<p>ನವದೆಹಲಿ (ಪಿಟಿಐ): ಉತ್ತರ ಭಾರತದಲ್ಲಿ ಮಂಜು ಕವಿದ ವಾತಾವರಣ ಶುಕ್ರವಾರವೂ ಮುಂದುವರಿದಿದ್ದು, ರಸ್ತೆ, ರೈಲು ಹಾಗೂ ವಿಮಾನ ಸಂಚಾರಕ್ಕೆ ಅಡಚಣೆಯಾಗಿದೆ.<br /> <br /> ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟವಾಗಿ ಮಂಜು ಕವಿದಿದ್ದು, ಸತತ ಮೂರನೇ ದಿನವೂ ವಿಮಾನ ಹಾರಾಟ ಏರುಪೇರು ಗೊಂಡಿತ್ತು.<br /> <br /> ಈ ನಿಲ್ದಾಣದಿಂದ ಹೊರಡಬೇಕಿದ್ದ 200ಕ್ಕೂ ಹೆಚ್ಚು ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬಗೊಂಡಿತು. ಬೆಂಗಳೂರು, ಕೊಚ್ಚಿ, ಲಖನೌ, ಚಂಡೀಗಡ ಸೇರಿದಂತೆ ಕೆಲವು ಕಡೆ ತೆರಳಬೇಕಿದ್ದ 28 ವಿಮಾನಗಳ ಹಾರಾಟ ರದ್ದುಗೊಳಿಸಲಾಯಿತು. <br /> <br /> ದೆಹಲಿಯಲ್ಲಿ ಇಳಿಯಬೇಕಿದ್ದ 5 ಅಂತರರಾಷ್ಟ್ರೀಯ ವಿಮಾನಗಳನ್ನು ಸಮೀಪದ ನಗರಗಳ ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಯಿತು. ಮಂಜಿನಿಂದಾಗಿ ರೈಲು ಸಂಚಾರವೂ ಅಸ್ತವ್ಯಸ್ತಗೊಂಡಿದ್ದು, 30ಕ್ಕೂ ಹೆಚ್ಚು ರೈಲುಗಳು ತಡವಾಗಿ ಪ್ರಯಾಣ ಆರಂಭಿಸಿದವು.<br /> <br /> <strong>ಮಂಜಿನ ಚಾದರ (ಚಂಡೀಗಡ ವರದಿ): </strong>ಪಂಜಾಬ್, ಹರಿಯಾಣ ಹಾಗೂ ಚಂಡೀಗಡಗಳಲ್ಲಿ ಬಿಸಿಲು ಅಪರೂಪವಾಗಿದ್ದು, ಮಂಜಿನ ಚಾದರ ಹೊದಿಸಿದಂತೆ ಕಂಡುಬರುತ್ತಿತ್ತು. <br /> <br /> ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದ್ದರಿಂದ, ವಾಹನ ಸಂಚಾರಕ್ಕೆ ಅಡ್ಡಿಯಾಯಿತು. <br /> <br /> <strong>ಚಳಿ ಹೊಡೆತ (ಶ್ರೀನಗರ ವರದಿ): </strong>ಕಾಶ್ಮೀರ ಕಣಿವೆಯಲ್ಲಿ ಜನರು ಚಳಿಯ ಹೊಡೆತದಿಂದ ತತ್ತರಿಸಿದ್ದಾರೆ. <br /> ಲಡಾಕ್ ಪ್ರಾಂತ್ಯದ ಲೇಹ್ ಪಟ್ಟಣದಲ್ಲಿ ಮೈನಸ್ 15.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಕಾರ್ಗಿಲ್ನಲ್ಲಿ ಮೈನಸ್ 16.8 ಡಿಗ್ರಿಯಷ್ಟು ಉಷ್ಣಾಂಶವಿದೆ. ಕಾಶ್ಮೀರ ಕಣಿವೆಯ ಹಲವೆಡೆ ಹಿಮಪಾತ ಹಾಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.</p>.<p><strong>ಮೋಟಾರ್ ಬೋಟ್ ನೆರವು</strong></p>.<p><strong>ಶ್ರೀನಗರ (ಪಿಟಿಐ): </strong>ಅತಿ ಕಡಿಮೆ ತಾಪಮಾನದಿಂದ ಕಾಶ್ಮೀರದ ಸುಪ್ರಸಿದ್ಧ ದಲ್ ಸರೋವರ ಹೆಪ್ಪುಗಟ್ಟಿದ್ದು, ಮಂಜುಡ್ಡೆಯ ಪದರ ಭೇದಿಸಲು ಸ್ಥಳೀಯ ಪೊಲೀಸರು ಮೋಟಾರ್ಬೋಟ್ ಬಳಸುತ್ತಿದ್ದಾರೆ.<br /> ದಲ್ ಸರೋವರದ ಸುತ್ತಲಿನ ನೂರಾರು ಕುಟುಂಬಗಳು ಪ್ರವಾಸಿಗಳಿಂದ ಬರುವ ಆದಾಯದಿಂದ ಜೀವನ ಸಾಗಿಸುತ್ತಾರೆ. ಸರೋವರ ಹೆಪ್ಪುಗಟ್ಟಿದ್ದರಿಂದ ಪ್ರವಾಸಿಗರು ನಿರಾಸೆಗೊಳ್ಳುವಂತಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಉತ್ತರ ಭಾರತದಲ್ಲಿ ಮಂಜು ಕವಿದ ವಾತಾವರಣ ಶುಕ್ರವಾರವೂ ಮುಂದುವರಿದಿದ್ದು, ರಸ್ತೆ, ರೈಲು ಹಾಗೂ ವಿಮಾನ ಸಂಚಾರಕ್ಕೆ ಅಡಚಣೆಯಾಗಿದೆ.<br /> <br /> ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ದಟ್ಟವಾಗಿ ಮಂಜು ಕವಿದಿದ್ದು, ಸತತ ಮೂರನೇ ದಿನವೂ ವಿಮಾನ ಹಾರಾಟ ಏರುಪೇರು ಗೊಂಡಿತ್ತು.<br /> <br /> ಈ ನಿಲ್ದಾಣದಿಂದ ಹೊರಡಬೇಕಿದ್ದ 200ಕ್ಕೂ ಹೆಚ್ಚು ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳ ಹಾರಾಟ ವಿಳಂಬಗೊಂಡಿತು. ಬೆಂಗಳೂರು, ಕೊಚ್ಚಿ, ಲಖನೌ, ಚಂಡೀಗಡ ಸೇರಿದಂತೆ ಕೆಲವು ಕಡೆ ತೆರಳಬೇಕಿದ್ದ 28 ವಿಮಾನಗಳ ಹಾರಾಟ ರದ್ದುಗೊಳಿಸಲಾಯಿತು. <br /> <br /> ದೆಹಲಿಯಲ್ಲಿ ಇಳಿಯಬೇಕಿದ್ದ 5 ಅಂತರರಾಷ್ಟ್ರೀಯ ವಿಮಾನಗಳನ್ನು ಸಮೀಪದ ನಗರಗಳ ವಿಮಾನ ನಿಲ್ದಾಣಗಳಲ್ಲಿ ಇಳಿಸಲಾಯಿತು. ಮಂಜಿನಿಂದಾಗಿ ರೈಲು ಸಂಚಾರವೂ ಅಸ್ತವ್ಯಸ್ತಗೊಂಡಿದ್ದು, 30ಕ್ಕೂ ಹೆಚ್ಚು ರೈಲುಗಳು ತಡವಾಗಿ ಪ್ರಯಾಣ ಆರಂಭಿಸಿದವು.<br /> <br /> <strong>ಮಂಜಿನ ಚಾದರ (ಚಂಡೀಗಡ ವರದಿ): </strong>ಪಂಜಾಬ್, ಹರಿಯಾಣ ಹಾಗೂ ಚಂಡೀಗಡಗಳಲ್ಲಿ ಬಿಸಿಲು ಅಪರೂಪವಾಗಿದ್ದು, ಮಂಜಿನ ಚಾದರ ಹೊದಿಸಿದಂತೆ ಕಂಡುಬರುತ್ತಿತ್ತು. <br /> <br /> ದಟ್ಟ ಮಂಜಿನಿಂದಾಗಿ ರಸ್ತೆ ಸರಿಯಾಗಿ ಕಾಣದ್ದರಿಂದ, ವಾಹನ ಸಂಚಾರಕ್ಕೆ ಅಡ್ಡಿಯಾಯಿತು. <br /> <br /> <strong>ಚಳಿ ಹೊಡೆತ (ಶ್ರೀನಗರ ವರದಿ): </strong>ಕಾಶ್ಮೀರ ಕಣಿವೆಯಲ್ಲಿ ಜನರು ಚಳಿಯ ಹೊಡೆತದಿಂದ ತತ್ತರಿಸಿದ್ದಾರೆ. <br /> ಲಡಾಕ್ ಪ್ರಾಂತ್ಯದ ಲೇಹ್ ಪಟ್ಟಣದಲ್ಲಿ ಮೈನಸ್ 15.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಕಾರ್ಗಿಲ್ನಲ್ಲಿ ಮೈನಸ್ 16.8 ಡಿಗ್ರಿಯಷ್ಟು ಉಷ್ಣಾಂಶವಿದೆ. ಕಾಶ್ಮೀರ ಕಣಿವೆಯ ಹಲವೆಡೆ ಹಿಮಪಾತ ಹಾಗೂ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.</p>.<p><strong>ಮೋಟಾರ್ ಬೋಟ್ ನೆರವು</strong></p>.<p><strong>ಶ್ರೀನಗರ (ಪಿಟಿಐ): </strong>ಅತಿ ಕಡಿಮೆ ತಾಪಮಾನದಿಂದ ಕಾಶ್ಮೀರದ ಸುಪ್ರಸಿದ್ಧ ದಲ್ ಸರೋವರ ಹೆಪ್ಪುಗಟ್ಟಿದ್ದು, ಮಂಜುಡ್ಡೆಯ ಪದರ ಭೇದಿಸಲು ಸ್ಥಳೀಯ ಪೊಲೀಸರು ಮೋಟಾರ್ಬೋಟ್ ಬಳಸುತ್ತಿದ್ದಾರೆ.<br /> ದಲ್ ಸರೋವರದ ಸುತ್ತಲಿನ ನೂರಾರು ಕುಟುಂಬಗಳು ಪ್ರವಾಸಿಗಳಿಂದ ಬರುವ ಆದಾಯದಿಂದ ಜೀವನ ಸಾಗಿಸುತ್ತಾರೆ. ಸರೋವರ ಹೆಪ್ಪುಗಟ್ಟಿದ್ದರಿಂದ ಪ್ರವಾಸಿಗರು ನಿರಾಸೆಗೊಳ್ಳುವಂತಾಗಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>