<p><strong>ನವದೆಹಲಿ (ಪಿಟಿಐ): </strong>ಉತ್ತರ ಭಾರತದಲ್ಲಿ ವರುಣನ ಆರ್ಭಟ ಭಾನುವಾರವೂ ಮುಂದುವರೆದಿದ್ದು ಹಲವು ನದಿಗಳು ಆಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಉತ್ತರಾಖಂಡದಲ್ಲಿ ಭಾರೀ ಮಳೆಗೆ ಮೃತಪಟ್ಟರ ಸಂಖ್ಯೆ 34ಕ್ಕೆ ಏರಿದೆ.<br /> <br /> <strong>ಡೆಹ್ರಾಡೂನ್ ವರದಿ: </strong>ಉತ್ತರಾಖಂಡ ರಾಜ್ಯದ ಅನೇಕ ಕಡೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ಪ್ರವಾಹಕ್ಕೆ ಅನೇಕ ಗ್ರಾಮಗಳ ಮನೆಗಳು ನೀರುಪಾಲಾಗಿದ್ದು, ಈವರೆಗೆ 34 ಮಂದಿ ಸಾವಿಗೀಡಾಗಿದ್ದಾರೆ. ಉತ್ತರಕಾಶಿಯಲ್ಲೇ 31 ಮಂದಿ ಸತ್ತಿದ್ದಾರೆ ಮತ್ತು ಆರು ಮಂದಿ ಕಾಣೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಶ್ಕುಮಾರ್ ಹೇಳಿದ್ದಾರೆ.<br /> <br /> ಶನಿವಾರ ಕಾಣೆಯಾಗಿದ್ದ ಯುಜೆವಿಎನ್ ಕಾರ್ಖಾನೆಯ 23ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಸ್ಥಳೀಯ ಪೊಲೀಸರು ಮತ್ತು ಐಟಿಬಿಪಿ ಯೋಧರು ಕಾಣೆಯಾದವರ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.<br /> <br /> ಉತ್ತರ ಪ್ರದೇಶದಲ್ಲಿ ಗಂಗಾ, ಸರಸ್ವತಿ, ಶಾರದಾ ಮತ್ತು ಘಾಗ್ರ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ರಾಜ್ಯದ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ನದಿ ಮುಖಜ ಪ್ರದೇಶಗಳಾದ ಅಯೋಧ್ಯ, ಬರಾಬಂಕಿ, ಖೇರಿ, ಬಲಿಯಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> <strong>ಜಮ್ಮು ಮತ್ತು ಕಾಶ್ಮೀರ ವರದಿ: </strong>ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಿಯಾಸಿ, ಸಾಂಬಾ, ಉದಂಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಈ ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿರುವುದರಿಂದ ನೂರಾರು ಮನೆಗಳು ಮುಳುಗಡೆಯಾಗಿದ್ದು ಸಾವಿರಾರು ಎಕರೆಯಲ್ಲಿದ್ದ ಬೆಳೆ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಪ್ರವಾಹದಲ್ಲಿ ಸಿಲುಕಿದ್ದ 24 ಜನರನ್ನು ರಕ್ಷಿಸಲಾಗಿದೆ. ಇದುವರೆಗೂ ಪ್ರಾಣಿ ಹಾನಿಯಾದ ವರದಿಯಾಗಿಲ್ಲ. <br /> ರಾಜಧಾನಿ ದೆಹಲಿಯಲ್ಲೂ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. 35.5ರಷ್ಟಿದ್ದ ಉಷ್ಣಾಂಶ 27.5 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಇ್ಲ್ಲಲಿಯವರೆಗೂ 0.8 ಮಿ.ಮೀಟರ್ ಮಳೆಯಾಗಿದೆ. ಮಳೆಯಿಂದ ಅನಾಹುತಗಳು ಸಂಭವಿಸಿದ ವರದಿಯಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಉತ್ತರ ಭಾರತದಲ್ಲಿ ವರುಣನ ಆರ್ಭಟ ಭಾನುವಾರವೂ ಮುಂದುವರೆದಿದ್ದು ಹಲವು ನದಿಗಳು ಆಪಾಯ ಮಟ್ಟವನ್ನು ಮೀರಿ ಹರಿಯುತ್ತಿವೆ. ಉತ್ತರಾಖಂಡದಲ್ಲಿ ಭಾರೀ ಮಳೆಗೆ ಮೃತಪಟ್ಟರ ಸಂಖ್ಯೆ 34ಕ್ಕೆ ಏರಿದೆ.<br /> <br /> <strong>ಡೆಹ್ರಾಡೂನ್ ವರದಿ: </strong>ಉತ್ತರಾಖಂಡ ರಾಜ್ಯದ ಅನೇಕ ಕಡೆ ಎಡೆಬಿಡದೆ ಸುರಿಯುತ್ತಿರುವ ಮಳೆಯ ಪ್ರವಾಹಕ್ಕೆ ಅನೇಕ ಗ್ರಾಮಗಳ ಮನೆಗಳು ನೀರುಪಾಲಾಗಿದ್ದು, ಈವರೆಗೆ 34 ಮಂದಿ ಸಾವಿಗೀಡಾಗಿದ್ದಾರೆ. ಉತ್ತರಕಾಶಿಯಲ್ಲೇ 31 ಮಂದಿ ಸತ್ತಿದ್ದಾರೆ ಮತ್ತು ಆರು ಮಂದಿ ಕಾಣೆಯಾಗಿದ್ದಾರೆ ಎಂದು ಜಿಲ್ಲಾಧಿಕಾರಿ ರಾಜೇಶ್ಕುಮಾರ್ ಹೇಳಿದ್ದಾರೆ.<br /> <br /> ಶನಿವಾರ ಕಾಣೆಯಾಗಿದ್ದ ಯುಜೆವಿಎನ್ ಕಾರ್ಖಾನೆಯ 23ಜನ ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದೆ. ಸ್ಥಳೀಯ ಪೊಲೀಸರು ಮತ್ತು ಐಟಿಬಿಪಿ ಯೋಧರು ಕಾಣೆಯಾದವರ ಪತ್ತೆಗೆ ಶೋಧ ಕಾರ್ಯ ಮುಂದುವರೆಸಿದ್ದಾರೆ.<br /> <br /> ಉತ್ತರ ಪ್ರದೇಶದಲ್ಲಿ ಗಂಗಾ, ಸರಸ್ವತಿ, ಶಾರದಾ ಮತ್ತು ಘಾಗ್ರ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿವೆ. ರಾಜ್ಯದ ಹಲವೆಡೆ ಪ್ರವಾಹ ಭೀತಿ ಎದುರಾಗಿದೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ನದಿ ಮುಖಜ ಪ್ರದೇಶಗಳಾದ ಅಯೋಧ್ಯ, ಬರಾಬಂಕಿ, ಖೇರಿ, ಬಲಿಯಾ ಸೇರಿದಂತೆ ವಿವಿಧ ಪ್ರದೇಶಗಳಲ್ಲಿನ ನಿವಾಸಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸರ್ಕಾರ ಪ್ರಕಟಣೆಯಲ್ಲಿ ತಿಳಿಸಿದೆ.<br /> <br /> <strong>ಜಮ್ಮು ಮತ್ತು ಕಾಶ್ಮೀರ ವರದಿ: </strong>ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ ರಿಯಾಸಿ, ಸಾಂಬಾ, ಉದಂಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದೆ. ಈ ಜಿಲ್ಲೆಗಳ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿರುವುದರಿಂದ ನೂರಾರು ಮನೆಗಳು ಮುಳುಗಡೆಯಾಗಿದ್ದು ಸಾವಿರಾರು ಎಕರೆಯಲ್ಲಿದ್ದ ಬೆಳೆ ನಾಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br /> <br /> ಪ್ರವಾಹದಲ್ಲಿ ಸಿಲುಕಿದ್ದ 24 ಜನರನ್ನು ರಕ್ಷಿಸಲಾಗಿದೆ. ಇದುವರೆಗೂ ಪ್ರಾಣಿ ಹಾನಿಯಾದ ವರದಿಯಾಗಿಲ್ಲ. <br /> ರಾಜಧಾನಿ ದೆಹಲಿಯಲ್ಲೂ ಕಳೆದ ಎರಡು ದಿನಗಳಿಂದ ಮಳೆ ಸುರಿಯುತ್ತಿದೆ. 35.5ರಷ್ಟಿದ್ದ ಉಷ್ಣಾಂಶ 27.5 ಡಿಗ್ರಿ ಸೆಲ್ಸಿಯಸ್ಗೆ ಇಳಿದಿದೆ. ಇ್ಲ್ಲಲಿಯವರೆಗೂ 0.8 ಮಿ.ಮೀಟರ್ ಮಳೆಯಾಗಿದೆ. ಮಳೆಯಿಂದ ಅನಾಹುತಗಳು ಸಂಭವಿಸಿದ ವರದಿಯಾಗಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>