ನು ಬದಲಾವಣೆ ಮಾಡಲಾಗಿದೆ ಎಂದು ಪಕ್ಷದ ಕ್ಷೇತ್ರಾಧ್ಯಕ್ಷ ಪಿ.ಇ. ವೆಂಕಟಸ್ವಾಮಿ ತಿಳಿಸಿದ್ದಾರೆ.<br /> <br /> ನೂತನವಾಗಿ ಮಲ್ಲೂರಹಳ್ಳಿಯ ಕೆ. ವೆಂಕಟೇಶ್ ಹಾಗೂ ಕಾಟನಾಯಕನಹಳ್ಳಿಯ ಬಿ. ಭೀಮಣ್ಣ ಅವರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಹಾಗೂ ಕ್ಷೇತ್ರ ಉಪಾಧ್ಯಕ್ಷರಾಗಿ ಕರಿಯಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಶನಿವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>