<p>ಡೆಹ್ರಾಡೂನ್ (ಪಿಟಿಐ): ಉತ್ತರಾಖಂಡದಲ್ಲಿ ಮುಖ್ಯಮಂತ್ರಿ ರಮೇಶ ಪೋಖ್ರಿಯಾಲ್ ನಿಶಾಂಕ್ ಅವರು ರಾಜೀನಾಮೆ ನೀಡಿದ್ದು, ಬಿ.ಸಿ. ಖಂಡೂರಿ ಅವರು ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.<br /> <br /> ಖಂಡೂರಿ ಅವರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ನಿಶಾಂಕ್ ಅವರು ಪಕ್ಷದ ಕೆಲವು ನಾಯಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.<br /> <br /> ಚುನಾವಣೆ ಸನಿಹದಲ್ಲೇ ಇರುವ ಹಿನ್ನೆಲೆಯಲ್ಲಿ ಉತ್ತರಾ ಖಂಡದಲ್ಲಿ ಕುಸಿಯುತ್ತಿರುವ ಪಕ್ಷದ ವರ್ಚಸ್ಸನ್ನು ಸುಧಾರಿಸುವ ಸಲುವಾಗಿ ಮಾಜಿ ಮುಖ್ಯಮಂತ್ರಿ 76ರ ಹರೆಯದ ಮಾಜಿ ಮುಖ್ಯಮಂತ್ರಿ ಖಂಡೂರಿ ಅವರು ನಿಶಾಂಕ್ ಸ್ಥಾನಕ್ಕೆ ಏರಲಿದ್ದಾರೆ ಎಂದು ಬಿಜೆಪಿ ಶನಿವಾರ ಪ್ರಕಟಿಸಿತ್ತು.<br /> <br /> ರಾಜೀನಾಮೆ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ನಿಶಾಂಕ್ ~ನಾನು ಪಕ್ಷದ ಕಾರ್ಯಕರ್ತ. ಪಕ್ಷವು ನಾನೇನು ಮಾಡಬೇಕು ಎಂದು ಬಯಸುವುದೋ ಅದನ್ನು ಮಾಡುತ್ತೇನೆ~ ಎಂದು ಹೇಳಿದರು.<br /> <br /> ದೆಹಲಿಯಲ್ಲಿ ನಡೆದ ದೀರ್ಘಕಾಲದ ಸಮಾಲೋಚನೆಗಳ ಬಳಿಕ ಬಿಜೆಪಿ ವರಿಷ್ಠರು, ಸರ್ಕಾರದ ವಿರುದ್ಧದ ಹಲವಾರು ಹಗರಣಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ನಿಶಾಂಕ್ ಮನ ಒಲಿಸಿದರು.<br /> <br /> ಉತ್ತರಾಖಂಡದಲ್ಲಿ ಬರಲಿರುವ ಚುನಾವಣೆಗಳನ್ನು ಗಮನದಲ್ಲಿ ಇರಿಸಿಕೊಂಡು ನಾಯಕತ್ವ ಬದಲಾಯಿಸಲು ಬಿಜೆಪಿ ತೀರ್ಮಾನಿಸಿದೆ. ಖಂಡೂರಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು 4 ಗಂಟೆಗಳ ಸುದೀರ್ಘ ಮಾತುಕತೆಗಳ ಬಳಿಕ ಶನಿವಾರ ಪ್ರಕಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಡೆಹ್ರಾಡೂನ್ (ಪಿಟಿಐ): ಉತ್ತರಾಖಂಡದಲ್ಲಿ ಮುಖ್ಯಮಂತ್ರಿ ರಮೇಶ ಪೋಖ್ರಿಯಾಲ್ ನಿಶಾಂಕ್ ಅವರು ರಾಜೀನಾಮೆ ನೀಡಿದ್ದು, ಬಿ.ಸಿ. ಖಂಡೂರಿ ಅವರು ಮುಖ್ಯಮಂತ್ರಿಯಾಗಿ ಭಾನುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.<br /> <br /> ಖಂಡೂರಿ ಅವರಿಗೆ ಅವಕಾಶ ಮಾಡಿಕೊಡುವ ಸಲುವಾಗಿ ನಿಶಾಂಕ್ ಅವರು ಪಕ್ಷದ ಕೆಲವು ನಾಯಕರೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಮಾರ್ಗರೆಟ್ ಆಳ್ವ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದರು.<br /> <br /> ಚುನಾವಣೆ ಸನಿಹದಲ್ಲೇ ಇರುವ ಹಿನ್ನೆಲೆಯಲ್ಲಿ ಉತ್ತರಾ ಖಂಡದಲ್ಲಿ ಕುಸಿಯುತ್ತಿರುವ ಪಕ್ಷದ ವರ್ಚಸ್ಸನ್ನು ಸುಧಾರಿಸುವ ಸಲುವಾಗಿ ಮಾಜಿ ಮುಖ್ಯಮಂತ್ರಿ 76ರ ಹರೆಯದ ಮಾಜಿ ಮುಖ್ಯಮಂತ್ರಿ ಖಂಡೂರಿ ಅವರು ನಿಶಾಂಕ್ ಸ್ಥಾನಕ್ಕೆ ಏರಲಿದ್ದಾರೆ ಎಂದು ಬಿಜೆಪಿ ಶನಿವಾರ ಪ್ರಕಟಿಸಿತ್ತು.<br /> <br /> ರಾಜೀನಾಮೆ ನೀಡಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ನಿಶಾಂಕ್ ~ನಾನು ಪಕ್ಷದ ಕಾರ್ಯಕರ್ತ. ಪಕ್ಷವು ನಾನೇನು ಮಾಡಬೇಕು ಎಂದು ಬಯಸುವುದೋ ಅದನ್ನು ಮಾಡುತ್ತೇನೆ~ ಎಂದು ಹೇಳಿದರು.<br /> <br /> ದೆಹಲಿಯಲ್ಲಿ ನಡೆದ ದೀರ್ಘಕಾಲದ ಸಮಾಲೋಚನೆಗಳ ಬಳಿಕ ಬಿಜೆಪಿ ವರಿಷ್ಠರು, ಸರ್ಕಾರದ ವಿರುದ್ಧದ ಹಲವಾರು ಹಗರಣಗಳ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವಂತೆ ನಿಶಾಂಕ್ ಮನ ಒಲಿಸಿದರು.<br /> <br /> ಉತ್ತರಾಖಂಡದಲ್ಲಿ ಬರಲಿರುವ ಚುನಾವಣೆಗಳನ್ನು ಗಮನದಲ್ಲಿ ಇರಿಸಿಕೊಂಡು ನಾಯಕತ್ವ ಬದಲಾಯಿಸಲು ಬಿಜೆಪಿ ತೀರ್ಮಾನಿಸಿದೆ. ಖಂಡೂರಿ ಅವರು ರಾಜ್ಯದ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು 4 ಗಂಟೆಗಳ ಸುದೀರ್ಘ ಮಾತುಕತೆಗಳ ಬಳಿಕ ಶನಿವಾರ ಪ್ರಕಟಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>